Andolana originals

ಇದೇನು ಶಾಲಾ ಕೊಠಡಿಯೋ, ಧೂಳು ಸಂಗ್ರಹ ಸ್ಥಳವೋ?

ನಂಜನಗೂಡು:ಶತಮಾನದ ಹೊಸ್ತಿಲಲ್ಲಿರುವ ನಗರದ ಬಾಲಕರ ಪ್ರೌಢಶಾಲೆಯ ಕೊಠಡಿಗಳ ಸ್ಥಿತಿಯನ್ನು ಕಂಡ ಶಾಸಕ ದರ್ಶನ್ ಧ್ರುವನಾರಾ ಯಣ ಅವರು, ಇದೇನು ಶಾಲಾ ಕೊಠಡಿಯೋ, ಧೂಳು ಶೇಖರಣಾ ಸ್ಥಳವೋ? ಎಂದು ಪ್ರಶ್ನಿಸಿದರು.

ಮಂಗಳವಾರ ಬಾಲಕರ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿದ ಅವರು, ಅಲ್ಲಿನ ಕೊಠಡಿಗಳಲ್ಲಿ ಕಸದ ರಾಶಿಯನ್ನು ಕಂಡು ಅಸಮಾಧಾನ ವ್ಯಕ್ತಪಡಿಸಿ, 10 ದಿನಗಳಲ್ಲಿ ಎಲ್ಲ ಕೊಠಡಿಗಗಳನ್ನೂ ಸ್ವಚ್ಛ ಗೊಳಿಸಿ ತಮಗೆ ಚಿತ್ರ ಸಹಿತವಾದ ಮಾಹಿತಿ ನೀಡುವಂತೆ ಶಾಲಾ ಮುಖ್ಯ ಶಿಕ್ಷಕಿ ಬಾಲ ಸರಸ್ವತಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ ಅವರಿಗೆ ತಾಕೀತು ಮಾಡಿದರು.

ನಂತರ ವಾಚನಾಲಯದ ಬೀಗತೆಗಿಸಿ ನೋಡಿದಾಗ ಅನೇಕ ತಿಂಗಳುಗಳಿಂದ ಬಾಗಿಲು ತೆರೆಯದೆ ದೂಳು, ಜೇಡಗ ಳಿಂದ ಆವೃತವಾಗಿದ್ದನ್ನು ಗಮನಿಸಿ ಕುಪಿತಗೊಂಡು, ವಾಚನಾ ಲಯದ ಕೊಠಡಿಗಳ ಬಾಗಿಲು ತೆರೆಯದೇ ಎಷ್ಟು ತಿಂಗಳಾಯಿತು ಎಂದು ಪ್ರಶ್ನಿಸಿದರು.

ಪ್ರತಿದಿನ ವಾಚನಾಲಯದ ಬಾಗಿಲು ತೆರೆಯಬೇಕು. ಇಲ್ಲಿಗೆ ನಿತ್ಯ ದಿನಪತ್ರಿಕೆಗಳು, ಮಾಸ ಪತ್ರಿಕೆಗಳನ್ನು ತರಿಸಬೇಕು ಎಂದು ಸೂಚಿಸಿದರು.

10 ದಿನಗಳಲ್ಲಿ ಇಲ್ಲಿನ ಎಲ್ಲ ಕೊಠಡಿ ಗಳು ಸ್ವಚ್ಛಗೊಳ್ಳಬೇಕು. ಸ್ವಚ್ಛವಾದ ಕೊಠಡಿಗಳ ಚಿತ್ರಗಳನ್ನು ತಮಗೆ ಕಳಿಸಬೇಕು ಎಂದು ಜೊತೆಯಲ್ಲಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ ಅವರಿಗೆ ಆದೇಶಿಸಿದರು.

ಮುಖ್ಯ ಶಿಕ್ಷಕರ ಕೊಠಡಿಯಲ್ಲಿರುವ ಸ್ವಚ್ಛತೆಯಂತೆಯೇ ಮಕ್ಕಳು ವ್ಯಾಸಂಗ ಮಾಡುವ ಕೊಠಡಿಗಳಲ್ಲೂ ಇರಬೇಕು ಎಂದರು. ಈಗಬಿಡುಗಡೆ ಮಾಡಿಸಿರುವ 38 ಲಕ್ಷ ರೂ.ಗಳನ್ನು ಬಳಕೆ ಮಾಡಿ ಶತಮಾನಗಳ ಹೊಸ್ತಿಲ್ಲಿರುವ ಶಾಲೆಗೆ ಇನ್ನೇನು ಆಗಬೇಕು ಎಂಬುದನ್ನು ತಿಳಿಸಿ ದರೆ ಮಾಡಿಸಿಕೊಡುವುದಾಗಿ ಹೇಳಿ ದರು. ಮಾಜಿ ಶಾಸಕ ಕಳಲೆ ಕೇಶವ ಮೂರ್ತಿ, ಮುಖ್ಯಶಿಕ್ಷಕಿ ಬಾಲಸರಸ್ವತಿ, ಶಂಕರಪುರ ಸುರೇಶ ಇತರರಿದ್ದರು.

ಭೂಮಿಕಾ

Recent Posts

ರಾಜ್ಯದಲ್ಲಿ ಬೆಳಗಿನ ವೇಳೆ ದಟ್ಟ ಮಂಜು: ಹವಾಮಾನ ತಜ್ಞರು ಹೇಳಿದ್ದಿಷ್ಟು.!

ಬೆಂಗಳೂರು: ರಾಜ್ಯದಲ್ಲಿ ತೀವ್ರ ಚಳಿ, ಶೀತಗಾಳಿಯ ಜೊತೆಗೆ ಬೆಳಗಿನ ವೇಳೆ ಕೆಲವೆಡೆ ದಟ್ಟವಾದ ಮಂಜು ಆವರಿಸುತ್ತಿದೆ. ಬೆಳಗಿನ ವೇಳೆಯಲ್ಲಿ ದಟ್ಟವಾದ…

5 mins ago

ಶಬರಿಮಲೆ ದೇವಸ್ಥಾನದ ಚಿನ್ನ ನಾಪತ್ತೆ ಪ್ರಕರಣ: ಸಿಎಂ ಪಿಣರಾಯಿ ವಿಜಯನ್‌ ಹೇಳಿದ್ದಿಷ್ಟು.!

ತಿರುವನಂತಪುರಂ: ಶಬರಿಮಲೆ ದೇವಸ್ಥಾನದ ಚಿನ್ನ ನಾಪತ್ತೆ ಪ್ರಕರಣದ ಆರೋಪಿಗಳ ಜೊತೆಗೆ ಸೋನಿಯಾ ಗಾಂಧಿ ನಂಟಿದೆ ಎಂದು ಸಿಎಂ ಪಿಣರಾಯಿ ವಿಜಯನ್‌…

55 mins ago

ಬಹುನಿರೀಕ್ಷಿತ ಮಾರ್ಕ್‌ ಹಾಗೂ 45 ಸಿನಿಮಾ ಬಿಡುಗಡೆ

ಸ್ಯಾಂಡಲ್‌ವುಡ್‌ನಲ್ಲಿ ಇಂದು ಕ್ರಿಸ್‌ಮಸ್‌ ಹಬ್ಬದ ಸಡಗರದ ನಡುವೆ ಎರಡು ಬಹುನಿರೀಕ್ಷಿತ ಸಿನಿಮಾಗಳು ಅಬ್ಬರದಿಂದ ತೆರೆಗೆ ಬಂದಿವೆ, ಹ್ಯಾಟ್ರಿಕ್‌ ಹೀರೋ ಶಿವರಾಜ್‌ಕುಮಾರ್‌,…

1 hour ago

ಕಾಡಾನೆಗಳು ಊರಿಗೆ ಬರದಂತೆ ಎಐ ಆಧಾರಿತ ಕ್ಯಾಮರಾ ಅಳವಡಿಕೆ

ಮೈಸೂರು: ಕಾಡಾನೆಗಳು ಊರಿಗೆ ಬರದಂತೆ ಅರಣ್ಯ ಇಲಾಖೆಯು ಎಐ ಆಧಾರಿರ ಕೂಗು ಕ್ಯಾಮರಾವನ್ನು ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅಳವಡಿಸಿದೆ.…

2 hours ago

ಚಿತ್ರದುರ್ಗದಲ್ಲಿ ಬಸ್‌ ಅಪಘಾತ ಪ್ರಕರಣ: ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್‌ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂ…

3 hours ago

ಚಿತ್ರದುರ್ಗದಲ್ಲಿ ಬಸ್‌ ಅಪಘಾತ ಪ್ರಕರಣ: ಹಾಸನ ಮೂಲದ ಇಬ್ಬರು ಟೆಕ್ಕಿಗಳು ಕಣ್ಮರೆ

ಹಾಸನ: ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್‌ ಅಪಘಾತದಲ್ಲಿ ಹಾಸನದ ಚನ್ನರಾಯಪಟ್ಟಣ ಮೂಲದ ಇಬ್ಬರು ಯುವತಿಯರು ಕಣ್ಮರೆಯಾಗಿದ್ದಾರೆ.…

3 hours ago