Andolana originals

ಇದೇನು ಶಾಲಾ ಕೊಠಡಿಯೋ, ಧೂಳು ಸಂಗ್ರಹ ಸ್ಥಳವೋ?

ನಂಜನಗೂಡು:ಶತಮಾನದ ಹೊಸ್ತಿಲಲ್ಲಿರುವ ನಗರದ ಬಾಲಕರ ಪ್ರೌಢಶಾಲೆಯ ಕೊಠಡಿಗಳ ಸ್ಥಿತಿಯನ್ನು ಕಂಡ ಶಾಸಕ ದರ್ಶನ್ ಧ್ರುವನಾರಾ ಯಣ ಅವರು, ಇದೇನು ಶಾಲಾ ಕೊಠಡಿಯೋ, ಧೂಳು ಶೇಖರಣಾ ಸ್ಥಳವೋ? ಎಂದು ಪ್ರಶ್ನಿಸಿದರು.

ಮಂಗಳವಾರ ಬಾಲಕರ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿದ ಅವರು, ಅಲ್ಲಿನ ಕೊಠಡಿಗಳಲ್ಲಿ ಕಸದ ರಾಶಿಯನ್ನು ಕಂಡು ಅಸಮಾಧಾನ ವ್ಯಕ್ತಪಡಿಸಿ, 10 ದಿನಗಳಲ್ಲಿ ಎಲ್ಲ ಕೊಠಡಿಗಗಳನ್ನೂ ಸ್ವಚ್ಛ ಗೊಳಿಸಿ ತಮಗೆ ಚಿತ್ರ ಸಹಿತವಾದ ಮಾಹಿತಿ ನೀಡುವಂತೆ ಶಾಲಾ ಮುಖ್ಯ ಶಿಕ್ಷಕಿ ಬಾಲ ಸರಸ್ವತಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ ಅವರಿಗೆ ತಾಕೀತು ಮಾಡಿದರು.

ನಂತರ ವಾಚನಾಲಯದ ಬೀಗತೆಗಿಸಿ ನೋಡಿದಾಗ ಅನೇಕ ತಿಂಗಳುಗಳಿಂದ ಬಾಗಿಲು ತೆರೆಯದೆ ದೂಳು, ಜೇಡಗ ಳಿಂದ ಆವೃತವಾಗಿದ್ದನ್ನು ಗಮನಿಸಿ ಕುಪಿತಗೊಂಡು, ವಾಚನಾ ಲಯದ ಕೊಠಡಿಗಳ ಬಾಗಿಲು ತೆರೆಯದೇ ಎಷ್ಟು ತಿಂಗಳಾಯಿತು ಎಂದು ಪ್ರಶ್ನಿಸಿದರು.

ಪ್ರತಿದಿನ ವಾಚನಾಲಯದ ಬಾಗಿಲು ತೆರೆಯಬೇಕು. ಇಲ್ಲಿಗೆ ನಿತ್ಯ ದಿನಪತ್ರಿಕೆಗಳು, ಮಾಸ ಪತ್ರಿಕೆಗಳನ್ನು ತರಿಸಬೇಕು ಎಂದು ಸೂಚಿಸಿದರು.

10 ದಿನಗಳಲ್ಲಿ ಇಲ್ಲಿನ ಎಲ್ಲ ಕೊಠಡಿ ಗಳು ಸ್ವಚ್ಛಗೊಳ್ಳಬೇಕು. ಸ್ವಚ್ಛವಾದ ಕೊಠಡಿಗಳ ಚಿತ್ರಗಳನ್ನು ತಮಗೆ ಕಳಿಸಬೇಕು ಎಂದು ಜೊತೆಯಲ್ಲಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ ಅವರಿಗೆ ಆದೇಶಿಸಿದರು.

ಮುಖ್ಯ ಶಿಕ್ಷಕರ ಕೊಠಡಿಯಲ್ಲಿರುವ ಸ್ವಚ್ಛತೆಯಂತೆಯೇ ಮಕ್ಕಳು ವ್ಯಾಸಂಗ ಮಾಡುವ ಕೊಠಡಿಗಳಲ್ಲೂ ಇರಬೇಕು ಎಂದರು. ಈಗಬಿಡುಗಡೆ ಮಾಡಿಸಿರುವ 38 ಲಕ್ಷ ರೂ.ಗಳನ್ನು ಬಳಕೆ ಮಾಡಿ ಶತಮಾನಗಳ ಹೊಸ್ತಿಲ್ಲಿರುವ ಶಾಲೆಗೆ ಇನ್ನೇನು ಆಗಬೇಕು ಎಂಬುದನ್ನು ತಿಳಿಸಿ ದರೆ ಮಾಡಿಸಿಕೊಡುವುದಾಗಿ ಹೇಳಿ ದರು. ಮಾಜಿ ಶಾಸಕ ಕಳಲೆ ಕೇಶವ ಮೂರ್ತಿ, ಮುಖ್ಯಶಿಕ್ಷಕಿ ಬಾಲಸರಸ್ವತಿ, ಶಂಕರಪುರ ಸುರೇಶ ಇತರರಿದ್ದರು.

ಭೂಮಿಕಾ

Recent Posts

ಕೊಳ್ಳೇಗಾಲ| ಹಳೆ ವೈಷಮ್ಯ ಓರ್ವನ ಕೊಲೆ

ಕೊಳ್ಳೇಗಾಲ: ರಾತ್ರಿ ಕಂಠಪೂರ್ತಿ ಕುಡಿದ ಇಬ್ಬರ ನಡುವೆ ಹಳೇ ವೈಷಮ್ಯದಿಂದ ಕಲಹ ನಡೆದು ಓರ್ವನನ್ನು ಕೊಲೆ ಮಾಡಿ ಪೊಲೀಸರಿಗೆ ಶರಣಾಗಿರುವ…

3 hours ago

ಮುಂದಿನ ಒಂದು ವಾರದವರೆಗೆ ರಾಜ್ಯದಲ್ಲಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ಆರ್ಭಟ ಜೋರಾಗಿರುವ ಬೆನ್ನಲ್ಲೇ ಮುಂದಿನ ಒಂದು ವಾರದವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

5 hours ago

ಕರ್ನಾಟಕದಲ್ಲಿ ರಾತ್ರಿ ವೇಳೆಯೂ ಬೀಸಲಿದೆ ಉಷ್ಣ ಅಲೆ: ಜನತೆಗೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಕಳೆದ ಹಲವು ದಿನಗಳಿಂದ ರಾಜ್ಯಾದ್ಯಂತ ತಾಪಮಾನ ಹೆಚ್ಚಾಗಿದ್ದು, ಜನರು ಹೈರಾಣಾಗಿದ್ದಾರೆ. ಸುಡು ಬಿಸಿಲು ಹಾಗೂ ಸೆಖೆಯಿಂದಾಗಿ ಕರುನಾಡ ಜನರು…

5 hours ago

ಮುತ್ತತ್ತಿಯಲ್ಲಿ ನೀರಿಗಿಳಿದ ಯುವಕ ಸಾವು

ಮುತ್ತತ್ತಿಯಲ್ಲಿ ನೀರಿಗಿಳಿದ ಯುವಕ ಸಾವು ಹಲಗೂರು: ಇಲ್ಲಿಗೆ ಸಮೀಪದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ತೀವ್ರ ಸೆಳೆತಕ್ಕೆ…

5 hours ago

ಛತ್ತೀಸ್‌ಗಢದಲ್ಲಿ ಖಾಸಗಿ ವಿಮಾನ ಪತನ: ಪೈಲಟ್‌ ಹಾಗೂ ಕೋ ಪೈಲಟ್‌ ಸಾವು

ರಾಯ್ಪುರ: ಛತ್ತೀಸ್‌ಗಢದಲ್ಲಿ ಖಾಸಗಿ ವಿಮಾನವೊಂದು ಪತನವಾಗಿದ್ದು, ಪೈಲಟ್‌ ಹಾಗೂ ಸಹ ಪೈಲಟರ್‌ ಇಬ್ಬರೂ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಛತ್ತೀಸ್‌ಗಢದ…

6 hours ago

ಟ್ರಂಪ್‌ ಹೇಳಿದ್ದನ್ನು ಪಾಲಿಸಲು ಮೋದಿ ಇಸ್ರೇಲ್‌ಗೆ ಭೇಟಿ ನೀಡಿದ್ದರು: ರಾಹುಲ್‌ ಗಾಂಧಿ

ಚೆನ್ನೈ: ಇರಾನ್-ಇಸ್ರೇಲ್‌ ಯುದ್ಧ ಶುರುವಾಗುವ ಮೊದಲು ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ್ದನ್ನು ಪಾಲಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ…

6 hours ago