Andolana originals

ಇದೇನು ಶಾಲಾ ಕೊಠಡಿಯೋ, ಧೂಳು ಸಂಗ್ರಹ ಸ್ಥಳವೋ?

ನಂಜನಗೂಡು:ಶತಮಾನದ ಹೊಸ್ತಿಲಲ್ಲಿರುವ ನಗರದ ಬಾಲಕರ ಪ್ರೌಢಶಾಲೆಯ ಕೊಠಡಿಗಳ ಸ್ಥಿತಿಯನ್ನು ಕಂಡ ಶಾಸಕ ದರ್ಶನ್ ಧ್ರುವನಾರಾ ಯಣ ಅವರು, ಇದೇನು ಶಾಲಾ ಕೊಠಡಿಯೋ, ಧೂಳು ಶೇಖರಣಾ ಸ್ಥಳವೋ? ಎಂದು ಪ್ರಶ್ನಿಸಿದರು.

ಮಂಗಳವಾರ ಬಾಲಕರ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿದ ಅವರು, ಅಲ್ಲಿನ ಕೊಠಡಿಗಳಲ್ಲಿ ಕಸದ ರಾಶಿಯನ್ನು ಕಂಡು ಅಸಮಾಧಾನ ವ್ಯಕ್ತಪಡಿಸಿ, 10 ದಿನಗಳಲ್ಲಿ ಎಲ್ಲ ಕೊಠಡಿಗಗಳನ್ನೂ ಸ್ವಚ್ಛ ಗೊಳಿಸಿ ತಮಗೆ ಚಿತ್ರ ಸಹಿತವಾದ ಮಾಹಿತಿ ನೀಡುವಂತೆ ಶಾಲಾ ಮುಖ್ಯ ಶಿಕ್ಷಕಿ ಬಾಲ ಸರಸ್ವತಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ ಅವರಿಗೆ ತಾಕೀತು ಮಾಡಿದರು.

ನಂತರ ವಾಚನಾಲಯದ ಬೀಗತೆಗಿಸಿ ನೋಡಿದಾಗ ಅನೇಕ ತಿಂಗಳುಗಳಿಂದ ಬಾಗಿಲು ತೆರೆಯದೆ ದೂಳು, ಜೇಡಗ ಳಿಂದ ಆವೃತವಾಗಿದ್ದನ್ನು ಗಮನಿಸಿ ಕುಪಿತಗೊಂಡು, ವಾಚನಾ ಲಯದ ಕೊಠಡಿಗಳ ಬಾಗಿಲು ತೆರೆಯದೇ ಎಷ್ಟು ತಿಂಗಳಾಯಿತು ಎಂದು ಪ್ರಶ್ನಿಸಿದರು.

ಪ್ರತಿದಿನ ವಾಚನಾಲಯದ ಬಾಗಿಲು ತೆರೆಯಬೇಕು. ಇಲ್ಲಿಗೆ ನಿತ್ಯ ದಿನಪತ್ರಿಕೆಗಳು, ಮಾಸ ಪತ್ರಿಕೆಗಳನ್ನು ತರಿಸಬೇಕು ಎಂದು ಸೂಚಿಸಿದರು.

10 ದಿನಗಳಲ್ಲಿ ಇಲ್ಲಿನ ಎಲ್ಲ ಕೊಠಡಿ ಗಳು ಸ್ವಚ್ಛಗೊಳ್ಳಬೇಕು. ಸ್ವಚ್ಛವಾದ ಕೊಠಡಿಗಳ ಚಿತ್ರಗಳನ್ನು ತಮಗೆ ಕಳಿಸಬೇಕು ಎಂದು ಜೊತೆಯಲ್ಲಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ ಅವರಿಗೆ ಆದೇಶಿಸಿದರು.

ಮುಖ್ಯ ಶಿಕ್ಷಕರ ಕೊಠಡಿಯಲ್ಲಿರುವ ಸ್ವಚ್ಛತೆಯಂತೆಯೇ ಮಕ್ಕಳು ವ್ಯಾಸಂಗ ಮಾಡುವ ಕೊಠಡಿಗಳಲ್ಲೂ ಇರಬೇಕು ಎಂದರು. ಈಗಬಿಡುಗಡೆ ಮಾಡಿಸಿರುವ 38 ಲಕ್ಷ ರೂ.ಗಳನ್ನು ಬಳಕೆ ಮಾಡಿ ಶತಮಾನಗಳ ಹೊಸ್ತಿಲ್ಲಿರುವ ಶಾಲೆಗೆ ಇನ್ನೇನು ಆಗಬೇಕು ಎಂಬುದನ್ನು ತಿಳಿಸಿ ದರೆ ಮಾಡಿಸಿಕೊಡುವುದಾಗಿ ಹೇಳಿ ದರು. ಮಾಜಿ ಶಾಸಕ ಕಳಲೆ ಕೇಶವ ಮೂರ್ತಿ, ಮುಖ್ಯಶಿಕ್ಷಕಿ ಬಾಲಸರಸ್ವತಿ, ಶಂಕರಪುರ ಸುರೇಶ ಇತರರಿದ್ದರು.

ಭೂಮಿಕಾ

Recent Posts

ಅಮೇರಿಕಾದಲ್ಲಿ ಕಾಣೆಯಾಗಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿ ಮೃತದೇಹ ಪತ್ತೆ

ನ್ಯೂಯಾರ್ಕ್: ಅಮೆರಿಕದ ಕ್ಯಾಲಿಫೋರ್ನಿಯಾದ ಬರ್ಕ್ಲಿಯಲ್ಲಿ ಕಾಣೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ (22) ಅವರ ಮೃತದೇಹ ಪತ್ತೆಯಾಗಿದೆ ಎಂದು ಸ್ಯಾನ್…

1 hour ago

ವಿವಾಹಪೂರ್ವ ದೈಹಿಕ ಸಂಬಂಧದಲ್ಲಿ ಎಚ್ಚರಿಕೆ ಅಗತ್ಯ : ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ವಿವಾಹಪೂರ್ವ ದೈಹಿಕ ಸಂಬಂಧಗಳಲ್ಲಿ ಅತ್ಯಂತ ಜಾಗರೂಕತೆ ವಹಿಸಬೇಕು ಎಂದು ಸುಪ್ರೀಂ ಕೋರ್ಟ್‌ ಎಚ್ಚರಿಕೆ ನೀಡಿದೆ. ಮದುವೆಯ ಸುಳ್ಳು…

2 hours ago

ಎಕ್ಸ್‌ ವೆಬ್‌ಸೈಟ್‌ ಸ್ಥಗಿತ : ಜಾಗತಿಕ ಬಳಕೆದಾರರ ಪರದಾಟ

ಮೈಸೂರು : ಎಲಾನ್ ಮಸ್ಕ್ ಒಡೆತನದ ಸಾಮಾಜಿಕ ಜಾಲತಾಣ ಎಕ್ಸ್ (X, ಹಿಂದಿನ ಟ್ವಿಟರ್) ಇಂದು ಸಂಜೆ (ಫೆಬ್ರವರಿ 16)…

3 hours ago

ರಾಹುಲ್‌ ಗಾಂಧಿ ಪ್ರಶ್ನೆಗೆ ಪ್ರಾಮಾಣಿಕವಾಗಿ ಉತ್ತರಿಸಿ : ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ರೈತರ ಮೇಲೆ ಪರಿಣಾಮ ಬೀರುವ ಭಾರತ-ಅಮೆರಿಕ ವ್ಯಾಪಾರ…

3 hours ago

ಕಾಡಾನೆಗಳ ದಾಳಿ ; ಗುಡಿಸಲು, ಸೋಲಾರ್ ತಂತಿಬೇಲಿ ನಾಶ

ಮಲ್ಕುಂಡಿ : ಕಾಡಾನೆಗಳ ದಾಳಿಯಿಂದ ಗುಡಿಸಲು ಹಾಗೂ ಸೋಲಾರ್ ತಂತಿ ಬೇಲಿ ನಾಶವಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಾಯಶೆಟ್ಟಿಪುರ ಗ್ರಾಮದಲ್ಲಿ…

4 hours ago

ಮೈಸೂರು | ಅಪರಾಧ ನಿಯಂತ್ರಣ ಕುರಿತು ಎಡಿಜಿಪಿ ಸಭೆ

ಮೈಸೂರು : ನಗರದಲ್ಲಿ ಅಪರಾಧ ನಿಯಂತ್ರಣ ಮತ್ತು ಪತ್ತೆ ಸಂಬಂಧ ರಾಜ್ಯ ಪೊಲೀಸ್ ಇಲಾಖೆಯ ಅಪರಾಧ ಮತ್ತು ತಾಂತ್ರಿಕ ಸೇವೆ…

4 hours ago