Andolana originals

ಇದೇನು ಶಾಲಾ ಕೊಠಡಿಯೋ, ಧೂಳು ಸಂಗ್ರಹ ಸ್ಥಳವೋ?

ನಂಜನಗೂಡು:ಶತಮಾನದ ಹೊಸ್ತಿಲಲ್ಲಿರುವ ನಗರದ ಬಾಲಕರ ಪ್ರೌಢಶಾಲೆಯ ಕೊಠಡಿಗಳ ಸ್ಥಿತಿಯನ್ನು ಕಂಡ ಶಾಸಕ ದರ್ಶನ್ ಧ್ರುವನಾರಾ ಯಣ ಅವರು, ಇದೇನು ಶಾಲಾ ಕೊಠಡಿಯೋ, ಧೂಳು ಶೇಖರಣಾ ಸ್ಥಳವೋ? ಎಂದು ಪ್ರಶ್ನಿಸಿದರು.

ಮಂಗಳವಾರ ಬಾಲಕರ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿದ ಅವರು, ಅಲ್ಲಿನ ಕೊಠಡಿಗಳಲ್ಲಿ ಕಸದ ರಾಶಿಯನ್ನು ಕಂಡು ಅಸಮಾಧಾನ ವ್ಯಕ್ತಪಡಿಸಿ, 10 ದಿನಗಳಲ್ಲಿ ಎಲ್ಲ ಕೊಠಡಿಗಗಳನ್ನೂ ಸ್ವಚ್ಛ ಗೊಳಿಸಿ ತಮಗೆ ಚಿತ್ರ ಸಹಿತವಾದ ಮಾಹಿತಿ ನೀಡುವಂತೆ ಶಾಲಾ ಮುಖ್ಯ ಶಿಕ್ಷಕಿ ಬಾಲ ಸರಸ್ವತಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ ಅವರಿಗೆ ತಾಕೀತು ಮಾಡಿದರು.

ನಂತರ ವಾಚನಾಲಯದ ಬೀಗತೆಗಿಸಿ ನೋಡಿದಾಗ ಅನೇಕ ತಿಂಗಳುಗಳಿಂದ ಬಾಗಿಲು ತೆರೆಯದೆ ದೂಳು, ಜೇಡಗ ಳಿಂದ ಆವೃತವಾಗಿದ್ದನ್ನು ಗಮನಿಸಿ ಕುಪಿತಗೊಂಡು, ವಾಚನಾ ಲಯದ ಕೊಠಡಿಗಳ ಬಾಗಿಲು ತೆರೆಯದೇ ಎಷ್ಟು ತಿಂಗಳಾಯಿತು ಎಂದು ಪ್ರಶ್ನಿಸಿದರು.

ಪ್ರತಿದಿನ ವಾಚನಾಲಯದ ಬಾಗಿಲು ತೆರೆಯಬೇಕು. ಇಲ್ಲಿಗೆ ನಿತ್ಯ ದಿನಪತ್ರಿಕೆಗಳು, ಮಾಸ ಪತ್ರಿಕೆಗಳನ್ನು ತರಿಸಬೇಕು ಎಂದು ಸೂಚಿಸಿದರು.

10 ದಿನಗಳಲ್ಲಿ ಇಲ್ಲಿನ ಎಲ್ಲ ಕೊಠಡಿ ಗಳು ಸ್ವಚ್ಛಗೊಳ್ಳಬೇಕು. ಸ್ವಚ್ಛವಾದ ಕೊಠಡಿಗಳ ಚಿತ್ರಗಳನ್ನು ತಮಗೆ ಕಳಿಸಬೇಕು ಎಂದು ಜೊತೆಯಲ್ಲಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ ಅವರಿಗೆ ಆದೇಶಿಸಿದರು.

ಮುಖ್ಯ ಶಿಕ್ಷಕರ ಕೊಠಡಿಯಲ್ಲಿರುವ ಸ್ವಚ್ಛತೆಯಂತೆಯೇ ಮಕ್ಕಳು ವ್ಯಾಸಂಗ ಮಾಡುವ ಕೊಠಡಿಗಳಲ್ಲೂ ಇರಬೇಕು ಎಂದರು. ಈಗಬಿಡುಗಡೆ ಮಾಡಿಸಿರುವ 38 ಲಕ್ಷ ರೂ.ಗಳನ್ನು ಬಳಕೆ ಮಾಡಿ ಶತಮಾನಗಳ ಹೊಸ್ತಿಲ್ಲಿರುವ ಶಾಲೆಗೆ ಇನ್ನೇನು ಆಗಬೇಕು ಎಂಬುದನ್ನು ತಿಳಿಸಿ ದರೆ ಮಾಡಿಸಿಕೊಡುವುದಾಗಿ ಹೇಳಿ ದರು. ಮಾಜಿ ಶಾಸಕ ಕಳಲೆ ಕೇಶವ ಮೂರ್ತಿ, ಮುಖ್ಯಶಿಕ್ಷಕಿ ಬಾಲಸರಸ್ವತಿ, ಶಂಕರಪುರ ಸುರೇಶ ಇತರರಿದ್ದರು.

ಭೂಮಿಕಾ

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

1 hour ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

7 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

10 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

10 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

10 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

13 hours ago