Andolana originals

ಇದೇನು ಶಾಲಾ ಕೊಠಡಿಯೋ, ಧೂಳು ಸಂಗ್ರಹ ಸ್ಥಳವೋ?

ನಂಜನಗೂಡು:ಶತಮಾನದ ಹೊಸ್ತಿಲಲ್ಲಿರುವ ನಗರದ ಬಾಲಕರ ಪ್ರೌಢಶಾಲೆಯ ಕೊಠಡಿಗಳ ಸ್ಥಿತಿಯನ್ನು ಕಂಡ ಶಾಸಕ ದರ್ಶನ್ ಧ್ರುವನಾರಾ ಯಣ ಅವರು, ಇದೇನು ಶಾಲಾ ಕೊಠಡಿಯೋ, ಧೂಳು ಶೇಖರಣಾ ಸ್ಥಳವೋ? ಎಂದು ಪ್ರಶ್ನಿಸಿದರು.

ಮಂಗಳವಾರ ಬಾಲಕರ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿದ ಅವರು, ಅಲ್ಲಿನ ಕೊಠಡಿಗಳಲ್ಲಿ ಕಸದ ರಾಶಿಯನ್ನು ಕಂಡು ಅಸಮಾಧಾನ ವ್ಯಕ್ತಪಡಿಸಿ, 10 ದಿನಗಳಲ್ಲಿ ಎಲ್ಲ ಕೊಠಡಿಗಗಳನ್ನೂ ಸ್ವಚ್ಛ ಗೊಳಿಸಿ ತಮಗೆ ಚಿತ್ರ ಸಹಿತವಾದ ಮಾಹಿತಿ ನೀಡುವಂತೆ ಶಾಲಾ ಮುಖ್ಯ ಶಿಕ್ಷಕಿ ಬಾಲ ಸರಸ್ವತಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ ಅವರಿಗೆ ತಾಕೀತು ಮಾಡಿದರು.

ನಂತರ ವಾಚನಾಲಯದ ಬೀಗತೆಗಿಸಿ ನೋಡಿದಾಗ ಅನೇಕ ತಿಂಗಳುಗಳಿಂದ ಬಾಗಿಲು ತೆರೆಯದೆ ದೂಳು, ಜೇಡಗ ಳಿಂದ ಆವೃತವಾಗಿದ್ದನ್ನು ಗಮನಿಸಿ ಕುಪಿತಗೊಂಡು, ವಾಚನಾ ಲಯದ ಕೊಠಡಿಗಳ ಬಾಗಿಲು ತೆರೆಯದೇ ಎಷ್ಟು ತಿಂಗಳಾಯಿತು ಎಂದು ಪ್ರಶ್ನಿಸಿದರು.

ಪ್ರತಿದಿನ ವಾಚನಾಲಯದ ಬಾಗಿಲು ತೆರೆಯಬೇಕು. ಇಲ್ಲಿಗೆ ನಿತ್ಯ ದಿನಪತ್ರಿಕೆಗಳು, ಮಾಸ ಪತ್ರಿಕೆಗಳನ್ನು ತರಿಸಬೇಕು ಎಂದು ಸೂಚಿಸಿದರು.

10 ದಿನಗಳಲ್ಲಿ ಇಲ್ಲಿನ ಎಲ್ಲ ಕೊಠಡಿ ಗಳು ಸ್ವಚ್ಛಗೊಳ್ಳಬೇಕು. ಸ್ವಚ್ಛವಾದ ಕೊಠಡಿಗಳ ಚಿತ್ರಗಳನ್ನು ತಮಗೆ ಕಳಿಸಬೇಕು ಎಂದು ಜೊತೆಯಲ್ಲಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ ಅವರಿಗೆ ಆದೇಶಿಸಿದರು.

ಮುಖ್ಯ ಶಿಕ್ಷಕರ ಕೊಠಡಿಯಲ್ಲಿರುವ ಸ್ವಚ್ಛತೆಯಂತೆಯೇ ಮಕ್ಕಳು ವ್ಯಾಸಂಗ ಮಾಡುವ ಕೊಠಡಿಗಳಲ್ಲೂ ಇರಬೇಕು ಎಂದರು. ಈಗಬಿಡುಗಡೆ ಮಾಡಿಸಿರುವ 38 ಲಕ್ಷ ರೂ.ಗಳನ್ನು ಬಳಕೆ ಮಾಡಿ ಶತಮಾನಗಳ ಹೊಸ್ತಿಲ್ಲಿರುವ ಶಾಲೆಗೆ ಇನ್ನೇನು ಆಗಬೇಕು ಎಂಬುದನ್ನು ತಿಳಿಸಿ ದರೆ ಮಾಡಿಸಿಕೊಡುವುದಾಗಿ ಹೇಳಿ ದರು. ಮಾಜಿ ಶಾಸಕ ಕಳಲೆ ಕೇಶವ ಮೂರ್ತಿ, ಮುಖ್ಯಶಿಕ್ಷಕಿ ಬಾಲಸರಸ್ವತಿ, ಶಂಕರಪುರ ಸುರೇಶ ಇತರರಿದ್ದರು.

ಭೂಮಿಕಾ

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

12 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

12 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

13 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

14 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

18 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

18 hours ago