Andolana originals

ಇದೇನು ಶಾಲಾ ಕೊಠಡಿಯೋ, ಧೂಳು ಸಂಗ್ರಹ ಸ್ಥಳವೋ?

ನಂಜನಗೂಡು:ಶತಮಾನದ ಹೊಸ್ತಿಲಲ್ಲಿರುವ ನಗರದ ಬಾಲಕರ ಪ್ರೌಢಶಾಲೆಯ ಕೊಠಡಿಗಳ ಸ್ಥಿತಿಯನ್ನು ಕಂಡ ಶಾಸಕ ದರ್ಶನ್ ಧ್ರುವನಾರಾ ಯಣ ಅವರು, ಇದೇನು ಶಾಲಾ ಕೊಠಡಿಯೋ, ಧೂಳು ಶೇಖರಣಾ ಸ್ಥಳವೋ? ಎಂದು ಪ್ರಶ್ನಿಸಿದರು.

ಮಂಗಳವಾರ ಬಾಲಕರ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿದ ಅವರು, ಅಲ್ಲಿನ ಕೊಠಡಿಗಳಲ್ಲಿ ಕಸದ ರಾಶಿಯನ್ನು ಕಂಡು ಅಸಮಾಧಾನ ವ್ಯಕ್ತಪಡಿಸಿ, 10 ದಿನಗಳಲ್ಲಿ ಎಲ್ಲ ಕೊಠಡಿಗಗಳನ್ನೂ ಸ್ವಚ್ಛ ಗೊಳಿಸಿ ತಮಗೆ ಚಿತ್ರ ಸಹಿತವಾದ ಮಾಹಿತಿ ನೀಡುವಂತೆ ಶಾಲಾ ಮುಖ್ಯ ಶಿಕ್ಷಕಿ ಬಾಲ ಸರಸ್ವತಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ ಅವರಿಗೆ ತಾಕೀತು ಮಾಡಿದರು.

ನಂತರ ವಾಚನಾಲಯದ ಬೀಗತೆಗಿಸಿ ನೋಡಿದಾಗ ಅನೇಕ ತಿಂಗಳುಗಳಿಂದ ಬಾಗಿಲು ತೆರೆಯದೆ ದೂಳು, ಜೇಡಗ ಳಿಂದ ಆವೃತವಾಗಿದ್ದನ್ನು ಗಮನಿಸಿ ಕುಪಿತಗೊಂಡು, ವಾಚನಾ ಲಯದ ಕೊಠಡಿಗಳ ಬಾಗಿಲು ತೆರೆಯದೇ ಎಷ್ಟು ತಿಂಗಳಾಯಿತು ಎಂದು ಪ್ರಶ್ನಿಸಿದರು.

ಪ್ರತಿದಿನ ವಾಚನಾಲಯದ ಬಾಗಿಲು ತೆರೆಯಬೇಕು. ಇಲ್ಲಿಗೆ ನಿತ್ಯ ದಿನಪತ್ರಿಕೆಗಳು, ಮಾಸ ಪತ್ರಿಕೆಗಳನ್ನು ತರಿಸಬೇಕು ಎಂದು ಸೂಚಿಸಿದರು.

10 ದಿನಗಳಲ್ಲಿ ಇಲ್ಲಿನ ಎಲ್ಲ ಕೊಠಡಿ ಗಳು ಸ್ವಚ್ಛಗೊಳ್ಳಬೇಕು. ಸ್ವಚ್ಛವಾದ ಕೊಠಡಿಗಳ ಚಿತ್ರಗಳನ್ನು ತಮಗೆ ಕಳಿಸಬೇಕು ಎಂದು ಜೊತೆಯಲ್ಲಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ ಅವರಿಗೆ ಆದೇಶಿಸಿದರು.

ಮುಖ್ಯ ಶಿಕ್ಷಕರ ಕೊಠಡಿಯಲ್ಲಿರುವ ಸ್ವಚ್ಛತೆಯಂತೆಯೇ ಮಕ್ಕಳು ವ್ಯಾಸಂಗ ಮಾಡುವ ಕೊಠಡಿಗಳಲ್ಲೂ ಇರಬೇಕು ಎಂದರು. ಈಗಬಿಡುಗಡೆ ಮಾಡಿಸಿರುವ 38 ಲಕ್ಷ ರೂ.ಗಳನ್ನು ಬಳಕೆ ಮಾಡಿ ಶತಮಾನಗಳ ಹೊಸ್ತಿಲ್ಲಿರುವ ಶಾಲೆಗೆ ಇನ್ನೇನು ಆಗಬೇಕು ಎಂಬುದನ್ನು ತಿಳಿಸಿ ದರೆ ಮಾಡಿಸಿಕೊಡುವುದಾಗಿ ಹೇಳಿ ದರು. ಮಾಜಿ ಶಾಸಕ ಕಳಲೆ ಕೇಶವ ಮೂರ್ತಿ, ಮುಖ್ಯಶಿಕ್ಷಕಿ ಬಾಲಸರಸ್ವತಿ, ಶಂಕರಪುರ ಸುರೇಶ ಇತರರಿದ್ದರು.

ಭೂಮಿಕಾ

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

1 hour ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

1 hour ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

1 hour ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

1 hour ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

1 hour ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

1 hour ago