Andolana originals

ಇದೇನಾ ಆದರ್ಶ?

ಎಸ್.ಎಸ್.ಭಟ್

ಮೈಸೂರು: ರಾಜ್ಯದಲ್ಲಿ ಸಾಕಷ್ಟು ಹೆಸರು ಮಾಡಿ ಆದರ್ಶವಾಗಿದ್ದ ಆದರ್ಶ ಪ್ರೌಢ ಶಾಲೆಗಳನ್ನು ಉನ್ನತೀಕರಿಸಿ ಪ್ರೌಢಶಾಲೆಗಳೊಂದಿಗೆ ೭೪ ಪದವಿ ಪೂರ್ವ ಕಾಲೇಜುಗಳನ್ನು ೨೦೨೫-೨೬ನೇ ಶೈಕ್ಷಣಿಕ ವರ್ಷದಲ್ಲೇ ಆರಂಭಿಸಲಾಗಿದ್ದು, ಅವುಗಳೀಗ ಎರಡನೇ ವರ್ಷಕ್ಕೆ ಕಾಲಿಟ್ಟಿವೆ. ಆದರೆ, ಯಾವುದೇ ಕಾಲೇಜಿನಲ್ಲಿ ಖಾಯಂ ಉಪನ್ಯಾಸಕರೇ ಇಲ್ಲ.

ಪ್ರಯೋಗಾಲಯಗಳಿವೆ; ಪರಿಕರಗಳೇ ಇಲ್ಲ. ೨೨ ಜಿಲ್ಲೆಗಳಲ್ಲಿರುವ ೭೪ ಆದರ್ಶ ಶಾಲೆಗಳನ್ನು ಉನ್ನತೀಕರಿಸಿ ಪದವಿಪೂರ್ವ ಕಾಲೇಜುಗಳನ್ನು ಸ್ಥಾಪಿಸಲಾಗಿದೆ. ಮೈಸೂರು ಜಿಲ್ಲೆಯಲ್ಲೇ ಆರು ಆದರ್ಶ ಶಾಲೆಗಳಿದ್ದು, ಕಾಲೇಜುಗಳು ಸ್ಥಾಪನೆಯಾಗಿ ೨ ವರ್ಷಗಳಾದರೂ ಶಿಕ್ಷಣ ಇಲಾಖೆ ಈ ಪದವಿ ಪೂರ್ವ ಕಾಲೇಜುಗಳಿಗೆ ಖಾಯಂ ಶಿಕ್ಷಕರನ್ನು ನೇಮಿಸದೆ ಅತಿಥಿ ಶಿಕ್ಷಕರಿಂದಲೇ ತರಗತಿಗಳನ್ನು ನಡೆಸುತ್ತಿದೆ.

ಆದರ್ಶ ಪ್ರೌಢಶಾಲೆಗಳ ಎಸ್‌ಎಸ್‌ಎಲ್‌ಸಿ ಫಲಿತಾಂಶ ಉನ್ನತ ಮಟ್ಟದಲ್ಲಿರುವುದರಿಂದ ಪದವಿ ಪೂರ್ವ ಕಾಲೇಜಿನಲ್ಲೂ ಉತ್ತಮ ವಿದ್ಯಾಭ್ಯಾಸ ದೊರಕಬಹುದೆಂಬ ಆಶಾಭಾವನೆಯಿಂದ ಪಿಯುಸಿ ಶಿಕ್ಷಣಕ್ಕೆ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಖಾಯಂ ಉಪನ್ಯಾಸಕರ ಬೋಧನೆಯ ಸುಯೋಗ ಇಲ್ಲದಂತಾಗಿದೆ. ಆದರ್ಶ ಮನೋಭಾವನೆಯಿಂದ ಕಾಲೇಜು ಸ್ಥಾಪಿಸಿದ ಶಿಕ್ಷಣ ಇಲಾಖೆಯೂ ಈವರೆಗೆ ಮಕ್ಕಳಿಗೆ ಖಾಯಂ ಬೋಧಕರನ್ನು ಒದಗಿಸದೇ ಇರುವುದು ವಿಪರ್ಯಾಸದ ಸಂಗತಿ.

ರಾಜ್ಯದಾದ್ಯಂತ ೭೪ ಆದರ್ಶ ಪ್ರೌಢಶಾಲೆಗಳನ್ನು ಸ್ಥಾಪಿಸಿರುವ ಸರ್ಕಾರ ಇದೇ ಶಾಲೆಗಳಲ್ಲಿ ೨ ವರ್ಷಗಳ ಹಿಂದೆ ಪದವಿ ಪೂರ್ವ ಕಾಲೇಜುಗಳನ್ನೂ ಸ್ಥಾಪಿಸಿತು. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ, ನಂಜನಗೂಡು, ಕೆ.ಆರ್.ನಗರ, ತಿ.ನರಸೀಪುರ, ಹುಣಸೂರು ಹಾಗೂ ಮೈಸೂರು ತಾಲ್ಲೂಕುಗಳಲ್ಲಿ ಸದ್ಯ ೬ ಕಾಲೇಜುಗಳಿವೆ. ಕಳೆದ ವರ್ಷವೇ ಆರಂಭವಾದ ಈ ಕಾಲೇಜುಗಳಿಗೆ ಸೇರ್ಪಡೆಯಾದ ವಿದ್ಯಾರ್ಥಿಗಳು ಈಗ ದ್ವಿತೀಯ ಪಿಯುಸಿಗೆ ಕಾಲಿಟ್ಟಿದ್ದಾರೆ. ತರಗತಿಗಳು ಆರಂಭವಾಗಿ ಎರಡು ತಿಂಗಳುಗಳೇ ಕಳೆದಿವೆ. ಆದರೂ ಈ ಕಾಲೇಜುಗಳಲ್ಲಿ ಖಾಯಂ ಉಪನ್ಯಾಸಕರನ್ನು ಸರ್ಕಾರ ಈವರೆಗೂ ನೇಮಿಸಿಯೇ ಇಲ್ಲ. ಜಿಲ್ಲೆಯ ಆರೂ ಆದರ್ಶ ಕಾಲೇಜುಗಳೂ ಸೇರಿದಂತೆ ರಾಜ್ಯದ ಎಲ್ಲ ೭೪ ಆದರ್ಶ ಕಾಲೇಜುಗಳಲ್ಲೂ ಇಂದಿಗೂ ಕೇವಲ ಅತಿಥಿ ಉಪನ್ಯಾಸಕರಿಂದಲೇ ಪಾಠ ಪ್ರವಚನ ನಡೆಸಲಾಗುತ್ತಿದೆ.

ಅತಿಥಿ ಉಪನ್ಯಾಸಕರಿಂದಲೇ ತುಂಬಿರುವ ಆದರ್ಶ ಕಾಲೇಜುಗಳಲ್ಲಿ ವಿಜ್ಞಾನ ವಿಭಾಗವನ್ನು ಸ್ಥಾಪಿಸಲಾಗಿದ್ದು, ಲ್ಯಾಬ್ ಕೂಡ ಇದೆ. ಆದರೆ ಲ್ಯಾಬ್‌ಗೆ ಬೇಕಾದ ಪರಿಕರಗಳೇ ಇಲ್ಲ. ಲ್ಯಾಬ್‌ಗೆ ಪರಿಕರಗಳನ್ನು ತರಲು ಕಾಲೇಜುಗಳಿಗೆ ಹಣ ಬಿಡುಗಡೆಯೇ ಆಗಿಲ್ಲ ಎನ್ನಲಾಗುತ್ತಿದ್ದು, ವಿಜ್ಞಾನ ಕೋರ್ಸ್ ಆಯ್ಕೆ ಮಾಡಿಕೊಂಡ ವಿದ್ಯಾರ್ಥಿಗಳು ಪ್ರಯೋಗಶಾಲೆಯ ಪ್ರಾಯೋಗಿಕ ತರಗತಿಯ ಅನುಭವವೇ ಇಲ್ಲದೇ ಪಿಯುಸಿ ಶಿಕ್ಷಣ ಮುಗಿಸಬೇಕಾದ ಅನಿವಾರ್ಯತೆ ಉಂಟಾಗಿದೆ. ಹಲವೆಡೆ ಕೊಠಡಿಗಳ ಕೊರತೆಯೂ ಇದೆ

” ಖಾಯಂ ಶಿಕ್ಷಕರ ನೇಮಕ ಯಾವಾಗ? ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ. ಈ ಕಾಲೇಜುಗಳಿಗೆ ಖಾಯಂ ಉಪನ್ಯಾಸಕರನ್ನು ನೇಮಿಸಲು ಅನುಮತಿಗಾಗಿ ಶಿಕ್ಷಣ ಇಲಾಖೆ ಸರ್ಕಾರಕ್ಕೆ ಪತ್ರ ಬರೆದಿದೆ ಎಂದು ಹೇಳಲಾಗುತ್ತಿದೆ”

ಆಂದೋಲನ ಡೆಸ್ಕ್

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

2 hours ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

3 hours ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

4 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

4 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

5 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

12 hours ago