Andolana originals

ಕೋಟೆ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ವೆಂಕಟೇಶ್ ಆಯ್ಕೆ ಖಚಿತ?

ಮಂಜು ಕೋಟೆ

ಎಚ್.ಡಿ.ಕೋಟೆ: ಬಿಜೆಪಿ ಘಟಕದ ತಾಲ್ಲೂಕು ಅಧ್ಯಕ್ಷ ಹಿರೇಹಳ್ಳಿ ಶಂಭುಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಅಧ್ಯಕ್ಷ ಸ್ಥಾನಕ್ಕೆ ರೈತ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಣ್ಣೂರು ಟಿ. ವೆಂಕಟೇಶ್ ಆಯ್ಕೆಯಾಗುವುದು ಖಚಿತವಾಗಿದೆ.

ಹಿರೇಹಳ್ಳಿ ಶಂಭುಗೌಡ ಕೆಲವೊಂದು ಕಾರಣಗಳಿಂದಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆಯನ್ನು  ಜಿಲ್ಲಾಧ್ಯಕ್ಷರಾದ ಕುಂಬ್ರಳ್ಳಿ ಸುಬ್ಬಣ್ಣವರಿಗೆ ಕಳೆದ ವಾರ ಸಲ್ಲಿಸಿದ್ದಾರೆ. ೨ ವರ್ಷಗಳ ಹಿಂದೆ ಕೋಟೆ ಮತ್ತು ಸರಗೂರು ತಾಲ್ಲೂಕುಗಳಿಗೆ ಬಿಜೆಪಿ ಘಟಕದ ಅಧ್ಯಕ್ಷರನ್ನಾಗಿ ಶಂಭುಗೌಡ ಮತ್ತು ಗುರುಸ್ವಾಮಿ ಅವರನ್ನು ಪಕ್ಷದ ವರಿಷ್ಠರು ಮತ್ತು ಮುಖಂಡರುಗಳ ಮೂಲಕ ನೇಮಕ ಮಾಡಿಸಲು ಕೃಷ್ಣನಾಯಕ ಮುಂದಾಗಿದ್ದರು.

ಮೂರು ಜನರ ನೇತೃತ್ವದಲ್ಲಿ ವಿಧಾನಸಭಾ ಚುನಾವಣೆ ನಡೆದು ಕ್ಷೇತ್ರದಲ್ಲಿ ಬಿಜೆಪಿ ಶಕ್ತಿ ಪ್ರದರ್ಶನ ತೋರಿಸಿ ಎರಡನೇ ಸ್ಥಾನ ಪಡೆದು ಜಾ.ದಳ ಸೋಲು ಕಂಡಿತ್ತು. ಶಂಭುಗೌಡ ಪಕ್ಷದ ಸಂಘಟನೆ ಮತ್ತು ಕೆಲಸ ಕಾರ್ಯವನ್ನು ನಡೆಸುತ್ತಿದ್ದರು. ಕೆಲವೊಂದು ಕಾರಣಗಳಿಂದ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಕುತೂಹಲ ಮೂಡಿಸಿದೆ.

ತೆರವಾಗಿರುವ ಈ ಸ್ಥಾನಕ್ಕೆ ಒಕ್ಕಲಿಗ ಸಮುದಾಯದವರಿಗೆ ಆದ್ಯತೆ ನೀಡಬೇಕೆಂದು ಪಕ್ಷದ ವರಿಷ್ಠರು, ಮುಖಂಡರು ಚರ್ಚಿಸುತ್ತಿದ್ದು, ಅಣ್ಣೂರು ಗ್ರಾಮದ ಹಿರಿಯ ಮುಖಂಡ, ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿರುವ ಟಿ. ವೆಂಕಟೇಶ್‌ರವರು ಮುಂಚೂಣಿಯಲ್ಲಿದ್ದು, ಅವರು ಹಿಂದೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ, ಎಪಿಎಂಸಿ ಅಧ್ಯಕ್ಷರಾಗಿ, ತಾಪಂ ಸದಸ್ಯರಾಗಿ, ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ಸಕ್ರಿಯವಾಗಿ ಕೆಲಸ ನಿರ್ವಹಿಸಿರುವುದರಿಂದ ಇವರನ್ನು ಬಿಜೆಪಿ ಅಧ್ಯಕ್ಷರನ್ನಾಗಿ ಮಾಡಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.

ಇತ್ತೀಚೆಗೆ ಮೈಸೂರು ಜಿಲ್ಲೆಗೆ ಪಕ್ಷದ ಉಸ್ತುವಾರಿಯಾಗಿರುವ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡರವರು, ಜಿಲ್ಲೆಯ ಮತ್ತು ತಾಲ್ಲೂಕಿನ ಪ್ರಮುಖರ ಜೊತೆ ಸಭೆ ನಡೆಸಿದ್ದಾರೆ. ಕ್ಷೇತ್ರದಲ್ಲಿ ವಿರೋಧ ಪಕ್ಷವೇ ಇಲ್ಲದಂತೆ ಬಿಜೆಪಿ ಕೆಲಸ ನಿರ್ವಹಿಸುತ್ತಿರುವುದರಿಂದ ಮತ್ತು ಮುಂದಿನ ದಿನಗಳಲ್ಲಿ ತಾಪಂ, ಜಿಪಂ, ಗ್ರಾಪಂ ಚುನಾವಣೆಗಳು ಬರುವುದರಿಂದ ಸೂಕ್ತವಾದವರನ್ನು ಪಕ್ಷದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವ ಅನಿವಾರ್ಯತೆ ಇರುವುದರಿಂದ ಜಿಲ್ಲಾಧ್ಯಕ್ಷರು, ಉಸ್ತುವಾರಿಗಳು, ಪಕ್ಷದ ಪ್ರಮುಖ ಮುಖಂಡರುಗಳಿಗೆ ಸವಾಲಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ನಕಲಿ ರಹದಾರಿ: ಕಠಿಣ ಶಿಕ್ಷೆ ವಿಧಿಸಿ

ರಾಜ್ಯದಲ್ಲಿ ಅರುಣಾಚಲ ಪ್ರದೇಶ ಮತ್ತು ನಾಗಾಲ್ಯಾಂಡ್‌ನಂತಹ ದೂರದ ರಾಜ್ಯಗಳ ದಾಖಲೆಗಳನ್ನು ಬಳಸಿ ಬಸ್‌ಗಳ ನಕಲಿ ರಹ ದಾರಿ(ಪರ್ಮಿಟ್) ಪಡೆದು ಸರ್ಕಾರಕ್ಕೆ…

34 mins ago

ಓದುಗರ ಪತ್ರ: ಬ್ಯಾಂಕ್‌ಗಳ ವಿಶ್ವಾಸಾರ್ಹತೆಗೆ ಧಕ್ಕೆ

ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಸ್ವಾಮ್ಯದ ಕೆಲವು ಬ್ಯಾಂಕ್‌ಗಳಲ್ಲಿ ಗ್ರಾಹಕರು ಅಡಮಾನ ಇಟ್ಟಿರುವ ಚಿನ್ನವನ್ನು ಬ್ಯಾಂಕ್ ಸಿಬ್ಬಂದಿಯೇ ದುರುಪಯೋಗಪಡಿಸಿಕೊಳ್ಳುತ್ತಿರುವ ಪ್ರಕರಣಗಳು ಮಾಧ್ಯಮಗಳಲ್ಲಿ…

36 mins ago

ಓದುಗರ ಪತ್ರ: ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಿಬ್ಬಂದಿ ನಿಯೋಜಿಸಿ

ಮೈಸೂರಿನ ಕುವೆಂಪುನಗರ ವಿಶ್ವ ಮಾನವ ಜೋಡಿ ರಸ್ತೆಯ ಸಿ ಆಂಡ್ ಡಿ ಬ್ಲಾಕ್‌ನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಾಕಷ್ಟು ಸಿಬ್ಬಂದಿ…

38 mins ago

ಓದುಗರ ಪತ್ರ: ಬ್ಯಾಂಕ್ ಕನಿಷ್ಠ ಮೊತ್ತ ರದ್ದಾಗಲಿ

ಖಾಸಗಿ ಹಾಗೂ ಸರ್ಕಾರಿ ಬ್ಯಾಂಕುಗಳು ಈಗಲೂ ಉಳಿತಾಯ ಖಾತೆಯಲ್ಲಿ ಕನಿಷ್ಠ ಮೊತ್ತ ಇಲ್ಲ ಎಂಬ ಕಾರಣಕ್ಕೆ ದಂಡ ವಿದಿಸುತ್ತಿದ್ದು, ೨೦೨೪-೨೫ನೇ…

40 mins ago

ಇಂದು ಕೆ.ಆರ್.ನಗರದಲ್ಲಿ ಆದಿಶಕ್ತಿ ತೋಪಮ್ಮ ಜಾತ್ರಾ ಮಹೋತ್ಸವ

ಭೇರ್ಯ ಮಹೇಶ್ ಆದಿಶಕ್ತಿ ತೋಪಮ್ಮ ಟ್ರಸ್ಟ್ ಆಡಳಿತ ಮಂಡಳಿಯಿಂದ ಸಕಲ ಸಿದ್ಧತೆ; ಸಾವಿರಾರು ಮಂದಿ ಭೇಟಿ ನಿರೀಕ್ಷೆ ಕೆ.ಆರ್.ನಗರ: ಫೆಬ್ರವರಿ…

44 mins ago

ನಿರುದ್ಯೋಗಿಗಳ ಬದುಕಿನ ಬೆಳ್ಳಿ ರೇಖೆ ಯುವನಿಧಿ

ರಾಜ್ಯ ಸರ್ಕಾರದ ಯುವನಿಧಿ ಯೋಜನೆ ಉದ್ದೇಶವು ವಿದ್ಯಾವಂತ ನಿರುದ್ಯೋಗಿ ಯುವಕ/ಯುವತಿಯರಿಗೆ ಉದ್ಯೋಗ ಸಿಗುವವರೆಗೆ ಆರ್ಥಿಕ ಸಹಾಯ ನೀಡುವುದಾಗಿದೆ. ಪದವೀಧರರಿಗೆ ಮಾಸಿಕ ೩,೦೦೦…

1 hour ago