ಎಂ.ಬಿ.ರಂಗಸ್ವಾಮಿ
ಮೂಗೂರಿನ ತ್ರಿಪುರ ಸುಂದರಿ ದೇಗುಲದ ನೂತನ ಕಲ್ಯಾಣಿಯಲ್ಲಿ ೪ ವರ್ಷಗಳಿಂದ ನಡೆಯದ ತೆಪ್ಪೋತ್ಸವ
ಮೂಗೂರು: ಐತಿಹಾಸಿಕ ಹಿನ್ನೆಲೆಯುಳ್ಳ ಧಾರ್ಮಿಕ ಕ್ಷೇತ್ರ ಎನಿಸಿದ ತಾಲ್ಲೂಕಿನ ಮೂಗೂರು ಗ್ರಾಮದ ಶ್ರೀ ತ್ರಿಪುರ ಸುಂದರಿ ಅಮ್ಮನವರ ಜಾತ್ರಾ ಮಹೋತ್ಸವ ಸಮೀಪಿಸುತ್ತಿದ್ದರೂ ಪರಂಪರೆಯಾಗಿ ನಡೆಯುತ್ತಿದ್ದ ತೆಪ್ಪೋತ್ಸವ ಈ ಬಾರಿಯೂ ನಡೆಯುವುದು ಅನುಮಾನ ಮೂಡಿಸಿದೆ.
ಗ್ರಾಮದ ಶ್ರೀ ತ್ರಿಪುರ ಸುಂದರಿ ಅಮ್ಮನವರ ಮೂರ್ತಿಯನ್ನು ಹೂವಿನ ಪಲ್ಲಕ್ಕಿಯೊಂದಿಗೆ ತೆಪ್ಪದಲ್ಲಿರಿಸಿ ಉತ್ಸವ ನಡೆಸುವುದು ವಾಡಿಕೆ. ಐತಿಹಾಸಿಕ (ಹಳೆಯ) ಕಲ್ಯಾಣಿಯನ್ನು ಕೆಡವಿ ಸುಮಾರು ೧.೬೦ ಕೋಟಿ ರೂ. ವೆಚ್ಚದಲ್ಲಿ ವಿನೂತನ ರೀತಿಯಲ್ಲಿ ನೂತನ ಕಲ್ಯಾಣಿಯನ್ನು ಪುನರ್ ನಿರ್ಮಾಣ ಮಾಡಲಾಗಿದೆ. ಬಸವರಾಜ ಬೊಮ್ಮಾಯಿ ಮುಖ್ಯ ಮಂತ್ರಿಯಾಗಿದ್ದ ಸಂದರ್ಭದಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಎಸ್.ಟಿ. ಸೋಮಶೇಖರ್ರವರು ನೂತನ ಕಲ್ಯಾಣಿಯನ್ನು ಆಗಸ್ಟ್ ೨೦೨೨ರಲ್ಲಿ ಲೋಕಾರ್ಪಣೆಗೊಳಿಸಿದ್ದರು. ಅಂದಿನಿಂದ ೪ ವರ್ಷಗಳು ಕಳೆದರೂ ತೆಪ್ಪೋತ್ಸವ ಮಾತ್ರ ನಡೆದಿಲ್ಲ.
ಇದಕ್ಕೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ನೂತನ ಕಲ್ಯಾಣಿಯ ತಾಂತ್ರಿಕ ನ್ಯೂನತೆಯನ್ನು ಗುರುತಿಸಿ ಸಮಸ್ಯೆಯನ್ನು ಅರಿತು ಅದಕ್ಕೆ ಪರಿಹಾರ ನೀಡುತ್ತಿಲ್ಲ ಎಂಬ ಆರೋಪ ಭಕ್ತರಿಂದ ಕೇಳಿಬಂದಿದೆ.
ಮೂಡದ ಒಮ್ಮತ: ಗ್ರಾಮದ ವಿವಿಧ ಸಮುದಾಯಗಳ ಮುಖಂಡರಲ್ಲಿನ ಸಮನ್ವಯತೆ ಹಾಗೂ ಇಚ್ಛಾಶಕ್ತಿಯ ಕೊರತೆ ಯಿಂದಾಗಿ ತೆಪ್ಪೋತ್ಸವ ಸ್ಥಗಿತಗೊಂಡಿದೆ ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ. ಈಗಲಾದರೂ ತ್ರಿಪುರ ಸುಂದರಿ ಅಮ್ಮನವರ ಜಾತ್ರೆಯ ಪ್ರಯುಕ್ತ ತೆಪ್ಪೋತ್ಸವ ನಡೆಸಲು ತಾಲ್ಲೂಕು ಆಡಳಿತ ಹಾಗೂ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂಬುದು ಮೂಗೂರು ಗ್ರಾಮಸ್ಥರ ಆಗ್ರಹವಾಗಿದೆ.
” ಸ್ಥಳೀಯರ ಸಲಹೆ ಪಡೆಯದೇ ಮಾಡಿರುವ ಎಡವಟ್ಟನ್ನು ಸರಿಪಡಿಸಿಕೊಂಡು ತಜ್ಞರ ಮಾರ್ಗದರ್ಶನದಲ್ಲಿ ನೂತನ ಕಲ್ಯಾಣಿಯಲ್ಲಿ ತೆಪ್ಪೋತ್ಸವ ನಡೆಸಲು ಅಧಿಕಾರಿಗಳು ಮುಂದಾಗಬೇಕಿದೆ.”
-ಎಂ.ಎಂ.ಜಗದೀಶ್, ಎಸ್ಸಿ, ಎಸ್ಟಿ, ಹಿತರಕ್ಷಣಾ ಸಮಿತಿ ಸದಸ್ಯ
” ಕಟ್ಟಡದ ರೀತಿ ಸರಿಯಿಲ್ಲ ಎಂಬ ಸೂಚನೆಯಿದ್ದು,ಕಲ್ಯಾಣಿಯ ದುರಸ್ತಿ ಕಾರ್ಯಕ್ಕೆ ದೊಡ್ಡ ಮಟ್ಟದ ಅನುದಾನ ಬೇಕಾಗಿದೆ. ತೆಪ್ಪ ನಡೆಸುವ ಏಕಾಏಕಿ ನಿರ್ಧಾರ ಕೈಗೊಳ್ಳಲಾಗದ್ದರಿಂದ ಈ ಬಾರಿಯೂ ತೆಪ್ಪೋತ್ಸವ ನಡೆಯುವುದು ಅನುಮಾನ.”
-ಟಿ.ಜಿ.ಸುರೇಶಾಚಾರ್, ತಹಸಿಲ್ದಾರ್, ತಿ.ನರಸೀಪುರ
ಬೆಳಗಾವಿಯಲ್ಲಿ ವಿಧಾನಸಭಾ ಅಧಿವೇಶನ ಆರಂಭವಾಗಿದೆ. ಇತ್ತೀಚಿನ ವರ್ಷಗಳಲ್ಲಿ ಸದನದಲ್ಲಿ ಯಾವುದೇ ವಿಷಯ, ಜನರ ಸಮಸ್ಯೆ, ಮಸೂದೆಗಳ ಬಗ್ಗೆ ರಚನಾತ್ಮಕ ಚರ್ಚೆ…
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಡೆವಿಲ್ ಚಿತ್ರ ಇಂದು ರಾಜ್ಯಾದ್ಯಂತ ರಿಲೀಸ್ ಆಗಿದ್ದು, ಅಭಿಮಾನಿಗಳ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ.…
ಮೈಸೂರು ನಗರವು ತನ್ನ ಸಾಂಸ್ಕೃತಿಕ ಪರಂಪರೆ, ಹಸಿರು ಪರಿಸರ ಮತ್ತು ಸುಸ್ಥಿರ ಜೀವನಶೈಲಿಗಾಗಿ ಬಹಳ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ…
ಯಾವುದೋ ಒಂದು ಹಕ್ಕು ಹೆಚ್ಚಿನ ಆದ್ಯತೆ ಹೊಂದಲು ಸಾಧ್ಯವೇ? ಕೆಲವು ಹಕ್ಕುಗಳು ಹೆಚ್ಚು ಮುಖ್ಯವಾಗುವವೇ? ಒಂದು ರೀತಿಯ ಹಕ್ಕಿನಿಂದ ಇನ್ನೊಂದು…
ಮನೆ ಮುಂಭಾಗ ತ್ಯಾಜ್ಯ ನೀರು ನಿಂತು ಗಬ್ಬುನಾರುತ್ತಿರುವ ಚರಂಡಿ ; ಸಾಂಕ್ರಾಮಿಕ ರೋಗ ಹರಡುವ ಭೀತಿ, ಚುನಾವಣೆ ಬಹಿಷ್ಕಾರಕ್ಕೆ ಸ್ಥಳೀಯರ…
ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…