Andolana originals

ಈ ಬಾರಿಯೂ ತೆಪ್ಪೋತ್ಸವ ನಡೆಯುವುದು ಅನುಮಾನ

ಎಂ.ಬಿ.ರಂಗಸ್ವಾಮಿ

ಮೂಗೂರಿನ ತ್ರಿಪುರ ಸುಂದರಿ ದೇಗುಲದ ನೂತನ ಕಲ್ಯಾಣಿಯಲ್ಲಿ ೪ ವರ್ಷಗಳಿಂದ ನಡೆಯದ ತೆಪ್ಪೋತ್ಸವ

ಮೂಗೂರು: ಐತಿಹಾಸಿಕ ಹಿನ್ನೆಲೆಯುಳ್ಳ ಧಾರ್ಮಿಕ ಕ್ಷೇತ್ರ ಎನಿಸಿದ ತಾಲ್ಲೂಕಿನ ಮೂಗೂರು ಗ್ರಾಮದ ಶ್ರೀ ತ್ರಿಪುರ ಸುಂದರಿ ಅಮ್ಮನವರ ಜಾತ್ರಾ ಮಹೋತ್ಸವ ಸಮೀಪಿಸುತ್ತಿದ್ದರೂ ಪರಂಪರೆಯಾಗಿ ನಡೆಯುತ್ತಿದ್ದ ತೆಪ್ಪೋತ್ಸವ ಈ ಬಾರಿಯೂ ನಡೆಯುವುದು ಅನುಮಾನ ಮೂಡಿಸಿದೆ.

ಗ್ರಾಮದ ಶ್ರೀ ತ್ರಿಪುರ ಸುಂದರಿ ಅಮ್ಮನವರ ಮೂರ್ತಿಯನ್ನು ಹೂವಿನ ಪಲ್ಲಕ್ಕಿಯೊಂದಿಗೆ ತೆಪ್ಪದಲ್ಲಿರಿಸಿ ಉತ್ಸವ ನಡೆಸುವುದು ವಾಡಿಕೆ. ಐತಿಹಾಸಿಕ (ಹಳೆಯ) ಕಲ್ಯಾಣಿಯನ್ನು ಕೆಡವಿ ಸುಮಾರು ೧.೬೦ ಕೋಟಿ ರೂ. ವೆಚ್ಚದಲ್ಲಿ ವಿನೂತನ ರೀತಿಯಲ್ಲಿ ನೂತನ ಕಲ್ಯಾಣಿಯನ್ನು ಪುನರ್ ನಿರ್ಮಾಣ ಮಾಡಲಾಗಿದೆ. ಬಸವರಾಜ ಬೊಮ್ಮಾಯಿ ಮುಖ್ಯ ಮಂತ್ರಿಯಾಗಿದ್ದ ಸಂದರ್ಭದಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಎಸ್.ಟಿ. ಸೋಮಶೇಖರ್‌ರವರು ನೂತನ ಕಲ್ಯಾಣಿಯನ್ನು ಆಗಸ್ಟ್ ೨೦೨೨ರಲ್ಲಿ ಲೋಕಾರ್ಪಣೆಗೊಳಿಸಿದ್ದರು. ಅಂದಿನಿಂದ ೪ ವರ್ಷಗಳು ಕಳೆದರೂ ತೆಪ್ಪೋತ್ಸವ ಮಾತ್ರ ನಡೆದಿಲ್ಲ.

ಇದಕ್ಕೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ನೂತನ ಕಲ್ಯಾಣಿಯ ತಾಂತ್ರಿಕ ನ್ಯೂನತೆಯನ್ನು ಗುರುತಿಸಿ ಸಮಸ್ಯೆಯನ್ನು ಅರಿತು ಅದಕ್ಕೆ ಪರಿಹಾರ ನೀಡುತ್ತಿಲ್ಲ ಎಂಬ ಆರೋಪ ಭಕ್ತರಿಂದ ಕೇಳಿಬಂದಿದೆ.

ಮೂಡದ ಒಮ್ಮತ: ಗ್ರಾಮದ ವಿವಿಧ ಸಮುದಾಯಗಳ ಮುಖಂಡರಲ್ಲಿನ ಸಮನ್ವಯತೆ ಹಾಗೂ ಇಚ್ಛಾಶಕ್ತಿಯ ಕೊರತೆ ಯಿಂದಾಗಿ ತೆಪ್ಪೋತ್ಸವ ಸ್ಥಗಿತಗೊಂಡಿದೆ ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ. ಈಗಲಾದರೂ ತ್ರಿಪುರ ಸುಂದರಿ ಅಮ್ಮನವರ ಜಾತ್ರೆಯ ಪ್ರಯುಕ್ತ ತೆಪ್ಪೋತ್ಸವ ನಡೆಸಲು ತಾಲ್ಲೂಕು ಆಡಳಿತ ಹಾಗೂ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂಬುದು ಮೂಗೂರು ಗ್ರಾಮಸ್ಥರ ಆಗ್ರಹವಾಗಿದೆ.

” ಸ್ಥಳೀಯರ ಸಲಹೆ ಪಡೆಯದೇ ಮಾಡಿರುವ ಎಡವಟ್ಟನ್ನು ಸರಿಪಡಿಸಿಕೊಂಡು ತಜ್ಞರ ಮಾರ್ಗದರ್ಶನದಲ್ಲಿ ನೂತನ ಕಲ್ಯಾಣಿಯಲ್ಲಿ ತೆಪ್ಪೋತ್ಸವ ನಡೆಸಲು ಅಧಿಕಾರಿಗಳು ಮುಂದಾಗಬೇಕಿದೆ.”

-ಎಂ.ಎಂ.ಜಗದೀಶ್, ಎಸ್ಸಿ, ಎಸ್ಟಿ, ಹಿತರಕ್ಷಣಾ ಸಮಿತಿ ಸದಸ್ಯ

” ಕಟ್ಟಡದ ರೀತಿ ಸರಿಯಿಲ್ಲ ಎಂಬ ಸೂಚನೆಯಿದ್ದು,ಕಲ್ಯಾಣಿಯ ದುರಸ್ತಿ ಕಾರ್ಯಕ್ಕೆ ದೊಡ್ಡ ಮಟ್ಟದ ಅನುದಾನ ಬೇಕಾಗಿದೆ. ತೆಪ್ಪ ನಡೆಸುವ ಏಕಾಏಕಿ ನಿರ್ಧಾರ ಕೈಗೊಳ್ಳಲಾಗದ್ದರಿಂದ ಈ ಬಾರಿಯೂ ತೆಪ್ಪೋತ್ಸವ ನಡೆಯುವುದು ಅನುಮಾನ.”

-ಟಿ.ಜಿ.ಸುರೇಶಾಚಾರ್, ತಹಸಿಲ್ದಾರ್, ತಿ.ನರಸೀಪುರ

ಆಂದೋಲನ ಡೆಸ್ಕ್

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

7 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

9 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

17 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

17 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

17 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

17 hours ago