Andolana originals

ಈ ಬಾರಿಯೂ ತೆಪ್ಪೋತ್ಸವ ನಡೆಯುವುದು ಅನುಮಾನ

ಎಂ.ಬಿ.ರಂಗಸ್ವಾಮಿ

ಮೂಗೂರಿನ ತ್ರಿಪುರ ಸುಂದರಿ ದೇಗುಲದ ನೂತನ ಕಲ್ಯಾಣಿಯಲ್ಲಿ ೪ ವರ್ಷಗಳಿಂದ ನಡೆಯದ ತೆಪ್ಪೋತ್ಸವ

ಮೂಗೂರು: ಐತಿಹಾಸಿಕ ಹಿನ್ನೆಲೆಯುಳ್ಳ ಧಾರ್ಮಿಕ ಕ್ಷೇತ್ರ ಎನಿಸಿದ ತಾಲ್ಲೂಕಿನ ಮೂಗೂರು ಗ್ರಾಮದ ಶ್ರೀ ತ್ರಿಪುರ ಸುಂದರಿ ಅಮ್ಮನವರ ಜಾತ್ರಾ ಮಹೋತ್ಸವ ಸಮೀಪಿಸುತ್ತಿದ್ದರೂ ಪರಂಪರೆಯಾಗಿ ನಡೆಯುತ್ತಿದ್ದ ತೆಪ್ಪೋತ್ಸವ ಈ ಬಾರಿಯೂ ನಡೆಯುವುದು ಅನುಮಾನ ಮೂಡಿಸಿದೆ.

ಗ್ರಾಮದ ಶ್ರೀ ತ್ರಿಪುರ ಸುಂದರಿ ಅಮ್ಮನವರ ಮೂರ್ತಿಯನ್ನು ಹೂವಿನ ಪಲ್ಲಕ್ಕಿಯೊಂದಿಗೆ ತೆಪ್ಪದಲ್ಲಿರಿಸಿ ಉತ್ಸವ ನಡೆಸುವುದು ವಾಡಿಕೆ. ಐತಿಹಾಸಿಕ (ಹಳೆಯ) ಕಲ್ಯಾಣಿಯನ್ನು ಕೆಡವಿ ಸುಮಾರು ೧.೬೦ ಕೋಟಿ ರೂ. ವೆಚ್ಚದಲ್ಲಿ ವಿನೂತನ ರೀತಿಯಲ್ಲಿ ನೂತನ ಕಲ್ಯಾಣಿಯನ್ನು ಪುನರ್ ನಿರ್ಮಾಣ ಮಾಡಲಾಗಿದೆ. ಬಸವರಾಜ ಬೊಮ್ಮಾಯಿ ಮುಖ್ಯ ಮಂತ್ರಿಯಾಗಿದ್ದ ಸಂದರ್ಭದಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಎಸ್.ಟಿ. ಸೋಮಶೇಖರ್‌ರವರು ನೂತನ ಕಲ್ಯಾಣಿಯನ್ನು ಆಗಸ್ಟ್ ೨೦೨೨ರಲ್ಲಿ ಲೋಕಾರ್ಪಣೆಗೊಳಿಸಿದ್ದರು. ಅಂದಿನಿಂದ ೪ ವರ್ಷಗಳು ಕಳೆದರೂ ತೆಪ್ಪೋತ್ಸವ ಮಾತ್ರ ನಡೆದಿಲ್ಲ.

ಇದಕ್ಕೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ನೂತನ ಕಲ್ಯಾಣಿಯ ತಾಂತ್ರಿಕ ನ್ಯೂನತೆಯನ್ನು ಗುರುತಿಸಿ ಸಮಸ್ಯೆಯನ್ನು ಅರಿತು ಅದಕ್ಕೆ ಪರಿಹಾರ ನೀಡುತ್ತಿಲ್ಲ ಎಂಬ ಆರೋಪ ಭಕ್ತರಿಂದ ಕೇಳಿಬಂದಿದೆ.

ಮೂಡದ ಒಮ್ಮತ: ಗ್ರಾಮದ ವಿವಿಧ ಸಮುದಾಯಗಳ ಮುಖಂಡರಲ್ಲಿನ ಸಮನ್ವಯತೆ ಹಾಗೂ ಇಚ್ಛಾಶಕ್ತಿಯ ಕೊರತೆ ಯಿಂದಾಗಿ ತೆಪ್ಪೋತ್ಸವ ಸ್ಥಗಿತಗೊಂಡಿದೆ ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ. ಈಗಲಾದರೂ ತ್ರಿಪುರ ಸುಂದರಿ ಅಮ್ಮನವರ ಜಾತ್ರೆಯ ಪ್ರಯುಕ್ತ ತೆಪ್ಪೋತ್ಸವ ನಡೆಸಲು ತಾಲ್ಲೂಕು ಆಡಳಿತ ಹಾಗೂ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂಬುದು ಮೂಗೂರು ಗ್ರಾಮಸ್ಥರ ಆಗ್ರಹವಾಗಿದೆ.

” ಸ್ಥಳೀಯರ ಸಲಹೆ ಪಡೆಯದೇ ಮಾಡಿರುವ ಎಡವಟ್ಟನ್ನು ಸರಿಪಡಿಸಿಕೊಂಡು ತಜ್ಞರ ಮಾರ್ಗದರ್ಶನದಲ್ಲಿ ನೂತನ ಕಲ್ಯಾಣಿಯಲ್ಲಿ ತೆಪ್ಪೋತ್ಸವ ನಡೆಸಲು ಅಧಿಕಾರಿಗಳು ಮುಂದಾಗಬೇಕಿದೆ.”

-ಎಂ.ಎಂ.ಜಗದೀಶ್, ಎಸ್ಸಿ, ಎಸ್ಟಿ, ಹಿತರಕ್ಷಣಾ ಸಮಿತಿ ಸದಸ್ಯ

” ಕಟ್ಟಡದ ರೀತಿ ಸರಿಯಿಲ್ಲ ಎಂಬ ಸೂಚನೆಯಿದ್ದು,ಕಲ್ಯಾಣಿಯ ದುರಸ್ತಿ ಕಾರ್ಯಕ್ಕೆ ದೊಡ್ಡ ಮಟ್ಟದ ಅನುದಾನ ಬೇಕಾಗಿದೆ. ತೆಪ್ಪ ನಡೆಸುವ ಏಕಾಏಕಿ ನಿರ್ಧಾರ ಕೈಗೊಳ್ಳಲಾಗದ್ದರಿಂದ ಈ ಬಾರಿಯೂ ತೆಪ್ಪೋತ್ಸವ ನಡೆಯುವುದು ಅನುಮಾನ.”

-ಟಿ.ಜಿ.ಸುರೇಶಾಚಾರ್, ತಹಸಿಲ್ದಾರ್, ತಿ.ನರಸೀಪುರ

ಆಂದೋಲನ ಡೆಸ್ಕ್

Recent Posts

ಮುತ್ತತ್ತಿಯಲ್ಲಿ ಘೋರ ದುರಂತ: ಒಂದೇ ಕುಟುಂಬದ ನಾಲ್ವರು ಮಹಿಳೆಯರು ಸೇರಿ ಐವರು ನೀರುಪಾಲು

ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…

3 hours ago

ಚಾಮರಾಜನಗರ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ

ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…

6 hours ago

ಬಿಆರ್‌ಟಿ ವ್ಯಾಪ್ತಿಯಲ್ಲಿ ಕಾಡಾನೆ ಕಳೇಬರ ಪತ್ತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…

6 hours ago

ತೊಟ್ಟಿಲುಶಾಸ್ತ್ರ, ಸಿದ್ದಪ್ಪಾಜಿ ಕಂಡಾಯೋತ್ಸವದಲ್ಲಿ ತಾರಾ, ಶಶಿಕುಮಾರ್ ಭಾಗಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…

6 hours ago

ಬೆಳೆಗೆ ಸಿಗದ ಬೆಲೆ: ಯುವ ರೈತ ಆತ್ಮಹತ್ಯೆ

ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…

7 hours ago

ಮುಂದಿನ ಒಂದು ವಾರಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…

9 hours ago