Andolana originals

ರಾಜ್ಯ ಸರ್ಕಾರ ಕಾನೂನು ಸಂಘರ್ಷಕ್ಕೆ ಅಣಿಯಾಗುವುದು ಅನಿವಾರ್ಯ

ಆರ್.ಟಿ.ವಿಠಲಮೂರ್ತಿ

ರಾಜ್ಯಪಾಲರಿಂದ ನಿರ್ಣಾಯಕ ಹೆಜ್ಜೆ; ರಾಜಭವನದ ಉರುಳಿಗೆ ಕೊರಳೊಡ್ಡುವ ಪರಿಸ್ಥಿತಿ ನಿರ್ಮಾಣ ಮುಡಾ ಪ್ರಕರಣದ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ವಿಚಾರಣೆಗೆ ರಾಜ್ಯಪಾಲರು ಅನುಮತಿ ನೀಡುವುದರೊಂದಿಗೆ ರಾಜ್ಯ ಸರ್ಕಾರ ಕಾನೂನು ಸಂಘರ್ಷಕ್ಕೆ ಅಣಿಯಾಗುವುದು ಅನಿವಾರ್ಯವಾಗಿದೆ.

ಸಾಮಾಜಿಕ ಕಾರ್ಯಕರ್ತ, ವಕೀಲ ಟಿ.ಜೆ.ಅಬ್ರಹಾಂ ಅವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಜುಲೈ 27 ರಂದು ಮುಖ್ಯಮಂತ್ರಿಗಳಿಗೆ ಷೋಕಾಸ್ ನೋಟಿಸ್ ನೀಡಿದ್ದ ರಾಜ್ಯಪಾಲರು ಈ ನೋಟಿಸ್‌ಗೆ ಪ್ರತಿಯಾಗಿ ಸರ್ಕಾರ ಸಲ್ಲಿಸಿದ ಉತ್ತರ ಮತ್ತು ನೀಡಿದ ಸಲಹೆಯನ್ನು ಒಪ್ಪದೆ ನಿರ್ಣಾಯಕ ಹೆಜ್ಜೆ ಇಟ್ಟಿದ್ದಾರೆ.

ಇದರ ಪರಿಣಾಮವಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜಭವನದ ಉರುಳಿಗೆ ಕೊರಳೊಡ್ಡುವ ಪರಿಸ್ಥಿತಿ ನಿರ್ಮಾಣವಾಗಿದ್ದರೂ, ಈ ಬೆಳವಣಿಗೆಯ ಮೂಲಕ ಸಿದ್ದರಾಮಯ್ಯ ರಾಜೀನಾಮೆ ಕೊಟ್ಟೇ ಬಿಡುತ್ತಾರೆ ಎಂದು ಪ್ರತಿಪಕ್ಷಗಳಾಗಲೀ, ರಾಜೀನಾಮೆ ಕೊಟ್ಟರೆ ಮುಂದೇನು? ಎಂದು ಕಾಂಗ್ರೆಸ್ ಪಕ್ಷವಾಗಲೀ ಆತಂಕಪಡುವ ಕಾರಣವಿಲ್ಲ.

ಯಾಕೆಂದರೆ ರಾಜ್ಯಪಾಲರು ವಿಚಾರಣೆಗೆ ಅನುಮತಿ ನೀಡಿ ದರೂ ಇದರ ಮುಂದಿನ ಪ್ರಕ್ರಿಯೆಗಳಿಂದ ಸಿದ್ದರಾಮಯ್ಯ ಪಾರಾಗಲು ತುಂಬ ಅವಕಾಶಗಳಿವೆ ಮತ್ತು ಇದನ್ನು ಎದುರಿ ಸಲು ಬೇಕಾದಷ್ಟು ಕಾಲಾವಕಾಶವೂ ಅವರಿಗೆ ದೊರಕಲಿದೆ.

ಯಾಕೆಂದರೆ ರಾಜ್ಯಪಾಲರು ವಿಚಾರಣೆಗೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ದೂರುದಾರ ಅಬ್ರಹಾಂ ಅವರು ಸೆಷನ್ಸ್ ನ್ಯಾಯಾಲಯದ ಮುಂದೆ ಹೋಗಿ ದೂರು ದಾಖಲಿಸಿಕೊಳ್ಳಲು ಕೋರಬೇಕಾಗುತ್ತದೆ.

ಅವರ ಈ ವಾದವನ್ನು ಸೆಷನ್ಸ್ ನ್ಯಾಯಾಲಯ ಪುರಸ್ಕರಿಸಿ ವಿಚಾರಣೆ ನಡೆಸಲು ಪೊಲೀಸರಿಗೆ ಇಲ್ಲವೇ ಲೋಕಾಯುಕ್ತಕ್ಕೆ ಸೂಚನೆ ಕೊಡಬಹುದು. ಆದರೆ ಅದಕ್ಕೂ ಮುನ್ನ ರಾಜ್ಯಪಾಲರ ಕ್ರಮವನ್ನು ರದ್ದುಪಡಿಸುವಂತೆ ಇಲ್ಲವೇ ತಡೆಯಾಜ್ಞೆ ನೀಡುವಂತೆ ಮುಖ್ಯಮಂತ್ರಿಗಳು ಹೈಕೋರ್ಟ್ ಮೊರೆ ಹೋಗಬಹುದು.

ಅಂದ ಹಾಗೆ ಮುಖ್ಯಮಂತ್ರಿಗಳು ಹೈಕೋರ್ಟ್, ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಲು ಸಾಧ್ಯವಿರುವುದರಿಂದ ಸೆಷನ್ಸ್ ಕೋರ್ಟ್‌ಗೆ ಮನವಿ ಸಲ್ಲಿಸಲು ಸಾಧ್ಯವಿರುವುದರಿಂದ ಸೆಷನ್ ನ್ಯಾಯಾಲಯದ ತೀರ್ಪಿನ ಅನುಸಾರ ಪೊಲೀಸರು ಇಲ್ಲವೇ ಲೋಕಾಯುಕ್ತರು ಪ್ರಕರಣ ದಾಖಲಿಸಲು ಸಮಯವಾಗುತ್ತದೆ.

ಒಂದು ವೇಳೆ ಇದಕ್ಕೆ ತಡೆಯಾಜ್ಞೆ ನೀಡಲು ಹೈಕೋರ್ಟ್, ಸುಪ್ರೀಂ ಕೋರ್ಟ್ ನಿರಾಕರಿಸಿದರೆ ಪೊಲೀಸರು ಇಲ್ಲವೇ ಲೋಕಾಯುಕ್ತರ ತನಿಖೆ ನಡೆಸುವುದು ಸಾಧ್ಯ. ಹೀಗೆ ಪೊಲೀಸರು ಇಲ್ಲವೇ ಲೋಕಾಯುಕ್ತರು ತನಿಖೆ ಆರಂಭಿಸಿದರೂ ಈ ಕುರಿತು ವರದಿ ನೀಡಲು ಇನ್ನಷ್ಟು ಈ ತಿಂಗಳುಗಳ ಕಾಲಾವಕಾಶ ಬೇಕಾಗುತ್ತದೆ. ಈ ಹಿಂದೆ ಯಡಿಯೂರಪ್ಪ ಅವರು ಮುಖ್ಯಮಂತ್ರಿಗಳಾಗಿದ್ದಾಗ ಸಿರಾಜುದ್ದೀನ್ ಬಾಷಾ ಮತ್ತು ಬಾಲರಾಜ್ ಎಂಬವರು ನೀಡಿದ ದೂರಿನ ಹಿನ್ನೆಲೆಯಲ್ಲಿ ರಾಜ್ಯಪಾಲರು ವಿಚಾರಣೆಗೆ ಅನುಮತಿ ನೀಡಿದ್ದರು.

ಆದರೆ ಈ ಸಂಬಂಧ ಸೆಷನ್ಸ್ ನ್ಯಾಯಾಲಯದ ಆದೇಶದಂತೆ ಲೋಕಾಯುಕ್ತರು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿದರೂ ಆರೋಪ ಪಟ್ಟಿ ಸಲ್ಲಿಸಲು ಸುಮಾರು ಹತ್ತು ತಿಂಗಳ ಕಾಲಾವಕಾಶ ತೆಗೆದುಕೊಂಡರು.

ಈ ಮಧ್ಯೆ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರು ಅಕ್ರಮ ಗಣಿಗಾರಿಕೆಯ ಸಂಬಂಧ 2011 ರ ಜುಲೈ ತಿಂಗಳಲ್ಲಿ ನೀಡಿದ ವರದಿಯಲ್ಲಿ ಯಡಿಯೂರಪ್ಪ ಅವರ ಹೆಸರು ಇದ್ದು ದರಿಂದ ಆಗಸ್ಟ್ ತಿಂಗಳಲ್ಲಿ ಬಿಜೆಪಿ ವರಿಷ್ಠರ ಒತ್ತಡದ ಹಿನ್ನೆಲೆ ಯಲ್ಲಿ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದರು.

ಅವರು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿದ ಎರಡು ತಿಂಗಳುಗಳ ನಂತರ ಸಿರಾಜುದ್ದೀನ್ ಬಾಷಾ ಮತ್ತು ಬಾಲರಾಜ್ ಅವರ ದೂರಿನ ಹಿನ್ನೆಲೆಯಲ್ಲಿ ನಡೆಯುತ್ತಿದ್ದ ತನಿಖೆ ಪೂರ್ಣಗೊಂಡು ಅಕ್ಟೋಬರ್ 14 ರಂದು ಆರೋಪ ಪಟ್ಟಿ ಸಲ್ಲಿಕೆಯಾಯಿತು. ಆದರೆ ಈ ಪ್ರಕರಣದಲ್ಲಿ ಯಡಿಯೂರಪ್ಪ ಅವರಿಗೆ ಜಾಮೀನು ದೊರೆಯದ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಿ ಜೈಲಿಗೆ ಕಳಿಸಲಾಗಿತ್ತು.

ಗಮನಿಸಬೇಕಾದ ಸಂಗತಿ ಎಂದರೆ ರಾಚೇನಹಳ್ಳಿ ಡಿನೋಟಿಫಿಕೇಷನ್ ಪ್ರಕರಣದ ಹಿನ್ನೆಲೆಯಲ್ಲಿ ಅಂದಿನ ರಾಜ್ಯಪಾಲರು ಯಡಿಯೂರಪ್ಪ ಅವರ ವಿರುದ್ಧ ವಿಚಾರಣೆಗೆ ಅನುಮತಿ ನೀಡಲು ಬಳಸಿದ ವಿವೇಚನಾಧಿಕಾರಕ್ಕೂ, ಈಗಿನ ರಾಜ್ಯಪಾಲರು ಮುಡಾ ಪ್ರಕರಣದ ಹಿನ್ನೆಲೆಯಲ್ಲಿ ವಿಚಾರಣೆಗೆ ಅನುಮತಿ ನೀಡಲು ಬಳಸಿದ ವಿವೇಚನಾಧಿಕಾರಕ್ಕೂ ವ್ಯತ್ಯಾಸವಿದೆ.

ಯಾಕೆಂದರೆ ಅವತ್ತು ಯಡಿಯೂರಪ್ಪ ಅವರ ವಿರುದ್ಧ ವಿಚಾರಣೆಗೆ ಅನುಮತಿ ನೀಡುವ ಮುನ್ನ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರು ಯಡಿಯೂರಪ್ಪ ಸರ್ಕಾರದ ವಿರುದ್ಧ ಹಲವು ದೂರುಗಳನ್ನು ಸ್ವೀಕರಿಸಿದ್ದರು. ಮತ್ತು ಇವನ್ನೂ ಪರಿಗಣಿಸಿ ಸಿರಾಜುದ್ದೀನ್ ಬಾಷಾ ಮತ್ತು ಬಾಲರಾಜ್ ಅವರ ದೂರನ್ನು ವಿಶೇಷವಾಗಿ ಪರಿಗಣಿಸಿ ವಿಚಾರಣೆಗೆ ಅನುಮತಿ ನೀಡಿದ್ದರು.

ಆದರೆ ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರ ಪಾಲ್ಗೊಳ್ಳುವಿಕೆಗೆ ದಾಖಲೆಯೇ ಇಲ್ಲದಿರುವಾಗ ಅದನ್ನು ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಸೇರಿಸಿ ರಾಜ್ಯಪಾಲರು ತಮ್ಮ ವಿವೇಚನಾಧಿಕಾರದ ಮೂಲಕ ವಿಚಾರಣೆಗೆ ಅನುಮತಿ ನೀಡಿರುವುದು ಸರಿಯಲ್ಲ ಎಂಬುದು ಸಿದ್ದರಾಮಯ್ಯ ಪರವಾದ ವಾದ.

ಹೀಗಾಗಿ ಹೈಕೋರ್ಟ್‌ನಲ್ಲಿ ಇಲ್ಲವೇ ಸುಪ್ರೀಂಕೋರ್ಟಿನಲ್ಲಿ ಸಿದ್ದರಾಮಯ್ಯ ವಿರುದ್ಧದ ವಿಚಾರಣೆಗೆ ತಡೆಯಾಜ್ಞೆ ಸಿಗು ವುದು ಖಚಿತ ಎಂಬುದು ಕಾಂಗ್ರೆಸ್ ಪರ ವಕೀಲರ ವಾದ.

       • ಸವಾಲು ಎದುರಿಸಲು ಸಿದ್ದರಾಮಯ್ಯಗೆ ಬೇಕಾದಷ್ಟು ಅವಕಾಶಗಳಿವೆ
       • ದೂರುದಾರ ಅಬ್ರಹಾಂ ದೂರು ದಾಖಲಿಸಿಕೊಳ್ಳಲು ಸೆಷನ್ಸ್ ನ್ಯಾಯಾಲಯವನ್ನು ಕೋರಬೇಕು

  • ತಡೆಯಾಜ್ಞೆ ಕೋರಿ ಸಿಎಂ ಹೈಕೋರ್ಟ್ ಮೊರೆ ಹೋಗಬಹುದು
  • ತಡೆಯಾಜ್ಞೆ ಸಿಗದಿದ್ದರೆ ಪೊಲೀಸರು ಅಥವಾ ಲೋಕಾಯುಕ್ತರು ತನಿಖೆ ನಡೆಸಬಹುದು
ಆಂದೋಲನ ಡೆಸ್ಕ್

Recent Posts

ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರೆ ಸಂಪನ್ನ: ಎ.ಈ.ರಘು ಸಂತಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಐದು ದಿನಗಳ ಕಾಲ…

39 mins ago

ಮಹದೇಶ್ವರ ಬೆಟ್ಟ| ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಜರುಗಿದ ಮಹಾರಥೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಕೊನೆಯ ದಿನವಾದ…

46 mins ago

ತಮಿಳುನಾಡಿನಲ್ಲಿ ಕನ್ನಡ ಧ್ವಜ ಹಾಕದಂತೆ ಎಚ್ಚರಿಕೆ: ಶಬರಿಮಲೆಗೆ ಹೊರಟಿದ್ದ ವಾಹನ ತಡೆದು ದಬ್ಬಾಳಿಕೆ

ಚೆನ್ನೈ: ನೆರೆಯ ರಾಜ್ಯ ತಮಿಳುನಾಡಿನಲ್ಲಿ ಕನ್ನಡ ಬಾವುಟ ಹಾಕಿದ್ದ ವಾಹನಗಳನ್ನು ತಡೆದು ತಮಿಳು ಪುಂಡರು ಕನ್ನಡಿಗರ ಮೇಲೆ ದರ್ಪ ಮೆರೆದಿರುವ…

1 hour ago

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ 140ರಿಂದ 150 ಸ್ಥಾನ ಗೆಲ್ಲುತ್ತೆ: ನಿಖಿಲ್‌ ಕುಮಾರಸ್ವಾಮಿ ವಿಶ್ವಾಸ

ಬೆಂಗಳೂರು: ಮುಂದಿನ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್‌ ಅಲ್ಲ ಎನ್‌ಡಿಎ 140ರಿಂದ 150 ಸ್ಥಾನ ಗೆಲ್ಲುತ್ತದೆ ಎಂದು ಜೆಡಿಎಸ್‌…

2 hours ago

ಬೆಂಗಳೂರಿನಲ್ಲಿ ಹೊತ್ತಿ ಉರಿದ ಮತ್ತೊಂದು ಖಾಸಗಿ ಬಸ್‌

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಇಂದು ಬೆಳ್ಳಂಬೆಳಿಗ್ಗೆ ಭೀಕರ ಅಗ್ನಿ ಅವಘಡವೊಂದು ಸಂಭವಿಸಿದೆ. ಚಂದ್ರಾ ಲೇಔಟ್‌ನ ಬಿಎಂಟಿಸಿ ಡಿಪೋ ಬಳಿ ಇಂದು…

2 hours ago

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಮೂರು ಮರಿಗಳಿಗೆ ಜನ್ಮ ನೀಡಿದ ಗಾಮಿನಿ ಚೀತಾ

ಮಧ್ಯಪ್ರದೇಶ: ಇಲ್ಲಿನ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಗಾಮಿನಿ ಚೀತಾ ಮೂರು ಮರಿಗಳಿಗೆ ಜನ್ಮ ನೀಡಿದೆ. ಕೇಂದ್ರ ಪರಿಸರ ಸಚಿವ ಭೂಪೇಂದರ್‌…

2 hours ago