Andolana originals

ರಾಜ್ಯ ಸರ್ಕಾರ ಕಾನೂನು ಸಂಘರ್ಷಕ್ಕೆ ಅಣಿಯಾಗುವುದು ಅನಿವಾರ್ಯ

ಆರ್.ಟಿ.ವಿಠಲಮೂರ್ತಿ

ರಾಜ್ಯಪಾಲರಿಂದ ನಿರ್ಣಾಯಕ ಹೆಜ್ಜೆ; ರಾಜಭವನದ ಉರುಳಿಗೆ ಕೊರಳೊಡ್ಡುವ ಪರಿಸ್ಥಿತಿ ನಿರ್ಮಾಣ ಮುಡಾ ಪ್ರಕರಣದ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ವಿಚಾರಣೆಗೆ ರಾಜ್ಯಪಾಲರು ಅನುಮತಿ ನೀಡುವುದರೊಂದಿಗೆ ರಾಜ್ಯ ಸರ್ಕಾರ ಕಾನೂನು ಸಂಘರ್ಷಕ್ಕೆ ಅಣಿಯಾಗುವುದು ಅನಿವಾರ್ಯವಾಗಿದೆ.

ಸಾಮಾಜಿಕ ಕಾರ್ಯಕರ್ತ, ವಕೀಲ ಟಿ.ಜೆ.ಅಬ್ರಹಾಂ ಅವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಜುಲೈ 27 ರಂದು ಮುಖ್ಯಮಂತ್ರಿಗಳಿಗೆ ಷೋಕಾಸ್ ನೋಟಿಸ್ ನೀಡಿದ್ದ ರಾಜ್ಯಪಾಲರು ಈ ನೋಟಿಸ್‌ಗೆ ಪ್ರತಿಯಾಗಿ ಸರ್ಕಾರ ಸಲ್ಲಿಸಿದ ಉತ್ತರ ಮತ್ತು ನೀಡಿದ ಸಲಹೆಯನ್ನು ಒಪ್ಪದೆ ನಿರ್ಣಾಯಕ ಹೆಜ್ಜೆ ಇಟ್ಟಿದ್ದಾರೆ.

ಇದರ ಪರಿಣಾಮವಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜಭವನದ ಉರುಳಿಗೆ ಕೊರಳೊಡ್ಡುವ ಪರಿಸ್ಥಿತಿ ನಿರ್ಮಾಣವಾಗಿದ್ದರೂ, ಈ ಬೆಳವಣಿಗೆಯ ಮೂಲಕ ಸಿದ್ದರಾಮಯ್ಯ ರಾಜೀನಾಮೆ ಕೊಟ್ಟೇ ಬಿಡುತ್ತಾರೆ ಎಂದು ಪ್ರತಿಪಕ್ಷಗಳಾಗಲೀ, ರಾಜೀನಾಮೆ ಕೊಟ್ಟರೆ ಮುಂದೇನು? ಎಂದು ಕಾಂಗ್ರೆಸ್ ಪಕ್ಷವಾಗಲೀ ಆತಂಕಪಡುವ ಕಾರಣವಿಲ್ಲ.

ಯಾಕೆಂದರೆ ರಾಜ್ಯಪಾಲರು ವಿಚಾರಣೆಗೆ ಅನುಮತಿ ನೀಡಿ ದರೂ ಇದರ ಮುಂದಿನ ಪ್ರಕ್ರಿಯೆಗಳಿಂದ ಸಿದ್ದರಾಮಯ್ಯ ಪಾರಾಗಲು ತುಂಬ ಅವಕಾಶಗಳಿವೆ ಮತ್ತು ಇದನ್ನು ಎದುರಿ ಸಲು ಬೇಕಾದಷ್ಟು ಕಾಲಾವಕಾಶವೂ ಅವರಿಗೆ ದೊರಕಲಿದೆ.

ಯಾಕೆಂದರೆ ರಾಜ್ಯಪಾಲರು ವಿಚಾರಣೆಗೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ದೂರುದಾರ ಅಬ್ರಹಾಂ ಅವರು ಸೆಷನ್ಸ್ ನ್ಯಾಯಾಲಯದ ಮುಂದೆ ಹೋಗಿ ದೂರು ದಾಖಲಿಸಿಕೊಳ್ಳಲು ಕೋರಬೇಕಾಗುತ್ತದೆ.

ಅವರ ಈ ವಾದವನ್ನು ಸೆಷನ್ಸ್ ನ್ಯಾಯಾಲಯ ಪುರಸ್ಕರಿಸಿ ವಿಚಾರಣೆ ನಡೆಸಲು ಪೊಲೀಸರಿಗೆ ಇಲ್ಲವೇ ಲೋಕಾಯುಕ್ತಕ್ಕೆ ಸೂಚನೆ ಕೊಡಬಹುದು. ಆದರೆ ಅದಕ್ಕೂ ಮುನ್ನ ರಾಜ್ಯಪಾಲರ ಕ್ರಮವನ್ನು ರದ್ದುಪಡಿಸುವಂತೆ ಇಲ್ಲವೇ ತಡೆಯಾಜ್ಞೆ ನೀಡುವಂತೆ ಮುಖ್ಯಮಂತ್ರಿಗಳು ಹೈಕೋರ್ಟ್ ಮೊರೆ ಹೋಗಬಹುದು.

ಅಂದ ಹಾಗೆ ಮುಖ್ಯಮಂತ್ರಿಗಳು ಹೈಕೋರ್ಟ್, ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಲು ಸಾಧ್ಯವಿರುವುದರಿಂದ ಸೆಷನ್ಸ್ ಕೋರ್ಟ್‌ಗೆ ಮನವಿ ಸಲ್ಲಿಸಲು ಸಾಧ್ಯವಿರುವುದರಿಂದ ಸೆಷನ್ ನ್ಯಾಯಾಲಯದ ತೀರ್ಪಿನ ಅನುಸಾರ ಪೊಲೀಸರು ಇಲ್ಲವೇ ಲೋಕಾಯುಕ್ತರು ಪ್ರಕರಣ ದಾಖಲಿಸಲು ಸಮಯವಾಗುತ್ತದೆ.

ಒಂದು ವೇಳೆ ಇದಕ್ಕೆ ತಡೆಯಾಜ್ಞೆ ನೀಡಲು ಹೈಕೋರ್ಟ್, ಸುಪ್ರೀಂ ಕೋರ್ಟ್ ನಿರಾಕರಿಸಿದರೆ ಪೊಲೀಸರು ಇಲ್ಲವೇ ಲೋಕಾಯುಕ್ತರ ತನಿಖೆ ನಡೆಸುವುದು ಸಾಧ್ಯ. ಹೀಗೆ ಪೊಲೀಸರು ಇಲ್ಲವೇ ಲೋಕಾಯುಕ್ತರು ತನಿಖೆ ಆರಂಭಿಸಿದರೂ ಈ ಕುರಿತು ವರದಿ ನೀಡಲು ಇನ್ನಷ್ಟು ಈ ತಿಂಗಳುಗಳ ಕಾಲಾವಕಾಶ ಬೇಕಾಗುತ್ತದೆ. ಈ ಹಿಂದೆ ಯಡಿಯೂರಪ್ಪ ಅವರು ಮುಖ್ಯಮಂತ್ರಿಗಳಾಗಿದ್ದಾಗ ಸಿರಾಜುದ್ದೀನ್ ಬಾಷಾ ಮತ್ತು ಬಾಲರಾಜ್ ಎಂಬವರು ನೀಡಿದ ದೂರಿನ ಹಿನ್ನೆಲೆಯಲ್ಲಿ ರಾಜ್ಯಪಾಲರು ವಿಚಾರಣೆಗೆ ಅನುಮತಿ ನೀಡಿದ್ದರು.

ಆದರೆ ಈ ಸಂಬಂಧ ಸೆಷನ್ಸ್ ನ್ಯಾಯಾಲಯದ ಆದೇಶದಂತೆ ಲೋಕಾಯುಕ್ತರು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿದರೂ ಆರೋಪ ಪಟ್ಟಿ ಸಲ್ಲಿಸಲು ಸುಮಾರು ಹತ್ತು ತಿಂಗಳ ಕಾಲಾವಕಾಶ ತೆಗೆದುಕೊಂಡರು.

ಈ ಮಧ್ಯೆ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರು ಅಕ್ರಮ ಗಣಿಗಾರಿಕೆಯ ಸಂಬಂಧ 2011 ರ ಜುಲೈ ತಿಂಗಳಲ್ಲಿ ನೀಡಿದ ವರದಿಯಲ್ಲಿ ಯಡಿಯೂರಪ್ಪ ಅವರ ಹೆಸರು ಇದ್ದು ದರಿಂದ ಆಗಸ್ಟ್ ತಿಂಗಳಲ್ಲಿ ಬಿಜೆಪಿ ವರಿಷ್ಠರ ಒತ್ತಡದ ಹಿನ್ನೆಲೆ ಯಲ್ಲಿ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದರು.

ಅವರು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿದ ಎರಡು ತಿಂಗಳುಗಳ ನಂತರ ಸಿರಾಜುದ್ದೀನ್ ಬಾಷಾ ಮತ್ತು ಬಾಲರಾಜ್ ಅವರ ದೂರಿನ ಹಿನ್ನೆಲೆಯಲ್ಲಿ ನಡೆಯುತ್ತಿದ್ದ ತನಿಖೆ ಪೂರ್ಣಗೊಂಡು ಅಕ್ಟೋಬರ್ 14 ರಂದು ಆರೋಪ ಪಟ್ಟಿ ಸಲ್ಲಿಕೆಯಾಯಿತು. ಆದರೆ ಈ ಪ್ರಕರಣದಲ್ಲಿ ಯಡಿಯೂರಪ್ಪ ಅವರಿಗೆ ಜಾಮೀನು ದೊರೆಯದ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಿ ಜೈಲಿಗೆ ಕಳಿಸಲಾಗಿತ್ತು.

ಗಮನಿಸಬೇಕಾದ ಸಂಗತಿ ಎಂದರೆ ರಾಚೇನಹಳ್ಳಿ ಡಿನೋಟಿಫಿಕೇಷನ್ ಪ್ರಕರಣದ ಹಿನ್ನೆಲೆಯಲ್ಲಿ ಅಂದಿನ ರಾಜ್ಯಪಾಲರು ಯಡಿಯೂರಪ್ಪ ಅವರ ವಿರುದ್ಧ ವಿಚಾರಣೆಗೆ ಅನುಮತಿ ನೀಡಲು ಬಳಸಿದ ವಿವೇಚನಾಧಿಕಾರಕ್ಕೂ, ಈಗಿನ ರಾಜ್ಯಪಾಲರು ಮುಡಾ ಪ್ರಕರಣದ ಹಿನ್ನೆಲೆಯಲ್ಲಿ ವಿಚಾರಣೆಗೆ ಅನುಮತಿ ನೀಡಲು ಬಳಸಿದ ವಿವೇಚನಾಧಿಕಾರಕ್ಕೂ ವ್ಯತ್ಯಾಸವಿದೆ.

ಯಾಕೆಂದರೆ ಅವತ್ತು ಯಡಿಯೂರಪ್ಪ ಅವರ ವಿರುದ್ಧ ವಿಚಾರಣೆಗೆ ಅನುಮತಿ ನೀಡುವ ಮುನ್ನ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರು ಯಡಿಯೂರಪ್ಪ ಸರ್ಕಾರದ ವಿರುದ್ಧ ಹಲವು ದೂರುಗಳನ್ನು ಸ್ವೀಕರಿಸಿದ್ದರು. ಮತ್ತು ಇವನ್ನೂ ಪರಿಗಣಿಸಿ ಸಿರಾಜುದ್ದೀನ್ ಬಾಷಾ ಮತ್ತು ಬಾಲರಾಜ್ ಅವರ ದೂರನ್ನು ವಿಶೇಷವಾಗಿ ಪರಿಗಣಿಸಿ ವಿಚಾರಣೆಗೆ ಅನುಮತಿ ನೀಡಿದ್ದರು.

ಆದರೆ ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರ ಪಾಲ್ಗೊಳ್ಳುವಿಕೆಗೆ ದಾಖಲೆಯೇ ಇಲ್ಲದಿರುವಾಗ ಅದನ್ನು ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಸೇರಿಸಿ ರಾಜ್ಯಪಾಲರು ತಮ್ಮ ವಿವೇಚನಾಧಿಕಾರದ ಮೂಲಕ ವಿಚಾರಣೆಗೆ ಅನುಮತಿ ನೀಡಿರುವುದು ಸರಿಯಲ್ಲ ಎಂಬುದು ಸಿದ್ದರಾಮಯ್ಯ ಪರವಾದ ವಾದ.

ಹೀಗಾಗಿ ಹೈಕೋರ್ಟ್‌ನಲ್ಲಿ ಇಲ್ಲವೇ ಸುಪ್ರೀಂಕೋರ್ಟಿನಲ್ಲಿ ಸಿದ್ದರಾಮಯ್ಯ ವಿರುದ್ಧದ ವಿಚಾರಣೆಗೆ ತಡೆಯಾಜ್ಞೆ ಸಿಗು ವುದು ಖಚಿತ ಎಂಬುದು ಕಾಂಗ್ರೆಸ್ ಪರ ವಕೀಲರ ವಾದ.

       • ಸವಾಲು ಎದುರಿಸಲು ಸಿದ್ದರಾಮಯ್ಯಗೆ ಬೇಕಾದಷ್ಟು ಅವಕಾಶಗಳಿವೆ
       • ದೂರುದಾರ ಅಬ್ರಹಾಂ ದೂರು ದಾಖಲಿಸಿಕೊಳ್ಳಲು ಸೆಷನ್ಸ್ ನ್ಯಾಯಾಲಯವನ್ನು ಕೋರಬೇಕು

  • ತಡೆಯಾಜ್ಞೆ ಕೋರಿ ಸಿಎಂ ಹೈಕೋರ್ಟ್ ಮೊರೆ ಹೋಗಬಹುದು
  • ತಡೆಯಾಜ್ಞೆ ಸಿಗದಿದ್ದರೆ ಪೊಲೀಸರು ಅಥವಾ ಲೋಕಾಯುಕ್ತರು ತನಿಖೆ ನಡೆಸಬಹುದು
ಆಂದೋಲನ ಡೆಸ್ಕ್

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

7 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

9 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

9 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

10 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

11 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

11 hours ago