ಓದುಗರ ಪತ್ರ
‘ಆಂದೋಲನ’ ದಿನಪತ್ರಿಕೆಯ ಆ.21ರ ಸಂಚಿಕೆಯ ಓದುಗರ ಪತ್ರಗಳ ವಿಭಾಗದಲ್ಲಿ ‘ಜನ ಸಾಮಾನ್ಯರ ದಸರಾವಾಗಲಿ’ ಎಂಬ ಶೀರ್ಷಿಕೆಯಡಿ ನಾನು ಬರೆದ ಓದುಗರ ಪತ್ರವೊಂದು ಪ್ರಕಟಗೊಂಡಿತ್ತು.
ಕಳೆದ ಬಾರಿಯ ದಸರಾದಲ್ಲಿ ಕೆಲವು ಮಧ್ಯವರ್ತಿಗಳು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದ ಕಲಾವಿದರ ಬಳಿಯೇ ಕಮಿಷನ್ ಕೇಳಿದ ಆರೋಪ ಕೇಳಿಬಂದಿತ್ತಲ್ಲದೇ ಕೆಲ ದಸರಾ ಮಹೋತ್ಸಹವದ ಅನುದಾನವನ್ನು ದುರುಪಯೋಗ ಮಾಡಿಕೊಂಡಿದ್ದಾರೆ ಎಂಬ ಆರೋಪವೂ ಇತ್ತು.
ಅಲ್ಲದೆ ದಸರಾ ಖರ್ಚು ವೆಚ್ಚಗಳ ವಿವರವನ್ನು ದಸರಾ ಮುಗಿದು 2 ತಿಂಗಳುಗಳು ಕಳೆದರೂ ನೀಡಿರಲಿಲ್ಲ. ಇದರಿಂದಾಗಿ ಸಾರ್ವಜನಿಕರಲ್ಲಿ ಅವ್ಯವಹಾರ ನಡೆದಿರುವ ಬಗ್ಗೆ ಅನುಮಾನ ವ್ಯಕ್ತವಾಗಿತ್ತು.
ಈ ಮಧ್ಯೆ ಪ್ರತಿಕ್ರಿಯಿಸಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಎಂ.ಡಿ.ಸುದರ್ಶನ್, ಈ ಬಾರಿಯ ದಸರಾದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ದಲ್ಲಾಳಿಗಳ ಹಾವಳಿ ತಪ್ಪಿಸಿ ಕಮಿಷನ್ ರೂಪದಲ್ಲಿ ಹಣ ಪೋಲಾಗುವುದನ್ನು ತಡೆಗಟ್ಟಲು ನಿಗಾವಹಿಸುವುದಾಗಿ ತಿಳಿಸಿದ್ದಾರೆ.
– ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.
ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…
ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ…
ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…
ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…
ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…