Andolana originals

ರಾಜ್‌ರನ್ನು ಮರಳಿಸಿದ್ದು ಕೃಷ್ಣ ತಾಳ್ಮೆ, ಸಹನೆ, ವಿವೇಕ: ಚಿನ್ನೇಗೌಡ

ಎಸ್. ಎಂ. ಕೃಷ್ಣ ಅವರು ಮುಖ್ಯಮಂತ್ರಿ ಯಾಗಿದ್ದ ಸಂದರ್ಭದಲ್ಲಿ ಎದುರಿಸಿದ ಬಹುದೊಡ್ಡ ಸವಾಲು ನರಹಂತಕ ವೀರಪ್ಪನ್ ಸೆರೆ ಯಿಂದ ರಾಜಕುಮಾರ್ ಅವ ರನ್ನು ಬಿಡಿಸುವುದಾಗಿತ್ತು. ೨೦೦೦ ಜುಲೈ ೩೦, ಭೀಮನ ಅಮಾವಾಸ್ಯೆ ದಿನ ರಾತ್ರಿ. ಗಾಜನೂರಿನಲ್ಲಿ ತಂಗಿದ್ದ ರಾಜಕುಮಾರ್ ಅವರನ್ನು ವೀರಪ್ಪನ್ ಅಪಹರಿಸಿದ್ದ. ಮುಖ್ಯಮಂತ್ರಿಗಳಾಗಿದ್ದ ಕೃಷ್ಣ ಅವರಿಗೆ ನೀಡಲು ತನ್ನ ಬೇಡಿಕೆಗಳ ಕ್ಯಾಸೆಟ್ ಒಂದನ್ನು ಪಾರ್ವತಮ್ಮ ರಾಜಕುಮಾರ್ ಅವರ ಕೈಯಲ್ಲಿ ಕೊಟ್ಟಿದ್ದ.

ರಾತ್ರೋರಾತ್ರಿ ಅಲ್ಲಿಂದ ಹೊರಟು ಬಂದ ಪಾರ್ವತಮ್ಮ ರಾಜಕುಮಾರ್ ಅವರು ನೇರವಾಗಿ ಕೃಷ್ಣ ಅವರ ಮನೆಗೆ ತೆರಳುತ್ತಾರೆ. ಅಲ್ಲಿ ನಡೆದ ಘಟನೆಯನ್ನು ವಿವರಿಸಿ, ವೀರ ಪ್ಪನ್ ಕೊಟ್ಟ ಕ್ಯಾಸೆಟ್ಟನ್ನು ಅವರ ಕೈಗಿಡುತ್ತಾರೆ. ಅವತ್ತು ಕೃಷ್ಣ ಅವರಲ್ಲದೆ ಬೇರೆ ಯಾರೇ ಮುಖ್ಯಮಂತ್ರಿ ಆಗಿದ್ದರೂ ಏನಾಗುತ್ತಿತ್ತೋ ಏನೋ. ಅವರ ತಾಳ್ಮೆ, ಸಹನೆ, ಎಲ್ಲಕ್ಕಿಂತ ಹೆಚ್ಚಾಗಿ ವಿವೇಕ ರಾಜಕುಮಾರ್ ಅವರು ಮರಳುವಂತೆ ಮಾಡಿತ್ತು ಎಂದರೆ ತಪ್ಪಿಲ್ಲ. ಅಕ್ಕನನ್ನು ಆ ವೇಳೆಗೆ ಸಮಾಧಾನ ಪಡಿಸಿದ್ದೇ ಅಲ್ಲದೆ, ನಾನಿದ್ದೇನೆ; ಎದೆಗುಂದಬೇಡಿ. ರಾಜಕುಮಾರ್ ಅವರನ್ನು ಮರಳಿ ಕರೆತರುವ ಜವಾಬ್ದಾರಿ ನಮ್ಮದು, ಎಂದದ್ದೇ ಅಲ್ಲದೆ, ನೆರೆಯ ತ. ನಾಡಿನ ಮುಖ್ಯಮಂತ್ರಿಗಳ ಜೊತೆ ಮಾತನಾಡಿ, ರಾಜಕುಮಾರ್ ಅವರನ್ನು ವೀರಪ್ಪನ್ ಕಪಿಮುಷ್ಟಿಯಿಂದ ಬಿಡಿಸಿ ತರು ವಲ್ಲಿ ಯಶಸ್ವಿಯಾದರು ಎನ್ನುತ್ತಾರೆ ಪಾರ್ವ ತಮ್ಮನವರ ಸೋದರ ಚಿನ್ನೇಗೌಡರು.

ವೀರಪ್ಪನ್ ವಶದಲ್ಲಿ ೧೦೭ ದಿನಗಳ ಕಾಲ ಇದ್ದ ರಾಜಕುಮಾರ್ ಅವರನ್ನು ಅಂತಿಮವಾಗಿ ೧೦೮ನೇ ದಿನ ನೆಡುಮಾರನ್ ತಂಡ ಬಿಡಿಸಿಕೊಂಡು ಬರುವ ವರೆಗೆ ಸರ್ಕಾರದ ಚುಕ್ಕಾಣಿ ಹಿಡಿದಿದ್ದ ಕೃಷ್ಣ ಅವರಿಗೆ ಪ್ರತಿಕ್ಷಣವೂ ಸವಾಲಿನದಾಗಿತ್ತು.

ಅವರ ಶಿಸ್ತು-ಕೆಲಸ ಸದಾ ನಮಗೆ ಮಾದರಿ
ನಮ್ಮ ತಂದೆಗೆ ಎಸ್.ಎಂ. ಕೃಷ್ಣ ಅವರ ಮೇಲೆ ವಿಶೇಷವಾದ ಗೌರವವಿತ್ತು. ಮುಖ್ಯಮಂತ್ರಿ ಎಂದರೆ ಕೃಷ್ಣ ಅವರ ತರಹ ಇರಬೇಕು ಎಂದು ಹೇಳುತ್ತಿದ್ದರು. ಅವರು ಶಿಸ್ತು ಮತ್ತು ಕೆಲಸ ಸದಾ ನಮಗೆ ಮಾದರಿ. ನಮ್ಮ ತಂದೆಯವರು ಅಪಹರಣ ಆಗಿದ್ದ ಸಂದರ್ಭದಲ್ಲಿ ನಮ್ಮ ಜೊತೆಗೆ ಅವರು ನಿಂತಿದ್ದು, ಯಾವತ್ತೂ ಮರೆಯುವುದಕ್ಕೆ ಸಾಧ್ಯವಿಲ್ಲ. ಅವರಷ್ಟೇ ಅಲ್ಲ, ಅವರ ಕುಟುಂಬದ ಜೊತೆಗೆ ನಮ್ಮ ಕುಟುಂಬಕ್ಕೆ ಒಳ್ಳೆಯ ಒಡನಾಟವಿತ್ತು. ಅವರ ನಿಧನ ನಿಜಕ್ಕೂ ದುಃಖ ತರಿಸುತ್ತದೆ. ಆ ನಷ್ಟ ಯಾವತ್ತಿದ್ದರೂ ನಷ್ಟವೇ. ಅವರಿಗೆ ೯೨ ವರ್ಷ ವಯಸ್ಸಾಗಿತ್ತು ಎಂದು ಸಮಾ ಧಾನಪಟ್ಟುಕೊಂಡರೂ, ಅವರ ಅಗಲಿಕೆಯ ವಿಷಯ ಕೇಳಿದಾಗ ಕಷ್ಟವಾಗುತ್ತದೆ. ಅವರ ಅಗಲಿಕೆಯನ್ನು ತಡೆದುಕೊಳ್ಳುವ ಶಕ್ತಿಯನ್ನು ದೇವರು ಕೊಡಲಿ, ಅವರ ಕುಟುಂಬದವರ ಜೊತೆಗೆ ನಾವು ಸದಾ ಇದ್ದೇ ಇರುತ್ತೇವೆ. -ಶಿವರಾಜಕುಮಾರ್, ಹಿರಿಯ ನಟ

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆ ಮೇಲೆ ಆದ ದೌರ್ಜನ್ಯ ತಲೆತಗ್ಗಿಸುವ ಘಟನೆ: ಅರಗ ಜ್ಞಾನೇಂದ್ರ

ಬೆಂಗಳೂರು: ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆ ಮೇಲೆ ಆದ ದೌರ್ಜನ್ಯ ಎಲ್ಲರೂ ತಲೆತಗ್ಗಿಸುವ ಘಟನೆ ಎಂದು ಮಾಜಿ ಸಚಿವ ಅರಗ ಜ್ಞಾನೇಂದ್ರ…

27 mins ago

ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಮಾನ ಮತ್ತೆ ಕುಸಿತ: ಹೆಚ್ಚಾದ ಚಳಿಯ ತೀವ್ರತೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಹಾಗೂ ಉತ್ತರ ಒಳನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ ಮತ್ತೆ ಕುಸಿತವಾಗಿದ್ದು, ಚಳಿಯ…

34 mins ago

ಏಪ್ರಿಲ್‌ನಿಂದ ಮೊದಲ ಹಂತದ ಜನಗಣತಿ ಆರಂಭ

ನವದೆಹಲಿ: 2027ರ ಜನಗಣತಿಯ ಮೊದಲ ಹಂತದ ಮನೆ ಪಟ್ಟಿ ಕಾರ್ಯ ಈ ವರ್ಷದ ಏಪ್ರಿಲ್‌ 1 ರಿಂದ ಸೆಪ್ಟೆಂಬರ್.‌30ರವರೆಗೆ ಎಲ್ಲಾ…

37 mins ago

ಬಳ್ಳಾರಿ ಫೈರಿಂಗ್‌ ಪ್ರಕರಣ ಸಿಬಿಐಗೆ ಕೊಡುವ ಅಗತ್ಯವಿಲ್ಲ: ಸಚಿವ ಪರಮೇಶ್ವರ್‌ ಸ್ಪಷ್ಟನೆ

ಬೆಂಗಳೂರು: ಬಳ್ಳಾರಿಯಲ್ಲಿ ನಡೆದ ಫೈರಿಂಗ್‌ ಪ್ರಕರಣವನ್ನು ಸಿಬಿಐಗೆ ಕೊಡುವ ಅಗತ್ಯವಿಲ್ಲ ಎಂದು ಗೃಹ ಸಚಿವ ಪರಮೇಶ್ವರ್‌ ಸ್ಪಷ್ಟನೆ ನೀಡಿದ್ದಾರೆ. ಈ…

54 mins ago

ಆದಷ್ಟು ಬೇಗ ಬಿಜೆಪಿ ಜೊತೆ ಜೆಡಿಎಸ್‌ ವಿಲೀನ: ಡಿಸಿಎಂ ಡಿ.ಕೆ.ಶಿವಕುಮಾರ್‌ ಭವಿಷ್ಯ

ಬೆಂಗಳೂರು: ಆದಷ್ಟು ಬೇಗ ಬಿಜೆಪಿ ಜೊತೆ ಜೆಡಿಎಸ್‌ ವಿಲೀನ ಆಗಬಹುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಭವಿಷ್ಯ ನುಡಿದಿದ್ದಾರೆ. ಈ ಬಗ್ಗೆ…

1 hour ago

ಮದ್ದೂರು| ಪೊಲೀಸ್‌ ಕಾನ್ಸ್‌ಟೇಬಲ್‌ ಆತ್ಮಹತ್ಯೆ: ಸಹೋದ್ಯೋಗಿ ವಿರುದ್ಧ ದೂರು ದಾಖಲು

ಮದ್ದೂರು: ಮದ್ದೂರು ಪಟ್ಟಣದ ಪೊಲೀಸ್‌ ಠಾಣೆಯ ವಿಶ್ರಾಂತಿ ಗೃಹದಲ್ಲಿ ಕಾನ್‌ಸ್ಟೇಬಲ್‌ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ…

2 hours ago