Andolana originals

ರಾಜ್‌ರನ್ನು ಮರಳಿಸಿದ್ದು ಕೃಷ್ಣ ತಾಳ್ಮೆ, ಸಹನೆ, ವಿವೇಕ: ಚಿನ್ನೇಗೌಡ

ಎಸ್. ಎಂ. ಕೃಷ್ಣ ಅವರು ಮುಖ್ಯಮಂತ್ರಿ ಯಾಗಿದ್ದ ಸಂದರ್ಭದಲ್ಲಿ ಎದುರಿಸಿದ ಬಹುದೊಡ್ಡ ಸವಾಲು ನರಹಂತಕ ವೀರಪ್ಪನ್ ಸೆರೆ ಯಿಂದ ರಾಜಕುಮಾರ್ ಅವ ರನ್ನು ಬಿಡಿಸುವುದಾಗಿತ್ತು. ೨೦೦೦ ಜುಲೈ ೩೦, ಭೀಮನ ಅಮಾವಾಸ್ಯೆ ದಿನ ರಾತ್ರಿ. ಗಾಜನೂರಿನಲ್ಲಿ ತಂಗಿದ್ದ ರಾಜಕುಮಾರ್ ಅವರನ್ನು ವೀರಪ್ಪನ್ ಅಪಹರಿಸಿದ್ದ. ಮುಖ್ಯಮಂತ್ರಿಗಳಾಗಿದ್ದ ಕೃಷ್ಣ ಅವರಿಗೆ ನೀಡಲು ತನ್ನ ಬೇಡಿಕೆಗಳ ಕ್ಯಾಸೆಟ್ ಒಂದನ್ನು ಪಾರ್ವತಮ್ಮ ರಾಜಕುಮಾರ್ ಅವರ ಕೈಯಲ್ಲಿ ಕೊಟ್ಟಿದ್ದ.

ರಾತ್ರೋರಾತ್ರಿ ಅಲ್ಲಿಂದ ಹೊರಟು ಬಂದ ಪಾರ್ವತಮ್ಮ ರಾಜಕುಮಾರ್ ಅವರು ನೇರವಾಗಿ ಕೃಷ್ಣ ಅವರ ಮನೆಗೆ ತೆರಳುತ್ತಾರೆ. ಅಲ್ಲಿ ನಡೆದ ಘಟನೆಯನ್ನು ವಿವರಿಸಿ, ವೀರ ಪ್ಪನ್ ಕೊಟ್ಟ ಕ್ಯಾಸೆಟ್ಟನ್ನು ಅವರ ಕೈಗಿಡುತ್ತಾರೆ. ಅವತ್ತು ಕೃಷ್ಣ ಅವರಲ್ಲದೆ ಬೇರೆ ಯಾರೇ ಮುಖ್ಯಮಂತ್ರಿ ಆಗಿದ್ದರೂ ಏನಾಗುತ್ತಿತ್ತೋ ಏನೋ. ಅವರ ತಾಳ್ಮೆ, ಸಹನೆ, ಎಲ್ಲಕ್ಕಿಂತ ಹೆಚ್ಚಾಗಿ ವಿವೇಕ ರಾಜಕುಮಾರ್ ಅವರು ಮರಳುವಂತೆ ಮಾಡಿತ್ತು ಎಂದರೆ ತಪ್ಪಿಲ್ಲ. ಅಕ್ಕನನ್ನು ಆ ವೇಳೆಗೆ ಸಮಾಧಾನ ಪಡಿಸಿದ್ದೇ ಅಲ್ಲದೆ, ನಾನಿದ್ದೇನೆ; ಎದೆಗುಂದಬೇಡಿ. ರಾಜಕುಮಾರ್ ಅವರನ್ನು ಮರಳಿ ಕರೆತರುವ ಜವಾಬ್ದಾರಿ ನಮ್ಮದು, ಎಂದದ್ದೇ ಅಲ್ಲದೆ, ನೆರೆಯ ತ. ನಾಡಿನ ಮುಖ್ಯಮಂತ್ರಿಗಳ ಜೊತೆ ಮಾತನಾಡಿ, ರಾಜಕುಮಾರ್ ಅವರನ್ನು ವೀರಪ್ಪನ್ ಕಪಿಮುಷ್ಟಿಯಿಂದ ಬಿಡಿಸಿ ತರು ವಲ್ಲಿ ಯಶಸ್ವಿಯಾದರು ಎನ್ನುತ್ತಾರೆ ಪಾರ್ವ ತಮ್ಮನವರ ಸೋದರ ಚಿನ್ನೇಗೌಡರು.

ವೀರಪ್ಪನ್ ವಶದಲ್ಲಿ ೧೦೭ ದಿನಗಳ ಕಾಲ ಇದ್ದ ರಾಜಕುಮಾರ್ ಅವರನ್ನು ಅಂತಿಮವಾಗಿ ೧೦೮ನೇ ದಿನ ನೆಡುಮಾರನ್ ತಂಡ ಬಿಡಿಸಿಕೊಂಡು ಬರುವ ವರೆಗೆ ಸರ್ಕಾರದ ಚುಕ್ಕಾಣಿ ಹಿಡಿದಿದ್ದ ಕೃಷ್ಣ ಅವರಿಗೆ ಪ್ರತಿಕ್ಷಣವೂ ಸವಾಲಿನದಾಗಿತ್ತು.

ಅವರ ಶಿಸ್ತು-ಕೆಲಸ ಸದಾ ನಮಗೆ ಮಾದರಿ
ನಮ್ಮ ತಂದೆಗೆ ಎಸ್.ಎಂ. ಕೃಷ್ಣ ಅವರ ಮೇಲೆ ವಿಶೇಷವಾದ ಗೌರವವಿತ್ತು. ಮುಖ್ಯಮಂತ್ರಿ ಎಂದರೆ ಕೃಷ್ಣ ಅವರ ತರಹ ಇರಬೇಕು ಎಂದು ಹೇಳುತ್ತಿದ್ದರು. ಅವರು ಶಿಸ್ತು ಮತ್ತು ಕೆಲಸ ಸದಾ ನಮಗೆ ಮಾದರಿ. ನಮ್ಮ ತಂದೆಯವರು ಅಪಹರಣ ಆಗಿದ್ದ ಸಂದರ್ಭದಲ್ಲಿ ನಮ್ಮ ಜೊತೆಗೆ ಅವರು ನಿಂತಿದ್ದು, ಯಾವತ್ತೂ ಮರೆಯುವುದಕ್ಕೆ ಸಾಧ್ಯವಿಲ್ಲ. ಅವರಷ್ಟೇ ಅಲ್ಲ, ಅವರ ಕುಟುಂಬದ ಜೊತೆಗೆ ನಮ್ಮ ಕುಟುಂಬಕ್ಕೆ ಒಳ್ಳೆಯ ಒಡನಾಟವಿತ್ತು. ಅವರ ನಿಧನ ನಿಜಕ್ಕೂ ದುಃಖ ತರಿಸುತ್ತದೆ. ಆ ನಷ್ಟ ಯಾವತ್ತಿದ್ದರೂ ನಷ್ಟವೇ. ಅವರಿಗೆ ೯೨ ವರ್ಷ ವಯಸ್ಸಾಗಿತ್ತು ಎಂದು ಸಮಾ ಧಾನಪಟ್ಟುಕೊಂಡರೂ, ಅವರ ಅಗಲಿಕೆಯ ವಿಷಯ ಕೇಳಿದಾಗ ಕಷ್ಟವಾಗುತ್ತದೆ. ಅವರ ಅಗಲಿಕೆಯನ್ನು ತಡೆದುಕೊಳ್ಳುವ ಶಕ್ತಿಯನ್ನು ದೇವರು ಕೊಡಲಿ, ಅವರ ಕುಟುಂಬದವರ ಜೊತೆಗೆ ನಾವು ಸದಾ ಇದ್ದೇ ಇರುತ್ತೇವೆ. -ಶಿವರಾಜಕುಮಾರ್, ಹಿರಿಯ ನಟ

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಅರ್ಜುನ ಆನೆ ಸ್ಮಾರಕ ಲೋಕರ್ಪಣೆ

ಹಾಸನ : ಯಸಳೂರಿನ ದಬ್ಬಳಿಕಟ್ಟೆ ನೆಡುತೋಪಿನಲ್ಲಿ ನಿರ್ಮಿಸಿರುವ ಹುತಾತ್ಮ ಅರ್ಜುನ ಆನೆಯ 650 ಕೆ.ಜಿ. ತೂಕದ ಸುಂದರ ಪ್ರತಿಮೆಯ ಸ್ಮಾರಕವನ್ನು…

3 mins ago

ಅಮೃತ್‌ಸರ, ಜಲಂಧರ್‌ನಲ್ಲಿ ಸ್ಫೋಟ : ಪಂಜಾಬ್‌ನಲ್ಲಿ ಕಟ್ಟೆಚ್ಚರ

ಅಮೃತ್‌ಸರ : ಪಂಜಾಬ್‌ನ ಅಮೃತ್‌ಸರ್ ಮತ್ತು ಜಲಂಧರ್‌ನ ಹೈ ಸೆಕ್ಯೂರಿಟಿ ವಲಯಗಳ ಬಳಿ ಮಂಗಳವಾರ ಕೆಲವೇ ಗಂಟೆಗಳ ಅಂತರದಲ್ಲಿ ಸ್ಛೋಟ…

9 mins ago

ದುಬಾರೆಯಲ್ಲಿ ತೂಗು ಸೇತುವೆಗೆ ಶಂಕುಸ್ಥಾಪನೆ ನೆರವೇರಿಸಿದ ಈಶ್ವರ ಖಂಡ್ರೆ

7.3 ಕೋಟಿ ರೂ. ವೆಚ್ಚದಲ್ಲಿ ತೂಗು ಸೇತುವೆ ನಿರ್ಮಾಣ ಶೀಘ್ರ :ಈಶ್ವರ ಖಂಡ್ರೆ ದುಬಾರೆ :  ವನ್ಯಜೀವಿಗಳ ಸಂಖ್ಯೆ ದಿನದಿಂದ…

21 mins ago

ಒಳಮೀಸಲಾತಿ ಜಾರಿ ಸರ್ಕಾರದ ಐತಿಹಾಸಿಕ ತೀರ್ಮಾನ : ಸಿಎಂ ಪ್ರತಿಪಾದನೆ

ಮೈಸೂರು : ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸುವಲ್ಲಿ ಕಾಂಗ್ರೆಸ್‌ ಸಫಲವಾಗಿದ್ದು, ಇದು ಸರ್ಕಾರದ ಐತಿಹಾಸಿಕ ತೀರ್ಮಾನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.…

33 mins ago

ಮೈಸೂರು | ಉದ್ದೇಶಿತ ಮೇಲ್ಸೇತುವೆ ಪ್ರದೇಶಕ್ಕೆ ಈಶ್ವರ ಖಂಡ್ರೆ ಭೇಟಿ, ಪರಿಶೀಲನೆ

ಮೈಸೂರು : ಮೈಸೂರಿನ ಸಿದ್ದಿಕಿ ನಗರ, ಮಣಿಪಾಲ್ ಆಸ್ಪತ್ರೆ ವೃತ್ತದ ಬಳಿ ರಾ.ಹೆ.275ರಲ್ಲಿ ಉದ್ದೇಶಿತ ಮೇಲ್ಸೇತುವೆ ಸ್ಥಳಕ್ಕೆ ಅರಣ್ಯ, ಜೀವಿಶಾಸ್ತ್ರ…

50 mins ago

ಗೋಣಿಕೊಪ್ಪ | ಹುಲಿ ದಾಳಿಗೆ ಹಸು ಬಲಿ

ಗೋಣಿಕೊಪ್ಪ : ಇಲ್ಲಿಗೆ ಸಮೀಪದ ಬಿ.ಶೆಟ್ಟಿಗೇರಿಯಲ್ಲಿ ಇಂದು(ಮೇ.6) ಬೆಳಿಗ್ಗೆ ಹುಲಿ ದಾಳಿಗೆ ಹಸು ಬಲಿಯಾಗಿರುವ ಘಟನೆ ನಡೆದಿದೆ. ಬಿ.ಶೆಟ್ಟಿಗೇರಿ ಗ್ರಾಮದ…

59 mins ago