Andolana originals

ರಾಜ್‌ರನ್ನು ಮರಳಿಸಿದ್ದು ಕೃಷ್ಣ ತಾಳ್ಮೆ, ಸಹನೆ, ವಿವೇಕ: ಚಿನ್ನೇಗೌಡ

ಎಸ್. ಎಂ. ಕೃಷ್ಣ ಅವರು ಮುಖ್ಯಮಂತ್ರಿ ಯಾಗಿದ್ದ ಸಂದರ್ಭದಲ್ಲಿ ಎದುರಿಸಿದ ಬಹುದೊಡ್ಡ ಸವಾಲು ನರಹಂತಕ ವೀರಪ್ಪನ್ ಸೆರೆ ಯಿಂದ ರಾಜಕುಮಾರ್ ಅವ ರನ್ನು ಬಿಡಿಸುವುದಾಗಿತ್ತು. ೨೦೦೦ ಜುಲೈ ೩೦, ಭೀಮನ ಅಮಾವಾಸ್ಯೆ ದಿನ ರಾತ್ರಿ. ಗಾಜನೂರಿನಲ್ಲಿ ತಂಗಿದ್ದ ರಾಜಕುಮಾರ್ ಅವರನ್ನು ವೀರಪ್ಪನ್ ಅಪಹರಿಸಿದ್ದ. ಮುಖ್ಯಮಂತ್ರಿಗಳಾಗಿದ್ದ ಕೃಷ್ಣ ಅವರಿಗೆ ನೀಡಲು ತನ್ನ ಬೇಡಿಕೆಗಳ ಕ್ಯಾಸೆಟ್ ಒಂದನ್ನು ಪಾರ್ವತಮ್ಮ ರಾಜಕುಮಾರ್ ಅವರ ಕೈಯಲ್ಲಿ ಕೊಟ್ಟಿದ್ದ.

ರಾತ್ರೋರಾತ್ರಿ ಅಲ್ಲಿಂದ ಹೊರಟು ಬಂದ ಪಾರ್ವತಮ್ಮ ರಾಜಕುಮಾರ್ ಅವರು ನೇರವಾಗಿ ಕೃಷ್ಣ ಅವರ ಮನೆಗೆ ತೆರಳುತ್ತಾರೆ. ಅಲ್ಲಿ ನಡೆದ ಘಟನೆಯನ್ನು ವಿವರಿಸಿ, ವೀರ ಪ್ಪನ್ ಕೊಟ್ಟ ಕ್ಯಾಸೆಟ್ಟನ್ನು ಅವರ ಕೈಗಿಡುತ್ತಾರೆ. ಅವತ್ತು ಕೃಷ್ಣ ಅವರಲ್ಲದೆ ಬೇರೆ ಯಾರೇ ಮುಖ್ಯಮಂತ್ರಿ ಆಗಿದ್ದರೂ ಏನಾಗುತ್ತಿತ್ತೋ ಏನೋ. ಅವರ ತಾಳ್ಮೆ, ಸಹನೆ, ಎಲ್ಲಕ್ಕಿಂತ ಹೆಚ್ಚಾಗಿ ವಿವೇಕ ರಾಜಕುಮಾರ್ ಅವರು ಮರಳುವಂತೆ ಮಾಡಿತ್ತು ಎಂದರೆ ತಪ್ಪಿಲ್ಲ. ಅಕ್ಕನನ್ನು ಆ ವೇಳೆಗೆ ಸಮಾಧಾನ ಪಡಿಸಿದ್ದೇ ಅಲ್ಲದೆ, ನಾನಿದ್ದೇನೆ; ಎದೆಗುಂದಬೇಡಿ. ರಾಜಕುಮಾರ್ ಅವರನ್ನು ಮರಳಿ ಕರೆತರುವ ಜವಾಬ್ದಾರಿ ನಮ್ಮದು, ಎಂದದ್ದೇ ಅಲ್ಲದೆ, ನೆರೆಯ ತ. ನಾಡಿನ ಮುಖ್ಯಮಂತ್ರಿಗಳ ಜೊತೆ ಮಾತನಾಡಿ, ರಾಜಕುಮಾರ್ ಅವರನ್ನು ವೀರಪ್ಪನ್ ಕಪಿಮುಷ್ಟಿಯಿಂದ ಬಿಡಿಸಿ ತರು ವಲ್ಲಿ ಯಶಸ್ವಿಯಾದರು ಎನ್ನುತ್ತಾರೆ ಪಾರ್ವ ತಮ್ಮನವರ ಸೋದರ ಚಿನ್ನೇಗೌಡರು.

ವೀರಪ್ಪನ್ ವಶದಲ್ಲಿ ೧೦೭ ದಿನಗಳ ಕಾಲ ಇದ್ದ ರಾಜಕುಮಾರ್ ಅವರನ್ನು ಅಂತಿಮವಾಗಿ ೧೦೮ನೇ ದಿನ ನೆಡುಮಾರನ್ ತಂಡ ಬಿಡಿಸಿಕೊಂಡು ಬರುವ ವರೆಗೆ ಸರ್ಕಾರದ ಚುಕ್ಕಾಣಿ ಹಿಡಿದಿದ್ದ ಕೃಷ್ಣ ಅವರಿಗೆ ಪ್ರತಿಕ್ಷಣವೂ ಸವಾಲಿನದಾಗಿತ್ತು.

ಅವರ ಶಿಸ್ತು-ಕೆಲಸ ಸದಾ ನಮಗೆ ಮಾದರಿ
ನಮ್ಮ ತಂದೆಗೆ ಎಸ್.ಎಂ. ಕೃಷ್ಣ ಅವರ ಮೇಲೆ ವಿಶೇಷವಾದ ಗೌರವವಿತ್ತು. ಮುಖ್ಯಮಂತ್ರಿ ಎಂದರೆ ಕೃಷ್ಣ ಅವರ ತರಹ ಇರಬೇಕು ಎಂದು ಹೇಳುತ್ತಿದ್ದರು. ಅವರು ಶಿಸ್ತು ಮತ್ತು ಕೆಲಸ ಸದಾ ನಮಗೆ ಮಾದರಿ. ನಮ್ಮ ತಂದೆಯವರು ಅಪಹರಣ ಆಗಿದ್ದ ಸಂದರ್ಭದಲ್ಲಿ ನಮ್ಮ ಜೊತೆಗೆ ಅವರು ನಿಂತಿದ್ದು, ಯಾವತ್ತೂ ಮರೆಯುವುದಕ್ಕೆ ಸಾಧ್ಯವಿಲ್ಲ. ಅವರಷ್ಟೇ ಅಲ್ಲ, ಅವರ ಕುಟುಂಬದ ಜೊತೆಗೆ ನಮ್ಮ ಕುಟುಂಬಕ್ಕೆ ಒಳ್ಳೆಯ ಒಡನಾಟವಿತ್ತು. ಅವರ ನಿಧನ ನಿಜಕ್ಕೂ ದುಃಖ ತರಿಸುತ್ತದೆ. ಆ ನಷ್ಟ ಯಾವತ್ತಿದ್ದರೂ ನಷ್ಟವೇ. ಅವರಿಗೆ ೯೨ ವರ್ಷ ವಯಸ್ಸಾಗಿತ್ತು ಎಂದು ಸಮಾ ಧಾನಪಟ್ಟುಕೊಂಡರೂ, ಅವರ ಅಗಲಿಕೆಯ ವಿಷಯ ಕೇಳಿದಾಗ ಕಷ್ಟವಾಗುತ್ತದೆ. ಅವರ ಅಗಲಿಕೆಯನ್ನು ತಡೆದುಕೊಳ್ಳುವ ಶಕ್ತಿಯನ್ನು ದೇವರು ಕೊಡಲಿ, ಅವರ ಕುಟುಂಬದವರ ಜೊತೆಗೆ ನಾವು ಸದಾ ಇದ್ದೇ ಇರುತ್ತೇವೆ. -ಶಿವರಾಜಕುಮಾರ್, ಹಿರಿಯ ನಟ

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

4 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

4 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

4 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

4 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

4 hours ago

ಹಿಂದಿನ ಉಸ್ತುವಾರಿಗಿದ್ದ ಖಾತೆಗಳು ಪುಟ್ಟರಂಗಶೆಟ್ಟರಿಗೆ!

ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ  ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…

4 hours ago