Andolana originals

ಬೀದಿ ದೀಪ ಇಲ್ಲದೇ ಆಸ್ಪತ್ರೆ ಎದುರು ಕತ್ತಲು

ಮಂಜು ಕೋಟೆ

ಐದು ತಿಂಗಳಿನಿಂದ ಬೀದಿ ದೀಪಗಳ ನಿರ್ವಹಣೆ ಇಲ್ಲ; ಕ್ರಮಕ್ಕೆ ಸಾರ್ವಜನಿಕರ ಒತ್ತಾಯ 

ಎಚ್.ಡಿ.ಕೋಟೆ: ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಮುಂಭಾಗದ ವೃತ್ತದಲ್ಲಿ ಐದು ತಿಂಗಳಿನಿಂದ ಬೀದಿ ದೀಪಗಳ ನಿರ್ವಹಣೆ ಇಲ್ಲದೆ ಕಗ್ಗತ್ತಲಿನಿಂದ ಕೂಡಿದೆ. ಇದರಿಂದ ರೋಗಿಗಳು, ಗಾಯಾಳುಗಳು, ಪ್ರಯಾಣಿಕರು, ಸಾರ್ವಜನಿಕರು ಪ್ರತಿ ನಿತ್ಯರಾತ್ರಿ ಹೊತ್ತು ಸಂಚರಿಸಲು ಪರದಾಡುವಂತಾಗಿದೆ.

ತಾಲ್ಲೂಕು ಕೇಂದ್ರ ಸ್ಥಾನವಾಗಿರುವ ಇಲ್ಲಿ ಸದಾ ಜನಜಂಗುಳಿ ಇದ್ದು, ಅಽಕಾರಿಗಳು ಮತ್ತು ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದಾಗಿ ಜನಸಾಮಾನ್ಯರು ಕತ್ತಲಿನಲ್ಲೇ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ತಾಲ್ಲೂಕಿನ ವಿವಿಧ ಗ್ರಾಮಗಳಿಂದ ಪ್ರತಿನಿತ್ಯ ಸಾವಿರಾರು ರೋಗಿಗಳು ಹಗಲು-ಇರುಳೆನ್ನದೆ ಸಾರ್ವಜನಿಕ ಆಸ್ಪತ್ರೆಗೆ ಆಗಮಿಸುತ್ತಾರೆ. ಆದರೆರಾತ್ರಿ ಆಗುತ್ತಿದ್ದಂತೆಯೇ ಈ ಪ್ರದೇಶ ವ್ಯಾಪ್ತಿಯಲ್ಲಿ ಬೀದಿ ದೀಪಗಳಿಲ್ಲದಿರುವುದರಿಂದ ಹಾಗೂ ಅಳವಡಿಸಿರುವ ಹೈಮಾಸ್ಟ್ ದೀಪವು ಕೆಟ್ಟುಹೋಗಿದ್ದು, ಇದರಿಂದಾಗಿ ವೃತ್ತವು ಕಗ್ಗತ್ತಲಿನಿಂದ ಆವರಿಸಿಕೊಂಡಿದೆ.

ರಾತ್ರಿ ಸಂದರ್ಭದಲ್ಲಿ ಈ ರಸ್ತೆಯಲ್ಲಿ ಓಡಾಡುವ ಪ್ರಯಾಣಿಕರು, ವಾಹನ ಚಾಲಕರು ಹಾಗೂ ಸಾರ್ವಜನಿಕರು, ಚಿಕಿತ್ಸೆಗೆಂದು ಬರುವ ರೋಗಿಗಳು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಕಾರ್ಯವೈಖರಿಯ ಬಗ್ಗೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ರಾತ್ರಿ ವೇಳೆ ಕುಡುಕರ ಹಾವಳಿ, ಗಾಂಜಾ ಮಾರಾಟ, ಮುಂತಾದ ಅಕ್ರಮ ಚಟುವಟಿಕೆಗಳು ರಾಜಾರೋಷವಾಗಿ ನಡೆಯುತ್ತಿದ್ದರೂ ಪೊಲೀಸರು ಜಾಣ-ಕುರುಡರಂತೆ ವರ್ತಿಸುತ್ತಾರೆ. ಇನ್ನಾದರೂ ಪುರಸಭೆಯ ಅಧಿಕಾರಿಗಳು ಕೆಟ್ಟು ಹೋಗಿರುವ ದೀಪಗಳನ್ನು ಸರಿಪಡಿಸಿ ಸಾರ್ವಜನಿಕರಿಗೆ ಬೆಳಕಿನ ವ್ಯವಸ್ಥೆ ಮಾಡಿಕೊಡುವಲ್ಲಿ ಮುಂದಾಗುವರೆ ಎಂಬುದನ್ನು ಕಾದುನೋಡಬೇಕಾಗಿದೆ.

” ಸಾರ್ವಜನಿಕ ಆಸ್ಪತ್ರೆಯ ಸುತ್ತಮುತ್ತ ಬೀದಿದೀಪಗಳಿಲ್ಲದೆ ಹಲವು ತಿಂಗಳಿನಿಂದ ಕಗ್ಗತ್ತಲಿನಿಂದ ಕೂಡಿದೆ. ಬೀದಿ ದೀಪ ಹಾಗೂ ಹೈಮಾಸ್ಟ್ ದೀಪಗಳನ್ನು ಸರಿಪಡಿಸಬೇಕೆಂದು ಪುರಸಭೆ ಮುಖ್ಯಾಧಿಕಾರಿ ಸುರೇಶ್ ಅವರಿಗೆ ತಿಳಿಸಲಾಗಿದೆ. ಇನ್ನೂ ಕ್ರಮ ಕೈಗೊಂಡಿಲ್ಲ. ಸಮಸ್ಯೆ ಬಗೆಹರಿಸದಿದ್ದರೆ ಈ ಭಾಗದ ಜನರೊಂದಿಗೆ ಸೇರಿಕೊಂಡು ಹೋರಾಟ ನಡೆಸುತ್ತೇನೆ.”

 -ದರ್ಶಿನಿ, ಜಿಮ್ ಯಶ್ವಂತ್, ಪುರಸಭಾ ಸದಸ್ಯರು

ಆಂದೋಲನ ಡೆಸ್ಕ್

Recent Posts

ಎಚ್‌.ಡಿ.ಕೋಟೆ: ಗುಜರಿ ಗೋಡೌನ್‌ಗೆ ಬೆಂಕಿ: ಲಕ್ಷಾಂತರ ರೂ ಬೆಲೆಬಾಳುವ ಸಾಮಗ್ರಿ ನಾಶ

ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್‌ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್‌ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…

8 hours ago

ವಂದೇ ಭಾರತ್‌ ರೈಲಿನಲ್ಲಿ ಕೊಟ್ಟ ಮೊಸರಿನಲ್ಲಿ ಹುಳು ಪತ್ತೆ: IRCTCಗೆ 10 ಲಕ್ಷ ರೂ ದಂಡ

ಪಾಟ್ನಾ: ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್‌ಸಿಟಿಸಿಗೆ 10…

9 hours ago

ಹನೂರು: ಬಿಆರ್‌ಟಿ ವನ್ಯಜೀವಿ ವ್ಯಾಪ್ತಿಯಲ್ಲಿ ಕಾಡ್ಗಿಚ್ಚು: 80 ಎಕರೆಗೂ ಹೆಚ್ಚು ಅರಣ್ಯ ನಾಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…

9 hours ago

ಪಾಲಿಕೆ ಬಜೆಟ್‌ ಸತ್ವ ಇಲ್ಲದ ಬಜೆಟ್‌: ಮಾಜಿ ಮೇಯರ್‌ ಶಿವಕುಮಾರ್‌ ಆಕ್ರೋಶ

ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…

9 hours ago

ಗುಂಡ್ಲುಪೇಟೆ| ಮದ್ದೂರು ವಲಯದಲ್ಲಿ ಮತ್ತೆರಡು ಹುಲಿ ಪ್ರತ್ಯಕ್ಷ

ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…

9 hours ago

ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿದ ಸರ್ಕಾರ: ಆರ್‌.ಅಶೋಕ್‌ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…

9 hours ago