ಮಂಜು ಕೋಟೆ
ಐದು ತಿಂಗಳಿನಿಂದ ಬೀದಿ ದೀಪಗಳ ನಿರ್ವಹಣೆ ಇಲ್ಲ; ಕ್ರಮಕ್ಕೆ ಸಾರ್ವಜನಿಕರ ಒತ್ತಾಯ
ಎಚ್.ಡಿ.ಕೋಟೆ: ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಮುಂಭಾಗದ ವೃತ್ತದಲ್ಲಿ ಐದು ತಿಂಗಳಿನಿಂದ ಬೀದಿ ದೀಪಗಳ ನಿರ್ವಹಣೆ ಇಲ್ಲದೆ ಕಗ್ಗತ್ತಲಿನಿಂದ ಕೂಡಿದೆ. ಇದರಿಂದ ರೋಗಿಗಳು, ಗಾಯಾಳುಗಳು, ಪ್ರಯಾಣಿಕರು, ಸಾರ್ವಜನಿಕರು ಪ್ರತಿ ನಿತ್ಯರಾತ್ರಿ ಹೊತ್ತು ಸಂಚರಿಸಲು ಪರದಾಡುವಂತಾಗಿದೆ.
ತಾಲ್ಲೂಕು ಕೇಂದ್ರ ಸ್ಥಾನವಾಗಿರುವ ಇಲ್ಲಿ ಸದಾ ಜನಜಂಗುಳಿ ಇದ್ದು, ಅಽಕಾರಿಗಳು ಮತ್ತು ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದಾಗಿ ಜನಸಾಮಾನ್ಯರು ಕತ್ತಲಿನಲ್ಲೇ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ತಾಲ್ಲೂಕಿನ ವಿವಿಧ ಗ್ರಾಮಗಳಿಂದ ಪ್ರತಿನಿತ್ಯ ಸಾವಿರಾರು ರೋಗಿಗಳು ಹಗಲು-ಇರುಳೆನ್ನದೆ ಸಾರ್ವಜನಿಕ ಆಸ್ಪತ್ರೆಗೆ ಆಗಮಿಸುತ್ತಾರೆ. ಆದರೆರಾತ್ರಿ ಆಗುತ್ತಿದ್ದಂತೆಯೇ ಈ ಪ್ರದೇಶ ವ್ಯಾಪ್ತಿಯಲ್ಲಿ ಬೀದಿ ದೀಪಗಳಿಲ್ಲದಿರುವುದರಿಂದ ಹಾಗೂ ಅಳವಡಿಸಿರುವ ಹೈಮಾಸ್ಟ್ ದೀಪವು ಕೆಟ್ಟುಹೋಗಿದ್ದು, ಇದರಿಂದಾಗಿ ವೃತ್ತವು ಕಗ್ಗತ್ತಲಿನಿಂದ ಆವರಿಸಿಕೊಂಡಿದೆ.
ರಾತ್ರಿ ಸಂದರ್ಭದಲ್ಲಿ ಈ ರಸ್ತೆಯಲ್ಲಿ ಓಡಾಡುವ ಪ್ರಯಾಣಿಕರು, ವಾಹನ ಚಾಲಕರು ಹಾಗೂ ಸಾರ್ವಜನಿಕರು, ಚಿಕಿತ್ಸೆಗೆಂದು ಬರುವ ರೋಗಿಗಳು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಕಾರ್ಯವೈಖರಿಯ ಬಗ್ಗೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ರಾತ್ರಿ ವೇಳೆ ಕುಡುಕರ ಹಾವಳಿ, ಗಾಂಜಾ ಮಾರಾಟ, ಮುಂತಾದ ಅಕ್ರಮ ಚಟುವಟಿಕೆಗಳು ರಾಜಾರೋಷವಾಗಿ ನಡೆಯುತ್ತಿದ್ದರೂ ಪೊಲೀಸರು ಜಾಣ-ಕುರುಡರಂತೆ ವರ್ತಿಸುತ್ತಾರೆ. ಇನ್ನಾದರೂ ಪುರಸಭೆಯ ಅಧಿಕಾರಿಗಳು ಕೆಟ್ಟು ಹೋಗಿರುವ ದೀಪಗಳನ್ನು ಸರಿಪಡಿಸಿ ಸಾರ್ವಜನಿಕರಿಗೆ ಬೆಳಕಿನ ವ್ಯವಸ್ಥೆ ಮಾಡಿಕೊಡುವಲ್ಲಿ ಮುಂದಾಗುವರೆ ಎಂಬುದನ್ನು ಕಾದುನೋಡಬೇಕಾಗಿದೆ.
” ಸಾರ್ವಜನಿಕ ಆಸ್ಪತ್ರೆಯ ಸುತ್ತಮುತ್ತ ಬೀದಿದೀಪಗಳಿಲ್ಲದೆ ಹಲವು ತಿಂಗಳಿನಿಂದ ಕಗ್ಗತ್ತಲಿನಿಂದ ಕೂಡಿದೆ. ಬೀದಿ ದೀಪ ಹಾಗೂ ಹೈಮಾಸ್ಟ್ ದೀಪಗಳನ್ನು ಸರಿಪಡಿಸಬೇಕೆಂದು ಪುರಸಭೆ ಮುಖ್ಯಾಧಿಕಾರಿ ಸುರೇಶ್ ಅವರಿಗೆ ತಿಳಿಸಲಾಗಿದೆ. ಇನ್ನೂ ಕ್ರಮ ಕೈಗೊಂಡಿಲ್ಲ. ಸಮಸ್ಯೆ ಬಗೆಹರಿಸದಿದ್ದರೆ ಈ ಭಾಗದ ಜನರೊಂದಿಗೆ ಸೇರಿಕೊಂಡು ಹೋರಾಟ ನಡೆಸುತ್ತೇನೆ.”
-ದರ್ಶಿನಿ, ಜಿಮ್ ಯಶ್ವಂತ್, ಪುರಸಭಾ ಸದಸ್ಯರು
ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…
ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…
ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು : ರಾಜ್ಯದ ಐದು ಹುಲಿ…
ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ…
ಬೆಂಗಳೂರು: ಆನ್ಲೈನ್ನಲ್ಲಿ ಔಷಧಿಗಳ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಕರ್ನಾಟಕ ಬಂದ್ಗೆ ಮಿಶ್ರ…
ಯಳಂದೂರು: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿದೆ. ತಾಲ್ಲೂಕಿನ ಗುಂಬಳ್ಳಿ ಗ್ರಾಮದಲ್ಲಿ…