Andolana originals

ಬೀದಿ ದೀಪ ಇಲ್ಲದೇ ಆಸ್ಪತ್ರೆ ಎದುರು ಕತ್ತಲು

ಮಂಜು ಕೋಟೆ

ಐದು ತಿಂಗಳಿನಿಂದ ಬೀದಿ ದೀಪಗಳ ನಿರ್ವಹಣೆ ಇಲ್ಲ; ಕ್ರಮಕ್ಕೆ ಸಾರ್ವಜನಿಕರ ಒತ್ತಾಯ 

ಎಚ್.ಡಿ.ಕೋಟೆ: ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಮುಂಭಾಗದ ವೃತ್ತದಲ್ಲಿ ಐದು ತಿಂಗಳಿನಿಂದ ಬೀದಿ ದೀಪಗಳ ನಿರ್ವಹಣೆ ಇಲ್ಲದೆ ಕಗ್ಗತ್ತಲಿನಿಂದ ಕೂಡಿದೆ. ಇದರಿಂದ ರೋಗಿಗಳು, ಗಾಯಾಳುಗಳು, ಪ್ರಯಾಣಿಕರು, ಸಾರ್ವಜನಿಕರು ಪ್ರತಿ ನಿತ್ಯರಾತ್ರಿ ಹೊತ್ತು ಸಂಚರಿಸಲು ಪರದಾಡುವಂತಾಗಿದೆ.

ತಾಲ್ಲೂಕು ಕೇಂದ್ರ ಸ್ಥಾನವಾಗಿರುವ ಇಲ್ಲಿ ಸದಾ ಜನಜಂಗುಳಿ ಇದ್ದು, ಅಽಕಾರಿಗಳು ಮತ್ತು ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದಾಗಿ ಜನಸಾಮಾನ್ಯರು ಕತ್ತಲಿನಲ್ಲೇ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ತಾಲ್ಲೂಕಿನ ವಿವಿಧ ಗ್ರಾಮಗಳಿಂದ ಪ್ರತಿನಿತ್ಯ ಸಾವಿರಾರು ರೋಗಿಗಳು ಹಗಲು-ಇರುಳೆನ್ನದೆ ಸಾರ್ವಜನಿಕ ಆಸ್ಪತ್ರೆಗೆ ಆಗಮಿಸುತ್ತಾರೆ. ಆದರೆರಾತ್ರಿ ಆಗುತ್ತಿದ್ದಂತೆಯೇ ಈ ಪ್ರದೇಶ ವ್ಯಾಪ್ತಿಯಲ್ಲಿ ಬೀದಿ ದೀಪಗಳಿಲ್ಲದಿರುವುದರಿಂದ ಹಾಗೂ ಅಳವಡಿಸಿರುವ ಹೈಮಾಸ್ಟ್ ದೀಪವು ಕೆಟ್ಟುಹೋಗಿದ್ದು, ಇದರಿಂದಾಗಿ ವೃತ್ತವು ಕಗ್ಗತ್ತಲಿನಿಂದ ಆವರಿಸಿಕೊಂಡಿದೆ.

ರಾತ್ರಿ ಸಂದರ್ಭದಲ್ಲಿ ಈ ರಸ್ತೆಯಲ್ಲಿ ಓಡಾಡುವ ಪ್ರಯಾಣಿಕರು, ವಾಹನ ಚಾಲಕರು ಹಾಗೂ ಸಾರ್ವಜನಿಕರು, ಚಿಕಿತ್ಸೆಗೆಂದು ಬರುವ ರೋಗಿಗಳು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಕಾರ್ಯವೈಖರಿಯ ಬಗ್ಗೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ರಾತ್ರಿ ವೇಳೆ ಕುಡುಕರ ಹಾವಳಿ, ಗಾಂಜಾ ಮಾರಾಟ, ಮುಂತಾದ ಅಕ್ರಮ ಚಟುವಟಿಕೆಗಳು ರಾಜಾರೋಷವಾಗಿ ನಡೆಯುತ್ತಿದ್ದರೂ ಪೊಲೀಸರು ಜಾಣ-ಕುರುಡರಂತೆ ವರ್ತಿಸುತ್ತಾರೆ. ಇನ್ನಾದರೂ ಪುರಸಭೆಯ ಅಧಿಕಾರಿಗಳು ಕೆಟ್ಟು ಹೋಗಿರುವ ದೀಪಗಳನ್ನು ಸರಿಪಡಿಸಿ ಸಾರ್ವಜನಿಕರಿಗೆ ಬೆಳಕಿನ ವ್ಯವಸ್ಥೆ ಮಾಡಿಕೊಡುವಲ್ಲಿ ಮುಂದಾಗುವರೆ ಎಂಬುದನ್ನು ಕಾದುನೋಡಬೇಕಾಗಿದೆ.

” ಸಾರ್ವಜನಿಕ ಆಸ್ಪತ್ರೆಯ ಸುತ್ತಮುತ್ತ ಬೀದಿದೀಪಗಳಿಲ್ಲದೆ ಹಲವು ತಿಂಗಳಿನಿಂದ ಕಗ್ಗತ್ತಲಿನಿಂದ ಕೂಡಿದೆ. ಬೀದಿ ದೀಪ ಹಾಗೂ ಹೈಮಾಸ್ಟ್ ದೀಪಗಳನ್ನು ಸರಿಪಡಿಸಬೇಕೆಂದು ಪುರಸಭೆ ಮುಖ್ಯಾಧಿಕಾರಿ ಸುರೇಶ್ ಅವರಿಗೆ ತಿಳಿಸಲಾಗಿದೆ. ಇನ್ನೂ ಕ್ರಮ ಕೈಗೊಂಡಿಲ್ಲ. ಸಮಸ್ಯೆ ಬಗೆಹರಿಸದಿದ್ದರೆ ಈ ಭಾಗದ ಜನರೊಂದಿಗೆ ಸೇರಿಕೊಂಡು ಹೋರಾಟ ನಡೆಸುತ್ತೇನೆ.”

 -ದರ್ಶಿನಿ, ಜಿಮ್ ಯಶ್ವಂತ್, ಪುರಸಭಾ ಸದಸ್ಯರು

ಆಂದೋಲನ ಡೆಸ್ಕ್

Recent Posts

ರಸ್ತೆ ವೈಟ್‌ ಟಾಪಿಂಗ್‌ ; ಟೆಂಡರ್‌ ಶುವರ್‌ ಮಾದರಿ ಕಡ್ಡಾಯ

ರಸ್ತೆಗಳ ಬಾಳಿಕೆ ಹೆಚ್ಚಳ ; ಬಫರ್‌ ಜೋನ್‌ ಇಲ್ಲದಿದ್ದರೆ ಸಂಕಷ್ಟ ವಿಶ್ವನಾಥ್‌ ಶಂಕರಪ್ಪ ರಸ್ತೆ ವೈಟ್ ಟಾಪಿಂಗ್ ಮಾಡುವುದು ಎಂದರೆ,…

47 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ : ಪೈರಸಿ ನಿಗ್ರಹಕ್ಕೆ ಟೆಲಿಗ್ರಾಮ್‌ ಆಪ್‌ಗೆ ಅವಧಿ ನೀಡಿದ ಕೇಂದ್ರ

ಮೂರು ವಾರಗಳ ಹಿಂದೆ ಈ ಅಂಕಣದಲ್ಲಿ ಪೈರಸಿ ಎನ್ನುವ ಪೆಡಂಭೂತದ ಬಗ್ಗೆ ಹೇಳಲಾಗಿತ್ತು. ನೀಟ್ ಪರೀಕ್ಷೆಯ ಅವಧಿಯ ಕೆಲವು ದಿನ…

1 hour ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 10 ಶುಕ್ರವಾರ

1 hour ago

ಬೆಟ್ಟಗಳು ಯಾವತ್ತೂ ಸುಳ್ಳು ಹೇಳುವುದಿಲ್ಲ!

ಪ್ರತ್ಯಕ್ಷ ವರದಿ ಕೆ.ಪಿ.ನಾಗರಾಜ್‌ ಪಬ್ಲಿಕ್‌ ಟಿವಿ ಕೇರಳ ರಾಜ್ಯದ ವಯನಾಡಿನಲ್ಲಿ ಮತ್ತೆ ಬೆಟ್ಟ ಕುಸಿದಿದೆ. ಸುದ್ದಿ ವಾಹಿನಿಗಳು ಇದನ್ನು ‘ಭೂ…

21 hours ago

ಮೈಸೂರು ನೃತ್ಯ ಪರಂಪರೆಯ ತವರೂರು

ಮೈಸೂರಿನ ನೃತ್ಯ ಪರಂಪರೆಯ ವೈಭವಕ್ಕೆ ಪ್ರೇರಕ ಶಕ್ತಿ ಹಲವು ಕೆ.ರಾಮಮೂರ್ತಿ‌ ರಾವ್ ಮೈಸೂರು ಪ್ರಾಚೀನ ಕಾಲದಿಂದಲೂ ಲಲಿತಕಲೆಗಳಿಗೆ ನೆಲೆಯಾಗಿದ್ದ ಸ್ಥಳ.…

22 hours ago

ʼಮಾನವೀಯತೆ ಎಂಬುದು ನನ್ನಂಥ ಜನರಿಗೆ ಸಿಗದ ಸವಲತ್ತುʼ

ವಿಚಾರಣೆ ಇಲ್ಲದೆ ಆರು ವರ್ಷಗಳಿಂದ ಜೈಲುವಾಸದಲ್ಲಿರುವ ಉಮರ್‌ ಖಾಲಿದ್‌ ಪ್ರಥಮ ಸಂದರ್ಶನ ಈಶಾನ್ಯ ದೆಹಲಿ ಗಲಭೆಗಳಿಗೆ ಸಂಬಂಧಿಸಿದಂತೆ ೨೦೨೦ರಲ್ಲಿ ಜೈಲು…

22 hours ago