Andolana originals

ಬೀದಿ ದೀಪ ಇಲ್ಲದೇ ಆಸ್ಪತ್ರೆ ಎದುರು ಕತ್ತಲು

ಮಂಜು ಕೋಟೆ

ಐದು ತಿಂಗಳಿನಿಂದ ಬೀದಿ ದೀಪಗಳ ನಿರ್ವಹಣೆ ಇಲ್ಲ; ಕ್ರಮಕ್ಕೆ ಸಾರ್ವಜನಿಕರ ಒತ್ತಾಯ 

ಎಚ್.ಡಿ.ಕೋಟೆ: ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಮುಂಭಾಗದ ವೃತ್ತದಲ್ಲಿ ಐದು ತಿಂಗಳಿನಿಂದ ಬೀದಿ ದೀಪಗಳ ನಿರ್ವಹಣೆ ಇಲ್ಲದೆ ಕಗ್ಗತ್ತಲಿನಿಂದ ಕೂಡಿದೆ. ಇದರಿಂದ ರೋಗಿಗಳು, ಗಾಯಾಳುಗಳು, ಪ್ರಯಾಣಿಕರು, ಸಾರ್ವಜನಿಕರು ಪ್ರತಿ ನಿತ್ಯರಾತ್ರಿ ಹೊತ್ತು ಸಂಚರಿಸಲು ಪರದಾಡುವಂತಾಗಿದೆ.

ತಾಲ್ಲೂಕು ಕೇಂದ್ರ ಸ್ಥಾನವಾಗಿರುವ ಇಲ್ಲಿ ಸದಾ ಜನಜಂಗುಳಿ ಇದ್ದು, ಅಽಕಾರಿಗಳು ಮತ್ತು ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದಾಗಿ ಜನಸಾಮಾನ್ಯರು ಕತ್ತಲಿನಲ್ಲೇ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ತಾಲ್ಲೂಕಿನ ವಿವಿಧ ಗ್ರಾಮಗಳಿಂದ ಪ್ರತಿನಿತ್ಯ ಸಾವಿರಾರು ರೋಗಿಗಳು ಹಗಲು-ಇರುಳೆನ್ನದೆ ಸಾರ್ವಜನಿಕ ಆಸ್ಪತ್ರೆಗೆ ಆಗಮಿಸುತ್ತಾರೆ. ಆದರೆರಾತ್ರಿ ಆಗುತ್ತಿದ್ದಂತೆಯೇ ಈ ಪ್ರದೇಶ ವ್ಯಾಪ್ತಿಯಲ್ಲಿ ಬೀದಿ ದೀಪಗಳಿಲ್ಲದಿರುವುದರಿಂದ ಹಾಗೂ ಅಳವಡಿಸಿರುವ ಹೈಮಾಸ್ಟ್ ದೀಪವು ಕೆಟ್ಟುಹೋಗಿದ್ದು, ಇದರಿಂದಾಗಿ ವೃತ್ತವು ಕಗ್ಗತ್ತಲಿನಿಂದ ಆವರಿಸಿಕೊಂಡಿದೆ.

ರಾತ್ರಿ ಸಂದರ್ಭದಲ್ಲಿ ಈ ರಸ್ತೆಯಲ್ಲಿ ಓಡಾಡುವ ಪ್ರಯಾಣಿಕರು, ವಾಹನ ಚಾಲಕರು ಹಾಗೂ ಸಾರ್ವಜನಿಕರು, ಚಿಕಿತ್ಸೆಗೆಂದು ಬರುವ ರೋಗಿಗಳು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಕಾರ್ಯವೈಖರಿಯ ಬಗ್ಗೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ರಾತ್ರಿ ವೇಳೆ ಕುಡುಕರ ಹಾವಳಿ, ಗಾಂಜಾ ಮಾರಾಟ, ಮುಂತಾದ ಅಕ್ರಮ ಚಟುವಟಿಕೆಗಳು ರಾಜಾರೋಷವಾಗಿ ನಡೆಯುತ್ತಿದ್ದರೂ ಪೊಲೀಸರು ಜಾಣ-ಕುರುಡರಂತೆ ವರ್ತಿಸುತ್ತಾರೆ. ಇನ್ನಾದರೂ ಪುರಸಭೆಯ ಅಧಿಕಾರಿಗಳು ಕೆಟ್ಟು ಹೋಗಿರುವ ದೀಪಗಳನ್ನು ಸರಿಪಡಿಸಿ ಸಾರ್ವಜನಿಕರಿಗೆ ಬೆಳಕಿನ ವ್ಯವಸ್ಥೆ ಮಾಡಿಕೊಡುವಲ್ಲಿ ಮುಂದಾಗುವರೆ ಎಂಬುದನ್ನು ಕಾದುನೋಡಬೇಕಾಗಿದೆ.

” ಸಾರ್ವಜನಿಕ ಆಸ್ಪತ್ರೆಯ ಸುತ್ತಮುತ್ತ ಬೀದಿದೀಪಗಳಿಲ್ಲದೆ ಹಲವು ತಿಂಗಳಿನಿಂದ ಕಗ್ಗತ್ತಲಿನಿಂದ ಕೂಡಿದೆ. ಬೀದಿ ದೀಪ ಹಾಗೂ ಹೈಮಾಸ್ಟ್ ದೀಪಗಳನ್ನು ಸರಿಪಡಿಸಬೇಕೆಂದು ಪುರಸಭೆ ಮುಖ್ಯಾಧಿಕಾರಿ ಸುರೇಶ್ ಅವರಿಗೆ ತಿಳಿಸಲಾಗಿದೆ. ಇನ್ನೂ ಕ್ರಮ ಕೈಗೊಂಡಿಲ್ಲ. ಸಮಸ್ಯೆ ಬಗೆಹರಿಸದಿದ್ದರೆ ಈ ಭಾಗದ ಜನರೊಂದಿಗೆ ಸೇರಿಕೊಂಡು ಹೋರಾಟ ನಡೆಸುತ್ತೇನೆ.”

 -ದರ್ಶಿನಿ, ಜಿಮ್ ಯಶ್ವಂತ್, ಪುರಸಭಾ ಸದಸ್ಯರು

ಆಂದೋಲನ ಡೆಸ್ಕ್

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

15 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

15 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

15 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

18 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

18 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

18 hours ago