Andolana originals

ಕೊಡಗಿನಲ್ಲೀಗ ಕೆಸರಿನೋಕುಳಿಯ ಸಮಯ

ವಿವಿಧ ಸಂಘ ಸಂಸ್ಥೆಗಳಿಂದ ಕೆಸರುಗದ್ದೆ ಕ್ರೀಡಾಕೂಟ ಆಯೋಜನೆ; ಮಳೆ, ಗಾಳಿ, ಚಳಿಯನ್ನು ಲೆಕ್ಕಿಸದೆ ಸಂಭ್ರಮಿಸುವ ಗ್ರಾಮಸ್ಥರು

ನವೀನ್ ಡಿಸೋಜ

ಮಡಿಕೇರಿ: ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಯ ನಡುವೆ ಮಂಜಿನ ಆಟ, ಜೊತೆಗೆ ಒಂದಷ್ಟು ಚಳಿಯ ಕಾಟ, ಇದ್ಯಾವುದೂ ಲೆಕ್ಕಕ್ಕಿಲ್ಲ ಎಂಬಂತೆ ಗದ್ದೆಯಲ್ಲಿ ಕೆಸರಿನೋಕುಳಿ ಆಡುತ್ತಿರುವ ಮಕ್ಕಳು.. ಹಗ್ಗ ಜಗ್ಗಾಟ, ಭರ್ಜರಿ ಓಟ, ಕ್ರಿಕೆಟ್ ಇವೆಲ್ಲವೂ ಕೊಡಗು ಜಿಲ್ಲೆಯ ಅಲ್ಲಲ್ಲಿ ಕಂಡುಬರುತ್ತಿರುವ ಚಿತ್ರಣ.

ಕೊಡಗು ಜಿಲ್ಲೆಯಲ್ಲಿ ಮಳೆಗಾಲ ಬಂದಾಗ ಒಂದಷ್ಟು ಆತಂಕ, ಭಯದ ವಾತಾವರಣ ಇರುತ್ತದೆ. ಜೊತೆಗೆ ಕೃಷಿ ಚಟುವಟಿಕೆಗಳು ಗರಿಗೆದರುತ್ತವೆ. ಇದರ ನಡುವೆ ಜಿಲ್ಲೆಯಲ್ಲಿ ಮನರಂಜನೆಗೆ ಕೊರತೆ ಇಲ್ಲ. ಜಿಟಿಜಿಟಿ ಮಳೆಯ ನಡುವೆ ಕೆಸರಿನಲ್ಲಿ ಆಯೋಜಿಸಲ್ಪಡುವ ವಿವಿಧ ಕ್ರೀಡೆಗಳು ನೋಡುಗರ ಗಮನ ಸೆಳೆಯುತ್ತವೆ. ಕ್ರೀಡಾ ತವರು ಎನಿಸಿಕೊಂಡಿರುವ ಕೊಡಗಿನಲ್ಲಿ ಬೇಸಿಗೆಯಲ್ಲಿ ಮಾತ್ರವಲ್ಲದೆ ಮಳೆಗಾಲದಲ್ಲಿಯೂ ನಾನಾ ಕ್ರೀಡಾ ಚಟುವಟಿಕೆಗಳು ನಡೆಯುತ್ತವೆ. ಅದರಲ್ಲೂ ಮಳೆಗಾಲದಲ್ಲಿ ಕೆಸರುಗದ್ದೆಯಲ್ಲಿ ನಡೆಯುವ ಕ್ರೀಡಾಕೂಟ ಗಳ ಮಹತ್ವ ಪಡೆದುಕೊಂಡಿದೆ.

ಬೇಸಿಗೆಯ ಸಮಯದಲ್ಲಿ ಹಾಕಿ, ಕ್ರಿಕೆಟ್, ಫುಟ್ ಬಾಲ್, ವಾಲಿಬಾಲ್ ಒಂದಿಲ್ಲೊಂದು ಕ್ರೀಡಾಕೂಟಗಳು ನಡೆಯುವ ಜಿಲ್ಲೆಯಲ್ಲಿ ಮಳೆಗಾಲ ಬಂತೆಂದರೆ, ಕೆಸರು ಗದ್ದೆ ಕ್ರೀಡಾಕೂಟಗಳು ಗಮನ ಸೆಳೆಯುತ್ತವೆ. ಈ ಕ್ರೀಡಾಕೂಟಗಳು ದೇಸಿ ಸೊಗಡನ್ನು ಅನಾವರಣಗೊಳಿಸುತ್ತವೆ.

ಇಲ್ಲಿನ ಕ್ರೀಡಾಪ್ರೇಮಿಗಳು ಮಳೆ, ಚಳಿಗೆ ಮೈಯೊಡ್ಡಿ ಆಟವಾಡುವುದಕ್ಕಾಗಿಯೇ ಕೆಲವು ಸಂಘ-ಸಂಸ್ಥೆ ತಂಡಗಳನ್ನು ರಚಿಸಿಕೊಂಡು ಆಯೋಜಕರನ್ನು ಹಿಡಿದು ರಾಜ್ಯ ಹಾಗೂ ಜಿಲ್ಲಾಮಟ್ಟದಲ್ಲಿ ಕೆಸರು ಗದ್ದೆ ಕ್ರೀಡಾಕೂಟವನ್ನು ಆಯೋಜಿಸುತ್ತಿದ್ದಾರೆ.

ಗದ್ದೆಯಲ್ಲಿ ವಾಲಿಬಾಲ್, ಥ್ರೋಬಾಲ್, ಹಗ್ಗಜಗ್ಗಾಟ, ಕೆಸರು ಗದ್ದೆ ಓಟ, ಮುಕ್ತ ಓಟ, ಸಾಂಪ್ರದಾಯಿಕ ನಾಟಿ ಓಟದ ಸ್ಪರ್ಧೆಗಳನ್ನು ವಿದ್ಯಾರ್ಥಿಗಳಿಗೆ, ಪುರುಷರಿಗೆ ಹಾಗೂ ಮಹಿಳೆಯರಿಗೆ ಪ್ರತ್ಯೇಕ ವಿಭಾಗಗಳಲ್ಲಿ ಆಯೋಜಿಸಿ, ವಿಜೇತರಿಗೆ ಬಹುಮಾನ ಘೋಷಿಸುತ್ತಾರೆ.

ಹಿಂದಿನ ಕಾಲದಲ್ಲಿ ನಾಟಿ ಆದ ನಂತರ ಪ್ರತಿ ಗ್ರಾಮದಲ್ಲಿ ನಾಟಿ ಓಟ ನಡೆಯುತ್ತಿತ್ತು. ಇದರಲ್ಲಿ ವಿಜೇತರಾದವರಿಗೆ ಮೊದಲ ಬಹುಮಾನವಾಗಿ ಬಾಳೆಗೊನೆ, ಎರಡನೇ ಬಹುಮಾನವಾಗಿ ತೆಂಗಿನಕಾಯಿ ಹಾಗೂ ಮೂರನೇ ಬಹುಮಾನವಾಗಿ ವೀಳ್ಯೆದೆಲೆ ನೀಡಿ ಗೌರವಿಸಲಾಗುತ್ತಿತ್ತು. ಕಾಲಾನುಕ್ರಮದಲ್ಲಿ ಇದೇ ಮುಂದುವರಿದು ಕೆಸರುಗದ್ದೆ ಕ್ರೀಡಾಕೂಟ ಎಂದಾಯಿತು. ಮೊದಲು ನಾಟಿ ಓಟ ಮಾತ್ರ ನಡೆಯುತ್ತಿತ್ತು. ಆದರೆ ಇದೀಗ ನಾಟಿ ಓಟದೊಂದಿಗೆ ನಾನಾ ಕ್ರೀಡಾಕೂಟಗಳು ನಡೆಯುವುದರೊಂದಿಗೆ ಕ್ರೀಡಾ ಪ್ರತಿಭೆಗಳಿಗೆ ಅವಕಾಶ ದೊರೆಯುತ್ತಿದೆ.

” ವಿಶಿಷ್ಟ ಸಂಸ್ಕ ತಿ, ಆಚಾರ-ವಿಚಾರಗಳಿಂದ ಗಮನಸೆಳೆಯುತ್ತಿರುವ ಕೊಡಗಿನಲ್ಲಿ ಗ್ರಾಮೀಣ ಕ್ರೀಡೆಗಳ ಬಗ್ಗೆ ಆಸಕ್ತಿ ಮೂಡಿಸುವ ಉದ್ದೇಶದಿಂದ ಕೆಸರುಗದ್ದೆ ಕ್ರೀಡಾಕೂಟ ಆಯೋಜಿಸಲಾಗುತ್ತದೆ. ಜೊತೆಗೆ ಮರೆಯಾಗುತ್ತಿರುವ ಗ್ರಾಮೀಣ ಸೊಗಡಿನ ಆಟೋಟಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕೆಸರು ಗದ್ದೆ ಕ್ರೀಡಾಕೂಟವನ್ನು ಆಯೋಜನೆ ಮಾಡಲಾಗುತ್ತಿದೆ.”

-ಚಂದ್ರಕಾಂತ್, ಆಯೋಜಕರು, ಫಾರ್ಮರ್ಸ್ ಕ್ಲಬ್ , ತಾಳತ್ತಮನೆ

” ಮಳೆಗಾಲದ ಕೆಸರಿನ ಆಟದ ಮಜವೇ ಬೇರೆ. ಊರಿನವರೆಲ್ಲಸೇರಿ, ನೆರೆ ಊರವರನ್ನು ಸೇರಿಸಿ  ಕೊಂಡು ಮಕ್ಕಳು, ಮಹಿಳೆಯರು, ಪುರುಷರು, ವೃದ್ಧರು ಎನ್ನದೇ ಎಲ್ಲರೂ ಒಂದೆಡೆ ಕೆಸರಿನಲ್ಲಿ ಎದ್ದು ಬಿದ್ದು ಆಟ ಆಡುತ್ತಿದ್ದರೆ ಅದನ್ನು ವರ್ಣಿಸಲಾಗದು. ಗ್ರಾಮಸ್ಥರೆಲ್ಲರೂ ಸೇರಲು ಇಂತಹ ಕ್ರೀಡಾಕೂಟ ಸಹಕಾರಿ. ಇಂತಹ ಕ್ರೀಡಾಕೂಟಗಳು ಇನ್ನು ಹೆಚ್ಚಾಗಿ ಆಯೋಜನೆ ಗೊಳ್ಳುವಂತಾಗಬೇಕು.”

-ಸೌಮ್ಯ ಪ್ರೀತಮ್, ಸ್ಪರ್ಧಿ

ಆಂದೋಲನ ಡೆಸ್ಕ್

Recent Posts

ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 1700ಕ್ಕೆ ಏರಿಕೆ

ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…

10 mins ago

ರಾಜಸ್ಥಾನದಲ್ಲಿ ಪ್ಯಾರಾಮೆಡಿಕಲ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ನಾಲ್ವರು ಅರೆಸ್ಟ್‌

ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್‌ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್‌ ಮೇಲೆ ಪೊಲೀಸರು…

22 mins ago

ಎಸ್‌ಐಆರ್‌ ಬಗ್ಗೆ ಗಾಬರಿ ಬೇಡ: ಬಾನು ಮುಷ್ತಾಕ್‌

ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌…

54 mins ago

ನಾಡಿನ ಖ್ಯಾತ ಕಲಾವಿದ ಕೆ.ಟಿ.ಶಿವಪ್ರಸಾದ್‌ ನಿಧನ

ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ‌ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…

2 hours ago

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

2 hours ago

ಅಪ್ಪಟ ಸಮಾಜವಾದಿ, ಗುಡಿಸಲೂ ಇರದಿದ್ದ ಜೋಗಿ ಕಿಶನ್ ಪಟ್ನಾಯಕ್

ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…

10 hours ago