Andolana originals

ಹಲಸಿನ ತೊಳೆಯ ಕುಮಾರಣ್ಣ

• ರಂಗಸ್ವಾಮಿ ಸಂತೆಬಾಚಳ್ಳಿ

ಕೆ.ಆ‌ರ್.ಪೇಟೆ ತಾಲ್ಲೂಕು ಸಂತೆ ಬಾಚಳ್ಳಿಯ ಕುಮಾರಣ್ಣ ಓದಿದ್ದು ಎಂಟನೇ ತರಗತಿ. ಬಾಲ್ಯದಲ್ಲಿಯೇ ಎದುರಾದ ಕಣ್ಣಿನ ದೋಷ ಮತ್ತು ಕಡು ಬಡತನ. ತಂದೆಯ ಜೊತೆ ಹಲಸಿನ ಹಣ್ಣು ಕೊಯ್ದು ಮಾರುವುದು, ಸಂಜೆಯ ಸಮಯ ವಡೆ ಬೋಂಡಾ ಮಾಡಿ ಮಾರುವುದು ಇವರ ನಿತ್ಯದ ಬದುಕಾಯಿತು.

ಕಬಡ್ಡಿ ಎಂದರೆ ಚಿಕ್ಕಂದಿನಿಂದ ಪ್ರಿಯವಾಗಿದ್ದ ಕಾರಣ ಈಗಲೂ ಶಾಲಾ ಮೈದಾನಕ್ಕೆ ಹೋಗು ವುದು, ಮಕ್ಕಳ ಜೊತೆ ಕಬಡ್ಡಿ ಆಡುವುದು, ಸುತ್ತಮುತ್ತ ಜಾತ್ರೆಗಳಲ್ಲಿ ಕಬಡ್ಡಿಯ ಆಟ ಏರ್ಪಡಿಸಿದರೆ, ಅತ್ಯುತ್ತಮವಾಗಿ ರೈಡ್ ಮಾಡುತ್ತಾರೆ. ತಂದೆ ಮಾಡಿದ ಮಿಠಾಯಿ, ಹಲಸಿನ ತೊಳೆಗಳನ್ನು ತಟ್ಟೆಯಲ್ಲಿ ಇಟ್ಟುಕೊಂಡು ಹೊರಟರೆ, ಮಿಡ್ಸ್ ಸ್ಕೂಲ್, ಹೈಸ್ಕೂಲ್ ಮೈದಾನ ಗಳಲ್ಲಿ ಮಾರುತ್ತಾ, ಮಕ್ಕಳ ಜೊತೆ ದಿನನಿತ್ಯ ಆಟಗಳನ್ನು ಆಡುತ್ತಾ, ಅಲ್ಲಿ ರುವ ದೈಹಿಕ ಶಿಕ್ಷಕರನ್ನು ಮನವೊಲಿಸಿ ಕೊಂಡು ಮಕ್ಕಳಿಗೂ ಕಲಿಸುತ್ತಾ ಜೀವನ ಪ್ರಾರಂಭಿಸುತ್ತಾರೆ. ಮಕ್ಕಳ ಕ್ರೀಡಾಕೂಟ ತಾಲ್ಲೂಕು ಮಟ್ಟ, ಜಿಲ್ಲಾಮಟ್ಟ ರಾಜ್ಯಮಟ್ಟ ಎಲ್ಲೇ ನಡೆದರೂ, ಅಲ್ಲಿಗೆ ಮಕ್ಕಳನ್ನು ಶಿಕ್ಷಕರ ಜೊತೆ ಕರೆದುಕೊಂಡು ಹೋಗಿ, ಮಕ್ಕಳನ್ನು ಪ್ರೋತ್ಸಾಹಿಸುವ ಕ್ರೀಡಾ ಪ್ರೇಮಿ ಇವರು.

ಪ್ರತಿನಿತ್ಯ ವ್ಯಾಪಾರದಿಂದ ಉಳಿಯುವ ಚಿಲ್ಲರೆ ಕಾಸು ಗಂಜಿಯನ್ನಕ್ಕೆ ಮಾತ್ರ ಸೀಮಿತವಾಗಿರುತ್ತದೆ. ಸುಮಾರು 45 ವರ್ಷಗಳಿಂದ ಇವರ ಜೀವನ ನಡೆದು ಬಂದಿರುವುದೇ ಹೀಗೆ.

ಶಾಲಾಮಕ್ಕಳಿಗೆ ಕೋಲಾಟ ಹಾಡುಗಳು, ನಾಟಕ ಗೀತೆಗಳನ್ನು ನೃತ್ಯ ಭಂಗಿಯ ಜೊತೆಗೆ ಕಲಿಸಿಕೊಡುತ್ತಾರೆ. ಬಿಡುವಾಯಿತೆಂದರೆ ಹಳ್ಳಿಗಳಲ್ಲಿ ನಡೆಯುವ ಶನಿ ಮಹಾತ್ರೆಯ ನಾಟಕದ ಅನೇಕ ಪಾತ್ರಗಳಿಗಾಗಿ ರಂಗವೇರಿದ್ದಾರೆ. ಇವರ ಕಣ್ಣು ಮಂಜಾಗಿದ್ದರೂ ಜೀವನ ಪರ್ಯಂತ ಕಲಾ ಸೇವೆ ಯನ್ನು ಮಾಡುವ ಕಾಯಕ ಮಾತ್ರ ನಿರಂತರ ಸಾಗುತ್ತಿದೆ. ಅಂತರರಾಷ್ಟ್ರೀಯ ಬ್ಯಾಸ್ಕೆಟ್ ಬಾಲ್ ಪಟು ಸವಿತಾ, ರಾಷ್ಟ್ರಮಟ್ಟದ ಕಿಕ್ ಬಾಕ್ಸಿಂಗ್ ಪಟು ರೋಹಿತ್ ಗೌಡ, ರಾಜ್ಯ ಮಟ್ಟದ ಆಟಗಾರರಾದ ಪ್ರೇಮ, ಪವಿತ್ರ, ನಂದನ್ ಕುಮಾ‌ರ್ ಸೇರಿದಂತೆ ಅನೇಕ ವಿದ್ಯಾರ್ಥಿಗಳ ಪ್ರತಿಭೆಗೆ ಸ್ಫೂರ್ತಿ ತುಂಬಿದ ಕೀರ್ತಿ ಇವರಿಗೆ ಸಲ್ಲುತ್ತದೆ.

ಸಂತೆಬಾಚಳ್ಳಿಯ ಬಸ್‌ಸ್ಟ್ಯಾಂಡ್ ಸರ್ಕಲ್‌ನಲ್ಲಿ ಪುಟ್ಟ ಚಿಲ್ಲರೆ ಅಂಗಡಿ ಇಟ್ಟುಕೊಂಡು ಬದುಕು ಸಾಗಿಸುತ್ತಿರುವ ಇವರಿಗೆ ಪುಟ್ಟ ಶೀಟಿನ ಮನೆ ಬಿಟ್ಟರೆ ಯಾವ ಆಸ್ತಿಯೂ ಇಲ್ಲ. ಒಂಟಿ ಜೀವನದ ಬದುಕಿನಲ್ಲಿ ಇವರ ಆಸ್ತಿಯೆಂದರೆ ಸಾವಿರಾರು ಮಕ್ಕಳ ಪ್ರೀತಿ ಮತ್ತು ಕೃತಜ್ಞತೆ.

msnehaswamy rangaswamy@gmail.com

ಆಂದೋಲನ ಡೆಸ್ಕ್

Recent Posts

ಮಹಾಶಿವರಾತ್ರಿ ಜಾತ್ರೆಯ ಸಂಭ್ರಮ: ಮಲೆ ಮಹದೇಶ್ವರ ಬೆಟ್ಟಕ್ಕೆ ದ್ವಿಚಕ್ರ, ತ್ರಿಚಕ್ರ ವಾಹನಗಳ ಪ್ರವೇಶಕ್ಕೆ ಬ್ರೇಕ್‌

ಹನೂರು: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಮಹಾಶಿವರಾತ್ರಿ ಜಾತ್ರೆಯ ಹಿನ್ನೆಲೆಯಲ್ಲಿ ದ್ವಿಚಕ್ರ ಹಾಗೂ…

11 mins ago

ಭಕ್ತರ ಸುರಕ್ಷತೆಗೆ ಹೆಚ್ಚಿನ ಸಿಬ್ಬಂದಿ ನಿಯೋಜಿಸಿ: ಶಾಸಕ ಮಂಜುನಾಥ್ ಸೂಚನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಫೆಬ್ರವರಿ.14ರಿಂದ ಆರಂಭಗೊಳ್ಳಲಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸಕ್ಕೆ ಲಕ್ಷಾಂತರ ಮಂದಿ ಭಕ್ತರು…

33 mins ago

ಬಾಲ್ಯವಿವಾಹದ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಜಾಗೃತಿ ಜಾಥಾ

ಮೈಸೂರು: ಮೈಸೂರು ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತ ಮಾದರಿ ಜಿಲ್ಲೆಯನ್ನಾಗಿಸುವ ಗುರಿಯೊಂದಿಗೆ ಇಂದು ಬಾಲ್ಯವಿವಾಹದ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು…

57 mins ago

ಓದುಗರ ಪತ್ರ: ಸುಂಕ ಕದನಕೆ ತೆರೆ!

ಸುಂಕ ಕದನಕೆ ತೆರೆ! ಕೊನೆಗೂ ಭಾರತ ಅಮೆರಿಕ ಜಂಟಿಯಾಗಿ ಒಪ್ಪಂದಕೆ ಬಂದಿವೆ ಆಮದು ಸುಂಕ ಕಡಿತಗೊಳಿಸಲು ತೆರೆ ಬಿದ್ದಿದೆ ಸುಂಕ…

6 hours ago

ಓದುಗರ ಪತ್ರ: ಶಾಲೆಗೆ ಸುತ್ತುಗೋಡೆ ನಿರ್ಮಿಸಿ

ನಂಜನಗೂಡು ತಾಲ್ಲೂಕಿನ ಕಾರ್ಯ ಗ್ರಾಮದಲ್ಲಿ ರಸ್ತೆಯ ಪಕ್ಕದಲ್ಲೇ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಿದೆ. ಶಾಲೆಗೆ ಸುತ್ತುಗೋಡೆ ಇಲ್ಲದ ಕಾರಣ ಶಾಲೆಯಿಂದ…

6 hours ago

ಓದುಗರ ಪತ್ರ: ಜಿಲ್ಲಾ ನ್ಯಾಯಾಲಯಗಳಿಗೆ ಬಸ್ ಸೌಲಭ್ಯ ಕಲ್ಪಿಸಿ

ಮೈಸೂರಿನ ಜಿಲ್ಲಾ ನ್ಯಾಯಾಲಯಗಳಿಗೆ ಸಾಕಷ್ಟು ಬಸ್ ಸೌಲಭ್ಯವಿಲ್ಲದೆ ನ್ಯಾಯಾಲಯದ ಕಲಾಪಗಳಿಗೆ ಬರುವ ವಕೀಲರು ಹಾಗೂ ಕಕ್ಷಿದಾರರಿಗೆ ತೀವ್ರ ತೊಂದರೆಯಾಗಿದೆ. ನಗರ…

6 hours ago