Andolana originals

ಹಲಸಿನ ತೊಳೆಯ ಕುಮಾರಣ್ಣ

• ರಂಗಸ್ವಾಮಿ ಸಂತೆಬಾಚಳ್ಳಿ

ಕೆ.ಆ‌ರ್.ಪೇಟೆ ತಾಲ್ಲೂಕು ಸಂತೆ ಬಾಚಳ್ಳಿಯ ಕುಮಾರಣ್ಣ ಓದಿದ್ದು ಎಂಟನೇ ತರಗತಿ. ಬಾಲ್ಯದಲ್ಲಿಯೇ ಎದುರಾದ ಕಣ್ಣಿನ ದೋಷ ಮತ್ತು ಕಡು ಬಡತನ. ತಂದೆಯ ಜೊತೆ ಹಲಸಿನ ಹಣ್ಣು ಕೊಯ್ದು ಮಾರುವುದು, ಸಂಜೆಯ ಸಮಯ ವಡೆ ಬೋಂಡಾ ಮಾಡಿ ಮಾರುವುದು ಇವರ ನಿತ್ಯದ ಬದುಕಾಯಿತು.

ಕಬಡ್ಡಿ ಎಂದರೆ ಚಿಕ್ಕಂದಿನಿಂದ ಪ್ರಿಯವಾಗಿದ್ದ ಕಾರಣ ಈಗಲೂ ಶಾಲಾ ಮೈದಾನಕ್ಕೆ ಹೋಗು ವುದು, ಮಕ್ಕಳ ಜೊತೆ ಕಬಡ್ಡಿ ಆಡುವುದು, ಸುತ್ತಮುತ್ತ ಜಾತ್ರೆಗಳಲ್ಲಿ ಕಬಡ್ಡಿಯ ಆಟ ಏರ್ಪಡಿಸಿದರೆ, ಅತ್ಯುತ್ತಮವಾಗಿ ರೈಡ್ ಮಾಡುತ್ತಾರೆ. ತಂದೆ ಮಾಡಿದ ಮಿಠಾಯಿ, ಹಲಸಿನ ತೊಳೆಗಳನ್ನು ತಟ್ಟೆಯಲ್ಲಿ ಇಟ್ಟುಕೊಂಡು ಹೊರಟರೆ, ಮಿಡ್ಸ್ ಸ್ಕೂಲ್, ಹೈಸ್ಕೂಲ್ ಮೈದಾನ ಗಳಲ್ಲಿ ಮಾರುತ್ತಾ, ಮಕ್ಕಳ ಜೊತೆ ದಿನನಿತ್ಯ ಆಟಗಳನ್ನು ಆಡುತ್ತಾ, ಅಲ್ಲಿ ರುವ ದೈಹಿಕ ಶಿಕ್ಷಕರನ್ನು ಮನವೊಲಿಸಿ ಕೊಂಡು ಮಕ್ಕಳಿಗೂ ಕಲಿಸುತ್ತಾ ಜೀವನ ಪ್ರಾರಂಭಿಸುತ್ತಾರೆ. ಮಕ್ಕಳ ಕ್ರೀಡಾಕೂಟ ತಾಲ್ಲೂಕು ಮಟ್ಟ, ಜಿಲ್ಲಾಮಟ್ಟ ರಾಜ್ಯಮಟ್ಟ ಎಲ್ಲೇ ನಡೆದರೂ, ಅಲ್ಲಿಗೆ ಮಕ್ಕಳನ್ನು ಶಿಕ್ಷಕರ ಜೊತೆ ಕರೆದುಕೊಂಡು ಹೋಗಿ, ಮಕ್ಕಳನ್ನು ಪ್ರೋತ್ಸಾಹಿಸುವ ಕ್ರೀಡಾ ಪ್ರೇಮಿ ಇವರು.

ಪ್ರತಿನಿತ್ಯ ವ್ಯಾಪಾರದಿಂದ ಉಳಿಯುವ ಚಿಲ್ಲರೆ ಕಾಸು ಗಂಜಿಯನ್ನಕ್ಕೆ ಮಾತ್ರ ಸೀಮಿತವಾಗಿರುತ್ತದೆ. ಸುಮಾರು 45 ವರ್ಷಗಳಿಂದ ಇವರ ಜೀವನ ನಡೆದು ಬಂದಿರುವುದೇ ಹೀಗೆ.

ಶಾಲಾಮಕ್ಕಳಿಗೆ ಕೋಲಾಟ ಹಾಡುಗಳು, ನಾಟಕ ಗೀತೆಗಳನ್ನು ನೃತ್ಯ ಭಂಗಿಯ ಜೊತೆಗೆ ಕಲಿಸಿಕೊಡುತ್ತಾರೆ. ಬಿಡುವಾಯಿತೆಂದರೆ ಹಳ್ಳಿಗಳಲ್ಲಿ ನಡೆಯುವ ಶನಿ ಮಹಾತ್ರೆಯ ನಾಟಕದ ಅನೇಕ ಪಾತ್ರಗಳಿಗಾಗಿ ರಂಗವೇರಿದ್ದಾರೆ. ಇವರ ಕಣ್ಣು ಮಂಜಾಗಿದ್ದರೂ ಜೀವನ ಪರ್ಯಂತ ಕಲಾ ಸೇವೆ ಯನ್ನು ಮಾಡುವ ಕಾಯಕ ಮಾತ್ರ ನಿರಂತರ ಸಾಗುತ್ತಿದೆ. ಅಂತರರಾಷ್ಟ್ರೀಯ ಬ್ಯಾಸ್ಕೆಟ್ ಬಾಲ್ ಪಟು ಸವಿತಾ, ರಾಷ್ಟ್ರಮಟ್ಟದ ಕಿಕ್ ಬಾಕ್ಸಿಂಗ್ ಪಟು ರೋಹಿತ್ ಗೌಡ, ರಾಜ್ಯ ಮಟ್ಟದ ಆಟಗಾರರಾದ ಪ್ರೇಮ, ಪವಿತ್ರ, ನಂದನ್ ಕುಮಾ‌ರ್ ಸೇರಿದಂತೆ ಅನೇಕ ವಿದ್ಯಾರ್ಥಿಗಳ ಪ್ರತಿಭೆಗೆ ಸ್ಫೂರ್ತಿ ತುಂಬಿದ ಕೀರ್ತಿ ಇವರಿಗೆ ಸಲ್ಲುತ್ತದೆ.

ಸಂತೆಬಾಚಳ್ಳಿಯ ಬಸ್‌ಸ್ಟ್ಯಾಂಡ್ ಸರ್ಕಲ್‌ನಲ್ಲಿ ಪುಟ್ಟ ಚಿಲ್ಲರೆ ಅಂಗಡಿ ಇಟ್ಟುಕೊಂಡು ಬದುಕು ಸಾಗಿಸುತ್ತಿರುವ ಇವರಿಗೆ ಪುಟ್ಟ ಶೀಟಿನ ಮನೆ ಬಿಟ್ಟರೆ ಯಾವ ಆಸ್ತಿಯೂ ಇಲ್ಲ. ಒಂಟಿ ಜೀವನದ ಬದುಕಿನಲ್ಲಿ ಇವರ ಆಸ್ತಿಯೆಂದರೆ ಸಾವಿರಾರು ಮಕ್ಕಳ ಪ್ರೀತಿ ಮತ್ತು ಕೃತಜ್ಞತೆ.

msnehaswamy rangaswamy@gmail.com

ಆಂದೋಲನ ಡೆಸ್ಕ್

Recent Posts

ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧಿಸಲ್ಲ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…

56 mins ago

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ರಾಬರ್ಟ್‌ ವಾದ್ರಾ

ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್‌ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…

3 hours ago

ಇಂದು ರಾತ್ರಿ ದೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾತ್ರಿ 8.30ಕ್ಕೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಕುರಿತ…

3 hours ago

ಹಾಸನ: ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ

ಹಾಸನ: ಬೇಲೂರು ತಾಲ್ಲೂಕಿನ ಕಾನಳ್ಳಿ ಅರಣ್ಯ ಪ್ರದೇಶದಲ್ಲಿದ್ದ ದೈತ್ಯಾಕಾರದ ನರಹಂತಕ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ. ಮೂರನೇ…

4 hours ago

ಏಪ್ರಿಲ್.‌20ರಿಂದ ಸಿಎಂ ಸಿದ್ದರಾಮಯ್ಯ ಮೈಸೂರು, ಚಾಮರಾಜನಗರ ಜಿಲ್ಲಾ ಪ್ರವಾಸ

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಏಪ್ರಿಲ್.‌20 ಹಾಗೂ 21ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಏಪ್ರಿಲ್.‌20ರಂದು ಬೆಳಿಗ್ಗೆ ವಿಶೇಷ ವಿಮಾನದಲ್ಲಿ ಮೈಸೂರಿಗೆ…

4 hours ago

ತಿದ್ದುಪಡಿ ಮಸೂದೆಗೆ ಸೋಲು: ಕರಾಳ ಇತಿಹಾಸ ಮರುಕಳಿಸಲಿದೆ ಎಂದ ಎಚ್.ಡಿ.ಕುಮಾರಸ್ವಾಮಿ ಕಿಡಿ

ನವದೆಹಲಿ: ತಿದ್ದುಪಡಿ ಮಸೂದೆ ಸೋಲುವ ಮೂಲಕ ಲೋಕಸಭೆಯಲ್ಲಿ ಮೂವತ್ತು ವರ್ಷಗಳ ಹಿಂದಿನ ಕರಾಳ ಇತಿಹಾಸ ಮತ್ತೆ ಮರುಕಳಿಸಿದೆ ಎಂದು ಕೇಂದ್ರ…

5 hours ago