Andolana originals

ಹಲಸಿನ ತೊಳೆಯ ಕುಮಾರಣ್ಣ

• ರಂಗಸ್ವಾಮಿ ಸಂತೆಬಾಚಳ್ಳಿ

ಕೆ.ಆ‌ರ್.ಪೇಟೆ ತಾಲ್ಲೂಕು ಸಂತೆ ಬಾಚಳ್ಳಿಯ ಕುಮಾರಣ್ಣ ಓದಿದ್ದು ಎಂಟನೇ ತರಗತಿ. ಬಾಲ್ಯದಲ್ಲಿಯೇ ಎದುರಾದ ಕಣ್ಣಿನ ದೋಷ ಮತ್ತು ಕಡು ಬಡತನ. ತಂದೆಯ ಜೊತೆ ಹಲಸಿನ ಹಣ್ಣು ಕೊಯ್ದು ಮಾರುವುದು, ಸಂಜೆಯ ಸಮಯ ವಡೆ ಬೋಂಡಾ ಮಾಡಿ ಮಾರುವುದು ಇವರ ನಿತ್ಯದ ಬದುಕಾಯಿತು.

ಕಬಡ್ಡಿ ಎಂದರೆ ಚಿಕ್ಕಂದಿನಿಂದ ಪ್ರಿಯವಾಗಿದ್ದ ಕಾರಣ ಈಗಲೂ ಶಾಲಾ ಮೈದಾನಕ್ಕೆ ಹೋಗು ವುದು, ಮಕ್ಕಳ ಜೊತೆ ಕಬಡ್ಡಿ ಆಡುವುದು, ಸುತ್ತಮುತ್ತ ಜಾತ್ರೆಗಳಲ್ಲಿ ಕಬಡ್ಡಿಯ ಆಟ ಏರ್ಪಡಿಸಿದರೆ, ಅತ್ಯುತ್ತಮವಾಗಿ ರೈಡ್ ಮಾಡುತ್ತಾರೆ. ತಂದೆ ಮಾಡಿದ ಮಿಠಾಯಿ, ಹಲಸಿನ ತೊಳೆಗಳನ್ನು ತಟ್ಟೆಯಲ್ಲಿ ಇಟ್ಟುಕೊಂಡು ಹೊರಟರೆ, ಮಿಡ್ಸ್ ಸ್ಕೂಲ್, ಹೈಸ್ಕೂಲ್ ಮೈದಾನ ಗಳಲ್ಲಿ ಮಾರುತ್ತಾ, ಮಕ್ಕಳ ಜೊತೆ ದಿನನಿತ್ಯ ಆಟಗಳನ್ನು ಆಡುತ್ತಾ, ಅಲ್ಲಿ ರುವ ದೈಹಿಕ ಶಿಕ್ಷಕರನ್ನು ಮನವೊಲಿಸಿ ಕೊಂಡು ಮಕ್ಕಳಿಗೂ ಕಲಿಸುತ್ತಾ ಜೀವನ ಪ್ರಾರಂಭಿಸುತ್ತಾರೆ. ಮಕ್ಕಳ ಕ್ರೀಡಾಕೂಟ ತಾಲ್ಲೂಕು ಮಟ್ಟ, ಜಿಲ್ಲಾಮಟ್ಟ ರಾಜ್ಯಮಟ್ಟ ಎಲ್ಲೇ ನಡೆದರೂ, ಅಲ್ಲಿಗೆ ಮಕ್ಕಳನ್ನು ಶಿಕ್ಷಕರ ಜೊತೆ ಕರೆದುಕೊಂಡು ಹೋಗಿ, ಮಕ್ಕಳನ್ನು ಪ್ರೋತ್ಸಾಹಿಸುವ ಕ್ರೀಡಾ ಪ್ರೇಮಿ ಇವರು.

ಪ್ರತಿನಿತ್ಯ ವ್ಯಾಪಾರದಿಂದ ಉಳಿಯುವ ಚಿಲ್ಲರೆ ಕಾಸು ಗಂಜಿಯನ್ನಕ್ಕೆ ಮಾತ್ರ ಸೀಮಿತವಾಗಿರುತ್ತದೆ. ಸುಮಾರು 45 ವರ್ಷಗಳಿಂದ ಇವರ ಜೀವನ ನಡೆದು ಬಂದಿರುವುದೇ ಹೀಗೆ.

ಶಾಲಾಮಕ್ಕಳಿಗೆ ಕೋಲಾಟ ಹಾಡುಗಳು, ನಾಟಕ ಗೀತೆಗಳನ್ನು ನೃತ್ಯ ಭಂಗಿಯ ಜೊತೆಗೆ ಕಲಿಸಿಕೊಡುತ್ತಾರೆ. ಬಿಡುವಾಯಿತೆಂದರೆ ಹಳ್ಳಿಗಳಲ್ಲಿ ನಡೆಯುವ ಶನಿ ಮಹಾತ್ರೆಯ ನಾಟಕದ ಅನೇಕ ಪಾತ್ರಗಳಿಗಾಗಿ ರಂಗವೇರಿದ್ದಾರೆ. ಇವರ ಕಣ್ಣು ಮಂಜಾಗಿದ್ದರೂ ಜೀವನ ಪರ್ಯಂತ ಕಲಾ ಸೇವೆ ಯನ್ನು ಮಾಡುವ ಕಾಯಕ ಮಾತ್ರ ನಿರಂತರ ಸಾಗುತ್ತಿದೆ. ಅಂತರರಾಷ್ಟ್ರೀಯ ಬ್ಯಾಸ್ಕೆಟ್ ಬಾಲ್ ಪಟು ಸವಿತಾ, ರಾಷ್ಟ್ರಮಟ್ಟದ ಕಿಕ್ ಬಾಕ್ಸಿಂಗ್ ಪಟು ರೋಹಿತ್ ಗೌಡ, ರಾಜ್ಯ ಮಟ್ಟದ ಆಟಗಾರರಾದ ಪ್ರೇಮ, ಪವಿತ್ರ, ನಂದನ್ ಕುಮಾ‌ರ್ ಸೇರಿದಂತೆ ಅನೇಕ ವಿದ್ಯಾರ್ಥಿಗಳ ಪ್ರತಿಭೆಗೆ ಸ್ಫೂರ್ತಿ ತುಂಬಿದ ಕೀರ್ತಿ ಇವರಿಗೆ ಸಲ್ಲುತ್ತದೆ.

ಸಂತೆಬಾಚಳ್ಳಿಯ ಬಸ್‌ಸ್ಟ್ಯಾಂಡ್ ಸರ್ಕಲ್‌ನಲ್ಲಿ ಪುಟ್ಟ ಚಿಲ್ಲರೆ ಅಂಗಡಿ ಇಟ್ಟುಕೊಂಡು ಬದುಕು ಸಾಗಿಸುತ್ತಿರುವ ಇವರಿಗೆ ಪುಟ್ಟ ಶೀಟಿನ ಮನೆ ಬಿಟ್ಟರೆ ಯಾವ ಆಸ್ತಿಯೂ ಇಲ್ಲ. ಒಂಟಿ ಜೀವನದ ಬದುಕಿನಲ್ಲಿ ಇವರ ಆಸ್ತಿಯೆಂದರೆ ಸಾವಿರಾರು ಮಕ್ಕಳ ಪ್ರೀತಿ ಮತ್ತು ಕೃತಜ್ಞತೆ.

msnehaswamy rangaswamy@gmail.com

ಆಂದೋಲನ ಡೆಸ್ಕ್

Recent Posts

ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ

ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…

3 hours ago

ಅರಮನೆ ಫಲಪುಷ್ಪ ಪ್ರದರ್ಶನ | ಸಂಗೀತ ಸಂಜೆಯಲ್ಲಿ ಪ್ರೇಕ್ಷಕರು ತಲ್ಲೀನ

ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್‌ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…

5 hours ago

ಎತ್ತಿನ ಗಾಡಿಗೆ ಸಾರಿಗೆ ಬಸ್‌ ಡಿಕ್ಕಿ : ಎತ್ತು ಸಾವು

ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…

5 hours ago

ಮುತ್ತತ್ತಿ : ಕಾವೇರಿ ನದಿ ಸೆಳೆತಕ್ಕೆ ಸಿಲುಕಿ ಯುವಕ ಸಾವು

ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…

5 hours ago

ಪೊಲೀಸ್‌ ಭದ್ರತೆಯಲ್ಲಿ ದೇಗುಲ ಪ್ರವೇಶಿಸಿದ ದಲಿತ ಮಹಿಳೆಯರು : ಶಾಂತಿ ಸಭೆಯಲ್ಲಿ ಪಂಚ ಬೇಡಿಕೆ

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…

5 hours ago

ಅಕ್ರಮ ವಿದ್ಯುತ್‌ ಸಂಪರ್ಕ: 31 ಪ್ರಕರಣ ದಾಖಲು, 2.17 ಲಕ್ಷ ರೂ. ದಂಡ

ಮೈಸೂರು : ಅಕ್ರಮವಾಗಿ ವಿದ್ಯುತ್‌ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…

5 hours ago