• ರಂಗಸ್ವಾಮಿ ಸಂತೆಬಾಚಳ್ಳಿ
ಕೆ.ಆರ್.ಪೇಟೆ ತಾಲ್ಲೂಕು ಸಂತೆ ಬಾಚಳ್ಳಿಯ ಕುಮಾರಣ್ಣ ಓದಿದ್ದು ಎಂಟನೇ ತರಗತಿ. ಬಾಲ್ಯದಲ್ಲಿಯೇ ಎದುರಾದ ಕಣ್ಣಿನ ದೋಷ ಮತ್ತು ಕಡು ಬಡತನ. ತಂದೆಯ ಜೊತೆ ಹಲಸಿನ ಹಣ್ಣು ಕೊಯ್ದು ಮಾರುವುದು, ಸಂಜೆಯ ಸಮಯ ವಡೆ ಬೋಂಡಾ ಮಾಡಿ ಮಾರುವುದು ಇವರ ನಿತ್ಯದ ಬದುಕಾಯಿತು.
ಕಬಡ್ಡಿ ಎಂದರೆ ಚಿಕ್ಕಂದಿನಿಂದ ಪ್ರಿಯವಾಗಿದ್ದ ಕಾರಣ ಈಗಲೂ ಶಾಲಾ ಮೈದಾನಕ್ಕೆ ಹೋಗು ವುದು, ಮಕ್ಕಳ ಜೊತೆ ಕಬಡ್ಡಿ ಆಡುವುದು, ಸುತ್ತಮುತ್ತ ಜಾತ್ರೆಗಳಲ್ಲಿ ಕಬಡ್ಡಿಯ ಆಟ ಏರ್ಪಡಿಸಿದರೆ, ಅತ್ಯುತ್ತಮವಾಗಿ ರೈಡ್ ಮಾಡುತ್ತಾರೆ. ತಂದೆ ಮಾಡಿದ ಮಿಠಾಯಿ, ಹಲಸಿನ ತೊಳೆಗಳನ್ನು ತಟ್ಟೆಯಲ್ಲಿ ಇಟ್ಟುಕೊಂಡು ಹೊರಟರೆ, ಮಿಡ್ಸ್ ಸ್ಕೂಲ್, ಹೈಸ್ಕೂಲ್ ಮೈದಾನ ಗಳಲ್ಲಿ ಮಾರುತ್ತಾ, ಮಕ್ಕಳ ಜೊತೆ ದಿನನಿತ್ಯ ಆಟಗಳನ್ನು ಆಡುತ್ತಾ, ಅಲ್ಲಿ ರುವ ದೈಹಿಕ ಶಿಕ್ಷಕರನ್ನು ಮನವೊಲಿಸಿ ಕೊಂಡು ಮಕ್ಕಳಿಗೂ ಕಲಿಸುತ್ತಾ ಜೀವನ ಪ್ರಾರಂಭಿಸುತ್ತಾರೆ. ಮಕ್ಕಳ ಕ್ರೀಡಾಕೂಟ ತಾಲ್ಲೂಕು ಮಟ್ಟ, ಜಿಲ್ಲಾಮಟ್ಟ ರಾಜ್ಯಮಟ್ಟ ಎಲ್ಲೇ ನಡೆದರೂ, ಅಲ್ಲಿಗೆ ಮಕ್ಕಳನ್ನು ಶಿಕ್ಷಕರ ಜೊತೆ ಕರೆದುಕೊಂಡು ಹೋಗಿ, ಮಕ್ಕಳನ್ನು ಪ್ರೋತ್ಸಾಹಿಸುವ ಕ್ರೀಡಾ ಪ್ರೇಮಿ ಇವರು.
ಪ್ರತಿನಿತ್ಯ ವ್ಯಾಪಾರದಿಂದ ಉಳಿಯುವ ಚಿಲ್ಲರೆ ಕಾಸು ಗಂಜಿಯನ್ನಕ್ಕೆ ಮಾತ್ರ ಸೀಮಿತವಾಗಿರುತ್ತದೆ. ಸುಮಾರು 45 ವರ್ಷಗಳಿಂದ ಇವರ ಜೀವನ ನಡೆದು ಬಂದಿರುವುದೇ ಹೀಗೆ.
ಶಾಲಾಮಕ್ಕಳಿಗೆ ಕೋಲಾಟ ಹಾಡುಗಳು, ನಾಟಕ ಗೀತೆಗಳನ್ನು ನೃತ್ಯ ಭಂಗಿಯ ಜೊತೆಗೆ ಕಲಿಸಿಕೊಡುತ್ತಾರೆ. ಬಿಡುವಾಯಿತೆಂದರೆ ಹಳ್ಳಿಗಳಲ್ಲಿ ನಡೆಯುವ ಶನಿ ಮಹಾತ್ರೆಯ ನಾಟಕದ ಅನೇಕ ಪಾತ್ರಗಳಿಗಾಗಿ ರಂಗವೇರಿದ್ದಾರೆ. ಇವರ ಕಣ್ಣು ಮಂಜಾಗಿದ್ದರೂ ಜೀವನ ಪರ್ಯಂತ ಕಲಾ ಸೇವೆ ಯನ್ನು ಮಾಡುವ ಕಾಯಕ ಮಾತ್ರ ನಿರಂತರ ಸಾಗುತ್ತಿದೆ. ಅಂತರರಾಷ್ಟ್ರೀಯ ಬ್ಯಾಸ್ಕೆಟ್ ಬಾಲ್ ಪಟು ಸವಿತಾ, ರಾಷ್ಟ್ರಮಟ್ಟದ ಕಿಕ್ ಬಾಕ್ಸಿಂಗ್ ಪಟು ರೋಹಿತ್ ಗೌಡ, ರಾಜ್ಯ ಮಟ್ಟದ ಆಟಗಾರರಾದ ಪ್ರೇಮ, ಪವಿತ್ರ, ನಂದನ್ ಕುಮಾರ್ ಸೇರಿದಂತೆ ಅನೇಕ ವಿದ್ಯಾರ್ಥಿಗಳ ಪ್ರತಿಭೆಗೆ ಸ್ಫೂರ್ತಿ ತುಂಬಿದ ಕೀರ್ತಿ ಇವರಿಗೆ ಸಲ್ಲುತ್ತದೆ.
ಸಂತೆಬಾಚಳ್ಳಿಯ ಬಸ್ಸ್ಟ್ಯಾಂಡ್ ಸರ್ಕಲ್ನಲ್ಲಿ ಪುಟ್ಟ ಚಿಲ್ಲರೆ ಅಂಗಡಿ ಇಟ್ಟುಕೊಂಡು ಬದುಕು ಸಾಗಿಸುತ್ತಿರುವ ಇವರಿಗೆ ಪುಟ್ಟ ಶೀಟಿನ ಮನೆ ಬಿಟ್ಟರೆ ಯಾವ ಆಸ್ತಿಯೂ ಇಲ್ಲ. ಒಂಟಿ ಜೀವನದ ಬದುಕಿನಲ್ಲಿ ಇವರ ಆಸ್ತಿಯೆಂದರೆ ಸಾವಿರಾರು ಮಕ್ಕಳ ಪ್ರೀತಿ ಮತ್ತು ಕೃತಜ್ಞತೆ.
msnehaswamy rangaswamy@gmail.com
ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…
ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…
ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…
ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…
ನವದೆಹಲಿ: ತಿಪಟೂರು ಕಾಂಗ್ರೆಸ್ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…