Andolana originals

ಹಲಸಿನ ತೊಳೆಯ ಕುಮಾರಣ್ಣ

• ರಂಗಸ್ವಾಮಿ ಸಂತೆಬಾಚಳ್ಳಿ

ಕೆ.ಆ‌ರ್.ಪೇಟೆ ತಾಲ್ಲೂಕು ಸಂತೆ ಬಾಚಳ್ಳಿಯ ಕುಮಾರಣ್ಣ ಓದಿದ್ದು ಎಂಟನೇ ತರಗತಿ. ಬಾಲ್ಯದಲ್ಲಿಯೇ ಎದುರಾದ ಕಣ್ಣಿನ ದೋಷ ಮತ್ತು ಕಡು ಬಡತನ. ತಂದೆಯ ಜೊತೆ ಹಲಸಿನ ಹಣ್ಣು ಕೊಯ್ದು ಮಾರುವುದು, ಸಂಜೆಯ ಸಮಯ ವಡೆ ಬೋಂಡಾ ಮಾಡಿ ಮಾರುವುದು ಇವರ ನಿತ್ಯದ ಬದುಕಾಯಿತು.

ಕಬಡ್ಡಿ ಎಂದರೆ ಚಿಕ್ಕಂದಿನಿಂದ ಪ್ರಿಯವಾಗಿದ್ದ ಕಾರಣ ಈಗಲೂ ಶಾಲಾ ಮೈದಾನಕ್ಕೆ ಹೋಗು ವುದು, ಮಕ್ಕಳ ಜೊತೆ ಕಬಡ್ಡಿ ಆಡುವುದು, ಸುತ್ತಮುತ್ತ ಜಾತ್ರೆಗಳಲ್ಲಿ ಕಬಡ್ಡಿಯ ಆಟ ಏರ್ಪಡಿಸಿದರೆ, ಅತ್ಯುತ್ತಮವಾಗಿ ರೈಡ್ ಮಾಡುತ್ತಾರೆ. ತಂದೆ ಮಾಡಿದ ಮಿಠಾಯಿ, ಹಲಸಿನ ತೊಳೆಗಳನ್ನು ತಟ್ಟೆಯಲ್ಲಿ ಇಟ್ಟುಕೊಂಡು ಹೊರಟರೆ, ಮಿಡ್ಸ್ ಸ್ಕೂಲ್, ಹೈಸ್ಕೂಲ್ ಮೈದಾನ ಗಳಲ್ಲಿ ಮಾರುತ್ತಾ, ಮಕ್ಕಳ ಜೊತೆ ದಿನನಿತ್ಯ ಆಟಗಳನ್ನು ಆಡುತ್ತಾ, ಅಲ್ಲಿ ರುವ ದೈಹಿಕ ಶಿಕ್ಷಕರನ್ನು ಮನವೊಲಿಸಿ ಕೊಂಡು ಮಕ್ಕಳಿಗೂ ಕಲಿಸುತ್ತಾ ಜೀವನ ಪ್ರಾರಂಭಿಸುತ್ತಾರೆ. ಮಕ್ಕಳ ಕ್ರೀಡಾಕೂಟ ತಾಲ್ಲೂಕು ಮಟ್ಟ, ಜಿಲ್ಲಾಮಟ್ಟ ರಾಜ್ಯಮಟ್ಟ ಎಲ್ಲೇ ನಡೆದರೂ, ಅಲ್ಲಿಗೆ ಮಕ್ಕಳನ್ನು ಶಿಕ್ಷಕರ ಜೊತೆ ಕರೆದುಕೊಂಡು ಹೋಗಿ, ಮಕ್ಕಳನ್ನು ಪ್ರೋತ್ಸಾಹಿಸುವ ಕ್ರೀಡಾ ಪ್ರೇಮಿ ಇವರು.

ಪ್ರತಿನಿತ್ಯ ವ್ಯಾಪಾರದಿಂದ ಉಳಿಯುವ ಚಿಲ್ಲರೆ ಕಾಸು ಗಂಜಿಯನ್ನಕ್ಕೆ ಮಾತ್ರ ಸೀಮಿತವಾಗಿರುತ್ತದೆ. ಸುಮಾರು 45 ವರ್ಷಗಳಿಂದ ಇವರ ಜೀವನ ನಡೆದು ಬಂದಿರುವುದೇ ಹೀಗೆ.

ಶಾಲಾಮಕ್ಕಳಿಗೆ ಕೋಲಾಟ ಹಾಡುಗಳು, ನಾಟಕ ಗೀತೆಗಳನ್ನು ನೃತ್ಯ ಭಂಗಿಯ ಜೊತೆಗೆ ಕಲಿಸಿಕೊಡುತ್ತಾರೆ. ಬಿಡುವಾಯಿತೆಂದರೆ ಹಳ್ಳಿಗಳಲ್ಲಿ ನಡೆಯುವ ಶನಿ ಮಹಾತ್ರೆಯ ನಾಟಕದ ಅನೇಕ ಪಾತ್ರಗಳಿಗಾಗಿ ರಂಗವೇರಿದ್ದಾರೆ. ಇವರ ಕಣ್ಣು ಮಂಜಾಗಿದ್ದರೂ ಜೀವನ ಪರ್ಯಂತ ಕಲಾ ಸೇವೆ ಯನ್ನು ಮಾಡುವ ಕಾಯಕ ಮಾತ್ರ ನಿರಂತರ ಸಾಗುತ್ತಿದೆ. ಅಂತರರಾಷ್ಟ್ರೀಯ ಬ್ಯಾಸ್ಕೆಟ್ ಬಾಲ್ ಪಟು ಸವಿತಾ, ರಾಷ್ಟ್ರಮಟ್ಟದ ಕಿಕ್ ಬಾಕ್ಸಿಂಗ್ ಪಟು ರೋಹಿತ್ ಗೌಡ, ರಾಜ್ಯ ಮಟ್ಟದ ಆಟಗಾರರಾದ ಪ್ರೇಮ, ಪವಿತ್ರ, ನಂದನ್ ಕುಮಾ‌ರ್ ಸೇರಿದಂತೆ ಅನೇಕ ವಿದ್ಯಾರ್ಥಿಗಳ ಪ್ರತಿಭೆಗೆ ಸ್ಫೂರ್ತಿ ತುಂಬಿದ ಕೀರ್ತಿ ಇವರಿಗೆ ಸಲ್ಲುತ್ತದೆ.

ಸಂತೆಬಾಚಳ್ಳಿಯ ಬಸ್‌ಸ್ಟ್ಯಾಂಡ್ ಸರ್ಕಲ್‌ನಲ್ಲಿ ಪುಟ್ಟ ಚಿಲ್ಲರೆ ಅಂಗಡಿ ಇಟ್ಟುಕೊಂಡು ಬದುಕು ಸಾಗಿಸುತ್ತಿರುವ ಇವರಿಗೆ ಪುಟ್ಟ ಶೀಟಿನ ಮನೆ ಬಿಟ್ಟರೆ ಯಾವ ಆಸ್ತಿಯೂ ಇಲ್ಲ. ಒಂಟಿ ಜೀವನದ ಬದುಕಿನಲ್ಲಿ ಇವರ ಆಸ್ತಿಯೆಂದರೆ ಸಾವಿರಾರು ಮಕ್ಕಳ ಪ್ರೀತಿ ಮತ್ತು ಕೃತಜ್ಞತೆ.

msnehaswamy rangaswamy@gmail.com

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

3 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

3 hours ago

ಓದುಗರ ಪತ್ರ: ಕಾವೇರಿ:ಆದೇಶ ನಿಷ್ಪಕ್ಷಪಾತವಾಗಿರಲಿ

ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…

3 hours ago

ಮಲ್ಟಿಪ್ಲೆಕ್ಸ್: ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಮಾರಕ ಹಂಚಿಕಾ ಸೂತ್ರ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…

3 hours ago

ಕಸ್ತೂರಿ ರಂಗನ್ ವರದಿ ವಿರೋಧಿಸಿ ಇಂದು ಪ್ರತಿಭಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್‌ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ  ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…

3 hours ago

ಚಾ.ನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಜೆ.ಯೋಗೇಶ್ ನೇಮಕ

ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ  ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…

4 hours ago