Andolana originals

ಜಂಬೂಸವಾರಿ: ಜನಸವಾರಿಗೆ ವಿಶೇಷ ಕಾರ್ಯಚರಣೆ

ಮೈಸೂರು: ದಸರಾ ಜಂಬೂಸವಾರಿ ಮೆರವಣಿಗೆ ವೀಕ್ಷಿಸಿದ ನಂತರ ಗ್ರಾಮಾಂತರ ಬಸ್ ನಿಲ್ದಾಣಕ್ಕೆ ಬರುವ ಸಾವಿರಾರು ಜನರಿಗೆ ಟ್ರಾಫಿಕ್ ಜಾಮ್ ಕಾರಣಕ್ಕೆ ತಕ್ಷಣಕ್ಕೆ ಬಸ್ ಸೇವೆ ಒದಗಿಸಲು ಗಂಟೆಗಟ್ಟಲೇ ವಿಳಂಬವಾಗುತ್ತಿದ್ದು, ಪ್ರಯಾಣಿಕರ ಒತ್ತಡ ಮತ್ತು ಅನನುಕೂಲ ತಪ್ಪಿಸಲು ಕೆಎಸ್‌ಆರ್‌ಟಿಸಿ ಇದೇ ಮೊದಲ ಬಾರಿಗೆ ವಿಶೇಷ ಕಾರ್ಯಾಚರಣೆ ಆರಂಭಿಸಲು ನಿರ್ಧರಿಸಿದೆ.

ಕೆಎಸ್‌ಆರ್‌ಟಿಸಿ ವತಿಯಿಂದ ಪ್ರತೀ ವರ್ಷ ಜಂಬೂಸವಾರಿ ಮುಗಿದ ನಂತರ ಬಸ್ ನಿಲ್ದಾಣಕ್ಕೆ ಬರುವವರಿಗೆ ವಿವಿಧ ಮಾರ್ಗಗಳ ಸಂಚಾರಕ್ಕೆ ೧೦೦ ಬಸ್ ಗಳನ್ನು ಬಸ್ ನಿಲ್ದಾಣದಲ್ಲಿಯೇ ನಿಲುಗಡೆ ಮಾಡಲಾಗುತ್ತಿತ್ತು. ಬನ್ನಿಮಂಟಪ ಡಿಪೋ ಮುಂಭಾಗವೇ ಜಂಬೂಸವಾರಿ ಮೆರವಣಿಗೆ ಸಾಗುವ ಕಾರಣಕ್ಕೆ ಅಲ್ಲಿಂದ ಬಸ್‌ಗಳನ್ನು ಆಪರೇಟ್ ಮಾಡಲು ಸಾಧ್ಯವಾಗುವುದಿಲ್ಲ. ಹಾಗಾಗಿ ಹೆಚ್ಚುವರಿ ಬಸ್‌ಗಳನ್ನು ರಿಂಗ್ ರಸ್ತೆಯಲ್ಲಿ ನಿಲುಗಡೆ ಮಾಡಿ ನಗರದಲ್ಲಿ ಸಂಚಾರ ದಟ್ಟಣೆ ಕಡಿಮೆಯಾದ ನಂತರ ಅಲ್ಲಿಂದ ಗ್ರಾಮಾಂತರ ಬಸ್ ನಿಲ್ದಾಣಕ್ಕೆ ಬಂದು ಬಸ್ ಸೇವೆ ಆರಂಭಿಸಲಾಗುತ್ತದೆ.

ಹೀಗಾಗಿ ಜಂಬೂ ಸವಾರಿ ವೀಕ್ಷಿಸಿ ಬಂದ ಸಾವಿರಾರು ಮಂದಿ ಸುಮಾರು ಎರಡು ಗಂಟೆಗಳಿಗೂ ಹೆಚ್ಚು ಕಾಲ ಗ್ರಾಮಾಂತರ ಬಸ್ ನಿಲ್ದಾಣದಲ್ಲಿಯೇ ಕಾದು ಕೂರಬೇಕಿತ್ತು. ಸಾರ್ವ ಜನಿಕರಿಗೆ ಉಂಟಾಗುತ್ತಿರುವ ಈ ಅನನುಕೂಲವನ್ನು ತಪ್ಪಿಸಲು ವಿಶೇಷ ಕಾರ್ಯಾಚರಣೆ ಆರಂಭಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಕೆಎಸ್‌ಆರ್‌ಟಿಸಿ ಗ್ರಾಮಾಂತರ ವಿಭಾಗೀಯ ನಿಯಂತ್ರಣಾಧಿಕಾರಿ ಶ್ರೀನಿವಾಸ್ ತಿಳಿಸಿದರು.

ನಗರದಲ್ಲಿ ಜಂಬೂಸವಾರಿ ದಿನ ಬೆಳಿಗ್ಗೆ ೧೦ರಿಂದ ೧೧ರವರೆಗೆ ಎಂದಿನಂತೆ ಬಸ್‌ಗಳ ಸಂಚಾರಕ್ಕೆ ಅವಕಾಶ ನೀಡಲಾಗಿರುತ್ತದೆ. ಆದರೆ ಮಧ್ಯಾಹ್ನ ೧೨ ಗಂಟೆಯ ನಂತರ ನಗರದೆಲ್ಲೆಡೆ ಟ್ರಾಫಿಕ್ ಜಾಮ್ ಉಂಟಾಗುತ್ತದೆ. ಈ ಸಂದರ್ಭದಲ್ಲಿ ಪ್ರತೀ ವರ್ಷ ವಾಹನ ಸಂಚಾರಕ್ಕೆ ತೊಡಕಾಗುತ್ತದೆ.

ಇದನ್ನು ತಪ್ಪಿಸಲು ಗ್ರಾಮಾಂತರ ಬಸ್ ನಿಲ್ದಾಣಕ್ಕೆ ನಗರದ ಹೊರಭಾಗದಿಂದ ಬಂದು ಹೋಗಲು ಒಂದು ಮಾರ್ಗ ವ್ಯವಸ್ಥೆ ಮಾಡಿಕೊಡಬೇಕು. ಅದರಲ್ಲಿಯೂ -ರಂ ಮಾಲ್ ಪಕ್ಕದ ಜೋಡಿ ರಸ್ತೆಯ ಮೂಲಕ ಮಹದೇವಪುರ ಮಾರ್ಗವಾಗಿ ಸಾಗಿ ರಿಂಗ್ ರಸ್ತೆ ತಲುಪಲು ಅವಕಾಶ ಮಾಡಿಕೊಡುವಂತೆ ಪೊಲೀಸ್ ಇಲಾಖೆಗೆ ಮನವಿ ಮಾಡಲಾಗಿದೆ. ಒಂದು ವೇಳೆ ಇದಕ್ಕೆ ಅವಕಾಶ ಸಿಗದಿದ್ದರೆ ಕೆಲವು ಕಡೆ ಬಸ್ ನಿಲುಗಡೆ ಮಾಡಿಕೊಂಡು ಅಲ್ಲಿಂದ ಅವುಗಳನ್ನು ತರಿಸಿಕೊಂಡು ಸೇವೆ ನೀಡಲು ತೀರ್ಮಾನಿಸಲಾಗಿದೆ.

೩ ಕಡೆ ನಿಲುಗಡೆಗೆ ಸಿದ್ಧತೆ: ಇದೇ ಮೊದಲ ಬಾರಿಗೆ ಜಂಬೂಸವಾರಿ ವೇಳೆ ತಕ್ಷಣಕ್ಕೆ ಬಸ್ ಸೌಲಭ್ಯ ನೀಡುವ ಉದ್ದೇಶದಿಂದ ಮೈಸೂರಿನ ಗ್ರಾಮಾಂತರ ಬಸ್ ನಿಲ್ದಾಣಕ್ಕೆ ಸಮೀಪದ ಮೂರು ಕಡೆಗಳಲ್ಲಿ ಅಂದಾಜು ೩೦೦ಕ್ಕೂ ಹೆಚ್ಚು ಬಸ್‌ಗಳನ್ನು ನಿಲುಗಡೆ ಮಾಡಿಕೊಂಡು ಕ್ರಮೇಣ ಅವುಗಳನ್ನು ಗ್ರಾಮಾಂತರ ಬಸ್ ನಿಲ್ದಾಣಕ್ಕೆ ಕರೆಸಿಕೊಂಡು ಸೇವೆ ನೀಡುವ ಬಗ್ಗೆಯೂ ಅಽಕಾರಿಗಳು ಸಿದ್ಧತೆ ನಡೆಸಿದ್ದಾರೆ.

ಜಂಬೂ ಸವಾರಿ ವೀಕ್ಷಣೆಗೆ ರಾಜ್ಯದ ನಾನಾ ಭಾಗಗಳಿಂದ ಜನರು ಆಗಮಿಸುತ್ತಾರೆ. ವೀಕ್ಷಣೆಯ ಬಳಿಕ ಅವರಿಗೆ ಬಸ್ ಸೇವೆ ನೀಡುವಲ್ಲಿ ವಿಳಂಬವಾಗುತ್ತಿರುವುದನ್ನು ತಪ್ಪಿಸಲು ಈ ಬಾರಿ ವಿಶೇಷ ಕಾರ್ಯಾಚರಣೆ ನಡೆಸಲು ತೀರ್ಮಾನಿಸಲಾಗಿದೆ.
-ವೀರೇಶ್, ಕೆಎಸ್‌ಆರ್‌ಟಿಸಿ ನಗರ ವಿಭಾಗೀಯ ನಿಯಂತ್ರಣಾಽಕಾರಿ.

ಎಲ್ಲೆಲ್ಲಿ ನಿಲುಗಡೆ?
ಗ್ರಾಮಾಂತರ ನಿಲ್ದಾಣಕ್ಕೆ ಸಮೀಪದಲ್ಲಿರುವ ಪೊಲೀಸ್ ಅಕಾಡೆಮಿಯಲ್ಲಿ ಬಸ್ ನಿಲ್ದಾಣಕ್ಕೆ ಅನುಮತಿ ನೀಡುವಂತೆ ಮನವಿ ಮಾಡಲಾಗುತ್ತಿದೆ. ಅವಕಾಶ ದೊರೆತರೆ ಇಲ್ಲಿ ಅಂದಾಜು ೨೦೦ಕ್ಕೂ ಹೆಚ್ಚು ಬಸ್ ಗಳನ್ನು ನಿಲುಗಡೆ ಮಾಡಬಹುದು. ಅದೇ ರೀತಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆವರಣದಲ್ಲಿ ೩೦ ಬಸ್‌ಗಳು, ಸಂತ ಫಿಲೋಮಿನಾ ಕಾಲೇಜು ಬಳಿ ೬೦ರಿಂದ ೭೦ ವಾಹನಗಳನ್ನು ನಿಲ್ಲಿಸಲು ಅವಕಾಶ ಕೇಳಲಾಗಿದೆ. ಸಂಬಂಽಸಿದ ಸಂಸ್ಥೆಗಳು ಅವಕಾಶ ನೀಡಿದರೆ ಗ್ರಾಮಾಂತರ ನಿಲ್ದಾಣದಲ್ಲಿ ಬಸ್‌ಗಳು ಖಾಲಿಯಾದಂತೆ ಈ ಮೂರು ಕಡೆಗಳಿಂದ ಬಸ್‌ಗಳನ್ನು ತರಿಸಿಕೊಂಡು ಸೇವೆ ನೀಡಲು ತೀರ್ಮಾನಿಸಲಾಗಿದೆ.

 

ಆಂದೋಲನ ಡೆಸ್ಕ್

Recent Posts

ಹನೂರು| ಆಟೋ ಹಾಗೂ ಕಾರಿನ ನಡುವೆ ಡಿಕ್ಕಿ: ಮೂವರಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ‌ ಮಹದೇಶ್ವರಬೆಟ್ಟ ರಸ್ತೆಯ ತಾಳುಬೆಟ್ಟ–ಕೋಣನಕೆರೆ ಮಾರ್ಗದಲ್ಲಿ ಮಂಗಳವಾರ ಬೆಳ್ಳಂಬೆಳಿಗ್ಗೆ ಆಟೋ…

2 hours ago

ನೀಟ್‌ ಪರೀಕ್ಷೆಯ ರದ್ದು, ಕೇಂದ್ರ ಸರ್ಕಾರದ ಬಹು ದೊಡ್ಡ ಹಗರಣ: ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್

ಬೆಂಗಳೂರು: ನೀಟ್‌ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ…

2 hours ago

ಪಾಕಿಸ್ತಾನದಲ್ಲಿ ಭೀಕರ ಬಾಂಬ್‌ ಸ್ಫೋಟ: 9 ಮಂದಿ ಸಾವು

ಪಾಕಿಸ್ತಾನ: ಇಲ್ಲಿನ ವಾಯುವ್ಯ ಭಾಗದ ಮಾರುಕಟ್ಟೆಯೊಂದರಲ್ಲಿ ರಿಕ್ಷಾಗೆ ಅಳವಡಿಸಿದ್ದ ಬಾಂಬ್‌ ಸ್ಫೋಟಗೊಂಡ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ…

3 hours ago

ನಾಳೆಯಿಂದ ಎರಡು ದಿನ ಸಿದ್ದರಾಮಯ್ಯ ಮೈಸೂರು ಪ್ರವಾಸ

ಮೈಸೂರು: ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಸಂಜೆ 5.30ಕ್ಕೆ ವಿಶೇಷ…

3 hours ago

ವನ್ಯಜೀವಿ ಸಂಚಾರವಿರುವ ಚಾರಣಪಥ, ಸಂಚಾರಪಥ ಸ್ಥಗಿತಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಚಾಮರಾಜನಗರದ ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ವನ್ಯಜೀವಿ ಸಂಚಾರ ಇರುವ ಎಲ್ಲ…

3 hours ago

ನಾಗಮಲೆ ಗ್ರಾಮದಲ್ಲಿ ಎರಡು ಮೇಕೆ ಹೊತ್ತೊಯ್ದ ಚಿರತೆ: ಮತ್ತಷ್ಟು ಆತಂಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ…

3 hours ago