ಎಂ.ಬಿ.ರಂಗಸ್ವಾಮಿ
ಮೂಗೂರು: ಇಲ್ಲಿನ ಇತಿಹಾಸ ಪ್ರಸಿದ್ಧ ಶ್ರೀ ತ್ರಿಪುರ ಸುಂದರಿ ಅಮ್ಮನವರ ಜಾತ್ರಾ ಮಹೋತ್ಸವ ಜ.೧೩ರಿಂದ ೧೭ರವರೆಗೆ ನಡೆಯಲಿದ್ದು, ಜ.೧೫ ರಂದು ಮಹಾ ರಥೋತ್ಸವ ನಡೆಯಲಿದೆ. ಇದಕ್ಕಾಗಿ ಸಕಲ ಸಿದ್ಧತೆಗಳನ್ನು ನಡೆಸಲಾಗುತ್ತಿದೆ.
ತ್ರಿಪುರ ಸುಂದರಿ ಅಮ್ಮನವರಜಾತ್ರೆಯ ಅದ್ಧೂರಿ ಆಚರಣೆಗೆ ಈಗಾಗಲೇ ಜಾತ್ರಾ ಪೂರ್ವಸಿದ್ಧತಾ ಸಭೆ ನಡೆಸಲಾಗಿದೆ. ರಾಜ್ಯದ ವಿವಿಧ ಭಾಗಗಳಿಂದ ಅಪಾರ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಆದಿಶಕ್ತಿ ಶ್ರೀ ತ್ರಿಪುರ ಸುಂದರಿ ಅಮ್ಮ ತಿಬ್ಬಾದೇವಿಗೆ ರಥೋತ್ಸವಕ್ಕೂ ಮುನ್ನ ಒಂದು ವಾರ ಮೊದಲೇ ವಿಶೇಷ ಪೂಜಾ ಕೈಂಕರ್ಯಗಳು ಆರಂಭಗೊಳ್ಳಲಿವೆ.
ಜ.೩ರಂದು ಹಸ್ತಾನ ಅಂಕುರಾರ್ಪಣೆ ಮೂಲಕ ಜಾತ್ರಾ ಕಾರ್ಯಕ್ರಮಗಳಿಗೆ ಚಾಲನೆ ದೊರೆತಿದೆ. ಜ.೧೦ ರಂದು ವಧೆ ಉತ್ಸವ ನಡೆದಿದೆ. ಜ.೧೧ರಂದು ಶೇಷ, ಪಕ್ಷಿ ವಾಹನೋತ್ಸವ, ಜ.೧೨ರಂದು ಸಿಂಹ ವಾಹನೋತ್ಸವ ಹಾಗೂ ಚಂದ್ರ ಮಂಡಲ ಉತ್ಸವ, ಜ.೧೩ರಂದು (ಮೂಗೂರು ಬಂಡಿ) ರುದ್ರಾಕ್ಷಿ ಮಂಟಪದ ಉತ್ಸವ, ೧೪ರಂದು ಹೂವಿನ ಪಲ್ಲಕ್ಕಿಯಲ್ಲಿ ತೆಪ್ಪೋತ್ಸವ, ೧೫ ರಂದು ಶ್ರೀ ಅಮ್ಮನವರ ಮಹಾ ರಥೋತ್ಸವ ನಂತರ ರಾತ್ರಿ ಆನೆ ವಾಹನೋತ್ಸವ, ೧೬ರಂದು ಅಮ್ಮನ ವರು ಹೊಸಹಳ್ಳಿಗೆ ದಯಮಾಡಿ ಚಿಗುರು ಕಡಿಯುವುದು ನಂತರ ಮೂಗೂರಿಲ್ಲಿ ಕುದುರೆ ಹಾಗೂ ಮಂಟಪದಲ್ಲಿ ಉಯ್ಯಾಲೆ ಉತ್ಸವ, ೧೭ರಂದು ಪಲ್ಲಕ್ಕಿಯಲ್ಲಿ ವೈಮಾಳಿಗೆ ಉತ್ಸವ, ರಾತ್ರಿ ವೇಳೆ ದೇಗುಲದಲ್ಲಿ ಪೂರ್ಣಾಭಿಷೇಕ, ವಿಶೇಷ ಪೂಜೆ, ಮಹಾ ಮಂಗಳಾರತಿಯೊಂದಿಗೆ ಜಾತ್ರಾ ಧಾರ್ಮಿಕ ಆಚರಣೆಗೆ ತೆರೆ ಬೀಳಲಿದೆ.
” ಈ ಬಾರಿಯ ಜಾತ್ರೆಯು ಸಂಕ್ರಾಂತಿ ಹಬ್ಬ ದಂದು ಜರುಗ ಲಿದ್ದು, ಅಮ್ಮನವರ ಉತ್ಸವ ಮತ್ತಷ್ಟು ಮೆರುಗು ಪಡೆಯಲಿದೆ. ಅಮ್ಮನವರ ಜಾತ್ರೆಗೆ ಆಗಮಿಸುವ ಸಾವಿರಾರು ಜನರಿಗೆ ಮೂಲಸೌಕರ್ಯ ಒದಗಿಸಬೇಕಿದೆ.”
-ಎಂ.ಪಿ.ಛಾಯಕುಮಾರ್, ಉದ್ಯಮಿ, ಮೂಗೂರು
ವಾಷಿಂಗ್ಟನ್ : ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ನ ಪ್ರತೀಕಾರಿ ದಾಳಿಗಳನ್ನು ಕಂಡು "ನಾವು ನಿಜಕ್ಕೂ ಆಘಾತಗೊಂಡಿದ್ದೇವೆ" ಎಂದು…
ವಾಷಿಂಗ್ಟನ್ : ಇರಾನ್ ವಿರುದ್ಧದ ಅಮೆರಿಕಾ-ಇಸ್ರೇಲ್ ಯುದ್ಧದ ಪರಿಣಾಮ ಪ್ರಪಂಚದ ಅತಿ ಮುಖ್ಯ ತೈಲ ಮಾರ್ಗ ಹೊರ್ಮುಜ್ ಜಲಸಂಧಿಯ ಮೂಲಕ…
ಮಂಚೇಗೌಡನಕೊಪ್ಪಲಿನ ಸ್ಮಶಾನ ಸರಿಪಡಿಸಲು ನಿವಾಸಿಗಳ ಆಗ್ರಹ ಎಚ್. ಎಸ್. ದಿನೇಶ್ಕುಮಾರ್ ಮೈಸೂರು : ದುರ್ವಾಸನೆ ಬೀರುವ ಶೌಚಾಲಯ.., ಎಲ್ಲೆಂದರಲ್ಲಿ ಹರಡಿಕೊಂಡಿರುವ…
ಮೈಸೂರಿನ ಜೆ.ಪಿ.ನಗರದ ಸಾಯಿಬಾಬಾ ದೇವಸ್ಥಾನದ ಹಿಂಭಾಗದ ರಸ್ತೆಯಲ್ಲಿ ಬೀದಿನಾಯಿಗಳ ಹಾವಳಿ ವಿಪರೀತವಾಗಿದೆ. ರಾತ್ರಿಯ ಹೊತ್ತಿನಲ್ಲಿ ಒಂದೇ ಸಮನೆ ಬೊಗಳುತ್ತಿರುತ್ತವೆ. ದ್ವಿಚಕ್ರವಾಹನ…
ಗುಂಡ್ಲುಪೇಟೆ : ತಾಲೂಕಿನ ಪಡಗೂರು ಗ್ರಾಮದಲ್ಲಿ ವಿದ್ಯುತ್ ಸ್ಪರ್ಶಿಸಿ ಹುಲಿಯೊಂದು ಸಾವನ್ನಪ್ಪಿರುವ ಘಟನೆ ನಡೆದಿದೆ. ಗ್ರಾಮದ ಅಡವಿ ಮಠದ ಸಮೀಪವಿರುವ…
ಬೇಸಿಗೆ ಆರಂಭವಾಗುವುದೇ ತಡ ಪ್ರತಿಯೊಬ್ಬರಿಗೂ ಬಾಯಾರಿಕೆ ಹೆಚ್ಚಾಗಿ, ಜಾಸ್ತಿ ನೀರು ಕುಡಿಯಬೇಕಾಗುತ್ತದೆ. ಬಿಸಿಲಿನ ಬೇಗೆ ಹೆಚ್ಚಾಗುವುದರಿಂದ ಎಂತಹವರಿಗೂ ವಿವಿಧ ರೀತಿಯ…