Andolana originals

ಜ.೧೩ರಿಂದ ಮೂಗೂರು ತ್ರಿಪುರ ಸುಂದರಿ ಅಮ್ಮನವರ ಜಾತ್ರೆ ಸಂಭ್ರಮ

ಎಂ.ಬಿ.ರಂಗಸ್ವಾಮಿ

ಮೂಗೂರು: ಇಲ್ಲಿನ ಇತಿಹಾಸ ಪ್ರಸಿದ್ಧ ಶ್ರೀ ತ್ರಿಪುರ ಸುಂದರಿ ಅಮ್ಮನವರ ಜಾತ್ರಾ ಮಹೋತ್ಸವ ಜ.೧೩ರಿಂದ ೧೭ರವರೆಗೆ ನಡೆಯಲಿದ್ದು, ಜ.೧೫ ರಂದು ಮಹಾ ರಥೋತ್ಸವ ನಡೆಯಲಿದೆ. ಇದಕ್ಕಾಗಿ ಸಕಲ ಸಿದ್ಧತೆಗಳನ್ನು ನಡೆಸಲಾಗುತ್ತಿದೆ.

ತ್ರಿಪುರ ಸುಂದರಿ ಅಮ್ಮನವರಜಾತ್ರೆಯ ಅದ್ಧೂರಿ ಆಚರಣೆಗೆ ಈಗಾಗಲೇ ಜಾತ್ರಾ ಪೂರ್ವಸಿದ್ಧತಾ ಸಭೆ ನಡೆಸಲಾಗಿದೆ. ರಾಜ್ಯದ ವಿವಿಧ ಭಾಗಗಳಿಂದ ಅಪಾರ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಆದಿಶಕ್ತಿ ಶ್ರೀ ತ್ರಿಪುರ ಸುಂದರಿ ಅಮ್ಮ ತಿಬ್ಬಾದೇವಿಗೆ ರಥೋತ್ಸವಕ್ಕೂ ಮುನ್ನ ಒಂದು ವಾರ ಮೊದಲೇ ವಿಶೇಷ ಪೂಜಾ ಕೈಂಕರ್ಯಗಳು ಆರಂಭಗೊಳ್ಳಲಿವೆ.

ಜ.೩ರಂದು ಹಸ್ತಾನ ಅಂಕುರಾರ್ಪಣೆ ಮೂಲಕ ಜಾತ್ರಾ ಕಾರ್ಯಕ್ರಮಗಳಿಗೆ ಚಾಲನೆ ದೊರೆತಿದೆ. ಜ.೧೦ ರಂದು ವಧೆ ಉತ್ಸವ ನಡೆದಿದೆ. ಜ.೧೧ರಂದು ಶೇಷ, ಪಕ್ಷಿ ವಾಹನೋತ್ಸವ, ಜ.೧೨ರಂದು ಸಿಂಹ ವಾಹನೋತ್ಸವ ಹಾಗೂ ಚಂದ್ರ ಮಂಡಲ ಉತ್ಸವ, ಜ.೧೩ರಂದು (ಮೂಗೂರು ಬಂಡಿ) ರುದ್ರಾಕ್ಷಿ ಮಂಟಪದ ಉತ್ಸವ, ೧೪ರಂದು ಹೂವಿನ ಪಲ್ಲಕ್ಕಿಯಲ್ಲಿ ತೆಪ್ಪೋತ್ಸವ, ೧೫ ರಂದು ಶ್ರೀ ಅಮ್ಮನವರ ಮಹಾ ರಥೋತ್ಸವ ನಂತರ ರಾತ್ರಿ ಆನೆ ವಾಹನೋತ್ಸವ, ೧೬ರಂದು ಅಮ್ಮನ ವರು ಹೊಸಹಳ್ಳಿಗೆ ದಯಮಾಡಿ ಚಿಗುರು ಕಡಿಯುವುದು ನಂತರ ಮೂಗೂರಿಲ್ಲಿ ಕುದುರೆ ಹಾಗೂ ಮಂಟಪದಲ್ಲಿ ಉಯ್ಯಾಲೆ ಉತ್ಸವ, ೧೭ರಂದು ಪಲ್ಲಕ್ಕಿಯಲ್ಲಿ ವೈಮಾಳಿಗೆ ಉತ್ಸವ, ರಾತ್ರಿ ವೇಳೆ ದೇಗುಲದಲ್ಲಿ ಪೂರ್ಣಾಭಿಷೇಕ, ವಿಶೇಷ ಪೂಜೆ, ಮಹಾ ಮಂಗಳಾರತಿಯೊಂದಿಗೆ ಜಾತ್ರಾ ಧಾರ್ಮಿಕ ಆಚರಣೆಗೆ ತೆರೆ ಬೀಳಲಿದೆ.

” ಈ ಬಾರಿಯ ಜಾತ್ರೆಯು ಸಂಕ್ರಾಂತಿ ಹಬ್ಬ ದಂದು ಜರುಗ ಲಿದ್ದು, ಅಮ್ಮನವರ ಉತ್ಸವ ಮತ್ತಷ್ಟು ಮೆರುಗು ಪಡೆಯಲಿದೆ. ಅಮ್ಮನವರ ಜಾತ್ರೆಗೆ ಆಗಮಿಸುವ ಸಾವಿರಾರು ಜನರಿಗೆ ಮೂಲಸೌಕರ್ಯ ಒದಗಿಸಬೇಕಿದೆ.”

-ಎಂ.ಪಿ.ಛಾಯಕುಮಾರ್, ಉದ್ಯಮಿ, ಮೂಗೂರು

ಆಂದೋಲನ ಡೆಸ್ಕ್

Recent Posts

ಭಾರತ-ಯುರೋಪ್‌ ಒಕ್ಕೂಟ ವ್ಯಾಪಾರ ಒಪ್ಪಂದಕ್ಕೆ ಸಹಿ

ನವದೆಹಲಿ: ಮದರ್‌ ಆಫ್‌ ಆಲ್‌ ಡೀಲ್ಸ್‌ ಎಂದೇ ಕರೆಯಲ್ಪಡುವ ಭಾರತ-ಯುರೋಪ್‌ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…

1 hour ago

ಶಿಡ್ಲಘಟ್ಟ ಕೇಸ್‌ನಲ್ಲಿ ಕಾನೂನಿನಂತೆ ಕ್ರಮ: ಸಚಿವ ಭೈರತಿ ಸುರೇಶ್‌

ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…

1 hour ago

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ: ಸವಾರ ಸಾವು

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…

2 hours ago

ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ: ಲೇಖಕಿಯರಿಂದ ಕಥಾಸಂಕಲನ ಆಹ್ವಾನ

ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…

2 hours ago

ಗುಂಡ್ಲುಪೇಟೆ: ಬೊಮ್ಮಲಾಪುರದಲ್ಲಿ ವಾಸದ ಮನೆಗೆ ನುಗ್ಗಿದ ಕಡವೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…

2 hours ago

ಶಿಕ್ಷಣದಿಂದ ಮಾತ್ರ ಮುಖ್ಯವಾಹಿನಿಗೆ ಬರಲು ಸಾಧ್ಯ: ಡಾ.ಕುಮಾರ

ಮಂಡ್ಯ: ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಸಮುದಾಯಗಳು ಮುಖ್ಯ ವಾಹಿನಿಗೆ ಬರಲು ಶಿಕ್ಷಣದಿಂದ ಮಾತ್ರ ಸಾಧ್ಯ…

3 hours ago