ಎಂ.ಬಿ.ರಂಗಸ್ವಾಮಿ
ಮೂಗೂರು: ಇಲ್ಲಿನ ಇತಿಹಾಸ ಪ್ರಸಿದ್ಧ ಶ್ರೀ ತ್ರಿಪುರ ಸುಂದರಿ ಅಮ್ಮನವರ ಜಾತ್ರಾ ಮಹೋತ್ಸವ ಜ.೧೩ರಿಂದ ೧೭ರವರೆಗೆ ನಡೆಯಲಿದ್ದು, ಜ.೧೫ ರಂದು ಮಹಾ ರಥೋತ್ಸವ ನಡೆಯಲಿದೆ. ಇದಕ್ಕಾಗಿ ಸಕಲ ಸಿದ್ಧತೆಗಳನ್ನು ನಡೆಸಲಾಗುತ್ತಿದೆ.
ತ್ರಿಪುರ ಸುಂದರಿ ಅಮ್ಮನವರಜಾತ್ರೆಯ ಅದ್ಧೂರಿ ಆಚರಣೆಗೆ ಈಗಾಗಲೇ ಜಾತ್ರಾ ಪೂರ್ವಸಿದ್ಧತಾ ಸಭೆ ನಡೆಸಲಾಗಿದೆ. ರಾಜ್ಯದ ವಿವಿಧ ಭಾಗಗಳಿಂದ ಅಪಾರ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಆದಿಶಕ್ತಿ ಶ್ರೀ ತ್ರಿಪುರ ಸುಂದರಿ ಅಮ್ಮ ತಿಬ್ಬಾದೇವಿಗೆ ರಥೋತ್ಸವಕ್ಕೂ ಮುನ್ನ ಒಂದು ವಾರ ಮೊದಲೇ ವಿಶೇಷ ಪೂಜಾ ಕೈಂಕರ್ಯಗಳು ಆರಂಭಗೊಳ್ಳಲಿವೆ.
ಜ.೩ರಂದು ಹಸ್ತಾನ ಅಂಕುರಾರ್ಪಣೆ ಮೂಲಕ ಜಾತ್ರಾ ಕಾರ್ಯಕ್ರಮಗಳಿಗೆ ಚಾಲನೆ ದೊರೆತಿದೆ. ಜ.೧೦ ರಂದು ವಧೆ ಉತ್ಸವ ನಡೆದಿದೆ. ಜ.೧೧ರಂದು ಶೇಷ, ಪಕ್ಷಿ ವಾಹನೋತ್ಸವ, ಜ.೧೨ರಂದು ಸಿಂಹ ವಾಹನೋತ್ಸವ ಹಾಗೂ ಚಂದ್ರ ಮಂಡಲ ಉತ್ಸವ, ಜ.೧೩ರಂದು (ಮೂಗೂರು ಬಂಡಿ) ರುದ್ರಾಕ್ಷಿ ಮಂಟಪದ ಉತ್ಸವ, ೧೪ರಂದು ಹೂವಿನ ಪಲ್ಲಕ್ಕಿಯಲ್ಲಿ ತೆಪ್ಪೋತ್ಸವ, ೧೫ ರಂದು ಶ್ರೀ ಅಮ್ಮನವರ ಮಹಾ ರಥೋತ್ಸವ ನಂತರ ರಾತ್ರಿ ಆನೆ ವಾಹನೋತ್ಸವ, ೧೬ರಂದು ಅಮ್ಮನ ವರು ಹೊಸಹಳ್ಳಿಗೆ ದಯಮಾಡಿ ಚಿಗುರು ಕಡಿಯುವುದು ನಂತರ ಮೂಗೂರಿಲ್ಲಿ ಕುದುರೆ ಹಾಗೂ ಮಂಟಪದಲ್ಲಿ ಉಯ್ಯಾಲೆ ಉತ್ಸವ, ೧೭ರಂದು ಪಲ್ಲಕ್ಕಿಯಲ್ಲಿ ವೈಮಾಳಿಗೆ ಉತ್ಸವ, ರಾತ್ರಿ ವೇಳೆ ದೇಗುಲದಲ್ಲಿ ಪೂರ್ಣಾಭಿಷೇಕ, ವಿಶೇಷ ಪೂಜೆ, ಮಹಾ ಮಂಗಳಾರತಿಯೊಂದಿಗೆ ಜಾತ್ರಾ ಧಾರ್ಮಿಕ ಆಚರಣೆಗೆ ತೆರೆ ಬೀಳಲಿದೆ.
” ಈ ಬಾರಿಯ ಜಾತ್ರೆಯು ಸಂಕ್ರಾಂತಿ ಹಬ್ಬ ದಂದು ಜರುಗ ಲಿದ್ದು, ಅಮ್ಮನವರ ಉತ್ಸವ ಮತ್ತಷ್ಟು ಮೆರುಗು ಪಡೆಯಲಿದೆ. ಅಮ್ಮನವರ ಜಾತ್ರೆಗೆ ಆಗಮಿಸುವ ಸಾವಿರಾರು ಜನರಿಗೆ ಮೂಲಸೌಕರ್ಯ ಒದಗಿಸಬೇಕಿದೆ.”
-ಎಂ.ಪಿ.ಛಾಯಕುಮಾರ್, ಉದ್ಯಮಿ, ಮೂಗೂರು
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…