Andolana originals

ಮೂಲಸೌಕರ್ಯಗಳಿಲ್ಲದ ಜಯನಗರ ಸ್ಮಶಾನ

ಪ್ರಶಾಂತ್ ಎಸ್.

ಶವ ಸಂಸ್ಕಾರ ಸ್ಥಾವರದ ಸಾಮಗ್ರಿಗಳು ಕಳ್ಳರ ಪಾಲು

ಬೆಳಕಿನ ವ್ಯವಸ್ಥೆ ಇಲ್ಲದೇ ಕತ್ತಲಿನಲ್ಲಿಯೇ ಹೂಳಬೇಕಾದ ಸ್ಥಿತಿ ನಿರ್ಮಾಣ 

ಕುಡಿಯಲು ನೀರಿಲ್ಲ, ಆಳೆತ್ತರಕ್ಕೆ ಬೆಳೆದ ಗಿಡಗಂಟಿಗಳು

ಮೈಸೂರು: ಮಳೆ ಬಂದರೆ ಜಲಾವೃತವಾಗುವ ಸ್ಮಶಾನ.., ನಿಲ್ಲಲು ಸೂಕ್ತ ನೆರಳಿನ ವ್ಯವಸ್ಥೆ ಇಲ್ಲ.., ಸುಸ್ತಾದರೂ ಕುಡಿಯಲು ಗುಟುಕು ನೀರಿಲ್ಲ.., ರಾತ್ರಿ ಸಮಯದಲ್ಲಿ ಬೆಳಕಿನ ವ್ಯವಸ್ಥೆ ಇಲ್ಲವೇ ಇಲ್ಲ.., ಎಲ್ಲೆಂದರಲ್ಲಿ ಬಿದ್ದಿರುವ ಕಸ-ಕಡ್ಡಿಗಳು, ಕಲ್ಲು-ಮುಳ್ಳುಗಳು…

ಇದು ಜಯನಗರ-ಮಳಲವಾಡಿ ರುದ್ರಭೂಮಿಯ ಸ್ಥಿತಿ. ಈ ರುದ್ರಭೂಮಿಯು ಮೂಲ ಸೌಕರ್ಯಗಳಿಂದ ವಂಚಿತವಾಗಿದೆ. ಸೂಕ್ತ ರೀತಿಯ ಸೌಕರ್ಯಗಳನ್ನು ವ್ಯವಸ್ಥೆ ಮಾಡಿಕೊಡದ ಕಾರಣ ಶವ ಸಂಸ್ಕಾರ ಮಾಡಲು ಬರುವ ಸಾರ್ವಜನಿಕರು ಪರದಾಡುವಂತಾಗಿದೆ.

ಅಂತ್ಯಸಂಸ್ಕಾರಕ್ಕೆ ತೊಂದರೆ ಜಯನಗರ ಮಳಲವಾಡಿ ರುದ್ರಭೂಮಿಗೆ ನಗರಪಾಲಿಕೆ ಅಗತ್ಯ ಮೂಲ ಸೌಲಭ್ಯ ಒದಗಿಸಿಲ್ಲ. ಯಾರಾದರೂ ಮೃತಪಟ್ಟರೆ ಅಂತ್ಯಸಂಸ್ಕಾರಕ್ಕೆ ತೊಂದರೆಯಾಗುತ್ತಿದೆ. ಸ್ಮಶಾನದಲ್ಲಿ ಬೆಳಕಿನ ವ್ಯವಸ್ಥೆ ಇಲ್ಲದೇ ಕತ್ತಲಲ್ಲಿ ಜನರು ಅಂತ್ಯಕ್ರಿಯೆ ನಡೆಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಅಭಿವೃದ್ಧಿ ಮರೀಚಿಕೆ: ಹಲವು ವರ್ಷಗಳಿಂದ ಅಭಿವೃದ್ಧಿ ಕಾಣದ ರುದ್ರಭೂಮಿಗೆ ಇತ್ತೀಚೆಗಷ್ಟೆ ಕಾಂಪೌಂಡ್ ನಿರ್ಮಿಸಲಾಗಿದೆ. ಮುಳ್ಳು ಗಂಟಿಗಳಿಂದ ಕೂಡಿರುವ ಸ್ಥಳದಲ್ಲಿ ಶವಗಳನ್ನು ಹೂಳಬೇಕಾಗಿದೆ. ಮಳೆಗಾಲದಲ್ಲಿ ಜನರು ಇನ್ನಷ್ಟು ತೊಂದರೆ ಪಡಬೇಕಾಗುತ್ತದೆ. ಅಂತ್ಯಕ್ರಿಯೆಗೆ ಬರುವ ವಯೋವೃದ್ಧರು ಭಯದೊಂದಿಗೆ ಸ್ಮಶಾನದಲ್ಲಿ ತೆರಳುವಂತಾಗಿದೆ.

ಮನವಿಗೆ ಸಿಗದ ಸ್ಪಂದನೆ: ನೆರಳಿಲ್ಲ, ಕುಡಿಯಲು ನೀರಿಲ್ಲ, ರಾತ್ರಿ ಸಮಯದಲ್ಲಿ ಬೆಳಕಿನ ವ್ಯವಸ್ಥೆ ಇಲ್ಲ. ಮೂಲಸೌಕರ್ಯ ಒದಗಿಸುವಂತೆ ಅನೇಕ ಬಾರಿ ಸ್ಥಳೀಯ ನಗರಪಾಲಿಕೆ ಸದಸ್ಯರು, ಪಾಲಿಕೆ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಗಿದೆ. ಆದರೂ ಅಧಿಕಾರಿಗಳು ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ಜನರು ಆಕ್ರೋಶ ವ್ಯಕ್ತಪಡಿಸುತ್ತಾರೆ

” ಕುಡಿಯುವ ನೀರು, ನೆರಳು, ಸ್ವಚ್ಛತೆ ಇಲ್ಲದಂತಾಗಿದೆ. ಅಂತ್ಯಕ್ರಿಯೆ ವೇಳೆ ಜನಸಾಮಾನ್ಯರಿಗೆ ತೊಂದರೆಯಾಗುತ್ತಿದೆ. ಕೂಡಲೇ ಸಂಬಂಧಪಟ್ಟ ಅಽಕಾರಿಗಳು ಇತ್ತ ಗಮನಹರಿಸಬೇಕು. ರುದ್ರಭೂಮಿಯ ಅಭಿವೃದ್ಧಿಗೆ ಬಿಡುಗಡೆಯಾಗುವ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಬೇಕು.”

ಮಹದೇವು, ಜಯನಗರ ನಿವಾಸಿ (ಕೆ.ಶಿವರಾಂ ಬಡಾವಣೆ)

” ಜಯನಗರ-ಮಳಲವಾಡಿ ಸ್ಮಶಾನದಲ್ಲಿ ಮೂಲ ಸೌಕರ್ಯಗಳ ಕೊರತೆ ಇರುವುದರ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ. ಸ್ಥಳ ಪರಿಶೀಲನೆ ನಡೆಸಿ ಸದ್ಯದಲ್ಲಿಯೇ ಕ್ರಮ ಕೈಗೊಳ್ಳುತ್ತೇನೆ.”

ಶೇಕ್ ತನ್ವೀರ್ ಆಸಿಫ್, ಆಯುಕ್ತರು, ನಗರಪಾಲಿಕೆ

” ಅಭಿವೃದ್ಧಿ ಕಾಣದ ಸ್ಮಶಾನಗಳಲ್ಲಿ ರಾತ್ರಿ ವೇಳೆ ಅನೈತಿಕ ಚಟುವಟಿಕೆಗಳು ನಡೆಯುತ್ತಿವೆ. ಕಾಂಪೌಂಡ್ ಇಲ್ಲದ ರುದ್ರಭೂಮಿ ಜಾಗ ಕೆಲ ಕಡೆಗಳಲ್ಲಿ ಒತ್ತುವರಿಯಾಗಿದೆ. ಆದ್ದರಿಂದ ನಗರಪಾಲಿಕೆ ಅಧಿಕಾರಿಗಳು ರುದ್ರಭೂಮಿ ಅಭಿವೃದ್ಧಿಗೆ ಮುಂದಾಬೇಕು.”

ಮೋಹನ್, ಜಯನಗರ (ಕೆ.ಶಿವರಾಂ ಬಡಾವಣೆ)

” ಶವ ಸಂಸ್ಕಾರಕ್ಕಾಗಿ ಸ್ಮಶಾನಕ್ಕೆ ಬರುವವರಿಗೆ ನೀರು, ವಿದ್ಯುತ್ ವ್ಯವಸ್ಥೆ ಇರಲಿ, ಕನಿಷ್ಠ ಸ್ವಚ್ಛತೆ ಕಡೆಗೂ ಅಧಿಕಾರಿಗಳು ಗಮನಹರಿಸುತ್ತಿಲ್ಲ. ಮೂಲ ಸೌಲಭ್ಯಗಳೇ ಇಲ್ಲದಿರುವಾಗ ಇಲ್ಲಿ ಶವಸಂಸ್ಕಾರ ನಡೆಸುವುದಾದರೂ ಹೇಗೆ?.”

ಈಶ್ವರ್ ಚಕ್ಕಡಿ, ಕಾಂಗ್ರೆಸ್ ಮುಖಂಡ 

ಆಂದೋಲನ ಡೆಸ್ಕ್

Recent Posts

ಮಹದೇಶ್ವರ ಬೆಟ್ಟ | ದಾಸೋಹ-ಲಾಡು ಪ್ರಸಾದಕ್ಕೆ ಸಿಲಿಂಡರ್ ಕೊರತೆ ಇಲ್ಲ ; ಅಪಪ್ರಚಾರಕ್ಕೆ ಕಿವಿಗೊಡದಿರಿ

ಹನೂರು : ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ದಾಸೋಹ, ಲಾಡು ಪ್ರಸಾದ ತಯಾರಿಸಲು ಯಾವುದೇ ರೀತಿಯ ಸಿಲಿಂಡರ್ ಕೊರತೆಯಾಗಿಲ್ಲ…

1 hour ago

ಮ.ಬೆಟ್ಟ | ಯುಗಾದಿ ಜಾತ್ರೆಗೆ ಪಾದಯಾತ್ರೆಯಲ್ಲಿ ಬರುತ್ತಿರುವ ಭಕ್ತರು

ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಯುಗಾದಿ ಜಾತ್ರಾ ಮಹೋತ್ಸವಕ್ಕೆ…

1 hour ago

ಮೈಸೂರು | ಕೆಂಪೇಗೌಡ ವೃತ್ತ ಕಾಮಗಾರಿ ಪರಿಶೀಲಿಸಿದ ಸಂಸದ ಯದುವೀರ್‌

ಮೈಸೂರು : ನಗರದ ಹೊರವಲಯದ ಕೆಂಪೇಗೌಡ ವೃತ್ತ(ಮಣಿಪಾಲ್ ಜಂಕ್ಷನ್)ದಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರದಿಂದ ನಡೆಯುತ್ತಿರುವ ಕಾಮಗಾರಿಗಳನ್ನು ಸಂಸದ ಯದುವೀರ್…

2 hours ago

ಚಿಕ್ಕಮಗಳೂರು: ಮುತ್ತೋಡಿ ಅರಣ್ಯದಲ್ಲಿ ಭಾರೀ ಕಾಡ್ಗಿಚ್ಚು

ಚಿಕ್ಕಮಗಳೂರು: ತಾಲ್ಲೂಕಿನ ಮುತ್ತೋಡಿ ಅರಣ್ಯ ವಲಯದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಪ್ರಮಾಣದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಪರಿಣಾಮ ಅಪರೂಪದ ಅರಣ್ಯ…

3 hours ago

ಯುಗಾದಿ ಹಾಗೂ ರಂಜಾನ್‌ ಹಬ್ಬಕ್ಕೆ 2000 ಹೆಚ್ಚುವರಿ ಬಸ್‌ ವ್ಯವಸ್ಥೆ: ಕೆಎಸ್‌ಆರ್‌ಟಿಸಿ ಪ್ರಕಟಣೆ

ಬೆಂಗಳೂರು: ಯುಗಾದಿ ಹಾಗೂ ರಂಜಾನ್‌ ಹಬ್ಬದ ಪ್ರಯುಕ್ತ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ 2000 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ…

3 hours ago

ಬಾಗಲಕೋಟೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಅಡಿಗಲ್ಲು: ಹೆಚ್.ವೈ.ಮೇಟಿಯವರ ಕನಸು ನನಸು: ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ: ದಿವಂಗತ ಹೆಚ್.ವೈ.ಮೇಟಿಯವರ ಪ್ರಯತ್ನ ಮತ್ತು ಆಶಯದಂತೆ ಸರ್ಕಾರಿ ವೈದ್ಯಕೀಯ ಕಾಲೇಜು ಉದ್ಘಾಟಿಸುವ ಮೂಲಕ ಅವರ ಕನಸನ್ನು ನನಸು ಮಾಡಲಾಗುತ್ತಿದೆ…

4 hours ago