Andolana originals

ಮೂಲಸೌಕರ್ಯಗಳಿಲ್ಲದ ಜಯನಗರ ಸ್ಮಶಾನ

ಪ್ರಶಾಂತ್ ಎಸ್.

ಶವ ಸಂಸ್ಕಾರ ಸ್ಥಾವರದ ಸಾಮಗ್ರಿಗಳು ಕಳ್ಳರ ಪಾಲು

ಬೆಳಕಿನ ವ್ಯವಸ್ಥೆ ಇಲ್ಲದೇ ಕತ್ತಲಿನಲ್ಲಿಯೇ ಹೂಳಬೇಕಾದ ಸ್ಥಿತಿ ನಿರ್ಮಾಣ 

ಕುಡಿಯಲು ನೀರಿಲ್ಲ, ಆಳೆತ್ತರಕ್ಕೆ ಬೆಳೆದ ಗಿಡಗಂಟಿಗಳು

ಮೈಸೂರು: ಮಳೆ ಬಂದರೆ ಜಲಾವೃತವಾಗುವ ಸ್ಮಶಾನ.., ನಿಲ್ಲಲು ಸೂಕ್ತ ನೆರಳಿನ ವ್ಯವಸ್ಥೆ ಇಲ್ಲ.., ಸುಸ್ತಾದರೂ ಕುಡಿಯಲು ಗುಟುಕು ನೀರಿಲ್ಲ.., ರಾತ್ರಿ ಸಮಯದಲ್ಲಿ ಬೆಳಕಿನ ವ್ಯವಸ್ಥೆ ಇಲ್ಲವೇ ಇಲ್ಲ.., ಎಲ್ಲೆಂದರಲ್ಲಿ ಬಿದ್ದಿರುವ ಕಸ-ಕಡ್ಡಿಗಳು, ಕಲ್ಲು-ಮುಳ್ಳುಗಳು…

ಇದು ಜಯನಗರ-ಮಳಲವಾಡಿ ರುದ್ರಭೂಮಿಯ ಸ್ಥಿತಿ. ಈ ರುದ್ರಭೂಮಿಯು ಮೂಲ ಸೌಕರ್ಯಗಳಿಂದ ವಂಚಿತವಾಗಿದೆ. ಸೂಕ್ತ ರೀತಿಯ ಸೌಕರ್ಯಗಳನ್ನು ವ್ಯವಸ್ಥೆ ಮಾಡಿಕೊಡದ ಕಾರಣ ಶವ ಸಂಸ್ಕಾರ ಮಾಡಲು ಬರುವ ಸಾರ್ವಜನಿಕರು ಪರದಾಡುವಂತಾಗಿದೆ.

ಅಂತ್ಯಸಂಸ್ಕಾರಕ್ಕೆ ತೊಂದರೆ ಜಯನಗರ ಮಳಲವಾಡಿ ರುದ್ರಭೂಮಿಗೆ ನಗರಪಾಲಿಕೆ ಅಗತ್ಯ ಮೂಲ ಸೌಲಭ್ಯ ಒದಗಿಸಿಲ್ಲ. ಯಾರಾದರೂ ಮೃತಪಟ್ಟರೆ ಅಂತ್ಯಸಂಸ್ಕಾರಕ್ಕೆ ತೊಂದರೆಯಾಗುತ್ತಿದೆ. ಸ್ಮಶಾನದಲ್ಲಿ ಬೆಳಕಿನ ವ್ಯವಸ್ಥೆ ಇಲ್ಲದೇ ಕತ್ತಲಲ್ಲಿ ಜನರು ಅಂತ್ಯಕ್ರಿಯೆ ನಡೆಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಅಭಿವೃದ್ಧಿ ಮರೀಚಿಕೆ: ಹಲವು ವರ್ಷಗಳಿಂದ ಅಭಿವೃದ್ಧಿ ಕಾಣದ ರುದ್ರಭೂಮಿಗೆ ಇತ್ತೀಚೆಗಷ್ಟೆ ಕಾಂಪೌಂಡ್ ನಿರ್ಮಿಸಲಾಗಿದೆ. ಮುಳ್ಳು ಗಂಟಿಗಳಿಂದ ಕೂಡಿರುವ ಸ್ಥಳದಲ್ಲಿ ಶವಗಳನ್ನು ಹೂಳಬೇಕಾಗಿದೆ. ಮಳೆಗಾಲದಲ್ಲಿ ಜನರು ಇನ್ನಷ್ಟು ತೊಂದರೆ ಪಡಬೇಕಾಗುತ್ತದೆ. ಅಂತ್ಯಕ್ರಿಯೆಗೆ ಬರುವ ವಯೋವೃದ್ಧರು ಭಯದೊಂದಿಗೆ ಸ್ಮಶಾನದಲ್ಲಿ ತೆರಳುವಂತಾಗಿದೆ.

ಮನವಿಗೆ ಸಿಗದ ಸ್ಪಂದನೆ: ನೆರಳಿಲ್ಲ, ಕುಡಿಯಲು ನೀರಿಲ್ಲ, ರಾತ್ರಿ ಸಮಯದಲ್ಲಿ ಬೆಳಕಿನ ವ್ಯವಸ್ಥೆ ಇಲ್ಲ. ಮೂಲಸೌಕರ್ಯ ಒದಗಿಸುವಂತೆ ಅನೇಕ ಬಾರಿ ಸ್ಥಳೀಯ ನಗರಪಾಲಿಕೆ ಸದಸ್ಯರು, ಪಾಲಿಕೆ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಗಿದೆ. ಆದರೂ ಅಧಿಕಾರಿಗಳು ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ಜನರು ಆಕ್ರೋಶ ವ್ಯಕ್ತಪಡಿಸುತ್ತಾರೆ

” ಕುಡಿಯುವ ನೀರು, ನೆರಳು, ಸ್ವಚ್ಛತೆ ಇಲ್ಲದಂತಾಗಿದೆ. ಅಂತ್ಯಕ್ರಿಯೆ ವೇಳೆ ಜನಸಾಮಾನ್ಯರಿಗೆ ತೊಂದರೆಯಾಗುತ್ತಿದೆ. ಕೂಡಲೇ ಸಂಬಂಧಪಟ್ಟ ಅಽಕಾರಿಗಳು ಇತ್ತ ಗಮನಹರಿಸಬೇಕು. ರುದ್ರಭೂಮಿಯ ಅಭಿವೃದ್ಧಿಗೆ ಬಿಡುಗಡೆಯಾಗುವ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಬೇಕು.”

ಮಹದೇವು, ಜಯನಗರ ನಿವಾಸಿ (ಕೆ.ಶಿವರಾಂ ಬಡಾವಣೆ)

” ಜಯನಗರ-ಮಳಲವಾಡಿ ಸ್ಮಶಾನದಲ್ಲಿ ಮೂಲ ಸೌಕರ್ಯಗಳ ಕೊರತೆ ಇರುವುದರ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ. ಸ್ಥಳ ಪರಿಶೀಲನೆ ನಡೆಸಿ ಸದ್ಯದಲ್ಲಿಯೇ ಕ್ರಮ ಕೈಗೊಳ್ಳುತ್ತೇನೆ.”

ಶೇಕ್ ತನ್ವೀರ್ ಆಸಿಫ್, ಆಯುಕ್ತರು, ನಗರಪಾಲಿಕೆ

” ಅಭಿವೃದ್ಧಿ ಕಾಣದ ಸ್ಮಶಾನಗಳಲ್ಲಿ ರಾತ್ರಿ ವೇಳೆ ಅನೈತಿಕ ಚಟುವಟಿಕೆಗಳು ನಡೆಯುತ್ತಿವೆ. ಕಾಂಪೌಂಡ್ ಇಲ್ಲದ ರುದ್ರಭೂಮಿ ಜಾಗ ಕೆಲ ಕಡೆಗಳಲ್ಲಿ ಒತ್ತುವರಿಯಾಗಿದೆ. ಆದ್ದರಿಂದ ನಗರಪಾಲಿಕೆ ಅಧಿಕಾರಿಗಳು ರುದ್ರಭೂಮಿ ಅಭಿವೃದ್ಧಿಗೆ ಮುಂದಾಬೇಕು.”

ಮೋಹನ್, ಜಯನಗರ (ಕೆ.ಶಿವರಾಂ ಬಡಾವಣೆ)

” ಶವ ಸಂಸ್ಕಾರಕ್ಕಾಗಿ ಸ್ಮಶಾನಕ್ಕೆ ಬರುವವರಿಗೆ ನೀರು, ವಿದ್ಯುತ್ ವ್ಯವಸ್ಥೆ ಇರಲಿ, ಕನಿಷ್ಠ ಸ್ವಚ್ಛತೆ ಕಡೆಗೂ ಅಧಿಕಾರಿಗಳು ಗಮನಹರಿಸುತ್ತಿಲ್ಲ. ಮೂಲ ಸೌಲಭ್ಯಗಳೇ ಇಲ್ಲದಿರುವಾಗ ಇಲ್ಲಿ ಶವಸಂಸ್ಕಾರ ನಡೆಸುವುದಾದರೂ ಹೇಗೆ?.”

ಈಶ್ವರ್ ಚಕ್ಕಡಿ, ಕಾಂಗ್ರೆಸ್ ಮುಖಂಡ 

ಆಂದೋಲನ ಡೆಸ್ಕ್

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

5 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

6 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

7 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

7 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

12 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

12 hours ago