ಕೊಂಡೋತ್ಸವಕ್ಕೆ ೫ ಎತ್ತಿನ ಗಾಡಿಗಳಲ್ಲಿ ಖಗ್ಗಲಿ ಸೌದೆ ತಂದ ಗ್ರಾಮಸ್ಥರು
ಮೈಸೂರು: ತಾಲ್ಲೂಕಿನ ಜಯಪುರ ಗ್ರಾಮದ ಶ್ರೀ ಜೇಡಿಕಟ್ಟೆ ಮಹದೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವದಲ್ಲಿ ನಡೆಯಲಿರುವ ಕೊಂಡೋತ್ಸವಕ್ಕೆ ಬರಡನಪುರ ಮತ್ತು ಮಾವಿನಹಳ್ಳಿ ಗ್ರಾಮಸ್ಥರು ಸೋಮವಾರ ೫ ಎತ್ತಿನ ಗಾಡಿಗಳಲ್ಲಿ ಖಗ್ಗಲಿ ಸೌದೆಯ ರಾಶಿಯನ್ನು ದೇವಾಲಯ ಆವರಣಕ್ಕೆ ತಂದು ಜೋಡಿಸಿದರು.
ಫೆ.೨೩ ಮತ್ತು ೨೪ರಂದು ಎರಡು ದಿನಗಳ ಕಾಲ ಜಾತ್ರಾ ಮಹೋತ್ಸವ ನಡೆಯಲಿದೆ. ಕೊಂಡೋತ್ಸವಕ್ಕೆ ಒಂದು ತಿಂಗಳು ಮುಂಚಿತವಾಗಿ ಖಗ್ಗಲಿ ಸೌದೆಯನ್ನು ತಂದು ಶೇಖರಿಸುವುದು ವಾಡಿಕೆ. ಬರಡನಪುರ ಗ್ರಾಮದಿಂದ ೩ ಎತ್ತಿನ ಗಾಡಿ, ಮಾವಿನಹಳ್ಳಿ ಗ್ರಾಮದಿಂದ ೨ ಎತ್ತಿನಗಾಡಿಗಳಲ್ಲಿ ಸೌದೆ ತುಂಬಿ ಕೊಂಡು ದಾರಿಯುದ್ದಕ್ಕೂ ಉಘೇ ಮಾದಪ್ಪ… ಉಘೇ ಮಾದಪ್ಪ… ಎಂಬ ಜಯಘೋಷಗಳೊಂದಿಗೆ ದೇವಾಲಯ ಆವರಣ ತಲುಪಿದರು.
ಈ ವೇಳೆ ಮಹದೇಶ್ವರ ಸ್ವಾಮಿಗೆ ಮಹಾಮಂಗಳಾರತಿ ನೆರವೇರಿಸಿದ ನಂತರ ದೇವಾಲಯಕ್ಕೆ ಆಗಮಿಸಿದ್ದ ಸಾವಿರಾರು ಭಕ್ತರಿಗೆ ತುಪ್ಪದ ಕಜ್ಜಾಯ ಸಿಹಿ ಊಟ ಅನ್ನಸಂತರ್ಪಣೆ ವ್ಯವಸ್ಥೆ ಮಾಡಲಾಗಿತ್ತು. ಜಯಪುರ ಪೊಲೀಸ್ ಠಾಣೆ ಪಿಸಿಐ ಕಾಳೇಗೌಡ ಅವರು ದೇವಾಲಯಕ್ಕೆ ಭೇಟಿ ನೀಡಿ ಜಾತ್ರೋತ್ಸವ ಸಿದ್ಧತೆ ಕುರಿತು ದೇವಾಲಯ ಸಮಿತಿಯಿಂದ ಮಾಹಿತಿ ಪಡೆದುಕೊಂಡರು.
ಜಾತ್ರಾ ದಿನ ೧೦ ಸಾವಿರ ಜನರಿಗೆ ದಾಸೋಹ ವ್ಯವಸ್ಥೆ ಮಾಡಲಾಗಿದೆ. ಫೆ.೨೩ರಂದು ರಾತ್ರಿ ಜಾನಪದ ಕಲಾವಿದರಾದ ಮೈಸೂರು ಗುರುರಾಜು ಮತ್ತು ತಂಡದವರಿಂದ ಮಹದೇಶ್ವರ ಕಥೆ ಏರ್ಪಡಿಸಲಾಗಿದೆ. ಹುಲಿ ವಾಹನೋತ್ಸವ, ಹಾಲ ರವಿ ಉತ್ಸವ, ಕೊಂಡೋತ್ಸವ, ವಿಶೇಷ ವಿದ್ಯುತ್ ದೀಪಾಲಂಕಾರ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಜೇಡಿಕಟ್ಟೆ ಮಹದೇಶ್ವರ ಸ್ವಾಮಿ ದೇವಾಲಯ ಸಮಿತಿ ಅಧ್ಯಕ್ಷ ಮಾವಿನಹಳ್ಳಿ ಎಸ್. ಸಿದ್ದೇಗೌಡ ತಿಳಿಸಿದರು.
ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…
ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…
ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…
ದಿಸ್ಪುರ್: ನೆರೆಯ ರಾಜ್ಯ ಅರುಣಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಭೀಕರ ಪ್ರವಾಹ ಸೃಷ್ಟಿಯಾಗಿದೆ. ಭಾರೀ…
ಎಚ್.ಡಿ.ಕೋಟೆ: ಈ ಬಾರಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರಾಜ್ಯದ ಜಲಾಶಯಗಳು ಬರಿದಾಗುತ್ತಿವೆ. ರಾಜ್ಯದಲ್ಲಿ ಮೊದಲು ಭರ್ತಿಯಾಗುವ ಜಲಾಶಯ ಎಂಬ…
ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…