ಕೊಂಡೋತ್ಸವಕ್ಕೆ ೫ ಎತ್ತಿನ ಗಾಡಿಗಳಲ್ಲಿ ಖಗ್ಗಲಿ ಸೌದೆ ತಂದ ಗ್ರಾಮಸ್ಥರು
ಮೈಸೂರು: ತಾಲ್ಲೂಕಿನ ಜಯಪುರ ಗ್ರಾಮದ ಶ್ರೀ ಜೇಡಿಕಟ್ಟೆ ಮಹದೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವದಲ್ಲಿ ನಡೆಯಲಿರುವ ಕೊಂಡೋತ್ಸವಕ್ಕೆ ಬರಡನಪುರ ಮತ್ತು ಮಾವಿನಹಳ್ಳಿ ಗ್ರಾಮಸ್ಥರು ಸೋಮವಾರ ೫ ಎತ್ತಿನ ಗಾಡಿಗಳಲ್ಲಿ ಖಗ್ಗಲಿ ಸೌದೆಯ ರಾಶಿಯನ್ನು ದೇವಾಲಯ ಆವರಣಕ್ಕೆ ತಂದು ಜೋಡಿಸಿದರು.
ಫೆ.೨೩ ಮತ್ತು ೨೪ರಂದು ಎರಡು ದಿನಗಳ ಕಾಲ ಜಾತ್ರಾ ಮಹೋತ್ಸವ ನಡೆಯಲಿದೆ. ಕೊಂಡೋತ್ಸವಕ್ಕೆ ಒಂದು ತಿಂಗಳು ಮುಂಚಿತವಾಗಿ ಖಗ್ಗಲಿ ಸೌದೆಯನ್ನು ತಂದು ಶೇಖರಿಸುವುದು ವಾಡಿಕೆ. ಬರಡನಪುರ ಗ್ರಾಮದಿಂದ ೩ ಎತ್ತಿನ ಗಾಡಿ, ಮಾವಿನಹಳ್ಳಿ ಗ್ರಾಮದಿಂದ ೨ ಎತ್ತಿನಗಾಡಿಗಳಲ್ಲಿ ಸೌದೆ ತುಂಬಿ ಕೊಂಡು ದಾರಿಯುದ್ದಕ್ಕೂ ಉಘೇ ಮಾದಪ್ಪ… ಉಘೇ ಮಾದಪ್ಪ… ಎಂಬ ಜಯಘೋಷಗಳೊಂದಿಗೆ ದೇವಾಲಯ ಆವರಣ ತಲುಪಿದರು.
ಈ ವೇಳೆ ಮಹದೇಶ್ವರ ಸ್ವಾಮಿಗೆ ಮಹಾಮಂಗಳಾರತಿ ನೆರವೇರಿಸಿದ ನಂತರ ದೇವಾಲಯಕ್ಕೆ ಆಗಮಿಸಿದ್ದ ಸಾವಿರಾರು ಭಕ್ತರಿಗೆ ತುಪ್ಪದ ಕಜ್ಜಾಯ ಸಿಹಿ ಊಟ ಅನ್ನಸಂತರ್ಪಣೆ ವ್ಯವಸ್ಥೆ ಮಾಡಲಾಗಿತ್ತು. ಜಯಪುರ ಪೊಲೀಸ್ ಠಾಣೆ ಪಿಸಿಐ ಕಾಳೇಗೌಡ ಅವರು ದೇವಾಲಯಕ್ಕೆ ಭೇಟಿ ನೀಡಿ ಜಾತ್ರೋತ್ಸವ ಸಿದ್ಧತೆ ಕುರಿತು ದೇವಾಲಯ ಸಮಿತಿಯಿಂದ ಮಾಹಿತಿ ಪಡೆದುಕೊಂಡರು.
ಜಾತ್ರಾ ದಿನ ೧೦ ಸಾವಿರ ಜನರಿಗೆ ದಾಸೋಹ ವ್ಯವಸ್ಥೆ ಮಾಡಲಾಗಿದೆ. ಫೆ.೨೩ರಂದು ರಾತ್ರಿ ಜಾನಪದ ಕಲಾವಿದರಾದ ಮೈಸೂರು ಗುರುರಾಜು ಮತ್ತು ತಂಡದವರಿಂದ ಮಹದೇಶ್ವರ ಕಥೆ ಏರ್ಪಡಿಸಲಾಗಿದೆ. ಹುಲಿ ವಾಹನೋತ್ಸವ, ಹಾಲ ರವಿ ಉತ್ಸವ, ಕೊಂಡೋತ್ಸವ, ವಿಶೇಷ ವಿದ್ಯುತ್ ದೀಪಾಲಂಕಾರ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಜೇಡಿಕಟ್ಟೆ ಮಹದೇಶ್ವರ ಸ್ವಾಮಿ ದೇವಾಲಯ ಸಮಿತಿ ಅಧ್ಯಕ್ಷ ಮಾವಿನಹಳ್ಳಿ ಎಸ್. ಸಿದ್ದೇಗೌಡ ತಿಳಿಸಿದರು.
ಕೆ.ಆರ್.ನಗರ : ಹಣದಾಸಗೆ ವೃದ್ದೆಯನ್ನು ಕೊಲೆಗೈದು ಶೌಚಾಲಯದ ಯುಜಿಡಿ ಗುಂಡಿಯಲ್ಲಿ ಹೂತು ಹಾಕಿರುವ ಘಟನೆ ತಾಲೂಕಿನ ತಿಪ್ಪೂರು ಗ್ರಾಮದಲ್ಲಿ ನಡೆದಿದೆ.…
ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ 15 ವರ್ಷಗಳ ಟಿಎಂಸಿ ಆಡಳಿತಕ್ಕೆ ತೆರೆ ಎಳೆದು ಐತಿಹಾಸಿಕ ಗೆಲುವು ಸಾಧಿಸಿರುವ ಬಿಜೆಪಿ, ಮೇ…
ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನು ಪಡೆದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಟಿವಿಕೆ ಸರ್ಕಾರ ರಚಿಸಲು…
ಹಾಸನ : ಮಾಧ್ಯಮಗಳಲ್ಲಿ ಡಿಎಂಕೆ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ವರದಿಗಳು ಹರಿದಾಡುತ್ತಿದ್ದವು. ಆದರೆ ವಿಜಯ್ ಅವರ ಈಗಿನ ಸಾಧನೆಯನ್ನು…
ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ಮೂರು ಯುದ್ಧನೌಕೆಗಳ ಮೇಲೆ ಇರಾನ್ ಕ್ಷಿಪಣಿ, ಡ್ರೋನ್ ಮತ್ತು ಸಣ್ಣ ದೋಣಿಗಳ ಮೂಲಕ…
ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ಅವರ ಈ ಪ್ರವಾಸದ ಹಿಂದೆ ತಮ್ಮ ರಾಜ್ಯದ ಪ್ರವಾಸೋದ್ಯಮವನ್ನು…