Andolana originals

ಗ್ರಾಮೀಣರನ್ನು ರಂಜಿಸಿದ ಜೀಪ್ಆಫ್ ರೋಡ್ ರ್ಯಾಲಿ

ಸೋಮವಾರಪೇಟೆ: ಟೀಮ್ ೧೨ ಆಫ್ ರೋಡರ್ಸ್ ವತಿಯಿಂದ ತಾಲ್ಲೂಕಿನ ಕೊತ್ನಳ್ಳಿ, ಕುಡಿಗಾಣ, ಬೆಂಕಳ್ಳಿ ಗ್ರಾಮಗಳ ಖಾಸಗಿ ಜಮೀನಿನಲ್ಲಿ ನಡೆದ ಜೀಪ್ ಆಫ್ ರೋಡ್ ರ‍್ಯಾಲಿ ಗ್ರಾಮೀಣ ಜನರನ್ನು ರಂಜಿಸಿತು.

ಕೊತ್ನಳ್ಳಿ ಗ್ರಾಮಸ್ಥರು ರ‍್ಯಾಲಿಗೆ ಚಾಲನೆ ನೀಡಿದರು. ಟ್ರ್ಯಾಕ್‌ನಲ್ಲಿ ಜೀಪ್ ತೆರಳುತ್ತಿದ್ದಂತೆ ಧಾರಾಕಾರ ಮಳೆ ಸುರಿಯಲು ಪ್ರಾರಂಭಿಸಿತು. ಕಡಿದಾದ ರಸ್ತೆಯಲ್ಲಿ ಅನೇಕ ವಾಹನಗಳು ಸಿಲುಕಿಕೊಂಡವು. ನಂತರ ಟ್ರಾಕ್ಟರ್ ಮತ್ತು ಕ್ರೇನ್ ಬಳಸಿ ವಾಹನಗಳನ್ನು ಟ್ರಾಕ್‌ಗಳಿಗೆ ತರಲಾಯಿತು. ಅತಿ ಹೆಚ್ಚು ಮಳೆ ಬೀಳುವ ಕುಡಿಗಾಣ, ಕೊತ್ತನಳ್ಳಿ ಗ್ರಾಮದ ಖಾಸಗಿ ಜಾಗದ ಕಾಫಿ, ಏಲಕ್ಕಿ ತೋಟಗಳ ಕಚ್ಚಾ ರಸ್ತೆಯಲ್ಲಿ ತೆರಳುವುದು ಚಾಲಕರಿಗೆ ಸವಾಲಾಗಿ ಪರಿಣಮಿಸಿತು.

ರಾಜ್ಯದ ವಿವಿಧ ಭಾಗಗಳಿಂದ ೧೨೫ ವಾಹನಗಳಲ್ಲಿ ೨೫೦ ಕ್ಕೂ ಹೆಚ್ಚು ಸ್ಪರ್ಧಿಗಳು ಭಾಗವಹಿಸಿದ್ದರು. ಖಾಸಗಿ ಜಮೀನಿನಲ್ಲೇ ಜೀಪ್ ಆಫ್‌ರೋಡ್ ರ‍್ಯಾಲಿಯನ್ನು ಆಯೋಜಿಸಲಾಗಿತ್ತು. ಅರಣ್ಯ ಪ್ರದೇಶದಲ್ಲಿ ಯಾವುದೇ ಟ್ರ್ಯಾಕ್ ಇರುವುದಿಲ್ಲ. ಕಾಫಿ, ಏಲಕ್ಕಿ ತೋಟದ ರಸ್ತೆಯಲ್ಲಿ ನಡೆಯಿತು. ಇದು ಆಫ್‌ರೋಡ್ ಸ್ಪೋಟ್ಸ್ ಇವೆಂಟ್ ಆಗಿರುವುದರಿಂದ ಸರ್ಕಾರದ ಎಲ್ಲಾ ನಿಯಮಗಳನ್ನು ಪಾಲಿಸಲಾಗಿದೆ.

ರ‍್ಯಾಲಿ ಅಯೋಜನೆಗೆ ಮೊದಲು ಆಯೋಜಕರು ತಮ್ಮ ಸ್ವಂತ ಖರ್ಚಿನಲ್ಲಿ ತೋಟದೊಳಗೆ ಅನೇಕ ರಸ್ತೆಗಳನ್ನು ಮಾಡಿಕೊಟ್ಟಿದ್ದಾರೆ.ಗ್ರಾಮಸ್ಥರು ಜೀಪ್ ಆಫ್‌ರೋಡ್ ರ‍್ಯಾಲಿ ನಡೆಸಲು ಪ್ರತಿವರ್ಷ ಸಹಕಾರ ನೀಡುತ್ತಾ ಬಂದಿದ್ದಾರೆ. ಪ್ರಕೃತಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳ ಲಾಗಿದೆ ಎಂದು ಟೀಮ್ ೧೨ ಆಯೋಜಕರಾದ ಪಿ.ಕೆ.ರವಿ ಹೇಳಿದರು

ಸಿ ಆಂಡ್ ಡಿ ಜಾಗದಲ್ಲಿ ರ‍್ಯಾಲಿಗೆ ತಡೆ..!:  ಪುಷ್ಪಗಿರಿ ಅರಣ್ಯ ಪ್ರದೇಶದಲ್ಲಿ ಜೀಪ್ ಆಫ್‌ರೋಡ್ ರ‍್ಯಾಲಿ ನಡೆಸದಂತೆ ಕೊತ್ನಳ್ಳಿ ಗ್ರಾಮದ ಕೆ.ಪಿ.ಅಜಿತ್ ಎಂಬವರು ಹೈಕೋರ್ಟ್‌ನಲ್ಲಿ ರಿಟ್‌ಪಿಟಿಷನ್ ಹಾಕಿರುವುದರಿಂದ, ಅರಣ್ಯ ಇಲಾಖೆ ಮತ್ತು ತಾಲ್ಲೂಕು ಆಡಳಿತ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಿತ್ತು. ಶಾಂತಳ್ಳಿ ಜಂಕ್ಷನ್‌ನಿಂದ ಜೀಪ್ ಆಫ್‌ರೋಡ್ ರ‍್ಯಾಲಿಯಲ್ಲಿ ವಾಹನಗಳು ತೆರಳದಂತೆ ಅರಣ್ಯ ಇಲಾಖೆ, ಪೊಲೀಸ್ ಹಾಗೂ ತಾಲ್ಲೂಕು ಆಡಳಿತ ತಡೆ ನೀಡಿತು. ಅರಣ್ಯ ಹಾಗೂ ಸಿ ಆಂಡ್ ಡಿ ಜಾಗದೊಳಗೆ ಆಫ್ ರೋಡ್ ವಾಹನಗಳು ತೆರಳಲು ಅವಕಾಶವಿಲ್ಲ ಎಂದು ಎಸಿಎಫ್ ಗೋಪಾಲ್, ತಹಸಿಲ್ದಾರ್ ಕೃಷ್ಣಮೂರ್ತಿ, ಇನ್ಸ್‌ಪೆಕ್ಟರ್ ಮುದ್ದು ಮಹಾದೇವ ಹೇಳಿದರು. ಖಾಸಗಿ ಜಾಗದಲ್ಲಿ ವಾಹನಗಳು ತೆರಳಲು ಡಿಎಫ್‌ಒ ಅವರಿಂದ ಅನುಮತಿ ಪತ್ರ ಸಿಕ್ಕ ನಂತರ ಅಧಿಕಾರಿಗಳು ವಾಹನಗಳನ್ನು ಬಿಟ್ಟುಕೊಟ್ಟರು.

ಆಂದೋಲನ ಡೆಸ್ಕ್

Recent Posts

ಚಾ.ನಗರ | ಬೇಡರಪುರದಲ್ಲಿ ಮತ್ತೊಂದು ಚಿರತೆ ಸೆರೆ

ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…

7 hours ago

ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಿಸಿ : ಡಿಸಿ, ಸಿಇಓಗಳಿಗೆ ಮಧು ಬಂಗಾರಪ್ಪ ಸೂಚನೆ

ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…

7 hours ago

ಕಾರು-ಬೈಕ್‌ ನಡುರೆ ಭೀಕರ ಅಪಘಾತ : ಇಬ್ಬರು ಸ್ಥಳದಲ್ಲೇ ಸಾವು

ಸಿದ್ದಾಪುರ : ಎರಡು ಬೈಕ್‌ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…

8 hours ago

ವಾಣಿಜ್ಯ ಬಳಕೆಯ ಸಿಲಿಂಡರ್‌ ಪೂರೈಕೆಯಲ್ಲಿ ಶೇ20 ರಷ್ಟು ಹೆಚ್ಚಳ

ಹೊಸದಿಲ್ಲಿ : ಎಲ್‌ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…

8 hours ago

ಇರಾನ್‌ ಡ್ರೋನ್‌ ಉತ್ಪಾದನಾ ಘಟಕದ ಮೇಲೆ ಅಮೆರಿಕ ದಾಳಿ : ಚಿತ್ರ ಬಿಡುಗಡೆ

ಟೆಹ್ರಾನ್ : ಇರಾನ್‌ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…

9 hours ago

ಹೊಸ ಜಾಹೀರಾತು ನೀತಿ ಮೂಲಕ ಪತ್ರಿಕೆಗಳ ದಮನಕ್ಕೆ ಮುಂದಾದ ಸರ್ಕಾರ : ಪುನರ್‌ ಪರಿಶೀಲನೆಗೆ ಒತ್ತಾಯ

ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…

9 hours ago