೧೮ ಲಕ್ಷ ರೂ. ಮೌಲ್ಯದ ಒಡವೆಗಳ ಅಪಹರಣ
ಮೈಸೂರು: ನಗರ ಸಾರಿಗೆ ಬಸ್ನಲ್ಲಿ ಮಹಿಳಾ ಪ್ರಯಾಣಿಕರೊಬ್ಬರ ಬ್ಯಾಗ್ನಲ್ಲಿದ್ದ ಸುಮಾರು ೧೮ ಲಕ್ಷ ರೂ. ಮೌಲ್ಯದ ೨೬೨ ಗ್ರಾಂ ಚಿನ್ನಾಭರಣಗಳನ್ನು ಖದೀಮರು ಲಪಟಾಯಿಸಿರುವ ಘಟನೆ ನಡೆದಿದೆ.
ರಾಮಕೃಷ್ಣ ನಗರ ನಿವಾಸಿ ಹೇಮ ಲತಾ ಚಿನ್ನಾಭರಣ ಕಳೆದುಕೊಂಡವರು. ನಗರದ ಅಶೋಕ ವೃತ್ತದ ಬಳಿ ಇರುವ ಕೆನರಾ ಬ್ಯಾಂಕ್ನ ಲಾಕರ್ ನಲ್ಲಿ ಇಟ್ಟಿದ್ದ ಚಿನ್ನಾಭರಣಗಳನ್ನು ಅವರು ವಾಪಸ್ ಪಡೆದಿದ್ದಾರೆ.
ನಂತರ ಮಧ್ಯಾಹ್ನ ೨.೩೦ರ ವೇಳೆಯಲ್ಲಿ ಅಶೋಕ ವೃತ್ತದ ಬಸ್ ತಂಗುದಾಣದಿಂದ ರಾಮಕೃಷ್ಣನಗರಕ್ಕೆ ತೆರಳಲು ನಗರ ಸಾರಿಗೆ ಬಸ್ ಹತ್ತಿದ್ದಾರೆ. ಈ ಸಮಯದಲ್ಲಿ ಕಳ್ಳರು ತಮ್ಮ ಕೈಚಳಕ ತೋರಿದ್ದಾರೆ.
ಬ್ಯಾಗ್ನಲ್ಲಿದ್ದ ಆಭರಣಗಳನ್ನು ಲಪಟಾಯಿಸಿದ್ದಾರೆ. ಬಸ್ನಿಂದ ಇಳಿದ ನಂತರ ಹೇಮಲತಾ ಅವರು ಬ್ಯಾಗ್ ಪರಿಶೀಲಿಸಿದಾಗ ಆಭರಣಗಳು ಕಳವಾಗಿರುವುದು ಅರಿವಾಗಿದೆ. ಈ ಸಂಬಂಧ ಅವರು ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
” ರಾಮಕೃಷ್ಣ ನಗರ ನಿವಾಸಿ ಹೇಮಲತಾ ಚಿನ್ನಾಭರಣ ಕಳೆದುಕೊಂಡವರು. ಅವರು ನಗರದ ಅಶೋಕ ವೃತ್ತದ ಬಳಿ ಇರುವ ಕೆನರಾ ಬ್ಯಾಂಕ್ನ ಲಾಕರ್ನಲ್ಲಿ ಇಟ್ಟಿದ್ದ ಚಿನ್ನಾಭರಣಗಳನ್ನು ವಾಪಸ್ ಪಡೆದು ಮನೆಗೆ ಹಿಂದಿರುಗುತ್ತಿದ್ದಾಗ ಕಳವು.”
ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಮೈಸೂರು ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ಆಡಳಿತ ಇದೀಗ…
ರಾಮಕೃಷ್ಣ ಹೆಗಡೆ, ದೇವೇಗೌಡರನ್ನು ನಿರ್ಲಕ್ಷಿಸಿ ಅಧಿಕಾರ ಕಳೆದುಕೊಂಡ ಎಸ್.ಆರ್.ಬೊಮ್ಮಾಯಿ ರಾಜಕಾರಣದಲ್ಲಿ ಸಂವಹನ ಬಹಳ ಮುಖ್ಯ.ಅದರಲ್ಲೂ ಮುಖ್ಯಮಂತ್ರಿ ಹುದ್ದೆಗೇರುವ ನಾಯಕರಿಗೆ ಸಂವಹನ…
ಸಿ.ಎಂ.ನರಸಿಂಹಮೂರ್ತಿ ಚಾಮರಾಜನಗರ ವನಸಿರಿ ಪ್ರಕೃತಿ ಮಾತೆಯ ತವರೂರು. ವನ್ಯ ಸಂಪತ್ತಿನ ತಾಣ. ಅಪ್ರತಿಮ ನೈಸರ್ಗಿಕ ಸಂಪತ್ತು ಹಾಗೂ ಶ್ರೀಮಂತ ಸಾಂಸ್ಕ…
ಆರ್.ಶ್ರೀನಿವಾಸ್ ತಾಲ್ಲೂಕಿನಲ್ಲಿ ೩೭,೬೭೧ ಹೆಕ್ಟೇರ್ ಪೈಕಿ ೬,೨೯೦ ಹೆ.ನಲ್ಲಿ ಮಾತ್ರ ಬಿತ್ತನೆ ಕಾರ್ಯ ಕೆ.ಆರ್.ಪೇಟೆ: ತಾಲ್ಲೂಕಿನಲ್ಲಿ ಪ್ರಸಕ್ತ ಸಾಲಿನ ಜ.೧ರಿಂದ…
ನವೀನ್ ಡಿಸೋಜ ಕೊಡಗಿನಲ್ಲಿ ಮಳೆಗಾಲದಲ್ಲಿ ಎದುರಾಗುವ ವಿದ್ಯುತ್ ಸಮಸ್ಯೆ; ಶಾಶ್ವತ ಪರಿಹಾರಕ್ಕೆ ಬೇಕಿದೆ ಬಹುದೊಡ್ಡ ಮೊತ್ತ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಕರ್ನಾಟಕ-ಕೇರಳ ಗಡಿಭಾಗದಲ್ಲಿರುವ ಬಂಡೀಪುರ ಸಮೀಪದ ಮೂಲೆಹೊಳೆ ಚೆಕ್ಪೋಸ್ಟ್ನಲ್ಲಿ ಸರಕು ಸಾಗಣೆ ವಾಹನಗಳಿಂದ ಅಕ್ರಮವಾಗಿ ಹಣ ವಸೂಲಿ…