Andolana originals

ಕೋಟೆ ಆಸ್ಪತ್ರೆ ಆವರಣದಲ್ಲಿದ್ದ ಜನಔಷಧಿ ಕೇಂದ್ರ ಬಂದ್

ಮಂಜು ಕೋಟೆ

ಖಾಸಗಿ ಮೆಡಿಕಲ್ ಸ್ಟೋರ್‌ಗಳಲ್ಲಿ ದುಬಾರಿ ದರ ನೀಡಿ ಔಷಧಿ ಖರೀದಿಸಬೇಕಾದ ಪರಿಸ್ಥಿತಿ; ಜನರ ಆಕ್ರೋಶ

ಎಚ್.ಡಿ.ಕೋಟೆ: ಬಡರೋಗಿಗಳಿಗೆ ಆಶ್ರಯವಾಗಿದ್ದ ಜನಔಷಧಿ ಕೇಂದ್ರವನ್ನು ನ್ಯಾಯಾಲಯದ ತಡೆ ಆದೇಶದ ನಡುವೆಯೂ ಎಂಎಸ್‌ಐಎಲ್‌ನವರು ಬಂದ್ ಮಾಡಿರುವ ಘಟನೆ ನಡೆದಿದೆ.

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ, ಬಡರೋಗಿಗಳಿಗೆ ಅನುಕೂಲಕರವಾದ ಜನಔಷಧಿ ಕೇಂದ್ರವನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಸ್ಥಾಪಿಸಲಾಗಿತ್ತು. ಆದರೆ, ಈಗ ಅದನ್ನು ಬಂದ್ ಮಾಡಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಕಳೆದ ೭-೮ ವರ್ಷಗಳ ಹಿಂದೆ ಈ ಯೋಜನೆ ಜಾರಿಗೊಂಡಾಗ ಎಂಎಸ್ಐಎಲ್‌ನವರು ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಬಳಿ ಪ್ರಾರಂಭ ಮಾಡಿ, ಪ್ರತಿನಿತ್ಯ ನೂರಾರು ಬಡ ರೋಗಿಗಳಿಗೆ ಕಡಿಮೆ ದರದಲ್ಲಿ ಬಹುತೇಕ ಕಾಯಿಲೆಗಳಿಗೆ ಔಷಧಿಯನ್ನು ನೀಡುತ್ತಿದ್ದರು. ಇದರಿಂದ ತಾಲ್ಲೂಕಿನ ಬಹುತೇಕ ಭಾಗಗಳ ರೋಗಿಗಳಿಗೆ ಅನುಕೂಲವಾಗಿತ್ತು.

ರಾಜ್ಯ ಸರ್ಕಾರ ಇತ್ತೀಚೆಗೆ ಆಸ್ಪತ್ರೆ ಆವರಣದಲ್ಲಿರುವ ಜನಔಷಧಿ ಕೇಂದ್ರಗಳನ್ನು ಮುಚ್ಚಿ, ಆಸ್ಪತ್ರೆಗಳಲ್ಲಿಯೇ ಔಷಧಿಗಳನ್ನು ವಿತರಿಸಲಾಗುವುದು ಎಂದು ಆದೇಶ ಹೊರಡಿಸಿತ್ತು. ಇದರಿಂದ ಆತಂಕಗೊಂಡ ಬಹುತೇಕರು ಹೈಕೋರ್ಟ್ ಮೆಟ್ಟಿಲೇರಿದ್ದರು. ನ್ಯಾಯಾಲಯವು ಪರಿಶೀಲಿಸಿ ಸರ್ಕಾರದ ಆದೇಶಕ್ಕೆ ತಡೆಯಾಜ್ಞೆ ನೀಡಿತ್ತು. ಇದರಿಂದ ಬಡ ರೋಗಿಗಳು ನಿಟ್ಟುಸಿರು ಬಿಟ್ಟಿದ್ದರು.

ಶುಕ್ರವಾರ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿದ್ದ ಜನ ಔಷಧಿ ಕೇಂದ್ರವನ್ನು ಎಂಎಸ್‌ಐಎಲ್‌ನವರು ಸಂಪೂರ್ಣವಾಗಿ ಬಂದ್ ಮಾಡಿ ಅಲ್ಲಿದ್ದ ಔಷಧಿ, ಮತ್ತಿತರ ಪರಿಕರಗಳನ್ನು ಸಾಗಿಸಿದ್ದಾರೆ. ಇದರಿಂದಾಗಿ ವೃದ್ಧರು, ಬಡ ರೋಗಿಗಳು ಅಕ್ಕ ಪಕ್ಕದ ಖಾಸಗಿ ಮೆಡಿಕಲ್ ಸ್ಟೋರ್‌ಗಳಲ್ಲಿ ದುಬಾರಿ ಬೆಲೆ ನೀಡಿ ಔಷಧಿಗಳನ್ನು ಖರೀದಿಸಿ, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದುದು ಕಂಡುಬಂದಿತು.

” ಜನ ಔಷಧಿ ಕೇಂದ್ರದಲ್ಲಿ ಕಡಿಮೆ ದರದಲ್ಲಿ ಬಹಳಷ್ಟು ಔಷಧಿಗಳನ್ನು ಖರೀದಿಸುತ್ತಿದ್ದೆವು. ಈಗ ಅದನ್ನು ಬಂದ್ ಮಾಡಿರುವುದರಿಂದ ಬಹಳಷ್ಟು ಕಷ್ಟ ಎದುರಾಗುತ್ತಿದೆ. ತಾಲ್ಲೂಕಿನಲ್ಲಿ ಹೇಳುವರು ಮತ್ತು ಕೇಳುವರು ಇಲ್ಲದಂತಾಗಿರು ವುದರಿಂದ ಇಂಥ ಸಮಸ್ಯೆ ಎದುರಾಗಿದೆ.”

-ಅರುಣ್, ಪಟ್ಟಣದ ನಿವಾಸಿ

” ಕೆಲವೊಂದು ಕಾರಣಕ್ಕಾಗಿ ನಮ್ಮ ವ್ಯಾಪ್ತಿಯಲ್ಲಿರುವ ಜನ ಔಷಧಿ ಕೇಂದ್ರವನ್ನು ಬಂದ್ ಮಾಡುತ್ತಿದ್ದೇವೆ. ಎಚ್.ಡಿ.ಕೋಟೆ ಮತ್ತು ಪಿರಿಯಾಪಟ್ಟಣದ ಜನ ಔಷಧಿ ಕೇಂದ್ರವನ್ನು ಶುಕ್ರವಾರ ಬಂದ್ ಮಾಡಿದ್ದೇವೆ. ನ್ಯಾಯಾಲಯದ ತಡೆ ಆದೇಶ ನಮಗೆ ಅನ್ವಯವಾಗುವುದಿಲ್ಲ. ಅದು ಕೆಲವೊಂದಕ್ಕೆ ಸೀಮಿತವಾಗಿದೆ.”

-ಶ್ರೀನಿವಾಸ್, ಜನರಲ್ ಸೀನಿಯರ್ ಮ್ಯಾನೇಜರ್, ಎಂಎಸ್‌ಐಎ

ಆಂದೋಲನ ಡೆಸ್ಕ್

Recent Posts

ಅರಮನೆ ಫಲಪುಷ್ಪ ಪ್ರದರ್ಶನ | ಸಂಗೀತ ಸಂಜೆಯಲ್ಲಿ ಪ್ರೇಕ್ಷಕರು ತಲ್ಲೀನ

ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್‌ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…

2 hours ago

ಎತ್ತಿನ ಗಾಡಿಗೆ ಸಾರಿಗೆ ಬಸ್‌ ಡಿಕ್ಕಿ : ಎತ್ತು ಸಾವು

ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…

2 hours ago

ಮುತ್ತತ್ತಿ : ಕಾವೇರಿ ನದಿ ಸೆಳೆತಕ್ಕೆ ಸಿಲುಕಿ ಯುವಕ ಸಾವು

ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…

2 hours ago

ಪೊಲೀಸ್‌ ಭದ್ರತೆಯಲ್ಲಿ ದೇಗುಲ ಪ್ರವೇಶಿಸಿದ ದಲಿತರು : ಶಾಂತಿ ಸಭೆಯಲ್ಲಿ ಪಂಚ ಬೇಡಿಕೆ

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…

2 hours ago

ಅಕ್ರಮ ವಿದ್ಯುತ್‌ ಸಂಪರ್ಕ: 31 ಪ್ರಕರಣ ದಾಖಲು, 2.17 ಲಕ್ಷ ರೂ. ದಂಡ

ಮೈಸೂರು : ಅಕ್ರಮವಾಗಿ ವಿದ್ಯುತ್‌ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…

2 hours ago

ಚಿನ್ನಸ್ವಾಮಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯ : ಸಮಿತಿ ರಚನೆ

ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ನಡೆಸುವ ಕುರಿತಂತೆ ಪರಿಶೀಲಿಸಲು ಸಮಿತಿ ರಚಿಸಲಾಗಿದೆ ಎಂದು ಗೃಹ ಸಚಿವರಾದ…

3 hours ago