Andolana originals

ಕೈಗಾರಿಕೆಗಳ ‘ರಾಜಧಾನಿ’; ಸ್ಥಳೀಯರ ಕೈಗೆಟುಕದ ಉದ್ಯೋಗ

ಕಪಿಲಾ ನದಿಯ ಹರಿವಿನೊಂದಿಗೇ ನಂಜನಗೂಡಿನಲ್ಲಿ ಕೈಗಾರಿಕೆಗಳೂ ಬೆಳೆದಿವೆ. ನೂರು ವರ್ಷಗಳಿಗೂ ಹೆಚ್ಚು ಕಾಲದಿಂದ ಕಾರ್ಖಾನೆಗಳು ಸ್ಥಳೀಯರ ಬದುಕಿನೊಂದಿಗೆ ಬೆಸೆದುಕೊಂಡಿವೆ. ಬಹುಶಃ ಆರಂಭದಲ್ಲಿ ಸ್ಥಳೀಯರಿಗೆ ಉದ್ಯೋಗಾವಕಾಶ ದೊರೆತಿತ್ತು. ಅದರಲ್ಲಿಯೂ ಸುಜಾತ ಹತ್ತಿ ಗಿರಣಿಯಲ್ಲಿ ಬಹುತೇಕ ಸ್ಥಳೀಯರೇ ಕಾರ್ಮಿಕರಾಗಿದ್ದರು. ಆದರೆ, ಅಭಿವೃದ್ಧಿ, ಪೈಪೋಟಿಯ ಕಸರತ್ತಿನಲ್ಲಿ ಕೈಗಾರಿಕೆಗಳು ಸ್ಥಳೀಯರನ್ನು ಮರೆತರೆ, ಆಡಳಿತಗಾರರು ಕೂಡ ಗೊತ್ತಿದ್ದೂ ಗೊತ್ತಿಲ್ಲದಂತೆ ವರ್ತಿಸಿದರು. ಅದರಿಂದ ಈಗ ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಉದ್ಯೋಗಾವಕಾಶ ಗಗನಕುಸುಮವಾಗಿದೆ.

ಮೈಸೂರಿನಿಂದ ಕೇವಲ 25 ಕಿ.ಮೀ. ಅಂತರದಲ್ಲಿರುವ ನಂಜನಗೂಡು ಫಲವತ್ತಾದ ಭೂಮಿ ಹೊಂದಿದೆ. ಶತಮಾನಕ್ಕೂ ಹೆಚ್ಚು ಕಾಲದಿಂದ ಇಲ್ಲಿ ಕೈಗಾರಿಕೆಗಳು ಬೆಳೆದು ಬಂದಿವೆ. ಹಾಗಾಗಿ ನಂಜನಗೂಡನ್ನು ಕೈಗಾರಿಕೆಗಳ ‘ರಾಜಧಾನಿ’ ಎನ್ನುವುದುಂಟು.

1913ರಲ್ಲಿ ಸಣ್ಣ ಪ್ರಮಾಣದಲ್ಲಿ ಬಿ.ವಿ.ಪಂಡಿತರ ಹಲ್ಲು ಪುಡಿ ತಯಾರಿಕಾ ಸಂಸ್ಥೆಯಿಂದ ಆರಂಭವಾದ ನಂಜನಗೂಡಿನ ಕೈಗಾರಿಕಾ ಪರಂಪರೆ ಅನೂಚಾನವಾಗಿ ಬೆಳೆದು ಬಂದಿದೆ. ಪ್ರಸ್ತುತ ಕೈಗಾರಿಕೆಗಳು 2,721 ಎಕರೆ ಪ್ರದೇಶವನ್ನು ವ್ಯಾಪಿಸಿಕೊಂಡು ರಾಜ್ಯದ ಭೂಪಟದಲ್ಲಿ ತಮ್ಮದೇ ಆದ ಛಾಪು ಮೂಡಿಸಿವೆ.

ಜೀವ ನದಿ ಕಪಿಲೆ ಹರಿಯುವ ಈ ತಾಲ್ಲೂಕಿನಲ್ಲಿ ರಾಜ್ಯ ಸರ್ಕಾರಿ ಸ್ವಾಮ್ಯದ ಕೆಐಎಡಿಬಿ ವತಿಯಿಂದ ಈಗಾಗಲೇ ನಂಜನಗೂಡು, ಕಲ್ಲಹಳ್ಳಿ, ತಾಂಡ, ಅಡಕನಹಳ್ಳಿ, ಇಮಾವು, ಹುಳಿಮಾವುಗಳಲ್ಲಿ ಮಹಿಳಾ ಕೈಗಾರಿಕೆಗಳ ಪಾರ್ಕ್ ಸೇರಿದಂತೆ ಕೈಗಾ ರಿಕಾ ವಸಾಹತುಗಳನ್ನು ನಿರ್ಮಿಸಲಾಗಿದೆ. ವಿವಿಧ ಸೌಲಭ್ಯಗಳನ್ನು ನೀಡಿ ದೇಶ ವಿದೇಶಗಳ ಕೈಗಾರಿಕೆಗಳು ಇಲ್ಲಿ ತಳವೂರಲು ಅವಕಾಶ ಕಲ್ಪಿಸಲಾಗಿದೆ.

ನಂಜನಗೂಡು ತಾಲ್ಲೂಕಿನಲ್ಲಿರುವ ಕೈಗಾರಿಕೆಗಳಲ್ಲಿ ಅಧಿಕೃತವಾಗಿ 20,436 ಮಂದಿ ಪುರುಷರು ಹಾಗೂ 3,171 ಮಹಿಳೆಯರು ಸೇರಿದಂತೆ ಒಟ್ಟಾರೆ 23,607 ಮಂದಿ ಉದ್ಯೋಗಿ ಗಳಿದ್ದಾರೆ. ಇದಲ್ಲದೆ ಸುಮಾರು 20 ಸಾವಿರಕ್ಕೂ ಹೆಚ್ಚು ಕಾರ್ಮಿಕರಿಗೆ ಹಂಗಾಮಿಯಾಗಿ ಉದ್ಯೋಗ ನೀಡಿರುವ ಇಲ್ಲಿನ ಕೈಗಾರಿಕೆಗಳು ಸ್ಥಳೀಯರಿಗಿಂತ ಹೆಚ್ಚಾಗಿ ಹೊರಗಿನವರಿಗೆ ಮಣೆ ಹಾಕಿವೆ. ಶತಮಾನದ ಹಿಂದಿನ ಕೈಗಾರಿಕೆಯಿಂದ ಹಿಡಿದು ಆಧುನಿಕ ಸೆಮಿ ಕಂಡಕ್ಟರ್ ತಯಾರಿಸುವವರೆಗೆ ಇರುವ ಕೈಗಾರಿಕೆಗಳು ಸ್ಥಳೀಯರ ಪಾಲಿಗೆ ಮರೀಚಿಕೆಯಾಗಿವೆ.

ಇಲ್ಲಿ 150ಕ್ಕೂ ಹೆಚ್ಚು ಕೈಗಾರಿಕೆಗಳಿವೆ. ಸ್ಥಳೀಯರಿಗೆಷ್ಟು ಉದ್ಯೋಗಗಳು ಸಿಕ್ಕಿದೆ ಎಂದು ತಡಕಾಡಿದರೆ ಸಮುದ್ರದ ದಡದಲ್ಲೇ ವಾಸ, ಉಪ್ಪಿಗೆ ಪರದಾಟ ಎನ್ನುವಂತಾಗಿದೆ. ಇಲ್ಲಿನ ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಶೇ.10ರಷ್ಟು ಕೂಡ ಉದ್ಯೋಗ ಲಭಿಸಿಲ್ಲ. ಸ್ಥಳೀಯರನ್ನೇ ಹೆಚ್ಚಾಗಿ ಅವಲಂಬಿಸಿದ್ದ ಬಿರ್ಲಾ ಗ್ರೂಪ್ ವಾಲೀಕತ್ತದ ಸುಜಾತ ಹತ್ತಿ ಗಿರಣಿ, ಕರೀಮ್ ಸಿಲ್ಕ್ ಸೇರಿದಂತೆ ಅನೇಕ ಕೈಗಾರಿಕೆಗಳು ಹಲವು ವರ್ಷಗಳ ಹಿಂದೆಯೇ ಕಣ್ಣುಚ್ಚಿದ್ದು, ಇಲ್ಲಿದ್ದ ಕಾರ್ಮಿಕರ ಬದುಕು ಅತಂತ್ರವಾಯಿತು. ನೆಲ, ಜಲ, ವಿದ್ಯುತ್ ನಮ್ಮದು, ಆದರೆ ಕೆಲಸ ವಾತ್ರ ಬೇರೆಯವರಿಗೆ ಎಂಬ ಸ್ಥಳೀಯ ಕನ್ನಡಿಗರ ರೋದನೆ ಕೈಗಾರಿಕೆಗಳ ಆಡಳಿತಗಾರರ ಕಿವಿ, ಹೃದಯಕ್ಕೆ ತಾಕುತ್ತಿಲ್ಲ. ಸ್ಥಳೀಯರಿಗೆ ಉದ್ಯೋಗ ನೀಡಲೇಬೇಕೆಂಬ ಸರೋಜಿನಿ ಮಹಿಷಿ ವರದಿ ಪ್ರಕಾರ ಈ ಕೈಗಾರಿಕೆಗಳು ಸ್ಥಳೀಯರಿಗೆ ವರದಾನವಾಗಬೇಕಾಗಿತ್ತು. ಆದರೆ ಅದನ್ನು ಜಾರಿಗೆ ತರದ ನಮ್ಮ ಆಡಳಿತಗಾರರು ವರದಿಯನ್ನು ದೂಳು ಹಿಡಿಸುತ್ತಿರುವ ಪರಿಣಾಮವಾಗಿ ಸ್ಥಳೀಯರ ಉದ್ಯೋಗದ ಕನಸು ಇಂದಿಗೂ ಕೈಗೂಡಿಲ್ಲ.

ನಂಜನಗೂಡು ತಾಲ್ಲೂಕಿನ ಅರ್ಧ ಭಾಗ ಹಾಗೂ ಅಡಕನಹಳ್ಳಿ, ಇದ್ದಾವು, ತಾಂಡ್ಯ ಮತ್ತು ಹುಳಿಮಾವು ಕೈಗಾರಿಕಾ ಪ್ರದೇಶಗಳಲ್ಲಿರುವ ಕಾರ್ಖಾನೆಗಳು/ ಸಂಸ್ಥೆಗಳಲ್ಲಿ ರಾಜ್ಯ ಸರ್ಕಾರ ಕನ್ನಡಿಗರು ಹಾಗೂ ಸ್ಥಳೀಯರಿಗೆ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸಬೇಕೆಂದು ಸಾರ್ವಜನಿಕರ ಒತ್ತಾಯವಾಗಿದೆ.

ಕೈಗಾರಿಕೆಗಳ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (ಸಿಎಸ್ಆರ್) ನಿಧಿಯು ತಾಲ್ಲೂಕಿನ ಸರ್ಕಾರಿ ಶಾಲೆಗಳಿಗೆ ಮೂಲ ಸೌಲಭ್ಯ ಒದಗಿಸಲು ಬಳಕೆಯಾಗಬೇಕು. ಸ್ಥಳೀಯರಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸಬೇಕು. ಐಟಿಐ ಹಾಗೂ ಡಿಪ್ಲೊಮಾ ವ್ಯಾಸಂಗ ಮಾಡಿದ ಸ್ಥಳೀಯ ಅಭ್ಯರ್ಥಿಗಳಿಗೆ ಉದ್ಯೋಗ ನೀಡಲು ಈ ಕಾರ್ಖಾನೆಗಳು ಮುಂದಾಗಬೇಕು.
• ದರ್ಶನ್ ಧ್ರುವನಾರಾಯಣ, ಶಾಸಕರು, ನಂಜನಗೂಡು.

ಹೊರದೇಶದವರೂ ಇಲ್ಲಿ ಉದ್ಯೋಗಿಗಳು!?

ನಂಜನಗೂಡಿನ ಕೈಗಾರಿಕೆಗಳಲ್ಲಿ ಹೊರ ರಾಜ್ಯದವರಿರಲಿ ಹೊರದೇಶದವರೂ ಉದ್ಯೋಗಿಗಳಾಗಿದ್ದಾರೆ. ಅಂದಾಜಿನ ಪ್ರಕಾರ ಎರಡು ಸಾವಿರಕ್ಕೂ ಹೆಚ್ಚು ಬಾಂಗ್ಲಾದೇಶಿ ಯರು ಇಲ್ಲಿನ ಕೈಗಾರಿಕೆಗಳಲ್ಲಿ ಬಿಹಾರ ಮತ್ತು ಪಶ್ಚಿಮ ಬಂಗಾಳ ವಾಸಿಗಳು ಎಂದು ಹೇಳಿ ಉದ್ಯೋಗ ಗಿಟ್ಟಿಸಿಕೊಂಡಿದ್ದಾರೆ. ಅವರೀಗ ಸಂಬಂಧಪಟ್ಟ ಅಧಿಕಾರಿಗಳ ಕೃಪಾಕಟಾಕ್ಷ’ ದಿಂದ, ಇಲ್ಲೇ ಪಡಿತರ ಚೀಟಿ, ಆಧಾರ್ ಕಾರ್ಡ್ ಗಿಟ್ಟಿಸಿಕೊಂಡು ಸ್ಥಳೀಯರಾಗಿಬಿಟ್ಟಿದ್ದಾರೆ. ಇಂತಹ ಕಾರ್ಮಿಕರನ್ನು ಕರೆತರಲೆಂದೇ ಹತ್ತಾರು ಸಂಸ್ಥೆಗಳು ಹುಟ್ಟಿಕೊಂಡಿವೆ.

ಸಿದ್ಧಾಂತವನ್ನು ಕೈಬಿಟ್ಟು, ಕೇವಲ ಹಣದ ಬೆನ್ನು ಬಿದ್ದಿರುವ ಹಲವು ಕಾರ್ಮಿಕ ಸಂಘಟನೆಗಳಿಂದ ಇಲ್ಲಿನ ಕೈಗಾರಿಕೆಗಳಿಗೆ ಕೆಟ್ಟ ಹೆಸರು ಬಂದಿದೆ. ಇದರಿಂದಲೇ ಅನೇಕ ಕೈಗಾರಿಕೆಗಳು ನಂಜನಗೂಡಿನಿಂದ ಪಲಾಯನ ಮಾಡಿವೆ.
– ಎಂ.ಎಸ್.ರಾಮಪ್ರಸಾದ್, ಅಧ್ಯಕ್ಷರು, ನಂಜನಗೂಡು ಕೈಗಾರಿಕಾ ಒಕ್ಕೂಟ.

ಶ್ರೀಧರ್ ಆರ್ ಭಟ್

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವನಾದ ನಾನು ನಂಜನಗೂಡು ನಗರದಲ್ಲಿ ವಾಸವಾಗಿದ್ದು 1982ರ ಮಾರ್ಚ್ ತಿಂಗಳಿಂದ‌, 42 ವರ್ಷಗಳಿಂದ ಆಂದೋಲನ ದಿನ ಪತ್ರಿಕೆಯಲ್ಲಿ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಮೊಬೈಲ್‌ ಸಂಖ್ಯೆ: 9448425325

Recent Posts

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

11 mins ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

1 hour ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

2 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

2 hours ago

ಕರ್ನಾಟಕ ಪಬ್ಲಿಕ್ ಶಾಲೆಗೆ ಮೇಲ್ದರ್ಜೇಗೇರಿಸಲು ಅಗತ್ಯ ಕ್ರಮ: ʻಜಿಟಿಡಿʼ

ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…

2 hours ago

ಪಶ್ಚಿಮಘಟ್ಟ: 16114 ಚ.ಕಿ.ಮೀ. ಪರಿಸರ ಸೂಕ್ಷ್ಮ ಪ್ರದೇಶ ಮಿತಿ ಸೂಕ್ತ :ಈಶ್ವರ ಖಂಡ್ರೆ

ಪಶ್ಚಿಮಘಟ್ಟ ಕುರಿತ ಕಸ್ತೂರಿ ರಂಗನ್ ವರದಿ ಬಗ್ಗೆ ಬಾಧ್ಯಸ್ಥರ ಸಭೆ ಬೆಂಗಳೂರು: ರಾಜ್ಯದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ…

2 hours ago