ಲಕ್ಷ್ಮೀಕಾಂತ್ ಕೋಮಾರಪ್ಪ
ಮಕರ ಸಂಕ್ರಾಂತಿ ಹಾಗೂ ಶಾಂತಳ್ಳಿ ಜಾತ್ರೆ, ರಥೋತ್ಸವದ ಅಂಗವಾಗಿ ಸೋಮವಾರಪೇಟೆ ಶ್ರೀ ಕ್ಷೇತ್ರ ಪುಷ್ಪಗಿರಿ (ಕುಮಾರ ಪರ್ವತ) ಬೆಟ್ಟದಲ್ಲಿ ವಿಭಿನ್ನ ಆಚರಣೆ ನಡೆಯುತ್ತಿದ್ದು, ಜ್ಯೋತಿ ದರ್ಶನ ಗಮನ ಸೆಳೆಯುತ್ತದೆ.
ಸಂಕ್ರಾಂತಿಯಂದು ಶ್ರೀ ಕ್ಷೇತ್ರ ಪುಷ್ಪಗಿರಿ ಬೆಟ್ಟದಲ್ಲಿ ಗಂಗೆ ಬಾವಿ ಪೂಜೆ, ಶಿವ ಪಾದಪೂಜೆ, ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿಯ ಪಾದಪೂಜೆ ನಡೆಯು ತ್ತದೆ. ಬಳಿಕ ಸಂಜೆ ಮಹಾ ಮಂಗಳಾರತಿ ನಡೆಯ ಲಿದ್ದು, ಈ ಸಂದರ್ಭ ಜ್ಯೋತಿ ಹೊತ್ತಿಸಿ ಕೆಲವರು ಅಲ್ಲಿಯೇ ಮಲಗುತ್ತಾರೆ. ಮಾರನೆಯ ದಿನ ದೇವರನ್ನು ಅಲ್ಲಿಂದ ಗ್ರಾಮಕ್ಕೆ ಕರೆದುಕೊಂಡು ಬರುವುದು ಸಂಪ್ರದಾಯ.
ರಾತ್ರಿ ಬೆಟ್ಟದ ಮೇಲೆ ಮಹಾಮಂಗಳಾರತಿ ಸಂದರ್ಭ ಹೊತ್ತಿರುವ ಜ್ಯೋತಿ ಶಬರಿ ಮಲೆ ಅಯ್ಯಪ್ಪ ದೇವರ ಜ್ಯೋತಿ ದರ್ಶನದಂತೆ ಗ್ರಾಮಗಳಿಗೆ ಕಾಣುತ್ತದೆ. ಬೆಟ್ಟದ ಮೇಲಿನ ಜ್ಯೋತಿಯು ಪುಷ್ಪಗಿರಿ ಸುತ್ತ ಮುತ್ತಲಿನ ಹಲವು ಗ್ರಾಮಗಳಿಗೆ ಕಾಣಲಿದ್ದು, ಜ್ಯೋತಿಯನ್ನು ಗ್ರಾಮಸ್ಥರು ಕಣ್ತುಂಬಿಕೊಳ್ಳುತ್ತಾರೆ.
ಪ್ರತಿ ವರ್ಷ ಮಕರ ಸಂಕ್ರಮಣ ಮಕರ ಜ್ಯೋತಿ ಯಂದು ಪುಷ್ಪಗಿರಿ ಬೆಟ್ಟದಲ್ಲಿ ನಡೆಯುವ ಈ ದೇವತಾ ಕಾರ್ಯದಲ್ಲಿ ಹಲವೆಡೆಯಿಂದ ದೊಡ್ಡ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಳ್ಳುತ್ತಾರೆ.
ಪುಷ್ಪಗಿರಿ ಬೆಟ್ಟದ ಸುತ್ತಮುತ್ತಲಿನ ಪ್ರಕೃತಿಯ ಸೌಂದರ್ಯವನ್ನು ಸವಿಯಲು ಪ್ರವಾಸಿಗರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ಪುಷ್ಪಗಿರಿ ಬೆಟ್ಟದ ಶಿವಪಾದ ಮತ್ತು ಸುತ್ತಮುತ್ತಲಿನ ವೀಕ್ಷಣೆ ಸ್ಥಳಗಳನ್ನು ಕಣ್ತುಂಬಿಕೊಳ್ಳುತ್ತಾರೆ.
ಮೈಸೂರು ನಗರದ ರಿಂಗ್ ರಸ್ತೆಯಲ್ಲಿರುವ ಹಂಚ್ಯಾ-ಸಾತಗಳ್ಳಿ ‘ಬಿ’ ವಲಯದಲ್ಲಿ (ವಿಟಿಯು ಕಾಲೇಜು ಬಳಿ) ಬೀದಿ ನಾಯಿಗಳ ಹಾವಳಿ ವಿಪರೀತವಾಗಿದ್ದು, ಸ್ಥಳೀಯ…
ತಾಣ..ಬಾಣ ! ಬೇಕಿದ್ದರೆ ಬಿಟ್ಟೇವು ಒಂದಲ್ಲ, ಎರಡು ದಿನ.. ಶಾಲಾ ತಾಣ! ಬಿಟ್ಟಿರುವುದು ಹೇಗೆ ? ಸಾಮಾಜಿಕ ಜಾಲತಾಣ ಎಂಬುದು…
ಮೈಸೂರಿನ ಬೋಗಾದಿ -ಗದ್ದಿಗೆ ಜೋಡಿ ರಸ್ತೆಯಲ್ಲಿ ವಾಹನಗಳ ಸಂಚಾರ ಹೆಚ್ಚಾಗಿದ್ದರಿಂದ ದಾಸನಕೊಪ್ಪಲು ಬಸ್ ನಿಲ್ದಾಣದ ಬಳಿ ಎರಡು ಕಡೆಯೂ ಒಂದು…
ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದ ಸನಿಹದಲ್ಲಿ ಹರಿಯುವ ಕಪಿಲಾ ನದಿ ತೀರದಲ್ಲಿ ಪುಣ್ಯ ಸ್ನಾನ ಮಾಡುವವರು ಬಟ್ಟೆಗಳನ್ನು ಅಲ್ಲಿಯೇ ಬಿಟ್ಟು ಹೋಗುವುದರಿಂದ…
ಬಿಹಾರ ವಿಧಾನಸಭೆಗೆ ಚುನಾವಣೆ ನಡೆದು ಮೂರೂವರೆ ತಿಂಗಳಾಗುವಷ್ಟರಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆಗೆ ಏಕಿಷ್ಟು ಆತುರ? ಏನು ಕಾರಣ ಎನ್ನುವುದಕ್ಕೆಲ್ಲ ಉತ್ತರ…
ಕೃಷ್ಣ ಸಿದ್ದಾಪುರ ತೋಟದ ಮಾಲೀಕನ ದೌರ್ಜನ್ಯಕ್ಕೆ ತುತ್ತಾದ ೮ ಕುಟುಂಬಗಳ ೨೬ ಮಂದಿ ರಕ್ಷಣೆ; ಸಾಬೀತಾಗದ ಆರೋಪ ಸಿದ್ದಾಪುರ: ವ್ಯವಸ್ಥೆಯಲ್ಲಿ ಶತಮಾನಗಳಿಂದ…