Andolana originals

ಶ್ರೀ ಕ್ಷೇತ್ರ ಪುಷ್ಪಗಿರಿಯಲ್ಲಿ ಜ್ಯೋತಿ ದರ್ಶನ..!

ಲಕ್ಷ್ಮೀಕಾಂತ್ ಕೋಮಾರಪ್ಪ
ಮಕರ ಸಂಕ್ರಾಂತಿ ಹಾಗೂ ಶಾಂತಳ್ಳಿ ಜಾತ್ರೆ, ರಥೋತ್ಸವದ ಅಂಗವಾಗಿ ಸೋಮವಾರಪೇಟೆ ಶ್ರೀ ಕ್ಷೇತ್ರ ಪುಷ್ಪಗಿರಿ (ಕುಮಾರ ಪರ್ವತ) ಬೆಟ್ಟದಲ್ಲಿ ವಿಭಿನ್ನ ಆಚರಣೆ ನಡೆಯುತ್ತಿದ್ದು, ಜ್ಯೋತಿ ದರ್ಶನ ಗಮನ ಸೆಳೆಯುತ್ತದೆ.

ಸಂಕ್ರಾಂತಿಯಂದು ಶ್ರೀ ಕ್ಷೇತ್ರ ಪುಷ್ಪಗಿರಿ ಬೆಟ್ಟದಲ್ಲಿ ಗಂಗೆ ಬಾವಿ ಪೂಜೆ, ಶಿವ ಪಾದಪೂಜೆ, ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿಯ ಪಾದಪೂಜೆ ನಡೆಯು ತ್ತದೆ. ಬಳಿಕ ಸಂಜೆ ಮಹಾ ಮಂಗಳಾರತಿ ನಡೆಯ ಲಿದ್ದು, ಈ ಸಂದರ್ಭ ಜ್ಯೋತಿ ಹೊತ್ತಿಸಿ ಕೆಲವರು ಅಲ್ಲಿಯೇ ಮಲಗುತ್ತಾರೆ. ಮಾರನೆಯ ದಿನ ದೇವರನ್ನು ಅಲ್ಲಿಂದ ಗ್ರಾಮಕ್ಕೆ ಕರೆದುಕೊಂಡು ಬರುವುದು ಸಂಪ್ರದಾಯ.

ರಾತ್ರಿ ಬೆಟ್ಟದ ಮೇಲೆ ಮಹಾಮಂಗಳಾರತಿ ಸಂದರ್ಭ ಹೊತ್ತಿರುವ ಜ್ಯೋತಿ ಶಬರಿ ಮಲೆ ಅಯ್ಯಪ್ಪ ದೇವರ ಜ್ಯೋತಿ ದರ್ಶನದಂತೆ ಗ್ರಾಮಗಳಿಗೆ ಕಾಣುತ್ತದೆ. ಬೆಟ್ಟದ ಮೇಲಿನ ಜ್ಯೋತಿಯು ಪುಷ್ಪಗಿರಿ ಸುತ್ತ ಮುತ್ತಲಿನ ಹಲವು ಗ್ರಾಮಗಳಿಗೆ ಕಾಣಲಿದ್ದು, ಜ್ಯೋತಿಯನ್ನು ಗ್ರಾಮಸ್ಥರು ಕಣ್ತುಂಬಿಕೊಳ್ಳುತ್ತಾರೆ.

ಪ್ರತಿ ವರ್ಷ ಮಕರ ಸಂಕ್ರಮಣ ಮಕರ ಜ್ಯೋತಿ ಯಂದು ಪುಷ್ಪಗಿರಿ ಬೆಟ್ಟದಲ್ಲಿ ನಡೆಯುವ ಈ ದೇವತಾ ಕಾರ್ಯದಲ್ಲಿ ಹಲವೆಡೆಯಿಂದ ದೊಡ್ಡ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಳ್ಳುತ್ತಾರೆ.

ಪುಷ್ಪಗಿರಿ ಬೆಟ್ಟದ ಸುತ್ತಮುತ್ತಲಿನ ಪ್ರಕೃತಿಯ ಸೌಂದರ್ಯವನ್ನು ಸವಿಯಲು ಪ್ರವಾಸಿಗರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ಪುಷ್ಪಗಿರಿ ಬೆಟ್ಟದ ಶಿವಪಾದ ಮತ್ತು ಸುತ್ತಮುತ್ತಲಿನ ವೀಕ್ಷಣೆ ಸ್ಥಳಗಳನ್ನು ಕಣ್ತುಂಬಿಕೊಳ್ಳುತ್ತಾರೆ.

ಆಂದೋಲನ ಡೆಸ್ಕ್

Recent Posts

ಬಿಗ್‌ಬಾಸ್‌ ಮಾಜಿ ಸ್ಪರ್ಧಿ ರಜತ್‌ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು: ಬಿಗ್‌ಬಾಸ್‌ ಮಾಜಿ ಸ್ಪರ್ಧಿ ರಜತ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ರಜತ್‌ ವಿರುದ್ಧ ಬೆಂಗಳೂರಿನ ಕೆ.ಆರ್.‌ಪುರಂ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.…

21 mins ago

ಸಿಎಂ ಸಿದ್ದರಾಮಯ್ಯ ಅವರ ಇಂದಿನ ಮೈಸೂರು ಜಿಲ್ಲಾ ಪ್ರವಾಸ ಕಾರ್ಯಕ್ರಮ

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಮೈಸೂರು ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದಾರೆ. ಇಂದು ಬೆಳಗ್ಗೆ 11:40ಕ್ಕೆ ಮೈಸೂರು ಜಿಲ್ಲೆಯ ವರುಣದ…

28 mins ago

ಓದುಗರ ಪತ್ರ: ಯುದ್ಧ ವಿನಾಶಕಾರಿ!

ಯುದ್ಧ ವಿನಾಶಕಾರಿ! ನಿಲ್ಲುವಂತೆ ಕಾಣುವುದಿಲ್ಲ ಕೊಲ್ಲಿ ರಾಷ್ಟ್ರಗಳ ಸಂಘರ್ಷ! ಬದಲಿಗೆ ವಿಸ್ತರಿಸಿರುವುದು ನೋವು ಸಂಕಟದ ಸಂಗತಿ! ಗೆಲ್ಲಲಾಗದು ದ್ವೇಷದಲಿ ಯಾರನ್ನೂ ಪ್ರೀತಿ…

33 mins ago

ಓದುಗರ ಪತ್ರ: ಯಶಸ್ವಿನಿ : ಡಯಾಲಿಸಿಸ್ ವೆಚ್ಚ ಭರಿಸಲಿ

ರಾಜ್ಯ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯಡಿಯಲ್ಲಿ ವಿಮೆ ಸೌಲಭ್ಯ ಪಡೆದಿರುವವರ ಕುಟುಂಬ ವರ್ಷಕ್ಕೆ ೫ ಲಕ್ಷರೂ. ವೆಚ್ಚದ ಚಿಕಿತ್ಸಾ ಸೌಲಭ್ಯ…

34 mins ago

ಓದುಗರ ಪತ್ರ: ರಾಜ್ಯ ಬಜೆಟ್ ಪ್ರಗತಿಯ ದಿಕ್ಸೂಚಿ

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶುಕ್ರವಾರ ಮಂಡಿಸಿದ ೨೦೨೬-೨೭ನೇ ಸಾಲಿನ ಬಜೆಟ್ ಪ್ರಗತಿಯ ದಿಕ್ಸೂಚಿಯಾಗಿದೆ. ರಾಜ್ಯದ ಬಜೆಟ್ ಗಾತ್ರ ೪,೪೮,೦೦೪ ಕೋಟಿ ರೂ.…

36 mins ago

ಸರ್ವಜನ ಹಿತಕಾರಿ ಬಜೆಟ್

ಆರ್.ಟಿ.ವಿಠ್ಠಲಮೂರ್ತಿ ಸಾಮಾಜಿಕ ನ್ಯಾಯದ ರಥ ಎಳೆಯಲು ಸಿಎಂ ಗರಿಷ್ಟ ಯತ್ನ  ಬೆಂಗಳೂರು: ರಾಜ್ಯದ ಆದಾಯ ಮೂಲಗಳಿಗೆ ಹೊಡೆತ ಬಿದ್ದರೂ ಸಾಮಾಜಿಕ…

43 mins ago