Andolana originals

ಕುಂಡೆ ಹಬ್ಬದ ಹೆಸರಿನಲ್ಲಿ ಸಾರ್ವಜನಿಕರಿಗೆ ಕಿರುಕುಳ

ವಾಹನ ತಡೆದು ಹಣ ವಸೂಲಿ; ಸೂಕ್ತ ಕ್ರಮಕ್ಕೆ ಸಾರ್ವಜನಿಕರ ಆಗ್ರಹ

ಕೆ. ಬಿ. ಶಂಶುದ್ದೀನ್

ಕುಶಾಲನಗರ: ಕುಂಡೆ (ಬೇಡು) ಹಬ್ಬದ ಹಿನ್ನೆಲೆಯಲ್ಲಿ ಕುಶಾಲನಗರದಲ್ಲಿ ಆದಿವಾಸಿಗಳು ಹಣ ಸಂಗ್ರಹ ಮಾಡುವುದು ಸಾಮಾನ್ಯ. ಆದರೆ ಹಬ್ಬದ ಹೆಸರಿನಲ್ಲಿ ವಾಹನ ತಡೆದು ಹಣ ವಸೂಲಿ ಮಾಡುವುದು, ಅವಾಚ್ಯ ಶಬ್ದಗಳನ್ನು ಬಳಸುವ ಮೂಲಕ ಸಾರ್ವಜನಿಕರಿಗೆ ಕಿರುಕುಳ ನೀಡುತ್ತಿದ್ದು, ಈ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಕುಶಾಲನಗರದ ಪ್ರಜ್ಞಾವಂತ ನಾಗರಿಕರು ಆಗ್ರಹಿಸಿದ್ದಾರೆ.

ಕೊಡಗಿನ ಬುಡಕಟ್ಟು ಜನಾಂಗವಾದ ಜೇನು ಕುರುಬರ ಪ್ರಸಿದ್ಧವಾದ ಬೇಡು ಹಬ್ಬ ಕುಂಡೆ ಹಬ್ಬವೆಂದು ಪ್ರಖ್ಯಾತಿ. ಪ್ರತಿ ವರ್ಷ ನಡೆಯುವ ಈ ಹಬ್ಬಕ್ಕೆ ಆದಿವಾಸಿಗಳು ಅಂಗಡಿ ಮುಂಗಟ್ಟುಗಳಿಗೆ ತೆರಳಿ ಹಣ ಸಂಗ್ರಹ ಮಾಡುತ್ತಾರೆ. ಸಾರ್ವಜನಿಕರು ಕೂಡ ಹಣ ನೀಡುತ್ತಾರೆ. ಆದರೆ ಇತ್ತೀಚೆಗೆ ಸಾರ್ವಜನಿಕರಿಂದ ಒತ್ತಾಯ ಪೂರ್ವಕವಾಗಿ ಹಣ ವಸೂಲಿ ಮಾಡುತ್ತಿರುವ ಘಟನೆಗಳು ನಡೆಯುತ್ತಿದ್ದು, ಸಾರ್ವಜನಿ ಕರಿಗೆ ಕಿರುಕುಳ ಉಂಟಾಗುತ್ತಿದೆ.

ವಾಹನ ತಡೆದು ಹಣ ವಸೂಲಿ: ಬೇಡು ಹಬ್ಬದ ಹೆಸರನ್ನು ಹೇಳಿ ರಸ್ತೆಯಲ್ಲಿ ವಾಹನಗಳನ್ನು ತಡೆದು ಹಣ ವಸೂಲಿ ಮಾಡುತ್ತಿದ್ದಾರೆ. ಒಂದೆಡೆ ಇದರಿಂದ ಸಾರ್ವಜನಿಕರಿಗೆ ಕಿರುಕುಳವಾದರೆ ಮತ್ತೊಂದೆಡೆ ಕಿಲೋ ಮೀಟರ್‌ಗಟ್ಟಲೇ
ವಾಹನಗಳು ಸರತಿ ಸಾಲು ನಿಂತು ಟ್ರಾಫಿಕ್ ಜಾಮ್ ಸೃಷ್ಟಿಯಾಗುತ್ತಿದೆ. ಸ್ಥಳದಲ್ಲಿ ಪೊಲೀಸರೂ ಇರುವುದಿಲ್ಲ. ಇದರಿಂದಾಗಿ ವಾಹನ ಚಾಲಕರು ಕಾದು ನಿಲ್ಲಬೇಕಾಗಿದೆ. ಕುಶಾಲನಗರದ ಬೈಚನಹಳ್ಳಿಯಲ್ಲಿ ಆದಿವಾಸಿಗಳು ವಾಹನಗಳನ್ನು ಅಡ್ಡಗಟ್ಟಿ ಹಣ ವಸೂಲಿ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಟ್ರಾಫಿಕ್ ಜಾಮ್‌ನಿಂದ ವಾಹನಗಳು ಸರತಿ ಸಾಲು ನಿಲ್ಲಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ರೀತಿ ಹಲವೆಡೆ ಆದಿವಾಸಿಗಳಿಂದ ಸಾರ್ವಜನಿಕರಿಗೆ ಕಿರುಕುಳ ಉಂಟಾಗುತ್ತಿದ್ದು, ಈ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಹಣ ನೀಡದಿದ್ದರೆ ಅವಾಚ್ಯ ಶಬ್ದಗಳಿಂದ ನಿಂದನೆ: ಬೇಡು ಹಬ್ಬದ ಹೆಸರನ್ನು ಹೇಳಿ ಸಾರ್ವಜನಿಕರಿಂದ ಒತ್ತಾಯ ಪೂರ್ವಕವಾಗಿ ಹಣ ವಸೂಲಿ ಮಾಡಲಾಗುತ್ತಿದೆ. ಹಣ ನೀಡದಿದ್ದಲ್ಲಿ ಆದಿವಾಸಿಗಳು ಅವಾಚ್ಯ ಶಬ್ದಗಳನ್ನು ಬಳಸಿ ಸಾರ್ವಜನಿಕರನ್ನು ನಿಂದಿಸುತ್ತಿದ್ದಾರೆ. ಮದ್ಯದ ಅಮಲಿನಲ್ಲಿರುವವರೊಂದಿಗೆ ಹೆಚ್ಚು ಮಾತನಾಡಲು ಸಾಧ್ಯವಾಗದೇ, ಇವರ ಕಿರುಕುಳವನ್ನೂ ಸಹಿಸಲಾಗದೆ ಜನಸಾಮಾನ್ಯರು ಹೈರಾಣಾಗಿದ್ದಾರೆ. ಈ ರೀತಿ ಸಾರ್ವಜನಿ ಕರಿಗೆ ತೊಂದರೆ ನೀಡುವುದರ ಬಗ್ಗೆ ಪೊಲೀಸರು ಕ್ರಮಕ್ಕೆ ಮುಂದಾಗಬೇಕಿದೆ ಎಂದು ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

9 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

9 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

9 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

9 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

9 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

9 hours ago