ವಾಹನ ತಡೆದು ಹಣ ವಸೂಲಿ; ಸೂಕ್ತ ಕ್ರಮಕ್ಕೆ ಸಾರ್ವಜನಿಕರ ಆಗ್ರಹ
ಕೆ. ಬಿ. ಶಂಶುದ್ದೀನ್
ಕುಶಾಲನಗರ: ಕುಂಡೆ (ಬೇಡು) ಹಬ್ಬದ ಹಿನ್ನೆಲೆಯಲ್ಲಿ ಕುಶಾಲನಗರದಲ್ಲಿ ಆದಿವಾಸಿಗಳು ಹಣ ಸಂಗ್ರಹ ಮಾಡುವುದು ಸಾಮಾನ್ಯ. ಆದರೆ ಹಬ್ಬದ ಹೆಸರಿನಲ್ಲಿ ವಾಹನ ತಡೆದು ಹಣ ವಸೂಲಿ ಮಾಡುವುದು, ಅವಾಚ್ಯ ಶಬ್ದಗಳನ್ನು ಬಳಸುವ ಮೂಲಕ ಸಾರ್ವಜನಿಕರಿಗೆ ಕಿರುಕುಳ ನೀಡುತ್ತಿದ್ದು, ಈ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಕುಶಾಲನಗರದ ಪ್ರಜ್ಞಾವಂತ ನಾಗರಿಕರು ಆಗ್ರಹಿಸಿದ್ದಾರೆ.
ಕೊಡಗಿನ ಬುಡಕಟ್ಟು ಜನಾಂಗವಾದ ಜೇನು ಕುರುಬರ ಪ್ರಸಿದ್ಧವಾದ ಬೇಡು ಹಬ್ಬ ಕುಂಡೆ ಹಬ್ಬವೆಂದು ಪ್ರಖ್ಯಾತಿ. ಪ್ರತಿ ವರ್ಷ ನಡೆಯುವ ಈ ಹಬ್ಬಕ್ಕೆ ಆದಿವಾಸಿಗಳು ಅಂಗಡಿ ಮುಂಗಟ್ಟುಗಳಿಗೆ ತೆರಳಿ ಹಣ ಸಂಗ್ರಹ ಮಾಡುತ್ತಾರೆ. ಸಾರ್ವಜನಿಕರು ಕೂಡ ಹಣ ನೀಡುತ್ತಾರೆ. ಆದರೆ ಇತ್ತೀಚೆಗೆ ಸಾರ್ವಜನಿಕರಿಂದ ಒತ್ತಾಯ ಪೂರ್ವಕವಾಗಿ ಹಣ ವಸೂಲಿ ಮಾಡುತ್ತಿರುವ ಘಟನೆಗಳು ನಡೆಯುತ್ತಿದ್ದು, ಸಾರ್ವಜನಿ ಕರಿಗೆ ಕಿರುಕುಳ ಉಂಟಾಗುತ್ತಿದೆ.
ವಾಹನ ತಡೆದು ಹಣ ವಸೂಲಿ: ಬೇಡು ಹಬ್ಬದ ಹೆಸರನ್ನು ಹೇಳಿ ರಸ್ತೆಯಲ್ಲಿ ವಾಹನಗಳನ್ನು ತಡೆದು ಹಣ ವಸೂಲಿ ಮಾಡುತ್ತಿದ್ದಾರೆ. ಒಂದೆಡೆ ಇದರಿಂದ ಸಾರ್ವಜನಿಕರಿಗೆ ಕಿರುಕುಳವಾದರೆ ಮತ್ತೊಂದೆಡೆ ಕಿಲೋ ಮೀಟರ್ಗಟ್ಟಲೇ
ವಾಹನಗಳು ಸರತಿ ಸಾಲು ನಿಂತು ಟ್ರಾಫಿಕ್ ಜಾಮ್ ಸೃಷ್ಟಿಯಾಗುತ್ತಿದೆ. ಸ್ಥಳದಲ್ಲಿ ಪೊಲೀಸರೂ ಇರುವುದಿಲ್ಲ. ಇದರಿಂದಾಗಿ ವಾಹನ ಚಾಲಕರು ಕಾದು ನಿಲ್ಲಬೇಕಾಗಿದೆ. ಕುಶಾಲನಗರದ ಬೈಚನಹಳ್ಳಿಯಲ್ಲಿ ಆದಿವಾಸಿಗಳು ವಾಹನಗಳನ್ನು ಅಡ್ಡಗಟ್ಟಿ ಹಣ ವಸೂಲಿ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಟ್ರಾಫಿಕ್ ಜಾಮ್ನಿಂದ ವಾಹನಗಳು ಸರತಿ ಸಾಲು ನಿಲ್ಲಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ರೀತಿ ಹಲವೆಡೆ ಆದಿವಾಸಿಗಳಿಂದ ಸಾರ್ವಜನಿಕರಿಗೆ ಕಿರುಕುಳ ಉಂಟಾಗುತ್ತಿದ್ದು, ಈ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
ಹಣ ನೀಡದಿದ್ದರೆ ಅವಾಚ್ಯ ಶಬ್ದಗಳಿಂದ ನಿಂದನೆ: ಬೇಡು ಹಬ್ಬದ ಹೆಸರನ್ನು ಹೇಳಿ ಸಾರ್ವಜನಿಕರಿಂದ ಒತ್ತಾಯ ಪೂರ್ವಕವಾಗಿ ಹಣ ವಸೂಲಿ ಮಾಡಲಾಗುತ್ತಿದೆ. ಹಣ ನೀಡದಿದ್ದಲ್ಲಿ ಆದಿವಾಸಿಗಳು ಅವಾಚ್ಯ ಶಬ್ದಗಳನ್ನು ಬಳಸಿ ಸಾರ್ವಜನಿಕರನ್ನು ನಿಂದಿಸುತ್ತಿದ್ದಾರೆ. ಮದ್ಯದ ಅಮಲಿನಲ್ಲಿರುವವರೊಂದಿಗೆ ಹೆಚ್ಚು ಮಾತನಾಡಲು ಸಾಧ್ಯವಾಗದೇ, ಇವರ ಕಿರುಕುಳವನ್ನೂ ಸಹಿಸಲಾಗದೆ ಜನಸಾಮಾನ್ಯರು ಹೈರಾಣಾಗಿದ್ದಾರೆ. ಈ ರೀತಿ ಸಾರ್ವಜನಿ ಕರಿಗೆ ತೊಂದರೆ ನೀಡುವುದರ ಬಗ್ಗೆ ಪೊಲೀಸರು ಕ್ರಮಕ್ಕೆ ಮುಂದಾಗಬೇಕಿದೆ ಎಂದು ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ.
ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಈಗ ಎರಡನೇ ಬಾರಿ ಜಾಮೀನಿಗಾಗಿ…
ಚಾಮರಾಜನಗರ : ಮದುವೆ ಮನೆಯಲ್ಲಿ ಸಂಭ್ರಮ ಮನೆ ಮಾಡಬೇಕಿದ್ದ ಹೊತ್ತಲ್ಲಿ ಚಿನ್ನಾಭರಣದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ಹೋಗಿ, ಚಾಕು…
ಬಿಸಿಲ ಝಳದಿಂದ ಕುಸಿಯುತ್ತಿರುವ ಅಂತರ್ಜಲ ಮಟ್ಟ ; ಮೇ ತಿಂಗಳಲ್ಲಿ ನೀರಿನ ಕೊರತೆ ಸಾಧ್ಯತೆ • ಕೆ.ಬಿ.ಶಂಶುದ್ದೀನ್ ಕುಶಾಲನಗರ :…
1992ರಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ಉರುಳಿಸಲ್ಪಟ್ಟ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆದ ಕೋಮು ಗಲಭೆಗಳಲ್ಲಿ 2,000ಕ್ಕೂ ಜನ ಸಾವಿಗೀಡಾದರು. ಅಯೋಧ್ಯೆಯಿಂದ 65ಕಿ.…
ಸ್ವಾಭಿಮಾನಕ್ಕೆ ಧಕ್ಕೆಯಾದರೆ ಬಂಡೇಳುವುದು ವಿ.ಶ್ರೀನಿವಾಸ ಪ್ರಸಾದ್ ಅವರ ಜಾಯಮಾನ ಸಿ.ಹರಕುಮಾರ್ ಸ್ವಾಭಿಮಾನದ ರಾಜಕಾರಣಕ್ಕೆ ಪರ್ಯಾಯವೆಂಬಂತಿದ್ದ ವಿ.ಶ್ರೀನಿವಾಸ ಪ್ರಸಾದ್ ರವರು ನಮ್ಮನ್ನಗಲಿ…
ಐಟಿ, ಇಡಿ ಬಳಸಿಕೊಂಡು ಬೆದರಿಸುವ ತಂತ್ರ. ಬಿಜೆಪಿ ಸೇರ್ಪಡೆಯಾದ ನಂತರ ಎಲ್ಲ ಆರೋಪಿಗಳಿಂದ ಮುಕ್ತಿ. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿರುವ…