ಓದುಗರ ಪತ್ರ
ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆಯಿಂದ ಹುಣಸೂರು ಕಡೆಗೆ ತೆರಳುವ ಮಾರ್ಗ ಮಧ್ಯೆ ಇರುವ ಹಣ್ಣೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಕೆ.ಎಡತೊರೆ ಗ್ರಾಮವು ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ಗ್ರಾಮವಾಗಿದೆ.
ಹುಣಸೂರು ಮತ್ತು ಎಚ್.ಡಿ.ಕೋಟೆ ನಡುವೆ ದಿನ ನಿತ್ಯ ಸಾವಿರಾರು ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಸಂಚಾರ ಮಾಡುತ್ತಾರೆ. ಕೆ.ಎಡತೊರೆ ಗ್ರಾಮದಲ್ಲಿ ಹಳೆಯ ಬಸ್ ನಿಲ್ದಾಣವಿದೆ. ಈ ನಿಲ್ದಾಣದಲ್ಲಿ ರಾತ್ರಿ ವೇಳೆ ಕಿಡಿಗೇಡಿಗಳು ಮದ್ಯಪಾನ, ಧೂಮಪಾನ ಮಾಡಿ ಮದ್ಯದ ಬಾಟಲಿಗಳನ್ನು ಬಿಸಾಡಿ ಹೋಗುತ್ತಾರೆ. ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಮಳೆ ಬಂದ ಸಂದರ್ಭದಲ್ಲಿ ಅಥವಾ ಬೇಸಿಗೆಯಲ್ಲಿ ಈ ಬಸ್ ನಿಲ್ದಾಣದ ಒಳಗೆ ಆಶ್ರಯ ಪಡೆಯಬೇಕು. ಆದರೆ ಈ ಬಸ್ ನಿಲ್ದಾಣಕ್ಕೆ ಪ್ರವೇಶ ಮಾಡಲೂ ಆಗುತ್ತಿಲ್ಲ. ತುಂಬಾ ಹಳೆಯದಾಗಿರುವುದರಿಂದ ಯಾವುದೇ ಸಂದರ್ಭದಲ್ಲಾದರೂ ಕುಸಿದು ಬೀಳುವ ಸಂಭವವಿದೆ.
ಆದ್ದರಿಂದ ಕೆಎಸ್ಆರ್ಟಿಸಿ ಅಧಿಕಾರಿಗಳು ಹಾಗೂ ತಾಲ್ಲೂಕಿನ ಜನಪ್ರತಿನಿಧಿಗಳು,ಶಾಸಕರು, ಸಂಸದರು, ಕೂಡಲೇ ಈ ಬಗ್ಗೆ ಗಮನ ಹರಿಸಿ ಕೆ.ಎಡತೊರೆ ಗ್ರಾಮದಲ್ಲಿ ಹೊಸ ಹಾಗೂ ಸುಸಜ್ಜಿತ ಬಸ್ ನಿಲ್ದಾಣ ನಿರ್ಮಾಣ ಮಾಡಿಕೊಡಲು ಮುಂದಾಗಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
-ಸಿದ್ದಲಿಂಗೇಗೌಡ, ಹೈರಿಗೆ, ಎಚ್. ಡಿ. ಕೋಟೆ ತಾಲ್ಲೂಕು
ಜಿಲ್ಲೆಯಲ್ಲಿ ೧೧ ಮಂದಿ ಸಾವು ಮುಂಜಾಗ್ರತೆ ಪಾಲಿಸುವುದು ಅಗತ್ಯ ಮೈಸೂರು: ಬಿರು ಬೇಸಿಗೆ ಸಂದರ್ಭದಲ್ಲಿ ನದಿ, ಕೆರೆ ಹಾಗೂ ಕಾಲುವೆಗಳಲ್ಲಿ…
ಪ್ರೊ.ಜಯಪ್ರಕಾಶಗೌಡ, ಅಧ್ಯಕ್ಷರು, ಕರ್ನಾಟಕ ಸಂಘ, ಮೈಸೂರು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರಿಗೆ ಎಸ್.ಎಂ.ಕೃಷ್ಣ ಪ್ರಶಸ್ತಿ ಪುರಸ್ಕಾರ ಮಂಡ್ಯ ಜಿಲ್ಲೆಯ…
ಚಿರಂಜೀವಿ ಸಿ.ಹುಲ್ಲಹಳ್ಳಿ ೩,೭೫೦ ರೂ., ಶೇ.೧೮ರಷ್ಟು ಜಿಎಸ್ಟಿ ಸೇರಿ ಒಟ್ಟು ೪,೭೫೦ ರೂ.ಶುಲ್ಕ ಪ್ರತಿ ಶಿಬಿರಾರ್ಥಿಗೆ ನಿಗದಿ ಮೈಸೂರು: ಮಲ್ಲಿಗೆ…
ಕೆ.ಬಿ.ರಮೇಶನಾಯಕ ಬಯೋಮೆಟ್ರಿಕ್ ಹಾಜರಾತಿ ಜತೆಗೆ ಜಿಪಿಎಸ್ ವ್ಯವಸ್ಥೆ ಜಾರಿಗೆ ಚಿಂತನೆ ಹಾಜರಾತಿ ಹಾಕಿ ಬೇಕಾಬಿಟ್ಟಿ ಓಡಾಡುವ ಸಿಬ್ಬಂದಿಗಳಿಗೆ ಬ್ರೇಕ್ ಮೈಸೂರು:…
ಪ್ರಶಾಂತ್ ಎಸ್. ಮೈಸೂರು: ಎಲ್ಲೆಡೆ ಬಿರು ಬಿಸಿಲು ಜನರನ್ನು ಹೈರಾಣಾಗಿಸುತ್ತಿದೆ. ಬಿಸಿಲ ಬೇಗೆಯಿಂದ ದಾಹ ನೀಗಿಸಿಕೊಳ್ಳಲು ಜನರು ಎಳನೀರು ಮೊರೆ…
ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪಸಮರದಲ್ಲಿ ಕೈ ಜಯಭೇರಿ ಆರ್.ಟಿ.ವಿಠ್ಠಲಮೂರ್ತಿ ಬೆಂಗಳೂರು: ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪ…