Andolana originals

ಕೆ. ಆರ್. ನಗರ | ಇಂದು ಗಂಧನಹಳ್ಳಿಯಲ್ಲಿ ಹುಣಸಮ್ಮ ದೇವಿ ರಥೋತ್ಸವ

ಜಾತ್ರೆಗೆ ಇಡೀ ಗ್ರಾಮ ಸಜ್ಜು ; ರಥ, ಪ್ರಮುಖ ಬೀದಿಗಳಿಗೆ ಸಿಂಗಾರ
ಭೇರ್ಯ ಮಹೇಶ್

ಕೆ. ಆರ್. ನಗರ: ತಾಲ್ಲೂಕಿನ ಗಂಧನಹಳ್ಳಿ ಗ್ರಾಮದಲ್ಲಿ ಗ್ರಾಮದೇವತೆ ಹುಣಸಮ್ಮ ದೇವಿಯ ರಥೋತ್ಸವ ಶುಕ್ರವಾರ ರಾತ್ರಿ ೯ ಗಂಟೆಗೆ ಜರುಗಲಿದ್ದು, ದೇವಿಯ ರಥೋತ್ಸವಕ್ಕೆ ಇಡೀ ಗ್ರಾಮವೇ ಸಕಲ ಸಿದ್ಧತೆಗಳೊಂದಿಗೆ ಸಜ್ಜುಗೊಂಡಿದೆ.

ಈಗಾಗಲೇ ರಥವನ್ನು ವಿವಿಧ ಬಗೆಯ ಬಣ್ಣಗಳಿಂದ ಅಲಂಕರಿಸಲಾಗಿದ್ದು, ನೋಡುಗರ ಕಣ್ಮನ ಸೆಳೆಯುವಂತೆ ಮಾಡಲಾಗಿದೆ. ಈ ರಥೋತ್ಸವವನ್ನು ಜನಪದ ಹಾಗೂ ಗ್ರಾಮೀಣ ಶೈಲಿಯಲ್ಲಿ ಆಚರಣೆ ಮಾಡಲಾಗುತ್ತಿದೆ.

ರಥೋತ್ಸವದ ಅಂಗವಾಗಿ ಗ್ರಾಮವನ್ನು ತಳಿರು-ತೋರಣ, ತೆಂಗಿನ ಗರಿ, ಅಡಕೆ ಹೊಂಬಾಳೆಯಿಂದ ಸಿಂಗಾರಗೊಳಿಸಲಾಗಿದೆ. ಗ್ರಾಮದ ಪ್ರಮುಖ ರಸ್ತೆಗಳಲ್ಲಿ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ಶುಕ್ರವಾರ ಬೆಳಿಗ್ಗೆ ೯ ಗಂಟೆಗೆ ಕಪ್ಪಡಿ ಕ್ಷೇತ್ರದ ಕಾವೇರಿ ನದಿಯ ದಡದಲ್ಲಿ ಹುಣಸಮ್ಮ ದೇವಿಗೆ ಪೂಜಾ
ಕೈಂಕರ್ಯ ನೆರವೇರಿಸಿ ನಂತರ ಮಂಗಳವಾದ್ಯ ಸಮೇತ ಗ್ರಾಮದ ಪ್ರಮುಖ ಬೀದಿಗಳಲ್ಲಿ ಹೂವಿನ ಪಲ್ಲಕ್ಕಿಯ ಮೆರವಣಿಗೆ ಮೂಲಕ ದೇವಾಲಯಕ್ಕೆ ಕರೆತರಲಾಗುವುದು. ನಂತರ ಮಹಾಮಂಗಳಾರತಿ ಹಾಗೂ ಪ್ರಸಾದ ವಿತರಿಸಲಾಗುತ್ತದೆ ಎಂದು ಗ್ರಾಮದ ಯಜಮಾನ ರಘು ‘ಆಂದೋಲನ’ಕ್ಕೆ ತಿಳಿಸಿದರು.

ಸಂಜೆ ೬ ಗಂಟೆಗೆ ದೇವಾಲಯದಿಂದ ಹುಣಸಮ್ಮ ದೇವಿಯ ಉತ್ಸವಮೂರ್ತಿಯನ್ನು ರಥದಲ್ಲಿ ಪ್ರತಿಷ್ಠಾಪಿಸಿ ರಥವನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ಎಳೆಯಲಾಗುವುದು. ಗ್ರಾಮದ ಮುತ್ತೈದೆಯರು ಹಾಗೂ ಹೆಣ್ಣು ಮಕ್ಕಳು ತಂಬಿಟ್ಟು ಆರತಿ ಯೊಂದಿಗೆ ರಥಕ್ಕೆ ಮೂರು ಬಾರಿ ಪ್ರದಕ್ಷಿಣೆ ಹಾಕಿ ಮೆರವಣಿಗೆಯಲ್ಲಿ ಸಾಗುವರು. ರಥದಲ್ಲಿ ಪ್ರತಿಷ್ಠಾಪಿಸಿರುವ ಹುಣಸಮ್ಮ ದೇವಿಗೆ ಹಣ್ಣು-ಜವನ ಎಸೆಯುವ ಮೂಲಕ ತಮ್ಮ ಇಷ್ಟಾರ್ಥಗಳನ್ನು ಬೇಡಿಕೊಳ್ಳುವರು. ರಥೋತ್ಸವಕ್ಕೆ ಸುತ್ತಮುತ್ತಲಿನ ಗ್ರಾಮಗಳ ಸಾವಿರಾರು ಜನರು ಆಗಮಿಸುವರು.

ಪೌರಾಣಿಕ ನಾಟಕ: ಹಬ್ಬದ ಹಿನ್ನೆಲೆಯಲ್ಲಿ ಗ್ರಾಮದ ಶ್ರೀ ಬೀರೇಶ್ವರ ಕೃಪಾ ಪೋಷಿತ ನಾಟಕ ಮಂಡಳಿಯಿಂದ ರಾತ್ರಿ ೮ ಗಂಟೆಗೆ ಶ್ರೀ ಶನಿ ಪ್ರಭಾವ ಅಥವಾ ರಾಜ ವಿಕ್ರಮ ವಿಜಯ ಎಂಬ ಪೌರಾಣಿಕ ನಾಟಕದ ಪ್ರದರ್ಶನ ನಡೆಯಲಿದೆ.

 

ಆಂದೋಲನ ಡೆಸ್ಕ್

Recent Posts

ಹಸಿರುಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನರಾಮ್

ಎಚ್.ಹಾಲಪ್ಪ ಸಮಾನತೆ ಇಲ್ಲದೆ ಪ್ರಜಾಪ್ರಭುತ್ವ ಅಪೂರ್ಣ ಎಂದು ನಂಬಿದ್ದ ತಮ್ಮ ಕಾರ್ಯಪ್ರವೃತ್ತಿಯಿಂದ ಸಮಾಜದಲ್ಲಿ ಸಮಾನತೆಯನ್ನು ಜೀವಂತಗೊಳಿಸಿದ ದೇಶದಾದ್ಯಂತ ಬಾಬೂಜಿ ಎಂದೇ…

2 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಕರ್ನಾಟಕ, ಮಹಾರಾಷ್ಟ್ರದಲ್ಲಿ ಮತ್ತೆ ಹಿಂದಿ ವಿವಾದ

ಹಿಂದಿ ಭಾಷೆಯ ಪ್ರಶ್ನೆ ಮತ್ತೆ ವಿವಾದವನ್ನು ಉಂಟು ಮಾಡಿದೆ. ತನ್ನ ಮಾತೃ ಭಾಷೆಯಲ್ಲದ ಮತ್ತು ಉತ್ತರ ಭಾರತದ ರಾಜ್ಯಗಳ ಮಾತೃ…

2 hours ago

ಕಾಫಿ ಉದ್ಯಮದ ಮೇಲೆ ಮಧ್ಯಪ್ರಾಚ್ಯ ಯುದ್ಧದ ಎಫೆಕ್..!

ನವೀನ್ ಡಿಸೋಜ ಶಿಪ್‌ಮೆಂಟ್ ವಿಳಂಬ, ಕಂಟೇನರ್ ಕೊರತೆ, ಹಡಗುಗಳ ಅಭಾವ, ಇಂಧನ ಅನಿಶ್ಚಿತತೆ ಕಾಫಿ ಉತ್ಪಾದನಾ ವಲಯದಲ್ಲಿ ಗೊಂದಲದ ವಾತಾವರಣ …

2 hours ago

ಭೂತ್ ಜೋಲೋಕಿಯಾ: ಖಾರ ಎನ್ನಬೇಕೋ ಇಲ್ಲಾ ಬೆಂಕಿಯ ಬಾಣ ಎನ್ನಬೇಕೋ

ನಂದಿನಿ ಎನ್. ಹತ್ತು ಜನರಿಗಾಗುವಷ್ಟು ಅಡುಗೆಗೆ ಕೇವಲ ೨ ಮೆಣಸಿನ ಕಾಯಿ ಸಾಕು ಎಂದರೆ ನಂಬುತ್ತೀರಾ!? ನಾಗಾಲ್ಯಾಂಡ್ ಪ್ರವಾಸದಲ್ಲಿ ಅಲ್ಲಿನ…

2 hours ago

ಬಿಕೋ ಎನ್ನುತ್ತಿರುವ ದುಬಾಯಿ ಬೀದಿಗಳು, ಭವಿಷ್ಯದ ಕಳವಳದಲ್ಲಿ ಅನಿವಾಸಿ ಭಾರತೀಯರು

ತಾಜ್ ಗಡಿನಾಡು ಇರಾನ್ ಮೇಲೆ ಫೆಬ್ರವರಿ ಅಂತ್ಯಕ್ಕೆ ಆರಂಭಗೊಂಡ ಅಮೆರಿಕ-ಇಸ್ರೇಲ್ ದೇಶಗಳ ಜಂಟಿ ಯುದ್ಧ ತಿಂಗಳು ಕಳೆದರೂ ಇನ್ನೂ ಅಂತ್ಯಗೊಂಡಿಲ್ಲ.…

2 hours ago

ಅನೈತಿಕ ಚಟುವಟಿಕೆಗಳ ತಾಣವಾದ ಬಾಬೂಜಿ ಭವನ

ಮಂಜು ಕೋಟೆ ಕೋಟೆ: ೧೦ ವರ್ಷಗಳಿಂದ ಬಳಕೆಗೆ ಬಾರದ ಕಟ್ಟಡ; ಮತ್ತೊಂದು ಕಾಮಗಾರಿಯೂ ನನೆಗುದಿಗೆ  ಎಚ್.ಡಿ.ಕೋಟೆ: ಪಟ್ಟಣದ ಹೃದಯ ಭಾಗದಲ್ಲಿ…

2 hours ago