Andolana originals

ಕೆ. ಆರ್. ನಗರ | ಇಂದು ಗಂಧನಹಳ್ಳಿಯಲ್ಲಿ ಹುಣಸಮ್ಮ ದೇವಿ ರಥೋತ್ಸವ

ಜಾತ್ರೆಗೆ ಇಡೀ ಗ್ರಾಮ ಸಜ್ಜು ; ರಥ, ಪ್ರಮುಖ ಬೀದಿಗಳಿಗೆ ಸಿಂಗಾರ
ಭೇರ್ಯ ಮಹೇಶ್

ಕೆ. ಆರ್. ನಗರ: ತಾಲ್ಲೂಕಿನ ಗಂಧನಹಳ್ಳಿ ಗ್ರಾಮದಲ್ಲಿ ಗ್ರಾಮದೇವತೆ ಹುಣಸಮ್ಮ ದೇವಿಯ ರಥೋತ್ಸವ ಶುಕ್ರವಾರ ರಾತ್ರಿ ೯ ಗಂಟೆಗೆ ಜರುಗಲಿದ್ದು, ದೇವಿಯ ರಥೋತ್ಸವಕ್ಕೆ ಇಡೀ ಗ್ರಾಮವೇ ಸಕಲ ಸಿದ್ಧತೆಗಳೊಂದಿಗೆ ಸಜ್ಜುಗೊಂಡಿದೆ.

ಈಗಾಗಲೇ ರಥವನ್ನು ವಿವಿಧ ಬಗೆಯ ಬಣ್ಣಗಳಿಂದ ಅಲಂಕರಿಸಲಾಗಿದ್ದು, ನೋಡುಗರ ಕಣ್ಮನ ಸೆಳೆಯುವಂತೆ ಮಾಡಲಾಗಿದೆ. ಈ ರಥೋತ್ಸವವನ್ನು ಜನಪದ ಹಾಗೂ ಗ್ರಾಮೀಣ ಶೈಲಿಯಲ್ಲಿ ಆಚರಣೆ ಮಾಡಲಾಗುತ್ತಿದೆ.

ರಥೋತ್ಸವದ ಅಂಗವಾಗಿ ಗ್ರಾಮವನ್ನು ತಳಿರು-ತೋರಣ, ತೆಂಗಿನ ಗರಿ, ಅಡಕೆ ಹೊಂಬಾಳೆಯಿಂದ ಸಿಂಗಾರಗೊಳಿಸಲಾಗಿದೆ. ಗ್ರಾಮದ ಪ್ರಮುಖ ರಸ್ತೆಗಳಲ್ಲಿ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ಶುಕ್ರವಾರ ಬೆಳಿಗ್ಗೆ ೯ ಗಂಟೆಗೆ ಕಪ್ಪಡಿ ಕ್ಷೇತ್ರದ ಕಾವೇರಿ ನದಿಯ ದಡದಲ್ಲಿ ಹುಣಸಮ್ಮ ದೇವಿಗೆ ಪೂಜಾ
ಕೈಂಕರ್ಯ ನೆರವೇರಿಸಿ ನಂತರ ಮಂಗಳವಾದ್ಯ ಸಮೇತ ಗ್ರಾಮದ ಪ್ರಮುಖ ಬೀದಿಗಳಲ್ಲಿ ಹೂವಿನ ಪಲ್ಲಕ್ಕಿಯ ಮೆರವಣಿಗೆ ಮೂಲಕ ದೇವಾಲಯಕ್ಕೆ ಕರೆತರಲಾಗುವುದು. ನಂತರ ಮಹಾಮಂಗಳಾರತಿ ಹಾಗೂ ಪ್ರಸಾದ ವಿತರಿಸಲಾಗುತ್ತದೆ ಎಂದು ಗ್ರಾಮದ ಯಜಮಾನ ರಘು ‘ಆಂದೋಲನ’ಕ್ಕೆ ತಿಳಿಸಿದರು.

ಸಂಜೆ ೬ ಗಂಟೆಗೆ ದೇವಾಲಯದಿಂದ ಹುಣಸಮ್ಮ ದೇವಿಯ ಉತ್ಸವಮೂರ್ತಿಯನ್ನು ರಥದಲ್ಲಿ ಪ್ರತಿಷ್ಠಾಪಿಸಿ ರಥವನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ಎಳೆಯಲಾಗುವುದು. ಗ್ರಾಮದ ಮುತ್ತೈದೆಯರು ಹಾಗೂ ಹೆಣ್ಣು ಮಕ್ಕಳು ತಂಬಿಟ್ಟು ಆರತಿ ಯೊಂದಿಗೆ ರಥಕ್ಕೆ ಮೂರು ಬಾರಿ ಪ್ರದಕ್ಷಿಣೆ ಹಾಕಿ ಮೆರವಣಿಗೆಯಲ್ಲಿ ಸಾಗುವರು. ರಥದಲ್ಲಿ ಪ್ರತಿಷ್ಠಾಪಿಸಿರುವ ಹುಣಸಮ್ಮ ದೇವಿಗೆ ಹಣ್ಣು-ಜವನ ಎಸೆಯುವ ಮೂಲಕ ತಮ್ಮ ಇಷ್ಟಾರ್ಥಗಳನ್ನು ಬೇಡಿಕೊಳ್ಳುವರು. ರಥೋತ್ಸವಕ್ಕೆ ಸುತ್ತಮುತ್ತಲಿನ ಗ್ರಾಮಗಳ ಸಾವಿರಾರು ಜನರು ಆಗಮಿಸುವರು.

ಪೌರಾಣಿಕ ನಾಟಕ: ಹಬ್ಬದ ಹಿನ್ನೆಲೆಯಲ್ಲಿ ಗ್ರಾಮದ ಶ್ರೀ ಬೀರೇಶ್ವರ ಕೃಪಾ ಪೋಷಿತ ನಾಟಕ ಮಂಡಳಿಯಿಂದ ರಾತ್ರಿ ೮ ಗಂಟೆಗೆ ಶ್ರೀ ಶನಿ ಪ್ರಭಾವ ಅಥವಾ ರಾಜ ವಿಕ್ರಮ ವಿಜಯ ಎಂಬ ಪೌರಾಣಿಕ ನಾಟಕದ ಪ್ರದರ್ಶನ ನಡೆಯಲಿದೆ.

 

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

4 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

8 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

8 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

8 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

8 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

8 hours ago