Andolana originals

ಕಬಿನಿ ಜಲಾಶಯಕ್ಕೆ ೩ ದಿನಗಳಲ್ಲೇ ೧೨ ಅಡಿ ನೀರು!

ಮಂಜು ಕೋಟೆ

ಸತತ ಮಳೆಯಿಂದ ನುಗು, ತಾರಕ, ಹೆಬ್ಬಾಳ ಜಲಾಶಯಗಳಲ್ಲೂ ನೀರಿನ ಮಟ್ಟ ಏರಿಕೆ 

ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ, ನುಗು, ತಾರಕ, ಹೆಬ್ಬಾಳ ಜಲಾಶಯಗಳ ವ್ಯಾಪ್ತಿಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಮೂರೇ ದಿನಗಳಲ್ಲಿ ಕಬಿನಿಗೆ ೧೨ ಅಡಿ, ತಾರಕಕ್ಕೆ ೩ ಅಡಿ, ನುಗುವಿಗೆ ೫ ಅಡಿ, ಹೆಬ್ಬಾಳ ಜಲಾಶಯಕ್ಕೆ ೬ ಅಡಿ ನೀರು ಬಂದಿದ್ದು, ಒಳಹರಿವಿನ ಪ್ರಮಾಣ ಹೆಚ್ಚಾಗಿರುವುದರಿಂದ ಮುಂದಿನ ತಿಂಗಳಲ್ಲೇ ಈ ಜಲಾಶಯಗಳು ಭರ್ತಿಯಾಗುವ ಸಾಧ್ಯತೆಗಳು ಹೆಚ್ಚಾಗಿವೆ.

ಕಳೆದ ಏಪ್ರಿಲ್ ಮತ್ತು ಈ ತಿಂಗಳಲ್ಲಿ ವಿಪರೀತವಾದ ಬಿಸಿಲಿದ್ದರಿಂದ ಕಬಿನಿ, ನುಗು, ತಾರಕ, ಹೆಬ್ಬಾಳ ಜಲಾಶಯಗಳಲ್ಲಿ ನೀರಿನ ಮಟ್ಟ ಭಾರಿ ಪ್ರಮಾಣದಲ್ಲಿ ಕುಸಿತ ಕಂಡಿತ್ತು. ಆದರೆ, ಕಳೆದ ವಾರದಿಂದ ತಾಲ್ಲೂಕು ಮತ್ತು ಕೇರಳದ ವಯನಾಡು, ಕೊಡಗು ವ್ಯಾಪ್ತಿಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಈ ಜಲಾಶಯಗಳಿಗೆ ಒಳಹರಿವಿನ ಪ್ರಮಾಣ ಹೆಚ್ಚಾಗಿ ನೀರಿನ ಪ್ರಮಾಣದಲ್ಲಿ ಏರಿಕೆ ಕಾಣುತ್ತಿರುವುದು ರೈತರು ಮತ್ತು ಸಾರ್ವಜನಿಕರಲ್ಲಿ ಸಂತಸ ಉಂಟುಮಾಡಿದೆ.

ಪ್ರತಿ ಸಾಲಿನಲ್ಲೂ ಈ ಅವಧಿಯಲ್ಲಿ ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿತವಾಗಿರುತ್ತಿತ್ತು. ಇದೇ ಮೊದಲ ಬಾರಿಗೆ ವರುಣನ ಆರ್ಭಟದಿಂದ ಜಲಾಶಯಗಳ ನೀರಿನ ಮಟ್ಟದಲ್ಲಿ ಏರಿಕೆ ಕಾಣುತ್ತಿದ್ದು, ಇದೇ ರೀತಿ ಮಳೆ ಮುಂದುವರಿದರೆ ಜೂನ್ ತಿಂಗಳ ಮೊದಲನೇ ವಾರದಲ್ಲೇ ಜಲಾಶಯಗಳು ಭರ್ತಿಯಾಗುವುದು ಖಚಿತ. ಕಬಿನಿ ಜಲಾಶಯದ ಇತಿಹಾಸದಲ್ಲೇ ಮೊದಲು ಎಂಬಂತೆ ಮೂರೇ ದಿನಗಳಲ್ಲಿ ೧೨ ಅಡಿಗಳಷ್ಟು ನೀರಿನ ಮಟ್ಟ ಏರಿಕೆ ಕಂಡಿದೆ. ಕಳೆದ ವಾರ ಕಬಿನಿ ಜಲಾಶಯ ೬೦ ಅಡಿಗಳಿಗೆ ಕುಸಿತ ಕಂಡಿತ್ತು. ಈಗ ೭೨ ಅಡಿಗಳಷ್ಟು ನೀರಿದೆ. ಗರಿಷ್ಟ ೮೪ ಅಡಿಗಳಿರುವ ಜಲಾಶಯ ಭರ್ತಿಯಾಗಲು ಇನ್ನು ೧೨ ಅಡಿ ಮಾತ್ರ ಬಾಕಿ ಇದೆ. ಸದ್ಯ ೨೪ ಸಾವಿರ ಕ್ಯೂಸೆಕ್ಸ್ ಒಳಹರಿವು ಇದೆ.

ತಾರಕ ಜಲಾಶಯ ತನ್ನ ಗರಿಷ್ಟ ೧೧೦ ಅಡಿ ತಲುಪಲು ಇನ್ನು ೧೨ ಅಡಿಗಳು ಮಾತ್ರ ಬಾಕಿ ಇದೆ. ೩ ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಜಲಾಶಯದಲ್ಲಿ ೩ ಅಡಿ ನೀರು ಸಂಗ್ರಹವಾಗಿದೆ. ಜಲಾಶಯಕ್ಕೆ ೧,೭೦೦ ಕ್ಯೂಸೆಕ್ಸ್ ನೀರು ಹರಿದು ಬರುತ್ತಿದ್ದು ಕೊಡಗಿನಲ್ಲಿ ಮಳೆ ಪ್ರಮಾಣ ಹೆಚ್ಚಾಗಿರುವುದರಿಂದ ಈ ಪ್ರದೇಶದಿಂದ ಈ ಜಲಾಶಯಕ್ಕೆ ನೀರು ಹರಿದು ಬರುತ್ತಿದೆ.

ಹೆಬ್ಬಾಳದ ಜಲಾಶಯ ತನ್ನ ಗರಿಷ್ಟ ಮಟ್ಟ ೨೫ ಅಡಿ ತಲುಪಲು ಇನ್ನು ೪ ಅಡಿ ಮಾತ್ರ ಬಾಕಿ ಇದೆ. ಜಲಾಶಯಕ್ಕೆ ಹುಣಸೂರು ಮತ್ತು ಕೋಟೆ ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆ ಆಗುತ್ತಿರುವುದರಿಂದ ಒಳಹರಿವಿನ ಪ್ರಮಾಣ ಹೆಚ್ಚಾಗಿದ್ದು ೨-೩ ದಿನದಲ್ಲಿ ಜಲಾಶಯ ಭರ್ತಿಯಾಗಲಿದೆ. ನುಗು ಜಲಾಶಯ ತನ್ನ ಗರಿಷ್ಟ ಮಟ್ಟ ೧೧೦ ಅಡಿ ತಲುಪಲು ೨೨ ಅಡಿಗಳು ಬಾಕಿ ಮಾತ್ರ ಇದೆ. ೮೩ ಅಡಿಗಳಿಗೆ ಕುಸಿತ ಕಂಡಿದ್ದ ಜಲಾಶಯ ವಾರದಿಂದ ಮಳೆಯಿಂದಾಗಿ ೫ ಅಡಿಗಳಷ್ಟು ನೀರು ಹೆಚ್ಚಳವಾಗಿ ೮೮ ಅಡಿಗಳಿಗೆ ಏರಿಕೆಯಾಗಿದೆ. ೧,೮೦೦ ಕ್ಯೂಸೆಕ್ಸ್ ನೀರು ಹರಿದು ಬರುತ್ತಿದೆ. ಕಳೆದ ಬಾರಿ ಇದೇ ಸಂದರ್ಭದಲ್ಲಿ ನೀರಿನ ಮಟ್ಟ ೭೪ ಅಡಿಗಳಷ್ಟಿತ್ತು.

ಮುಂಗಾರು ಮಳೆ ಇದೇ ವಾರದಲ್ಲಿ ಕೇರಳ ಮತ್ತು ಕರ್ನಾಟಕ ಪ್ರವೇಶಿಸುವುದರಿಂದ ಮುಂಗಾರು ಮಳೆಯ ಆರ್ಭಟ ಹೆಚ್ಚಾದಲ್ಲಿ ಭಾರಿ ಪ್ರಮಾಣದ ನೀರನ್ನು ಜಲಾಶಯದಿಂದ ಹೊರಬಿಡುವ ಸಾಧ್ಯತೆಗಳೂ ಇವೆ.

” ಕೋಟೆ ಮತ್ತು ಸರಗೂರು ತಾಲ್ಲೂಕುಗಳಲ್ಲಿ ಭಾರೀ ಮಳೆ ಆಗುತ್ತಿದ್ದು ವಿಪತ್ತು ನಿರ್ವಹಣಾ ಸಮಿತಿಯನ್ನು ಎರಡೂ ತಾಲ್ಲೂಕುಗಳಲ್ಲಿ ರಚಿಸಿ, ಅನೇಕ ಅಽಕಾರಿಗಳನ್ನು ನೇಮಕ ಮಾಡಲಾಗಿದ್ದು, ಸಭೆ ನಡೆಸಲಾಗಿದೆ. ಜಲಾಶಯಗಳಿಗೆ ನೀರಿನ ಒಳಹರಿವಿನ ಪ್ರಮಾಣ ಹೆಚ್ಚಾಗಿದ್ದು ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ.”

-ಶ್ರೀನಿವಾಸ್, ತಹಸಿಲ್ದಾರ್, ಎಚ್.ಡಿ.ಕೋಟೆ, ಮೋಹನಕುಮಾರಿ, ತಹಸಿಲ್ದಾರ್, ಸರಗೂರು.

” ಕಬಿನಿ ಜಲಾಶಯದಲ್ಲಿ ದಿನದಿಂದ ದಿನಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಹೀಗೆಯೇ ಮಳೆ ಮುಂದುವರಿದರೆ ಶೀಘ್ರದಲ್ಲೇ ಜಲಾಶಯ ಭರ್ತಿಯಾಗಲಿದೆ. ನೀರಾವರಿ ಇಲಾಖೆಯ ಅಧಿಕಾರಿಗಳು ಕಟ್ಟುನಿಟ್ಟಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಕಳೆದ ಬಾರಿಗಿಂತ ಈ ಬಾರಿ ಜಲಾಶಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೀರು ಸಂಗ್ರಹಗೊಂಡಿದೆ.”

-ಚಂದ್ರಶೇಖರ್, ಇಇ, ಕಬಿನಿ ಜಲಾಶಯ

ಆಂದೋಲನ ಡೆಸ್ಕ್

Recent Posts

ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ಸ್‌ ನೀರು ಬಿಡಲು CWRC ಆದೇಶ: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ

ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್‌ನಂತೆ 15…

28 mins ago

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

10 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

10 hours ago

ಓದುಗರ ಪತ್ರ: ಬರ…ಅಬ್ಬರ !

ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…

10 hours ago

ಓದುಗರ ಪತ್ರ: ಪರೀಕ್ಷಾ ವ್ಯವಸ್ಥೆ ಸಮಗ್ರ ಸುಧಾರಣೆ ಅತ್ಯಗತ್ಯ

ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…

10 hours ago

ಆರ್‌ಟಿಇ; ಮಕ್ಕಳು ಅವಕಾಶ ವಂಚಿತರಾಗಬಾರದು

ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…

10 hours ago