Andolana originals

ಕಬಿನಿ ಜಲಾಶಯಕ್ಕೆ ೩ ದಿನಗಳಲ್ಲೇ ೧೨ ಅಡಿ ನೀರು!

ಮಂಜು ಕೋಟೆ

ಸತತ ಮಳೆಯಿಂದ ನುಗು, ತಾರಕ, ಹೆಬ್ಬಾಳ ಜಲಾಶಯಗಳಲ್ಲೂ ನೀರಿನ ಮಟ್ಟ ಏರಿಕೆ 

ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ, ನುಗು, ತಾರಕ, ಹೆಬ್ಬಾಳ ಜಲಾಶಯಗಳ ವ್ಯಾಪ್ತಿಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಮೂರೇ ದಿನಗಳಲ್ಲಿ ಕಬಿನಿಗೆ ೧೨ ಅಡಿ, ತಾರಕಕ್ಕೆ ೩ ಅಡಿ, ನುಗುವಿಗೆ ೫ ಅಡಿ, ಹೆಬ್ಬಾಳ ಜಲಾಶಯಕ್ಕೆ ೬ ಅಡಿ ನೀರು ಬಂದಿದ್ದು, ಒಳಹರಿವಿನ ಪ್ರಮಾಣ ಹೆಚ್ಚಾಗಿರುವುದರಿಂದ ಮುಂದಿನ ತಿಂಗಳಲ್ಲೇ ಈ ಜಲಾಶಯಗಳು ಭರ್ತಿಯಾಗುವ ಸಾಧ್ಯತೆಗಳು ಹೆಚ್ಚಾಗಿವೆ.

ಕಳೆದ ಏಪ್ರಿಲ್ ಮತ್ತು ಈ ತಿಂಗಳಲ್ಲಿ ವಿಪರೀತವಾದ ಬಿಸಿಲಿದ್ದರಿಂದ ಕಬಿನಿ, ನುಗು, ತಾರಕ, ಹೆಬ್ಬಾಳ ಜಲಾಶಯಗಳಲ್ಲಿ ನೀರಿನ ಮಟ್ಟ ಭಾರಿ ಪ್ರಮಾಣದಲ್ಲಿ ಕುಸಿತ ಕಂಡಿತ್ತು. ಆದರೆ, ಕಳೆದ ವಾರದಿಂದ ತಾಲ್ಲೂಕು ಮತ್ತು ಕೇರಳದ ವಯನಾಡು, ಕೊಡಗು ವ್ಯಾಪ್ತಿಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಈ ಜಲಾಶಯಗಳಿಗೆ ಒಳಹರಿವಿನ ಪ್ರಮಾಣ ಹೆಚ್ಚಾಗಿ ನೀರಿನ ಪ್ರಮಾಣದಲ್ಲಿ ಏರಿಕೆ ಕಾಣುತ್ತಿರುವುದು ರೈತರು ಮತ್ತು ಸಾರ್ವಜನಿಕರಲ್ಲಿ ಸಂತಸ ಉಂಟುಮಾಡಿದೆ.

ಪ್ರತಿ ಸಾಲಿನಲ್ಲೂ ಈ ಅವಧಿಯಲ್ಲಿ ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿತವಾಗಿರುತ್ತಿತ್ತು. ಇದೇ ಮೊದಲ ಬಾರಿಗೆ ವರುಣನ ಆರ್ಭಟದಿಂದ ಜಲಾಶಯಗಳ ನೀರಿನ ಮಟ್ಟದಲ್ಲಿ ಏರಿಕೆ ಕಾಣುತ್ತಿದ್ದು, ಇದೇ ರೀತಿ ಮಳೆ ಮುಂದುವರಿದರೆ ಜೂನ್ ತಿಂಗಳ ಮೊದಲನೇ ವಾರದಲ್ಲೇ ಜಲಾಶಯಗಳು ಭರ್ತಿಯಾಗುವುದು ಖಚಿತ. ಕಬಿನಿ ಜಲಾಶಯದ ಇತಿಹಾಸದಲ್ಲೇ ಮೊದಲು ಎಂಬಂತೆ ಮೂರೇ ದಿನಗಳಲ್ಲಿ ೧೨ ಅಡಿಗಳಷ್ಟು ನೀರಿನ ಮಟ್ಟ ಏರಿಕೆ ಕಂಡಿದೆ. ಕಳೆದ ವಾರ ಕಬಿನಿ ಜಲಾಶಯ ೬೦ ಅಡಿಗಳಿಗೆ ಕುಸಿತ ಕಂಡಿತ್ತು. ಈಗ ೭೨ ಅಡಿಗಳಷ್ಟು ನೀರಿದೆ. ಗರಿಷ್ಟ ೮೪ ಅಡಿಗಳಿರುವ ಜಲಾಶಯ ಭರ್ತಿಯಾಗಲು ಇನ್ನು ೧೨ ಅಡಿ ಮಾತ್ರ ಬಾಕಿ ಇದೆ. ಸದ್ಯ ೨೪ ಸಾವಿರ ಕ್ಯೂಸೆಕ್ಸ್ ಒಳಹರಿವು ಇದೆ.

ತಾರಕ ಜಲಾಶಯ ತನ್ನ ಗರಿಷ್ಟ ೧೧೦ ಅಡಿ ತಲುಪಲು ಇನ್ನು ೧೨ ಅಡಿಗಳು ಮಾತ್ರ ಬಾಕಿ ಇದೆ. ೩ ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಜಲಾಶಯದಲ್ಲಿ ೩ ಅಡಿ ನೀರು ಸಂಗ್ರಹವಾಗಿದೆ. ಜಲಾಶಯಕ್ಕೆ ೧,೭೦೦ ಕ್ಯೂಸೆಕ್ಸ್ ನೀರು ಹರಿದು ಬರುತ್ತಿದ್ದು ಕೊಡಗಿನಲ್ಲಿ ಮಳೆ ಪ್ರಮಾಣ ಹೆಚ್ಚಾಗಿರುವುದರಿಂದ ಈ ಪ್ರದೇಶದಿಂದ ಈ ಜಲಾಶಯಕ್ಕೆ ನೀರು ಹರಿದು ಬರುತ್ತಿದೆ.

ಹೆಬ್ಬಾಳದ ಜಲಾಶಯ ತನ್ನ ಗರಿಷ್ಟ ಮಟ್ಟ ೨೫ ಅಡಿ ತಲುಪಲು ಇನ್ನು ೪ ಅಡಿ ಮಾತ್ರ ಬಾಕಿ ಇದೆ. ಜಲಾಶಯಕ್ಕೆ ಹುಣಸೂರು ಮತ್ತು ಕೋಟೆ ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆ ಆಗುತ್ತಿರುವುದರಿಂದ ಒಳಹರಿವಿನ ಪ್ರಮಾಣ ಹೆಚ್ಚಾಗಿದ್ದು ೨-೩ ದಿನದಲ್ಲಿ ಜಲಾಶಯ ಭರ್ತಿಯಾಗಲಿದೆ. ನುಗು ಜಲಾಶಯ ತನ್ನ ಗರಿಷ್ಟ ಮಟ್ಟ ೧೧೦ ಅಡಿ ತಲುಪಲು ೨೨ ಅಡಿಗಳು ಬಾಕಿ ಮಾತ್ರ ಇದೆ. ೮೩ ಅಡಿಗಳಿಗೆ ಕುಸಿತ ಕಂಡಿದ್ದ ಜಲಾಶಯ ವಾರದಿಂದ ಮಳೆಯಿಂದಾಗಿ ೫ ಅಡಿಗಳಷ್ಟು ನೀರು ಹೆಚ್ಚಳವಾಗಿ ೮೮ ಅಡಿಗಳಿಗೆ ಏರಿಕೆಯಾಗಿದೆ. ೧,೮೦೦ ಕ್ಯೂಸೆಕ್ಸ್ ನೀರು ಹರಿದು ಬರುತ್ತಿದೆ. ಕಳೆದ ಬಾರಿ ಇದೇ ಸಂದರ್ಭದಲ್ಲಿ ನೀರಿನ ಮಟ್ಟ ೭೪ ಅಡಿಗಳಷ್ಟಿತ್ತು.

ಮುಂಗಾರು ಮಳೆ ಇದೇ ವಾರದಲ್ಲಿ ಕೇರಳ ಮತ್ತು ಕರ್ನಾಟಕ ಪ್ರವೇಶಿಸುವುದರಿಂದ ಮುಂಗಾರು ಮಳೆಯ ಆರ್ಭಟ ಹೆಚ್ಚಾದಲ್ಲಿ ಭಾರಿ ಪ್ರಮಾಣದ ನೀರನ್ನು ಜಲಾಶಯದಿಂದ ಹೊರಬಿಡುವ ಸಾಧ್ಯತೆಗಳೂ ಇವೆ.

” ಕೋಟೆ ಮತ್ತು ಸರಗೂರು ತಾಲ್ಲೂಕುಗಳಲ್ಲಿ ಭಾರೀ ಮಳೆ ಆಗುತ್ತಿದ್ದು ವಿಪತ್ತು ನಿರ್ವಹಣಾ ಸಮಿತಿಯನ್ನು ಎರಡೂ ತಾಲ್ಲೂಕುಗಳಲ್ಲಿ ರಚಿಸಿ, ಅನೇಕ ಅಽಕಾರಿಗಳನ್ನು ನೇಮಕ ಮಾಡಲಾಗಿದ್ದು, ಸಭೆ ನಡೆಸಲಾಗಿದೆ. ಜಲಾಶಯಗಳಿಗೆ ನೀರಿನ ಒಳಹರಿವಿನ ಪ್ರಮಾಣ ಹೆಚ್ಚಾಗಿದ್ದು ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ.”

-ಶ್ರೀನಿವಾಸ್, ತಹಸಿಲ್ದಾರ್, ಎಚ್.ಡಿ.ಕೋಟೆ, ಮೋಹನಕುಮಾರಿ, ತಹಸಿಲ್ದಾರ್, ಸರಗೂರು.

” ಕಬಿನಿ ಜಲಾಶಯದಲ್ಲಿ ದಿನದಿಂದ ದಿನಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಹೀಗೆಯೇ ಮಳೆ ಮುಂದುವರಿದರೆ ಶೀಘ್ರದಲ್ಲೇ ಜಲಾಶಯ ಭರ್ತಿಯಾಗಲಿದೆ. ನೀರಾವರಿ ಇಲಾಖೆಯ ಅಧಿಕಾರಿಗಳು ಕಟ್ಟುನಿಟ್ಟಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಕಳೆದ ಬಾರಿಗಿಂತ ಈ ಬಾರಿ ಜಲಾಶಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೀರು ಸಂಗ್ರಹಗೊಂಡಿದೆ.”

-ಚಂದ್ರಶೇಖರ್, ಇಇ, ಕಬಿನಿ ಜಲಾಶಯ

ಆಂದೋಲನ ಡೆಸ್ಕ್

Recent Posts

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

54 mins ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

2 hours ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

4 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

4 hours ago

ಚೀನಾದಲ್ಲಿ ಕಲ್ಲಿದ್ದಲು ಗಣಿ ಸ್ಫೋಟ: 82 ಜನರು ಸಾವು

ಬೀಜಿಂಗ್:‌ ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…

5 hours ago

ನಟ ದರ್ಶನ್‌ ಆತ್ಮಹತ್ಯೆಗೆ ಯತ್ನ ವದಂತಿ: ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್‌ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ…

6 hours ago