Andolana originals

ಕಾವೇರಿ ಸಮಸ್ಯೆ ಬಂದಾಗಲೆಲ್ಲಾ ನೆರವಾಗುವ ಕಬಿನಿ

• ಮಂಜು ಕೋಟೆ

ಎಚ್.ಡಿ.ಕೋಟೆ: ಕಾವೇರಿ ನೀರಿನ ಸಮಸ್ಯೆ ಎದುರಾಗಿ ಸರ್ಕಾರ ಸಂಕಷ್ಟಕ್ಕೆ ಸಿಲುಕಿದಾಗಲೆಲ್ಲಾ ತಾಲ್ಲೂಕಿನ ಕಬಿನಿ ಜಲಾಶಯ ಆಪದ್ಬಾಂಧವನಂತೆ ಕಾಪಾಡುತ್ತಿದ್ದು, ಈ ಬಾರಿಯೂ ಇಲ್ಲಿಯವರೆಗೆ 3 ಟಿಎಂಸಿ ನೀರನ್ನುತಮಿಳುನಾಡಿಗೆ ನೀಡಿದೆ.

ಕಾವೇರಿ ನೀರು ನಿಯಂತ್ರಣ ಸಮಿತಿ ನಿತ್ಯ ಒಂದು ಟಿಎಂಸಿ ನೀರನ್ನು ನೀಡುವಂತೆ ಆದೇಶಿಸಿತ್ತು. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸರ್ವ ಪಕ್ಷದ ಸದಸ್ಯರು 8 ಸಾವಿರ ಕ್ಯೂಸೆಕ್ಸ್ ನೀರನ್ನು ತಮಿಳುನಾಡಿಗೆ ಹರಿಸಲು ನಿರ್ಣಯ ಕೈಗೊಂಡಿದ್ದು, ಅದರಂತೆ ಕಬಿನಿಯಿಂದ ನೀರು ಹರಿಸಲಾಗುತ್ತಿದೆ.

ಕಾವೇರಿ ಸಮಸ್ಯೆ ಉದ್ಭವವಾದಾಗಿನಿಂದಲೂ ಅಧಿಕಾರಿಗಳು, ಜನಪ್ರತಿನಿಧಿಗಳಿಗೆ ನೆರವಾಗುತ್ತಿರುವ ಕಬಿನಿ ಜಲಾಶಯದಿಂದ ಈಗ ಭಾರೀ ಪ್ರಮಾಣದಲ್ಲಿ ನೀರು ಹರಿಸಲಾಗುತ್ತಿದೆ.

ಮೂರು ದಿನಗಳ ಹಿಂದೆ ಕಬಿನಿ ಜಲಾಶಯ ಗರಿಷ್ಟ ಮಟ್ಟ 84 ಅಡಿ ತಲುಪಿರುವುದರಿಂದ ಜಲಾಶಯದಿಂದ 25 ಸಾವಿರ ಕ್ಯೂಸೆಕ್ಸ್ ನೀರನ್ನು ಹೊರಬಿಡಲಾಗುತ್ತಿದೆ. ಇಲ್ಲಿಯವರೆಗೆ ನದಿ ಮತ್ತು ತಮಿಳುನಾಡಿಗೆ ಮೂರು ಟಿಎಂಸಿ ನೀರು ಹರಿದುಹೋಗಿದೆ.

ವಯನಾಡು ಮತ್ತು ತಾಲ್ಲೂಕಿನಲ್ಲಿ ಮತ್ತೆ ಮಳೆ ಆರ್ಭಟ ಹೆಚ್ಚಾಗಿರುವುದರಿಂದ 17 ಸಾವಿರ ಕ್ಯೂಸೆಕ್ಸ್ ಇದ್ದ ಒಳಹರಿವಿನ ಪ್ರಮಾಣ 20 ಸಾವಿರ ಕ್ಯೂಸೆಕ್ಸ್‌ಗೆ ಏರಿಕೆಯಾಗಿದೆ.

ಕಳೆದ ಸಾಲಿನಲ್ಲಿ ಜುಲೈ ಕೊನೆಯ ವಾರದಲ್ಲಿ ಜಲಾಶಯ ಭರ್ತಿಯಾಗಿತ್ತು. ಆದರೆ ಈ ಬಾರಿ 20 ದಿನಗಳ ಮುಂಚೆಯೇ ಭರ್ತಿಯಾಗಿರುವುದರಿಂದ ಕಾವೇರಿ ನೀರು ನಿಯಂತ್ರಣ ಸಮಿತಿ ನೀಡಿದ ಆದೇಶ ಪಾಲಿಸಲು ಸಹಾಯಕವಾಗಿದೆ.

ಸರ್ಕಾರ, ಜನಪ್ರತಿನಿಧಿಗಳು, ಅಧಿಕಾರಿಗಳು ಕಾವೇರಿ ಸಮಸ್ಯೆ ಬಂದಾಗಲೆಲ್ಲಾ ಕಬಿನಿ ಜಲಾಶಯದಿಂದ ಅನುಕೂಲ ಪಡೆಯುವಂತೆಯೇ ಕ್ಷೇತ್ರದ ಅಭಿವೃದ್ಧಿ ಮತ್ತು ಜಲಾಶಯಗಳ ಅಭಿವೃದ್ಧಿಗೂ ಕಾಳಜಿ ವಹಿಸಿದ್ದರೆ ತಾಲ್ಲೂಕಿನ 4 ಜಲಾಶಯಗಳು ಮತ್ತಷ್ಟು ಅಭಿವೃದ್ಧಿಯಾಗಿ ಕ್ಷೇತ್ರ ಪ್ರವಾಸೋದ್ಯಮ ದೃಷ್ಟಿಯಿಂದ ಪ್ರಗತಿಯತ್ತ ಸಾಗುತ್ತಿತ್ತು. ಈಗಲಾದರೂ ಸಂಬಂಧಪಟ್ಟವರು ಇತ್ತ ಗಮನ ಹರಿಸಬೇಕು ಎಂಬುದು ಕ್ಷೇತ್ರದ ಪ್ರಜ್ಞಾವಂತರ ಆಶಯವಾಗಿದೆ.

ಕೋಟ್ಸ್‌))

ಕಾವೇರಿ ಸಮಸ್ಯೆ ಉದ್ಭವಿಸಿದಾಗೆಲ್ಲಾ ನಮ್ಮ ಕ್ಷೇತ್ರದ ಕಬಿನಿ ಜಲಾಶಯ ಪರಿಹಾರ ನೀಡುತ್ತಿದೆ. ಕಬಿನಿ ಜಲಾಶಯ ಭರ್ತಿಯಾಗಿ ಅತಿ ಹೆಚ್ಚು ನೀರನ್ನು ನದಿಗೆ ಮತ್ತು ತಮಿಳುನಾಡಿಗೆ ಬಿಡಲಾಗುತ್ತಿದ್ದು, ಕಾವೇರಿ ನೀರು
ನಿಯಂತ್ರಣ ಸಮಿತಿಯವರು ಮತ್ತು ಸರ್ವ ಪಕ್ಷದ ಸದಸ್ಯರು ತೆಗೆದುಕೊಂಡ ನಿರ್ಣಯದಂತೆ ಜಲಾಶಯದಿಂದ ನೀರನ್ನು ಹರಿಸಲಾಗುತ್ತಿದೆ. ತಾಲ್ಲೂಕಿನ ಜಲಾಶಯಗಳ ಅಭಿವೃದ್ಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾ‌ ಅವರು ಬಹಳಷ್ಟು ಅನುದಾನವನ್ನು ನೀಡುತ್ತಿದ್ದಾರೆ.
-ಅನಿಲ್ ಚಿಕ್ಕಮಾದು, ಶಾಸಕರು

ವಿಪರೀತ ಮಳೆ ಆಗುತ್ತಿರುವುದರಿಂದ ಜಲಾಶಯದ ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಿದ್ದು ಸೋಮವಾರ ಸಂಜೆ ವೇಳೆಗೆ 25 ಸಾವಿರ ಕ್ಯೂಸೆಕ್ಸ್‌ಗೂ ಹೆಚ್ಚಿನ ನೀರನ್ನು ಹರಿಸಲಾಗುತ್ತದೆ. ಈಗಾಗಲೇ ಜಲಾಶಯ ತುಂಬಿ, ನದಿಗೆ 3 ಟಿಎಂಸಿಗೂ ಹೆಚ್ಚು ನೀರನ್ನು ಬಿಡಲಾಗಿದೆ. ಸರ್ವ ಪಕ್ಷಗಳ ಸದಸ್ಯರು ತೆಗೆದುಕೊಂಡಿರುವ ನಿರ್ಣಯಕ್ಕೂ ಇದು ಪೂರಕವಾಗಿದೆ.
-ಚಂದ್ರಶೇಖರ್, ಇಇ, ಕಬಿನಿ ಜಲಾಶಯ.

ಆಂದೋಲನ ಡೆಸ್ಕ್

Recent Posts

ಮಳವಳ್ಳಿ ದರೋಡೆ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…

13 hours ago

ಪ್ರಚೋದನಕಾರಿ ಭಾಷಣ ; ಯತ್ನಾಳ್, ಅನಂತ್ ಕುಮಾರ್ ಹೆಗ್ಡೆ ವಿರುದ್ಧ ದೂರು ದಾಖಲು

ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್‌ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…

13 hours ago

ಆನೆ ಹಾವಳಿ ತಡೆಗೆ ಶಾಶ್ವತ ಪರಿಹಾರ : ಸಚಿವ ಖಂಡ್ರೆ ಭರವಸೆ

ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…

13 hours ago

ಭದ್ರಾ ಅಭಯಾರಣ್ಯ ಪರಿಸರ ಸೂಕ್ಷ್ಮ ಪ್ರದೇಶ ಗುರುತಿಸಲು ಕ್ರಮ : ಈಶ್ವರ ಖಂಡ್ರೆ

ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…

13 hours ago

ಎಲ್‌ಪಿಜಿ ರಿಫಿಲಿಂಗ್‌ ಅವಧಿ ಹೆಚ್ಚಳ ; ವದಂತಿ ನಿರಾಕರಿಸಿದ ಕೇಂದ್ರ

ಹೊಸದಿಲ್ಲಿ : ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್‌ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…

13 hours ago

ಆಕಸ್ಮಿಕ ಬೆಂಕಿ; ಸ್ಕೂಟಿ ಭಸ್ಮ, ಮಹಿಳೆ ಪಾರು

ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…

13 hours ago