Andolana originals

ಮಳೆ ಕೊರತೆ, ಬಿಸಿಲಿಗೆ ಕಬಿನಿ ನೀರಿನ ಮಟ್ಟ ಕುಸಿತ

ಮಂಜು ಕೋಟೆ
ಎಚ್. ಡಿ. ಕೋಟೆ : ರಾಜ್ಯದ ಪ್ರಮುಖ ಜಲಾಶಯವಾದ ತಾಲ್ಲೂಕಿನ ಕಬಿನಿ ಜಲಾಶಯದ ನೀರಿನ ಮಟ್ಟ ಮಳೆಯ ಕೊರತೆ ಮತ್ತು ಬಿಸಿಲಿನ ತಾಪಮಾನಕ್ಕೆ ತೀವ್ರವಾಗಿ ಕುಸಿತ ಕಂಡಿದ್ದು, ಜನಸಾಮಾನ್ಯರಿಗೆ ಮತ್ತು ಕಾಡುಪ್ರಾಣಿಗಳು, ಜಾನುವಾರುಗಳಿಗೆ ನೀರಿನ ಆತಂಕ ಎದುರಾಗಿದೆ.

ಕಬಿನಿ ಜಲಾಶಯದ ನೀರಿನ ಮಟ್ಟ ದಿನದಿಂದ ದಿನಕ್ಕೆ ಭಾರಿ ಕುಸಿತ ಕಾಣುತ್ತಿರುವುದರಿಂದ ರೈತರಿಗೆ, ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ, ಜನಸಾಮಾನ್ಯ ರಿಗೆ ಆತಂಕ ಉಂಟಾಗುತ್ತಿದೆ.

ಇಷ್ಟರಲ್ಲಿ ತಾಲ್ಲೂಕಿನಲ್ಲಿ ಮುಂಗಾರು ಮಳೆ ಪ್ರಾರಂಭವಾಗಬೇಕಾಗಿತ್ತು. ಆದರೆ ಬಿಸಿಲಿನ ತಾಪಮಾನ ೩೬ ರಿಂದ ೩೮ ಡಿಗ್ರಿ ಸೆಲ್ಸಿಯಸ್ ಇದ್ದು, ಜಲಾಶಯ ಸೇರಿದಂತೆ ಅನೇಕ ಕೆರೆಕಟ್ಟೆಗಳು ಬರಿದಾಗುತ್ತಿವೆ.

ಇದೇ ನೀರನ್ನು ಅವಲಂಬಿಸಿರುವ ನಾಗರಹೊಳೆ, ಬಂಡೀಪುರ ಅಭಯಾರಣ್ಯದ ವನ್ಯಪ್ರಾಣಿಗಳಿಗೆ ಹಾಗೂ ಗ್ರಾಮಗಳ ವ್ಯಾಪ್ತಿಯಲ್ಲಿರುವ ಜಾನುವಾರುಗಳು, ರೈತರು, ಜನಸಾಮಾನ್ಯರಿಗೆ ಈಗಾಗಲೇ ನೀರಿನ ಅಭಾವ ಕಂಡುಬರುತ್ತಿದೆ.

ತಾಲ್ಲೂಕಿನಲ್ಲಿ ಕಬಿನಿ, ನುಗು, ತಾರಕ, ಹೆಬ್ಬಾಳ ಜಲಾ ಶಯಗಳಿದ್ದರೂ ನೀರಾವರಿ ಪ್ರದೇಶಕ್ಕಿಂತ ಕೆರೆಕಟ್ಟೆಗಳನ್ನೇ ರೈತರು ಹೆಚ್ಚಾಗಿ ಅವಲಂಬಿಸಿದ್ದಾರೆ. ಈ ಬಿಸಿಲಿನ ತಾಪಮಾನಕ್ಕೆ ರೈತರ ಜಮೀನುಗಳಲ್ಲಿ ಇದ್ದ ಬೋರ್‌ವೆಲ್‌ಗಳಲ್ಲಿ ನೀರಿಲ್ಲದೆ ಬೆಳೆಗಳು ಒಣಗುತ್ತಿವೆ. ಮತ್ತೊಂದೆಡೆ ಕೆರೆ ಕಟ್ಟೆಗಳಲ್ಲೂ ನೀರು ಬತ್ತಿಹೋಗಿ ಜನರು ಪರದಾಡುತ್ತಿದ್ದಾರೆ. ಜಲಾಶಯಗಳಲ್ಲಿರುವ ನೀರನ್ನಾದರೂ ಅಧಿಕಾರಿಗಳು ಮತ್ತು ಜನಪ್ರತಿನಿಽಗಳು ಕೆರೆಕಟ್ಟೆಗೆ ತುಂಬಿಸುವ ಕೆಲಸ ಮಾಡಬೇಕಿದೆ. ಕಳೆದ ಸಾಲಿನಲ್ಲಿ ಏಪ್ರಿಲ್ ತಿಂಗಳ ಸಮಯದಲ್ಲಿ ಕಬಿನಿ ಜಲಾಶಯದಲ್ಲಿ ೬೬ ಅಡಿ ನೀರಿನ ಸಂಗ್ರಹವಿತ್ತು.

ಪ್ರಸ್ತುತ ೬೦ ಅಡಿಗಳಿಗೆ ಕುಸಿತವಾಗಿದೆ. ಜಲಾಶಯದಿಂದ ಕುಡಿಯುವ ನೀರಿಗಾಗಿ ಒಂದೂವರೆ ಸಾವಿರ ಕ್ಯೂಸೆಕ್ಸ್ ನೀರನ್ನು ಹೊರಗೆ ಬಿಡಲಾಗುತ್ತಿದೆ. ಬಿಸಿಲಿನ ತಾಪಮಾನ ಇನ್ನೂ ಒಂದು ವಾರ ಹೀಗೆಯೇ ಮುಂದುವರಿದರೆ ಕಬಿನಿ ಸೇರಿದಂತೆ ಎಲ್ಲಾ ಜಲಾಶಯಗಳು ಮತ್ತು ಕೆರೆಕಟ್ಟೆಗಳು ನೀರಿಲ್ಲದೆ ಬತ್ತಿಹೋಗಿ ರೈತರು ಬೆಳೆದ ಬೆಳೆಗಳು ಒಣಗುತ್ತಾ ಮತ್ತು ಜಾನುವಾರುಗಳು, ಕಾಡುಪ್ರಾಣಿಗಳಿಗೆ ಹಾಗೂ ಜನಸಾಮಾನ್ಯರಿಗೆ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಲಿದೆ.

ಈ ಎಲ್ಲಾ ಸಮಸ್ಯೆಗಳಿಗೆ ಮಳೆಯಾಗುವುದೊಂದೇ ಪರಿಹಾರ ವಾಗಿದ್ದು, ಅಷ್ಟರಲ್ಲಿ ಇರುವ ನೀರನ್ನು ಜಾಗ್ರತೆಯಿಂದ ಸದ್ಬಳಕೆ ಮಾಡಿಕೊಳ್ಳಲು ಎಲ್ಲರೂ ಮುಂದಾಗಬೇಕಿದೆ.

 

ಕಬಿನಿ ಜಲಾಶಯದಲ್ಲಿ ಬಿಸಿಲಿನ ತಾಪಮಾನಕ್ಕೆ ಭಾರಿ ಪ್ರಮಾಣದಲ್ಲಿ ನೀರು ಕುಸಿತ ಕಾಣುತ್ತಿದೆ. ಕುಡಿಯುವ ನೀರು ಮತ್ತು ಕೆರೆಕಟ್ಟೆಗಳಿಗೆ ನೀರು ಹರಿಸಲಾಗುತ್ತಿದ್ದು, ಮುಂಗಾರು ಮಳೆ ಈಗಾಗಲೇ ಪ್ರಾರಂಭವಾಗಬೇಕಾಗಿತ್ತು. ಆದರೆ, ಇನ್ನೂ ಆಗಿಲ್ಲ. ಮುಂದಿನ ದಿನಗಳಲ್ಲಿ ಮಳೆ ಆಗದಿದ್ದರೆ ಬಹಳಷ್ಟು ಸಮಸ್ಯೆ ಎದುರಾಗಲಿದೆ. ಗಣೇಶ್, ಎಇಇ, ಕಬಿನಿ ಜಲಾಶಯ

ಕಬಿನಿ ಜಲಾಶಯದ ಹಿನ್ನೀರು ಮತ್ತು ಅರಣ್ಯದೊಳಗಿರುವ ಕೆರೆಕಟ್ಟೆಗಳಲ್ಲಿನ ನೀರು ಬಿಸಿಲಿನ ತಾಪಮಾನಕ್ಕೆ ಕಡಿಮೆಯಾಗಿದೆ. ಇದ ರಿಂದ ವನ್ಯ ಪ್ರಾಣಿಗಳಿಗೆ ನೀರಿನ ಸಮಸ್ಯೆ ಎದುರಾಗ ಲಿದ್ದು, ಕಾಡಿನೊಳಗೆ ಇರುವ ಕೆರೆಕಟ್ಟೆಗಳಿಗೆ ನೀರು ತುಂಬಿಸುವ ಕಾರ್ಯವನ್ನು ಅರಣ್ಯ ಇಲಾಖೆಯಿಂದ ಮಾಡಲಾಗುತ್ತಿದೆ.  ಸಿದ್ದರಾಜು, ಅರಣ್ಯ ಅಧಿಕಾರಿ, ದಮ್ಮನಕಟ್ಟೆ

ಆಂದೋಲನ ಡೆಸ್ಕ್

Recent Posts

ರಾಮನಗರದ ರೈಲ್ವೆ ಪ್ರಯಾಣಿಕರಿಗೆ ಶುಭ ಸಮಾಚಾರ: ಏನದು ಗೊತ್ತಾ.?

ರಾಮನಗರ: ಬೆಂಗಳೂರು ಮತ್ತು ಮೈಸೂರು ನಡುವೆ ನಿತ್ಯ ಸಂಚರಿಸುವ ಒಡೆಯರ್‌ ಎಕ್ಸ್‌ಪ್ರೆಸ್‌ ರೈಲಿಗೆ ಈಗ ರಾಮನಗರ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ…

11 hours ago

ಟಿವಿಕೆ ಶಾಸಕಾಂಗ ಪಕ್ಷದ ನಾಯಕನಾಗಿ ನಟ ವಿಜಯ್‌ ಆಯ್ಕೆ

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಟಿವಿಕೆ ಪಕ್ಷವು ಇದೀಗ ಸರ್ಕಾರ ರಚನೆ ಮಾಡಲು ಮುಂದಾಗಿದೆ. ಚೆನ್ನೈನ ಪಣಿಯೂರಿನಲ್ಲಿರುವ…

12 hours ago

ತಮಿಳುನಾಡು ಫಲಿತಾಂಶ ತುಂಬಾ ಆಶ್ವರ್ಯಕರವಾಗಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ತಮಿಳುನಾಡಿನ ಮತದಾರರು ಬದಲಾವಣೆ ಬಯಸಿದ್ದರು. ಅದರಂತೆ ಬದಲಾವಣೆಗೆ ಮತ ಹಾಕಿದ್ದಾರೆ. ಈ ಫಲಿತಾಂಶ ತುಂಬಾ ಆಶ್ಚರ್ಯಕರವಾಗಿದೆ ಎಂದು ಸಿಎಂ…

12 hours ago

ತಮಿಳುನಾಡು ಸಿಎಂ ಎಂ ಕೆ ಸ್ಟಾಲಿನ್‌ ರಾಜೀನಾಮೆ

ಚೆನ್ನೈ: ಡಿಎಂಕೆ ಅಧ್ಯಕ್ಷ ಎಂ ಕೆ ಸ್ಟಾಲಿನ್‌ ಅವರಿಂದು ತಮಿಳುನಾಡು ಸಿಎಂ ಹುದ್ದಗೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಲೋಕಭವನದಲ್ಲಿರುವ…

13 hours ago

ಮೈಸೂರು: ಸೂರ್ಯ ಉದಯಿಸುವ ಮುನ್ನವೇ ಯುವಕನ ಕೊಲೆ

ಮೈಸೂರು: ಸೂರ್ಯ ಉದಯಿಸುವ ಮುನ್ನವೇ ಮೈಸೂರಿನ ಉದಯಗಿರಿಯಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ. ಉದಯಗಿರಿ ಪೊಲೀಸ್‌ ಠಾಣೆಯಿಂದ ಕೇವಲ…

13 hours ago

ಹನೂರು: ಪಂಪ್‌ಸೆಟ್‌ ಮೋಟಾರ್‌ ಕಳ್ಳತನ ಮಾಡುತ್ತಿದ್ದ ಆರೋಪಿಗಳ ಬಂಧನ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಮಾಪುರ ವ್ಯಾಪ್ತಿಯಲ್ಲಿ ಜಮೀನುಗಳಲ್ಲಿ ಇರುತ್ತಿದ್ದ ನೀರೆತ್ತುವ ಪಂಪ್ ಸೆಟ್ ಮೋಟಾರ್‌ಗಳನ್ನು…

14 hours ago